ಶ್ರೀನಿವಾಸಪುರ : ಸ್ವಾತಂತ್ರ್ಯ ಪೂರ್ವದಿಂದಲೂ ಕೆಲವು ಗ್ರಾಮಗಳಿಗೆ ಮೂಲಭೂತ ರಸ್ತೆ ಸೌಲಭ್ಯ ಇಲ್ಲದಿರುವುದು ನೋವು ತಂದಿದ್ದು, ಅಂತಹ ಗ್ರಾಮಗಳನ್ನು ಗುರುತಿಸಿ ಸಿಸಿ ರಸ್ತೆಗಳನ್ನು ನಿರ್ಮಿಸುವುದು ನನ್ನ ಕನಸಾಗಿದೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ತಾಲ್ಲೂಕಿನ ಕೂರಿಗೇಪಲ್ಲಿ ಗ್ರಾಮಪಂಚಾಯಿತಿ ಆವರಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಆಡಳಿತ ನಡೆ ಗ್ರಾಮದ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಪ್ರಸ್ತುತ 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಸಾರ್ವಜನಿಕರು ತಮ್ಮ ವಾಸಸ್ಥಳದ ಬಳಿ ರಸ್ತೆ […]
ತಾಲೂಕು ಆಡಳಿತ ಗ್ರಾಮ ಕಡೆ ಕಾರ್ಯಕ್ರಮಕ್ಕೆ ಚಾಲನೆ : ಅರ್ಹರಿಗೆ ಸವಲತ್ತು ತಲುಪಿಸುವುದು ನನ್ನ ಗುರಿ – ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಶ್ರೀನಿವಾಸಪುರ : ಬಡಬಗ್ಗರ ಪರ ಕಾಳಜಿ ಹೊಂದಿರುವ ನಾನು, ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳು ಅರ್ಹರಿಗೆ ತಲುಪುವಂತೆ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ತಾಲೂಕಿನ ಅಡ್ಡಗಲ್ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ನಡೆದ ತಾಲೂಕು ಆಡಳಿತ ಗ್ರಾಮ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಐದು ಬಾರಿ ಶಾಸಕನನ್ನಾಗಿ ಮಾಡಿದ […]
ಕೋಲಾರ: ನಾವು ತಂತ್ರಜ್ಞಾನಕ್ಕೆ ಶರಣಾಗದೆ ಬದುಕಿನ ನೈತಿಕ ಪಾಠ ಕಲಿಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದರು.ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ, ನವೀಕೃತ ಪ್ರಯೋಗಾಲಯಗಳ ಹಾಗೂ ಕಾಲೇಜು ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನದಲ್ಲಿ ಮುಂದುವರೆದಿದ್ದರೂ ಜಾತಿ ವ್ಯವಸ್ಥೆ, ಮೂಢನಂಬಿಕೆ, ಕಂದಾಚಾರ, ಬಡವ-ಶ್ರೀಮಂತ ಎಂಬ ಭೇದ ಭಾವ ಎಲ್ಲವೂ ಇದೆ. ಆದ್ದರಿಂದ ಬದುಕಿನಲ್ಲಿ ವೈಜ್ಞಾನಿಕತೆ, ಬಾಂಧವ್ಯ, ನೈತಿಕತೆ ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದರು.ಪೋಷಕರು ೪ ಗೋಡೆಯಲ್ಲಿ ಮಕ್ಕಳನ್ನು ಕಟ್ಟಿಯಾಕದೆ, ಜೀವನವನ್ನು ಯಾವ […]
ಸ್ಮಾರ್ಟ್ ಕ್ಲಾಸ್ ಚಾಲನೆ, 2026–27ರಿಂದ ಉಚಿತ ಪಿಯುಸಿ ವಿಜ್ಞಾನ ಹಾಗೂ ಸ್ಪರ್ಧಾತ್ಮಕ ತರಗತಿಗಳ ಘೋಷಣೆ ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೈಲಾರಪ್ಪ ಅವರು ಶ್ರೀನಿವಾಸಪುರ ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು. ಎಸ್ಎಸ್ಎಲ್ಸಿ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಅವರು ಸಮಗ್ರವಾಗಿ ಅವಲೋಕಿಸಿದರು. ಈ ವೇಳೆ ಸರ್ಕಾರದಿಂದ ನೂತನವಾಗಿ ಮಂಜೂರಾದ ಸ್ಮಾರ್ಟ್ ಕ್ಲಾಸ್ […]
ಕೋಲಾರ : 2026–27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಉಚಿತ ವಸತಿ ಶಿಕ್ಷಣ ನೀಡುವ ಉದ್ದೇಶದಿಂದ 6ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿ (DLC) ಸದಸ್ಯರಾದ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ. ಈ ಪ್ರವೇಶ ಪ್ರಕ್ರಿಯೆಯಲ್ಲಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೋರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಮುಸ್ಲಿಂ ವಸತಿ ಶಾಲೆಗಳು ಸೇರಿವೆ. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಸೇವಾ […]
ಬೆಂಗಳೂರು : ಬೆಂಗಳೂರು ದಕ್ಷಿಣದ ನೀಲಸಂದ್ರದಲ್ಲಿರುವ ಸರ್ಕಾರಿ ಹೈಸ್ಕೂಲಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದಾಯ ಸಮಾರಂಭವನ್ನು ಆತ್ಮೀಯ ಹಾಗೂ ಸ್ಮರಣೀಯವಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮಹತ್ವದ ಹಂತವನ್ನು ಗುರುತಿಸುವ ಈ ಕಾರ್ಯಕ್ರಮದಲ್ಲಿ ಶಿಕ್ಷಕರು, ಅತಿಥಿಗಳು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಮೌಲಾನಾ ಆಜಾದ್ ಹೈಸ್ಕೂಲ್ನ ಪ್ರಾಂಶುಪಾಲರು ರಶೀದಾ ಯಾಸ್ಮೀನ್, ವಿಧಾನಸೌಧದ ಸಿಬ್ಬಂದಿ ಇಶಾಕ್ ಅಹ್ಮದ್ ಹಾಗೂ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷ ಮೊಹಮ್ಮದ್ ಅಫ್ಸರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಅತಿಥಿಗಳನ್ನು ಶಾಲಾ […]
ಶ್ರೀನಿವಾಸಪುರ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಆಯುಷ್ ಇಲಾಖೆ ವತಿಯಿಂದ ರೋಗ ನಿರೋಧಕ ಶಕ್ತಿ ವರ್ಧಕ ಔಷಧಿಗಳ ಕಿಟ್ಗಳನ್ನು ಪಟ್ಟಣದ ಆಟೋ ಚಾಲಕರಿಗೆ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಕಿಟ್ಗಳನ್ನು ವಿತರಿಸಿ ಮಾತನಾಡಿದರು. ಆರೋಗ್ಯ ಕಾಪಾಡಿಕೊಳ್ಳುವಲ್ಲಿ ರೋಗ ನಿರೋಧಕ ಶಕ್ತಿ ಪ್ರಮುಖವಾಗಿದ್ದು, ಆಯುಷ್ ಪದ್ಧತಿಯಲ್ಲಿ ನೀಡುವ ಔಷಧಿಗಳು ಸಾಮಾನ್ಯ ಜನರ ಆರೋಗ್ಯಕ್ಕೆ ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು. ಆಟೋ ಚಾಲಕರು ಸಾರ್ವಜನಿಕ ಸಂಪರ್ಕದಲ್ಲಿರುವುದರಿಂದ ಆರೋಗ್ಯದ ಬಗ್ಗೆ ಹೆಚ್ಚು ಎಚ್ಚರ ವಹಿಸಬೇಕು ಎಂದು […]
ಶ್ರೀನಿವಾಸಪುರ : ಸಾರ್ವಜನಿಕರ ಕೆಲಸ ದೇವರ ಕೆಲಸ ಎಂದ ಭಾವಿಸಿ ಪ್ರಾಮಾಣಿಕವಾಗಿ ಮಾಡಿದಾಗ ಹಳ್ಳಿಗಳ ಅಭಿವೃದ್ಧಿಯಲ್ಲಿ ಕುಂಠಿತವಾಗುವುದಿಲ್ಲ. ನನ್ನ ಕ್ಷೇತ್ರಕ್ಕೆ ಸಂಬಂಧಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡಿ, ಮತದಾರನ ಋಣವನ್ನು ತೀರಿಸುತ್ತಾ , ಮತದಾರನು ನೀಡಿರುವ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳುಲಾಗುವುದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಎಂದರು.ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು. […]
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಆತಂಕ ನಿವಾರಣೆಗೆ ವಿಶೇಷ ಕಾರ್ಯಗಾರ ಕರ್ನಾಟಕ ರಾಜ್ಯ ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಿಲ್ಲತ್ ವೆಲ್ಫೇರ್ ಟ್ರಸ್ಟ್ನಿಂದ ಮಾರ್ಗದರ್ಶನ ಕೋಲಾರ : ಕರ್ನಾಟಕ ರಾಜ್ಯ ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಸಮಿತಿ ಹಾಗೂ ಮಿಲ್ಲತ್ ವೆಲ್ಫೇರ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ, ಮಿಲ್ಲತ್ ಶಾಲೆಯ ಅಪ್ನ ಘರ್ ಸಭಾಂಗಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪರೀಕ್ಷಾ ಆತಂಕ ನಿರ್ವಹಣಾ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ […]

