ನಿರೀಕ್ಷೆಯಂತೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರಿ ಅಂತರದಿಂದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಗದ್ದುಗೆ ಹಿಡಿದಿದ್ದಾರೆ.ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ. ಅದೂ ಕರ್ನಾಟಕದವರಾಗಿದ್ದು ವಿಶೇಷ. ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7897 ಮತಗಳನ್ನು ಪಡದಿದ್ದು, ಅವರ ಪ್ರತಿಸ್ಪರ್ಧಿ ಶಶಿ ತರೂರ್ 1072 ಮತಗಳನ್ನು ಪಡೆದಿದ್ದಾರೆ. 416 ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 9385 ಮತಗಳು ಚಲಾವಣೆಯಾಗಿದ್ದವು. ಸ್ಪರ್ಧಿಸಿ ಸೋತ ಶಶಿ […]
ಉತ್ತರಪ್ರದೇಶದಲ್ಲಿ ಆಸ್ಪತ್ರೆಯ ಸ್ವೀಪರ್/ ಭಿಕ್ಷುಕನ ಖಾತೆಯಲ್ಲಿ ಬರೋಬ್ಬರಿ 70 ಲಕ್ಷ ದೊರೆತ ಘಟನೆ ನಡೆದಿದೆ. ಆ ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಪ್ರಯಾಗರಾಜ್ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದ ಧೀರಜ್ ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಧೀರಜ್ ಮರಣದ ಬಳಿಕ ಆತನ ಬ್ಯಾಂಕ್ ಖಾತೆಯಲ್ಲಿ ಸುಮಾರು 70 ಲಕ್ಷಕ್ಕೂ ಅಧಿಕ ಹಣ ಇರುವುದು ಬೆಳಕಿಗೆ ಬಂದಿದೆ. ಧೀರಜ್ನ ತಂದೆಯೂ ಇದೇ […]
(ವಿಶ್ವದ ಎರಡನೇ ಅತಿ ಎತ್ತರದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ಬೈಕಿನಲ್ಲಿ 900 ಕಿ.ಮೀ ಪಯಣಿಸಿ ದಾಖಲೆ ಬರೆದ ಕುಂದಾಪುರದ ವಿಲ್ಮಾ ಕ್ರಾಸ್ಟೊ ಕರ್ವಾಲೋ ಬಗ್ಗೆ ವಿಶೇಷ ಲೇಖನ) ಸಣ್ಣ ಪಟ್ಟಣದ ಊರಿನ ಜನರು ಯಾವಾಗಲೂ ದೊಡ್ಡ ಕನಸು ಕಾಣುತ್ತಾರೆ ಮತ್ತು ಸರಿಯಾದ ಸಮಯಕ್ಕೆ ಅಥವ ವಯಸ್ಸಾದರೂ ತಮ್ಮ ಕನಸುಗಳನ್ನು ಸಾಧಿಸಬೇಕು. ಕುಂದಾಪುರದ ಅನೇಕರು ತಮ್ಮ ಸಾಧನೆಯಿಂದ ಕುಂದಾಪುರವನ್ನು ಜಾಗತಿಕ ಭೂಪಟದಲ್ಲಿ ಗುರುತಿಸುವಂ ಮಾಡಿದ್ದಾರೆ. ಕ್ರೀಡಾಪಟುಗಳು, ಕಬಡ್ಡಿ ಆಟಗಾರರು, ರಂಗಭೂಮಿ ಕಲಾವಿದರು, ಹೋಟೆಲ್ ಉದ್ಯಮಿಗಳು ಹೀಗೆ ಈ ಪಟ್ಟಿಯನ್ನು […]
ಕುಂದಾಪುರ: ಕುಂದಾಪುರದ ಮಾಜಿ ಪುರಸಭಾ ಅಧ್ಯಕ್ಷ, ಕ್ರೀಡಾಳು ದಿ. ಎಡ್ವಿನ್ ಕ್ರಾಸ್ಟೊ ಅವರ ಪುತ್ರಿ ಹಾಗೂ ಕುಂದಾಪುರ ಪುರಸಭೆಯ ಮಾಜಿ ಉಪಾಧ್ಯಕ್ಷೆ ಲಿಯೋನೆಲ್ಲಾ ಕ್ರಾಸ್ಟೊ ಹಾಗೂ ಕುಂದಾಪುರ ಮೂಲದ ಲೆಸ್ಲಿ ಕರ್ವಾಲೊ ಅವರ ಪತ್ನಿ. ವಿಲ್ಮಾ ಮೂಲದ 54 ವರ್ಷದ ವಿಲ್ಮಾ ಕ್ರಾಸ್ಟೊ ಕರ್ವಾಲ್ಲೊ ಅವರು ವಿಶ್ವದ ಎರಡನೇ ಅತಿ ಎತ್ತರದ ಮೋಟಾರು ವಾಹನ ರಸ್ತೆಯಾದ ಖರ್ದುಂಗ್ ಲಾ ಪಾಸ್ನಲ್ಲಿ ಮೋಟಾರು ಬೈಕ್ನಲ್ಲಿ ಪ್ರಯಾಣಿಸುವ ಕನಸನ್ನು ನನಸಾಗಿಸುವುದರ ಮೂಲಕ ವಿಶೇಷ ಸಾಧನೆ ಮಾಡಿದ ದಾಖಲೆ ಬರೆದಿದ್ದಾಳೆ. 54 […]
ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಉಪ ಮುಖ್ಯಮಂತ್ರಿಯಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ ಮಾಡಿದರು. 71 ವರ್ಷ ವಯಸ್ಸಿನ ನಿತೀಶ್ ಕುಮಾರ್ ಅವರು 8ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಚೌಹಾಣ್ ಪ್ರತಿಜ್ಞಾ ವಿಧಿ ಬೋಧಿಸಿದರು. ಬಿಹಾರದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಹೊರಗಿಟ್ಟು ಪ್ರಾದೇಶಿಕ ಪಕ್ಷಗಳು, ಜೊತೆಯಾಗುವ ಮೂಲಕ ಹೊಸದೊಂದು ರಾಜಕೀಯ ಅಧ್ಯಾಯ ಆರಂಭವಾಗಿದೆ. ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಎರಡನೇ […]
ನವದೆಹಲಿ: ಸುಪ್ರೀಂ ಕೋರ್ಟ್ ಕುರಿತು ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್ ಅಸಮಾಧಾನ ವ್ಯಕ್ತಪಡಿಸಿ ಮಹತ್ವದ ಹೇಳಿಕೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ನೀಡಿದ ಇತ್ತೀಚಿನ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ಬಗೆಗಿನ ಭರವಸೆ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ನಿಂದ ನಿಮಗೆ ಸೂಕ್ತ ಪರಿಹಾರ ಸಿಗುತ್ತದೆ ಎಂದು ನೀವು ಭಾವಿಸಿದರೆ ಅದು ನಿಮ್ಮ ತಪ್ಪು ಕಲ್ಪನೆ. ಸುಪ್ರೀಂ ಕೋರ್ಟ್ನಲ್ಲಿ 50 ವರ್ಷಗಳ ಪಕೀಲಿ ವ್ರತ್ತಿ ಪೂರ್ಣಗೊಳಿಸಿದ ನಂತರ ನಾನು […]
ದಾವಣಗೆರೆಯಲ್ಲಿ ಭರ್ಜರಿ ಸಿದ್ದರಾಮೋತ್ಸವ: ಸಿದ್ದರಾಮಯ್ಯನವರ ಆಡಳಿತದ ಬಗ್ಗೆ ನನಗೆ ಹೆಮ್ಮೆ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಸರ್ವ ಜನಾಂಗದ ನಾಯಕ: ಡಿ.ಕೆ.ಶಿವಕುಮಾರ್ ದಾವಣಗೆರೆ: ಸಿದ್ದರಾಮೋತ್ಸವದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲು ಕರ್ನಾಟಕದಲ್ಲಿ ಪ್ರವಾಹದಿಂದ ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸಿದರು. ಒಬ್ಬ ವ್ಯಕ್ತಿಯಾಗಿ ಸಿದ್ದರಾಮಯ್ಯನವರನ್ನು ಇಷ್ಟಪಡುತ್ತೇನೆ. ಅವರ ವಿಚಾರಗಳ ಬಗ್ಗೆ ನನ್ನ ಸಹಮತ ಇದೆ. ಇವರು ನಡೆಸಿದ 5 ವರ್ಷಗಳ ಆಡಳಿತದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ರಾಹುಲ್ ಗಾಂಧಿ ಈ ಸಂದರ್ಭದಲ್ಲಿ […]
ನವದೆಹಲಿ: ಕೇಂದ್ರ ಸರ್ಕಾರವು ಧ್ವಜ ಸಂಹಿತೆಯಲ್ಲಿ ನೂತನ ಬದಲಾವಣೆ ಮಾಡಿದ್ದು, ಅದರ ಅಡಿಯಲ್ಲಿ ಈಗ ತ್ರಿವರ್ಣ ಧ್ವಜವನ್ನು ಹಗಲು ರಾತ್ರಿ ಹಾರಿಸಲು ಅನುಮತಿ ನೀಡಲಾಗಿದೆ. ಇನ್ನು ಮುಂದೆ ರಾಷ್ಟ್ರಧ್ವಜವನ್ನು ರಾತ್ರಿಯೂ ಹಾರಿಸಬಹುದು ಮತ್ತು ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್ ಧ್ವಜಗಳನ್ನೂ ಬಳಸಬಹುದಾಗಿದೆ ಎಂದು ತೀಳಿಸಿದೆ. ಆಗಸ್ಟ್ 13ರಿಂದ 15ರ ವರೆಗೆ ನಡೆಯಲಿರುವ ‘ಹರ್ ಘರ್ ತಿರಂಗ’(ಪ್ರತಿಯೊಬ್ಬರ ಮನೆಯಲ್ಲಿ ತ್ರಿವರ್ಣ ಧ್ವಜ) ಅಭಿಯಾನದ ಸಲುವಾಗಿ, ‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ಕೇಂದ್ರ ಸರ್ಕಾರವು ಈ ಕ್ರಮ ಕೈಗೊಂಡಿದೆ. […]
ಬೆಂಗಳೂರು: ಬೆಂಗಳೂರಿನ ಶಿವಾಜಿ ನಗರದ ಪೊಲೀಸರು, ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರ ಪ್ರದೇಶಕ್ಕೆ ತೆರಳಿದ್ದ ವೇಳೆ ಬೆಂಗಳೂರು ವಾಹನ ಚಿತ್ತೂರಿನ ಬಳಿ ಭೀಕರ ಅಪಘಾತಕ್ಕೀಡಾಗಿದ್ದ ಪರಿಣಾಮ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತದಟ್ಟಿದ್ದು, ನಾಲ್ವರಿಗೆ ತೀವ್ರ ಗಾಯಗಳಾಗಿವೆ.ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ ಅಪಘಾತ ನಡೆದಿದೆ. ಚಿತ್ತೂರಿನಿಂದ ತಿರುಮಲಕ್ಕೆ ಹೋಗುವ ರಸ್ತೆಯ ನಡುವೆ ಈ ಸೇತುವೆ ಬರುತ್ತದೆ. ಪೊಲೀಸ್ ಸಿಬ್ಬಂದಿ ಇದ್ದ ಇನ್ನೋವಾ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಸುಮಾರು 30 ಅಡಿ […]

