ಒಡಿಶಾ: ನಿಂತಿದ್ದ ಟ್ರಕಿಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 7 ಜನರು ಗಂಭೀರ ಗಾಯಗೊಂಡಿರುವ ಭೀಕರ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯ NH-20 ಯಲ್ಲಿ ಸಂಭವಿಸಿದೆ ಇಂದು ಡಿ.1ರಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಗಂಜಾಂನ ದಿಗಪಹಂಡಿ ನಿವಾಸಿಗಳು ಎಂದು ತಿಳಿದುಬಂದಿದೆ. ಗಂಜಾಂ ಜಜಿಲ್ಲೆಯಿಂದ ಕಿಯೋಂಜಾರ್ ಜಿಲ್ಲೆಯ ಘಾಟ್ಗಾಂವ್ ಪ್ರದೇಶದ ಮಾ ತಾರಿಣಿ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಾನ್ನಲ್ಲಿ 20 ಜನರಿದ್ದು, ರಸ್ತೆ ಬದಿ ನಿಂತಿದ್ದ ಟ್ರಕ್ಗೆ ವ್ಯಾನ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. […]
ಇಂಫಾಲ : ಮಣಿಪುರದ ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್ನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್ಗಳನ್ನು ಹಾಕಿಕೊಂಡಿದ್ದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂಪಾಯಿ ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯು ಕರೆನ್ಸಿ ಚೆಸ್ಟ್ ಆಗಿದೆ – ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಬ್ಯಾಂಕ್ಗಳು ಮತ್ತು ಎಟಿಎಂಗಳಿಗೆ ಮೀಸಲಾದ ಹಣವನ್ನು ಉಖ್ರುಲ್ ಜಿಲ್ಲೆಗೆ ಸಂಗ್ರಹಿಸುತ್ತದೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ ದರೋಡೆಕೋರರು ರಾಜ್ಯ ರಾಜಧಾನಿ ಇಂಫಾಲ್ನಿಂದ ಸುಮಾರು 80 ಕಿಮೀ ದೂರದಲ್ಲಿರುವ ಉಖ್ರುಲ್ […]
ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯ ಭಕ್ತು ಮುರ್ಮು ಅವರು ಸಿಲ್ಕ್ಯಾರಾ ಸುರಂಗದೊಳಗೆ 400 ಗಂಟೆಗಳ ಕಾಲ ಉಳಿದುಕೊಂಡಿದ್ದ 41 ಮಂದಿ ಕಾರ್ಮಿಕರಲ್ಲಿ ಒಬ್ಬರು. ನವೆಂಬರ್ 28 ರಂದು, ಅವರು ಅಂತಿಮವಾಗಿ ಸುರಂಗದಿಂದ ಹೊರಬಂದಾಗ, ಅವರ ಕುಟುಂಬವು ಇತರರಂತೆ ಸಂತೋಷ ಆಚರಿಸಲು ಸಾಧ್ಯವಾಗಲಿಲ್ಲ. ಕಾರಣ ಭಕ್ತುವಿನ ತಂದೆ, 70 ವರ್ಷ ವಯಸ್ಸಿನ ಬರ್ಸಾ ಮುರ್ಮು, ನವೆಂಬರ್ 29 ರಂದು ಬೆಳಿಗ್ಗೆ ತನ್ನ ಮಗನನ್ನು ರಕ್ಷಿಸುವ ಕೆಲವೇ ಗಂಟೆಗಳ ಮೊದಲು ಕಾಯುತ್ತಾ ಸಾವನ್ನಪ್ಪಿದರು. ಮಗ ಹೊರಗೆ ಬಂದ ಸುದ್ದಿಯೂ ಅವರು […]
ಅಮರಾವತಿ: ನೀವು ಕುರಿ ಮಾಂಸ ತಿಂದಿದ್ದರಿಂದ ಭಾರತ ವಿಶ್ವಕಪ್ ಸೋತಿತು ಎಂದು ಹಿರಿಯ ಮಗ ಕುಡಿದ ಅಮಲಿನಲ್ಲಿ ತಮ್ಮನ ಮೇಲೆ ರಾಡ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಮಹಾರಾಷ್ಟ್ರ ಅಮರಾವತಿಯಲ್ಲಿ ನಡೆಸಿದಿದೆ.ಈ ವೇಳೆ ಆರೋಪಿ ಹೆಸರು ಪ್ರವೀಣ ರಮೇಶ ಇಂಗೋಳೆ (ವಯಸ್ಸು 32, ರೆ. ಅಂಜನಗಾಂವ್ ಬ್ಯಾರಿ) ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಮೃತನನ್ನು ಅಂಕಿತ್ ರಮೇಶ ಇಂಗೋಲೆ (ವಯಸ್ಸು 28) ಎಂದು ಗುರುತಿಸಲಾಗಿದ್ದು, ಗಾಯಗೊಂಡ ತಂದೆಯ ಹೆಸರು ರಮೇಶ್ ಗೋವಿಂದ್ ಇಂಗೋಳೆ ಎಂದು […]
10 ವರ್ಷ ಅವದಿ ಮುಗಿದ ಆಧಾರ್ ಕಾರ್ಡ್ಗಳ ದಾಖಲಾತಿಯನ್ನು ಅಪ್ಲೊಡ್ ಮಾಡಿ ಆಧಾರ್ ಕಾರ್ಡ್ ನವೀಕರಿಸಲು ಡಿಸೆಂಬರ್ 14 ಕೊನೆಯ ದಿನವಾಗಿದೆ ಎಂದು ಆಧಾರ್ ಪ್ರಾಧಿಕಾರ ತಿಳಿಸಿದೆ. ತಪ್ಪಿದಲ್ಲಿ ಆಧಾರ್ ಕಾರ್ಡ ನಿಷ್ಕ್ರೀಯಗೊಳ್ಳಲಿದೆ. ಎಂದು ಉಲ್ಲೇಖಿಸಲಾಗಿದೆ. ಆಧಾರ್ ಕಾರ್ಡ್ ಹೊಂದಿರುವ ನಾಗರಿಕರು. ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು 10ವರ್ಷಕ್ಕೆ ಒಮ್ಮೆ ತಮ್ಮ ಆಧಾರ್ ಕಾರ್ಡ್ ನಲ್ಲಿ ದಾಖಲಾಗಿರುವ ಗುರುತಿನ ವಿವರ ಮತ್ತು ವಿಳಾಸದ ಮಾಹಿತಿಯನ್ನು ನವೀಕರಿಸುವುದುಕಡ್ಡಾಯವಾಗಿರುತ್ತದೆ ಎಂದು ತಿಳಿಸಲಾಗಿದೆ. ಇದರ ಪ್ರಕಾರ […]
ಜನಾಂಗೀಯ ಹಿಂಸಾಚಾರ ಕೇಂದ್ರ ಸರಾಕಾರದ ದಿವ್ಯ ನಿರ್ಲಕ್ಷ್ಯದ ಪರಿಣಾಮ ಮಣಿಪುರದ 3 ಜಿಲ್ಲೆಗಳಲ್ಲಿ ‘ಸ್ವಯಂ ಆಡಳಿತ’ ಘೋಷಿಸಿದ ಬುಡಕಟ್ಟು ಸಮುದಾಯ ಮಣಿಪುರದ ಕುಕಿ-ಜೋ ಸಮುದಾಯದ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) 3 ಜಿಲ್ಲೆಗಳಲ್ಲಿ, ಸಮುದಾಯದ ಸದಸ್ಯರು ಸ್ವಯಂ ಆಡಳಿತವನ್ನು ಹೊಂದಿರಲಿದ್ದಾರೆ ಎಂದು ಘೋಷಿಸಿದ್ದಾರೆ. ಐಟಿಎಲ್ಎಫ್ ಪ್ರಧಾನ ಕಾರ್ಯದರ್ಶಿ ಮುವಾನ್ ಟಾಂಬಿಂಗ್ ಅವರು ತೆಂಗ್ನೌಪಾಲ್, ಕಾಂಗ್ಪೊಕ್ಪಿ ಮತ್ತು ಚುರಾಚಂದ್ಪುರ ಜಿಲ್ಲೆಗಳಲ್ಲಿ ಕುಕಿ-ಜೋ ಜನರು ಸ್ವಯಂ ಆಡಳಿತದ ವ್ಯಾಪ್ತಿಗೆ ಬರುತ್ತಾರೆ ಮತ್ತು ಸಮುದಾಯವು ಮೈತೈ ಮಣಿಪುರ ಸರ್ಕಾರದಿಂದ ಯಾವುದೇ […]
ಚಿತ್ರ ಸಾಂದರ್ಭಿಕ ಥಾಣೆ : ಮಹಾರಾಷ್ಟ್ರದ ಥಾಣೆ ನಗರದಲ್ಲಿ ಬುಧವಾರ ಮುಂಜಾನೆ ವಸತಿ ಸಂಕೀರ್ಣದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂರು ಕಾರುಗಳು ಸೇರಿದಂತೆ ಒಟ್ಟು 16 ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಪಂಚಪಖಾಡಿಯಲ್ಲಿರುವ ಹೌಸಿಂಗ್ ಸೊಸೈಟಿಯಲ್ಲಿ ಮಧ್ಯರಾತ್ರಿಯ ನಂತರ ನಡೆದ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಥಾಣೆ ನಾಗರಿಕ ಸಂಸ್ಥೆಯ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ತಿಳಿಸಿದ್ದಾರೆ. ಥಾಣೆ ಮುನ್ಸಿಪಲ್ ಕಾರ್ಪೊರೇಷನ್ನ ಪ್ರಧಾನ ಕಚೇರಿಗೆ ಸಮೀಪದಲ್ಲಿರುವ ಕಟ್ಟಡದ […]
ಅಕ್ಟೋಬರ್ 27, 2023: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) ತನ್ನ “ಬಾಬ್ ಕಿ ಸಂಗ್, ತ್ಯೋಹಾರ್ ಕಿ ಉಮಂಗ್” ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ – ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಬ್ಯಾಂಕ್ ಖಾತೆಯನ್ನು ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನುನೀಡುತ್ತದೆ. ಇದಲ್ಲದೆ, ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು ಪೂರೈಸಲು, ಖಾತೆಯಲ್ಲಿ ನಾಮಮಾತ್ರ ತ್ರೈಮಾಸಿಕಸರಾಸರಿ ಬ್ಯಾಲೆನ್ಸನ್ನು ನಿರ್ವಹಿಸುವ ಮೂಲಕ ಬಾಬ್ ಲೈಟ್ […]
ಕೇರಳ: ಎರ್ನಾಕುಲಂನಲ್ಲಿ ಯೋಹಾನ ಸಾಕ್ಷಿಗಳ ಪ್ರಾರ್ಥನ ಸಮಾವೇಶದಲ್ಲಿ ಬಾಂಬ್ ಸ್ಪೋಟಗೊಂಡು 2 ಸಾವು ಸಂಭವಿಸಿದ ಭಯಾನಕ ಘಟನೆ ನಡೆದಿದೆ. ಈ ಕ್ರತ್ಯಕ್ಕೆ ಭಯೋತ್ಪಾದಕರು ಎಂಬ ಸುಳಿವು ಎಂದು ಸುದ್ದಿ ಹರಡಿದ್ದಾರೂ, ಈಗ ಈ ಕ್ರತ್ಯವನ್ನು ತಾನೇ ಮಾಡಿದ್ದೆಂದು ಒರ್ವ ಪೊಲೀಸರಿಗೆ ಶರಣಾಗಿದ್ದಾನೆ. ಡೊಮಿನಿಕ್ ಮಾರ್ಟಿನ್ ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯ ಪ್ರಾರ್ಥನಾ ಸಮಾವೇಶ ಕೇಂದ್ರದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಬಾಂಬ್ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಕುರಿತು ಗೃಹ […]

