ಶ್ರೀನಿವಾಸಪುರ : ಕ್ಷೇತ್ರದಲ್ಲಿ ಸಾವಿರಾರು ಜನ ಬಡವರಿದ್ದು, ಇದ್ದು ಅಂತಹವರಿಗೆ ನಿವೇಶನವನ್ನು ನೀಡುವ ಚಿಂತನೆ ಮಾಡಿದ್ದೇನೆ. ಅಧಿಕಾರಿಗಳು ಈ ನನ್ನ ಚಿಂತನೆಗೆ ಕೈಜೋಡಿಸಬೇಕು ಎಂದರು. ಸರ್ಕಾರದಿಂದ ಬರುವಂತಹ ವಸತಿ ಯೋಜನೆಯನ್ನು ಹಾಗೂ ಇತರೆ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಲಭಿಸುವ ವ್ಯವಸ್ಥೆ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲೂಕಿನ ಯಲ್ದೂರಿನ ನ್ಯಾಷನಲ್ ಹೈಸ್ಕೂಲ್ ಶಾಲಾವರಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಹೂಲ ಗದ್ದೆಗಳಿಗೆ ಹೋಗುವ ಕಾಲುದಾರಿ ರಸ್ತೆಗಳನ್ನು ,ಸ್ಮಶಾನಕ್ಕೆ ಹೋಗುವ ದಾರಿಗಳನ್ನು ನಕಾಶೆಯಲ್ಲಿ […]

Read More

ಶ್ರೀನಿವಾಸಪುರ : ಸಂರಕ್ಷಣೆಯಲ್ಲಿ ಸರಕಾರಿ ಆಸ್ತಿ ಕೋಲಾರ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ – ಜಿಲ್ಲಾಧಿಕಾರಿ ಅಕ್ರಂಪಾಷಾ ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯಾದ್ಯಂತ ಇರುವ ಸರಕಾರಿ ಜಮೀನುಗಳನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿರುವ ಸಮಸ್ಯೆ ಮತ್ತು ಇವುಗಳನ್ನು ತೆರವುಗೊಳಿಸಲು ನಡೆಸಬೇಕಾದ ಹಲವು ವರ್ಷಗಳ ಕಾನೂನು ಹೋರಾಟಗಳು ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ, ಸರಕಾರಿ ಆಸ್ತಿಗಳನ್ನು ವೈಜ್ಞಾನಿಕವಾಗಿ ಗುರುತಿಸಿ, ಇವು ಖಾಸಗಿಯವರ ಪಾಲಾಗದಂತೆ ರಕ್ಷಿಸಿ, ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಲ್ಯಾಂಡ್ […]

Read More

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳನ್ನು ಬೆಂಗಳೂರು ವಿವಿ ಕುಲಪತಿ ನಿರಂಜನವಾನಳ್ಳಿ, ವಿಜಯವಾಣಿ ಪ್ರದಾನ ಸಂಪಾದಕ ಕೆ.ಎನ್.ಚನ್ನೇಗೌಡ, ಸಂಘದ ಜಿಲ್ಲಾಧ್ಯಕ್ಷ ಬಿ.ವಿ.ಗೋಪಿನಾಥ್ ಮತ್ತಿತರರು ನಗದು ಪುರಸ್ಕಾರ ನೀಡಿ ಸನ್ಮಾನಿಸಿದರು.

Read More

ಕೋಲಾರ:- ಪ್ರತಿಭಾವಂತ ಪತ್ರಕರ್ತರು ಇಂದು ಪತ್ರಿಕಾರಂಗಕ್ಕೆ ಅಗತ್ಯವಿದ್ದು, ಪೋಷಕರು ತಮ್ಮ ಮಕ್ಕಳನ್ನು ಮೆಡಿಕಲ್,ಇಂಜಿನಿಯರಿಂಗ್‍ಗೆ ಸೀಮಿತ ಮಾಡದೇ ಪತ್ರಿಕೋದ್ಯಮ ಓದಲು ಪ್ರೇರಣೆ ನೀಡಬೇಕು ಎಂದು ವಿಜಯವಾಣಿ ಪತ್ರಿಕೆ ಪ್ರಧಾನ ಸಂಪಾದಕ ಕೆ.ಎನ್.ಚನ್ನೇಗೌಡ ಕರೆ ನೀಡಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾಧಕ ಪತ್ರಕರ್ತರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.ಪತ್ರಿಕೋದ್ಯಮ ಶಿಕ್ಷಣ ಪಡೆದರೆ ಪತ್ರಕರ್ತರೇ ಆಗಬೇಕಿಂದಿಲ್ಲ, ಸರ್ಕಾರಿ ಉದ್ಯೋಗಗಳು ಸಿಗಲಿದೆ, ಸಚಿವರು,ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿಯೂ ಕೆಲಸ ಪಡೆಯಬಹುದು ಇದಕ್ಕೆ ಹಿರಿಯ ಪತ್ರಕರ್ತರಾಗಿದ್ದು, […]

Read More

ಕೋಲಾರ:- ಕಾಲಕ್ಕೆ ಎದುರಾಗಿ ಹೋಗುತ್ತಿರುವ ಇತರೆಲ್ಲಾ ಮಾಧ್ಯಮಗಳೊಂದಿಗೆ ಸೆಣಸುವುದು ಮುದ್ರಣ ಮಾಧ್ಯಮಕ್ಕೆ ಸವಾಲಾಗಿದೆ ಮತ್ತು ಯಾರು ಪತ್ರಕರ್ತರು ಎಂಬುದನ್ನು ನಿಷ್ಕರ್ಷೆ ಮಾಡುವ ಕಾಲದಲ್ಲಿರುವ ಸುದ್ದಿ ಮಾಧ್ಯಮ ಇಂದು ಸಂಕಟದಲ್ಲಿದೆ ಎಂದು ತಿಳಿಸಿದ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ನಿರಂಜನವಾನಳ್ಳಿ ಜಿಲ್ಲೆಯ ಪತ್ರಕರ್ತರಿಗಾಗಿ ವಿವಿಯಿಂದ ಡಿಪ್ಲೊಮೋ ಕೋರ್ಸ್ ತೆರೆಯುವ ಭರವಸೆ ನೀಡಿದರು.ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ಪತ್ರಿಕಾದಿನ, ವೈದ್ಯರ ದಿನ,ಲೆಕ್ಕಪರಿಶೋಧಕರ ದಿನ ಎಲ್ಲವೂ […]

Read More

ಕೋಲಾರ:- ನಗರ ಹೊರವಲಯದ ಕೊಂಡರಾಜನಹಳ್ಳಿಯಲ್ಲಿ ಎಪಿಎಂಸಿ ಮಾರುಕಟ್ಟೆಯ ಆರ್.ವಿ.ಎಂ ಮಂಡಿಯ ಚಲಪತಿ ತಮ್ಮ ನಿವಾಸಕ್ಕೆ ಬೆಂಗಳೂರುನಗರ ದೇವತೆ ಅಣ್ಣಮ್ಮ ದೇವಿಯ ಉತ್ಸವ ಮೂರ್ತಿಯನ್ನು ತಂದು ಲೋಕಕಲ್ಯಾಣಕ್ಕಾಗಿ ಹಾಗೂ ಜಿಲ್ಲೆಯಲ್ಲಿ ಶಾಂತಿ, ನೆಮ್ಮದಿ,ಒಳ್ಳೆಯ ಮಳೆ,ಬೆಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.ಬೆಂಗಳೂರು ನಗರದೇವತೆ ಅಣ್ಣಮ್ಮದೇವಿಯ ಭವ್ಯ ಉತ್ಸವ ಮೂರ್ತಿಗೆ ವಿಶೇಷ ರೀತಿಯಲ್ಲಿ ಹೂವಿನ ಅಲಂಕಾರ ಮಾಡಿದ್ದು, ಗ್ರಾಮದ ನೂರಾರು ಮಂದಿ ಆಗಮಿಸಿ ಪೂಜೆ ಸಲ್ಲಿಸಿದರು.ಎಪಿಎಂಸಿ ಮಾರುಕಟ್ಟೆಯ ಎಲ್ಲಾ ವರ್ತಕರು,ಕಾರ್ಮಿಕರು, ಅಧಿಕಾರಿಗಳು ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.ಈ ಸಂದರ್ಭದಲ್ಲಿ […]

Read More

ಕೋಲಾರ:- ನಗರದ 14 ಕೇಂದ್ರಗಳಲ್ಲಿ ಭಾನುವಾರ ಯಾವುದೇ ಗೊಂದಲವಿಲ್ಲದೇ ಸುಗಮವಾಗಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಎರಡು ಅಧಿವೇಶನಗಳಿಗೆ ಒಟ್ಟು 520 ಮಂದಿ ಗೈರಾಗಿದ್ದು ಕೇಂದ್ರಗಳಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಭೇಟಿ ನೀಡಿ ಪರಿಶೀಲಿಸಿದರು.ನಗರದ ಎಲ್ಲಾ 14 ಕೇಂದ್ರಗಳಲ್ಲೂ ಪರೀಕ್ಷೆ ನಡೆದಿದ್ದು, ಬೆಳಗ್ಗೆ ನಡೆದ ಮೊದಲ ಅಧಿವೇಶನದ ಪರೀಕ್ಷೆಯ ಪತ್ರಿಕೆ-1ಕ್ಕೆ ನೋಂದಾಯಿಸಿದ್ದ 2141 ಮಂದಿ ಪೈಕಿ 1891 ಮಂದಿ ಹಾಜರಾಗಿ 251 ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.ಮಧ್ಯಾಹ್ನ ನಡೆದ 2ನೇ ಅಧಿವೇಶನದ ಪತ್ರಿಕೆ-2ಕ್ಕೆ ನೋಂದಾಯಿಸಿದ್ದ […]

Read More

ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ರವರ ಅಧ್ಯಕ್ಷತೆಯಲ್ಲಿ ಕೋಲಾರ ಜಿಲ್ಲೆಯ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಒಳಪಡುವ ಜಮೀನುಗಳಲ್ಲಿ ವಿವಾದ ಇರುವ ಜಮೀನುಗಳನ್ನು ಜಂಟಿ ಅಳತೆ ಮಾಡುವ ಕುರಿತು ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಹಾಗೂ ಅಪರ ಜಿಲ್ಲಾಧಿಕಾರಿ ಮಂಗಳಾ ಹಾಜರಿದ್ದರು.

Read More

ಶ್ರೀನಿವಾಸಪುರ 1 : ಆರೋಗ್ಯವೇ ಭಾಗ್ಯ ಎಂಬಂತೆ ಮನುಷ್ಯನ ಆರೋಗ್ಯ ಕೈ ಕೊಟ್ಟಾಗ ನೆಮ್ಮದಿ ಮಾಯಾವಾಗುವುದರ ಜೊತೆಗೆ ಅರ್ಥಿಕ ಸ್ಥಿತಿ ದುಸ್ಥಿತಿಯಲ್ಲಿದ್ದಾಗ ಸಮಾಜದ ದುರ್ಬಲ ವರ್ಗದ ಜನರು ಉತ್ತಮ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗದೇ ಹತಾಶರಾಗುವುದು ದುರಂತ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಕಛೇರಿಯಲ್ಲಿ ಗುರುವಾರ ಶ್ರೀನಿವಾಸಪುರ ತಾಲ್ಲೂಕಿನ 15 ಮಂದಿಗೆ ರೂ ಒಂದು ಲಕ್ಷ ಎಂಟು ಸಾವಿರ ಮೊತ್ತದ ಆರೋಗ್ಯ ರಕ್ಷಾ ವಿಮಾ […]

Read More
1 79 80 81 82 83 381