
ಕೋಲಾರ,ಅ.10: ಅಕ್ಟೋಬರ್ 1 ರಂದು ಬೆಳಿಗ್ಗೆ 11:30 ಗಂಟೆಯ ಸುಮಾರಿಗೆ 44 ವರ್ಷದ ಮಂಜುಳಾ ಇವರಿಗೆ ಆಕಸ್ಮಿಕವಾಗಿ ವಿದ್ಯುತ್ ಮೇವು ಕತ್ತರಿಸುವ ಯಂತ್ರದಲ್ಲಿ ಎಡಗೈಗೆ ಗಾಯವಾಗಿದೆ. ಇದು ಈ ಕೆಳಗಿನ ಗಾಯಗಳಿಗೆ ಕಾರಣವಾಯಿತು. ಅವಳ ಹೆಬ್ಬೆರಳಿನ ಸಂಪೂರ್ಣ ಅಂಗಚ್ಛೇದನ, ಅವಳ ತೋರುಬೆರಳಿನ ಸಂಪೂರ್ಣ ಅಂಗಚ್ಛೇದನ, ಅವಳ ಮಧ್ಯದ ಬೆರಳನ್ನು ಸಂಪೂರ್ಣವಾಗಿ ಕತ್ತರಿಸುವುದು, ಅವಳ ಉಂಗುರದ ಬೆರಳನ್ನು ಸಂಪೂರ್ಣವಾಗಿ ಕತ್ತರಿಸುವುದು ಎಂಬುದಾಗಿತ್ತು.ಆದರೆ ಕೋಲಾರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸ್ಮ್ಯಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಳು ಅದೇ ದಿನ […]

ಕೋಲಾರ: ಕೋಲಾರ ಪತ್ರಿಕೆ ಸಂಪಾದಕ ಕೆ.ಪ್ರಹ್ಲಾದರಾವ್ ಅವರಿಗೆ ಮಂಗಳವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರು, ರಾಯರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ, ನುಡಿನಮನ ಸಲ್ಲಿಸಿದರು. ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮಾತನಾಡಿ, ‘ಕೋಲಾರ ಪತ್ರಿಕೆಯ ನಂಬರ್ ಒನ್ ಸ್ಥಾನವನ್ನು ಕಸಿಯಲು ಯಾರಿಂದಲೂ ಸಾಧ್ಯವಾಗಿಲ್ಲ. ಕೋಲಾರ ಪತ್ರಿಕೋದ್ಯಮದ ದಂತಕತೆ ರಾಯರು. ಅವರ ಸಾಹಸ ಹಾಗೂ ಧೈರ್ಯ ಮೆಚ್ಚುವಂಥದ್ದು. ಸೇವೆ ಎಂದೇ ಭಾವಿಸಿದ್ದರು. ಆದರೆ, ಈಗಿನ […]

ಕೋಲಾರ ಅಕ್ಟೋಬರ್ 7 : ಪ್ರಜಾ ಸೇವಾ ಸಮಿತಿ ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಕ್ಷೇಮಾಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ರವರ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಕೋಲಾರ ತಾಲೂಕು ಪಂಚಾಯಿತಿ ಕಾರ್ಯನಿವಾರಣಾಧಿಕಾರಿಗಳಾದ ಮುನಿಯಪ್ಪ ರವರ ಮುಖಾಂತರ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರಿಗೆ ಅಕ್ಷರ ದಾಸೋಹ ನೌಕರರ ಬೇಡಿಕೆಗಳ ಮನವಿ ಪತ್ರವನ್ನು ರವಾನೆ ಮಾಡಲಾಯಿತುಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ ಶಿವಣ್ಣ ಮಾತನಾಡಿ ಕಾಂಗ್ರೆಸ್ ವರಿಷ್ಠರಾದ ಪ್ರಿಯಾಂಕಾ […]

ಶ್ರೀನಿವಾಸಪುರ ಪಟ್ಟಣದ ಹೈದರ್ ಆಲಿ ಮೊಹಲ್ಲ ಹಾಗೂ ಜಾಕಿರ್ ಹುಸೆನ್ ಮೊಹಲ್ಲಾ ಉರ್ದು ಶಾಲೆಗಳಿಗೆ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ದುರಸ್ತಿ ಕಾಮಗಾರಿಗಳು ಹಾಗೂ ಶಾಲಾ ನಿರ್ವಹಣೆ ವೀಕ್ಷಣೆ ಮಾಡಿದರು.

ಕೋಲಾರ : ತಾಲೂಕಿನ ಚೊಕ್ಕಹಳ್ಳಿಯ ಚಿನ್ಮಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿ.ಎಂ.ರಚನ ಅವರಿಗೆ, ಮಹಾತ್ಮ ಗಾಂಧಿಜಿಯವರ ಕುರಿತು ಜಿಲ್ಲಾಮಟ್ಟದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ದೊರಕಿದೆ. ಮಹಾತ್ಮ ಗಾಂಧಿಜಿಯವರ ೧೫೪ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ/ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ “ಭಾಪೂಜಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯ ಅಂಗವಾಗಿ ತಾಲೂಕಿನ ಚೊಕ್ಕಹಳ್ಳಿಯ ಚಿನ್ಮಯ ಸ್ವತಂತ್ರ […]

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಬುಧವಾರ, ಬಡವರ, ದಲಿತರ, ಅಧಿವಾಸಿಗಳ, ಹಿಂದುಳಿದ ವರ್ಗಗಳ ಬಗರ್ ಹುಕುಂ ಸಾಗುವಳಿದಾರ ಮತ್ತು ಅರಣ್ಯ ಭೂಮಿ ಸಾಗುವಳಿದಾರರ ಭೂಮಿ ಹಕ್ಕಿಗೆ ಮಾರಕವಾಗಿರುವ ಅರಣ್ಯ ಕಲಾಖೆ ಸಚಿವರ ಟಿಪ್ಪಣಿ ರದ್ದುಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ರಾಜ್ಯದಲ್ಲಿ ಎಲ್ಲ ರೀತಿಯ […]

ಶ್ರೀನಿವಾಸಪುರ: ಕೋಲಾರದಲ್ಲಿ ಅ.3 ರಂದು ಏರ್ಪಡಿಸಿದ್ದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು.ಪಟ್ಟಣದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಕಾಂಗ್ರೆಸ್ ಮುಖಂಡರು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್.ರವಿಕುಮಾರ್ ಮಾತಿನ ಭರದಲ್ಲಿ ರಮೇಶ್ ಕುಮಾರ್ ಅವರ ಜಮೀನು ಕುರಿತು ಪ್ರಸ್ತಾಪಿಸಿ ‘ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದರೂ ಜಿಲ್ಲಾ ಅರಣ್ಯಾಧಿಕಾರಿ […]

ಕೋಲಾರ,ಅ.03: ಸೈನಿಕರು, ಪೊಲೀಸರ ರೀತಿ ಮಾಧ್ಯಮದವರು ಕೆಲಸ ಮಾಡುತ್ತಿದ್ದಾರೆ. ಅವರ ಸೇವೆ ಅನನ್ಯವಾದುದು, ತಮ್ಮ ಆರೋಗ್ಯ ಲೆಕ್ಕಿಸದೆ ಅಪರಾಧ ನಡೆದ ಜಾಗದಲ್ಲಿ ಪೆÇಲೀಸರಿಗಿಂತ ಮೊದಲೇ ಪತ್ರಕರ್ತರು ಹೋಗಿರುತ್ತಾರೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ನಾರಾಯಣ್ ಪ್ರಶಂಶಿಸಿದರು.ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಾರಾಯಣ ಹೃದಯಾಲಯದಿಂದ ನಗರದ ಜಾಲಪ್ಪ ಹೊರರೋಗಿಗಳ ವಿಭಾಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಪತ್ರಕರ್ತರು ಸರಿಯಾಗಿ ಊಟ, ನಿದ್ದೆ ಮಾಡಲ್ಲ. ಪೊಲೀಸರಿಗಿಂತ ಮೊದಲೇ ಅಪಘಾತ, ಅಪರಾಧ ನಡೆದ ಜಾಗದಲ್ಲಿದ್ದು, ವರದಿ […]

ಶ್ರೀನಿವಾಸಪುರ 1 : ಕ್ಷೇತ್ರದ ಅಭಿವೃದ್ದಿಯೇ ನನ್ನ ಮೂಲ ಮಂತ್ರ, ನನಗೆ ಮತ ಹಾಕಿದ ಜನತೆಯ ಅಭಿವೃದ್ದಿಯೇ ನನ್ನ ಗುರಿ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪುರಸಭೆ ಕಛೇರಿಯಲ್ಲಿ ಮಂಗಳವಾರ ಪಟ್ಟಣ ಹಾಗು ತಾಲೂಕಿಗೆ ಸಂಬಂದಿಸಿದಂತೆ ಕುಂದುಕೊರತೆ ಸಭೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿದರು.ಜನತೆ ನನ್ನ ಮೇಲಿನ ಪ್ರೀತಿ ವಿಶ್ವಾಸಕ್ಕೆ ಮತ ಹಾಕಿ ನನ್ನನ್ನು ಗೆಲ್ಲಿಸಿಕೊಟ್ಟಿದ್ದಾರೆ ಅದಕ್ಕಾಗಿ ಇಂದು ನಾನು ಅವರ ಋಣ ತೀರಿಸುವ ಉದ್ದೇಶದಿಂದ ಕ್ಷೇತ್ರದಾದ್ಯಂತ ಬಡವರಿಗೆ ಮನೆಗಳ ನಿರ್ಮಾಣ, ಶುದ್ದ ಕುಡಿಯುವ ನೀರಿನ ಸೌಲಭ್ಯ, ಸುಸಜ್ಜಿತ […]