
JANANUDI.COM NETWORK ಹಾಸನ: ಭೀಕರ ಅಪಘಾತವೊಂದರಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನದ ಬೇಲೂರು ರಸ್ತೆಯ ಸಂಕೇನಹಳ್ಳಿ ಬಳಿ ನಡೆದಿದೆ.ಬಸ್ ಹಾಗೂ ಆಲ್ಟೋ ಕಾರು ನಡುವೆ ಈ ಭೀಕರ ಅಪಘಾತ ನಡೆದಿದ್ದು, ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳು ಈ ಅಪಘಾತಕ್ಕೆ ಬಲಿಯಾಗಿದ್ದಾರೆ.ಕಾರಿನಲ್ಲಿ ಇದ್ದ ಬೇಲೂರು ವಿದ್ಯಾ ವಿಕಾಸನ ಪದವಿ ಪೂರ್ವ ಕಾಲೇಜಿನ ದ್ವೀತಿಯ ಪಿ.ಯು.ಸಿ. ಯ ವಿದ್ಯಾಥಿಗಳಾದ ಅಕ್ಮಲ್ (೧೮) ಜೆಲಾನಿ (೧೯) ತೌಹಿದ್ (೧೮) ಕೈಫ್ (೧೮) ಸ್ಥಳದಲ್ಲೆ ಮ್ರತ ಪಟ್ಟರೆ, ರಿಹಾನ್ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ಆಯ್ಕೆಯಾದ ಡಾ|| ವೈ.ಎ ನಾರಾಯಣಸ್ವಾಮಿ ಪಟ್ಟಣಕ್ಕೆ ಆಗಮಿಸಿದ ವೇಳೆಯಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಅದ್ದೂರಿ ಸ್ವಾಗತ ಮಾಡಲಾಯಿತು.ಪಟ್ಟಣದ ಇಂದ್ರಾಭವನ ವೃತ್ತದಲ್ಲಿ ತಾಲ್ಲೂಕು ಬಿಜೆಪಿ ಘಟಕದ ಮುಖಂಡರು ಡಾ|| ವೈ.ಎ ನಾರಾಯಣಸ್ವಾಮಿ ರವರನ್ನು ಅದ್ದೂರಿಯಾಗಿ ಸ್ವಾಗತಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಗೌರವಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಪರ ಕಾರ್ಯಕ್ರಮಗಳು ಮತ್ತು ಬಿಜೆಪಿ ಪಕ್ಷದ ವರಿಷ್ಠರಿಗೆ ಜೈಕಾರಗಳನ್ನು ಕೂಗಿ ಸಂಬ್ರಮಿಸಿ ವೈ.ಎ ನಾರಾಯಣಸ್ವಾಮಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಸಂಸದ ಮುನಿಸ್ವಾಮಿಅವರಿಗೆ ನಿಜವಾದದೇಶಭಕ್ತಿಯಿದ್ದರೆಆರ್ಎಸ್ಎಸ್ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಲಿ ಎಂದುಅಂಜುಮಾನ್ಇಸ್ಲಾಮಿಯಾಅಧ್ಯಕ್ಷಜಮೀರ್ಅಹಮದ್ ಸವಾಲು ಹಾಕಿದರು.ನಗರದಕ್ಲಾಕ್ಟವರ್ನಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆರಾಷ್ಟ್ರಧ್ವಜ ಹಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಮಾತನಾಡದ ಸಂಸದ ಮುನಿಸ್ವಾಮಿ ಸದಾ ಹಿಂದು-ಮುಸ್ಲಿಂ ಬಂಧುಗಳ ಮಧ್ಯೆ ಜಗಳ ತಂದಿಡುವ ಹೇಳಿಕೆಗಳನ್ನು ನೀಡುತ್ತಿರುತ್ತಾರೆ.ಯಾರಿಗೂ ಭಯಪಟ್ಟು ನಾವು ಧ್ವಜ ಹಾರಿಸಿಲ್ಲ. ನಮ್ಮರಾಷ್ಟ್ರಭಕ್ತಿಯನ್ನು ನಾವು ಸಾಬೀತು ಪಡಿಸಿದ್ದೇವೆ. ದೇಶಪ್ರೇಮದ ಬಗ್ಗೆ ನಮಗೆ ಇವರು ಪಾಠ ಮಾಡಬೇಕಿಲ್ಲಎಂದುಕಿಡಿಕಾರಿದರು.ನಾವು ಕ್ಲಾಕ್ಟವರ್ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದೇವೆ. ಅದೇರೀತಿ ಸಂಸದರುಆರ್ಎಸ್ಎಸ್ ಕಚೇರಿಗಳ ಮೇಲೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ನಗರದಗಡಿಯಾರಗೋಪುರದಲ್ಲಿ ಶನಿವಾರ ಸ್ಥಳೀಯ ಅಲ್ಪಸಂಖ್ಯಾತ ಮುಖಂಡರ ಸಹಕಾರದೊಂದಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯುತ್ರಿವರ್ಣಧ್ವಜ ಹಾರಿಸುವಲ್ಲಿ ಯಶಸ್ವಿಯಾಯಿತು.ಎರಡು ದಿನಗಳ ಹಿಂದಷ್ಟೇ ಸಂಸದಎಸ್.ಮುನಿಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಗಡಿಯಾರಗೋಪುರಕ್ಕೆತ್ರಿವರ್ಣವನ್ನು ಬಳಿಸಿ, ಗೋಪುರದ ಮೇಲ್ಭಾಗದಲ್ಲಿತ್ರಿವರ್ಣಧ್ವಜವನ್ನು ಹಾರಿಸುವ ಸಲುವಾಗಿ ತಾವುಏಕಾಂಗಿಯಾಗಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು.144 ಸೆಕ್ಷನ್ಅವಧಿ ಮುಗಿದ ಮಾ.21 ರ ನಂತರ ನೂರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿ ಈ ಕುರಿತು ಡಿಸಿ ಮತ್ತು ಎಸ್ಪಿಗೆ ಮನವಿ ಸಲ್ಲಿಸಿದ್ದರು.ಗಡಿಯಾರಗೋಪುರ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಹಾಗೂ ಕೋಲಾರದಲ್ಲಿ ಹಿಜಾಬ್ ಸಂಬಂಧ […]

JANANUDI.COM NETWORK ಬೆ೦ಗಳೂರು: 15000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.ಬೆ೦ಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1-8ನೇ ತರಗತಿ ಶಾಲೆಗಳಲ್ಲಿ 36,000 ಶಿಕ್ಷಕರ ಕೂರತೆಯಿದೆ. ಅದರಲ್ಲಿ 21 ಸಾವಿರ ಗಣಿತ ಶಿಕ್ಷಕರ ಕೊರತೆ ಇದೆ ಎಂದು ತಿಳಿಸುತ್ತಾ, ಹೀಗಾಗಿ ಉತ್ತಮ ಗುಣಮಟ್ಟದ ಶಿಕ್ಷಣಕಕ್ಕಾಗಿ ಶಿಕ್ಷಕರ ನೇಮಕಾತಿಗೆ ಇಲಾಖೆ ಮುಂದಾಗಿದೆ ಎ೦ದರು.ಹೈದರಾಬಾದ್-ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದ್ದು, ಉಳಿದೆಡೆ. 10 ಸಾವಿರ ಶಿಕ್ಷಕರ ನೇಮಕಾತಿಗೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್ಗೆ ಶ್ರೀನಿವಾಸಪುರ ಗುರುವಾರ ಬೆಂಬಲ ವ್ಯಕ್ತವಾಗಿದೆ .ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ . ಅಲ್ಲದೆ ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಮಾ.14: ಕರ್ನಾಟಕ ಉಚ್ಚ ನ್ಯಾಯಾಲಯದ 2021ನೇ ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2021 ರಲ್ಲಿ ಹೊರಡಿಸಲಾದ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಮಾಲೂರಿನ ನಂಬಿಗಾನಹಳ್ಳಿ ಸುಷ್ಮಾ ಅವರು ಆಯ್ಕೆಯಾಗಿದ್ದಾರೆ.ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದ ಕೃಷಿ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವ ಸುಷ್ಮಾ ಸಿವಿಲ್ ಜಡ್ಜ್ ಆಗುವ ಮೂಲಕ ಸಾಧನೆ ಮಾಡಿದ್ದಾರೆ.ಸುಷ್ಮಾರವರು ಚಿಕ್ಕ ಮರಿಯಪ್ಪ ಹಾಗೂ ನಾರಾಯಣಮ್ಮ ದಂಪತಿಗಳ ಪುತ್ರಿಯಾಗಿದ್ದಾರೆ.ತಾಲೂಕಿನ ನಂಬಿಗಾನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಐದರ ವರೆಗೂ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಸೋಮವಾರ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದಿಂದ ಕೋಲಾರ ಜಿಲ್ಲೆಯ ಗಡಿ ತಾಲ್ಲೂಕುಗಳಿಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದೆ ಎಂದು ಗಂಭೀರ ಆರೋಪ ಮಾಡಿದರು.ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಗಡಿ ಅಭಿವೃದ್ದಿ ಪ್ರಾಧಿಕಾರಕ್ಕೆ ಕಳೆದ 5 ವರ್ಷದ ಆಯವ್ಯಯದಲ್ಲಿ ಒದಗಿಸಿರುವ ಅನುದಾನವೆಷ್ಟು, ಸರ್ಕಾರ ಬಿಡುಗಡೆ ಮಾಡಿರುವ ಅನುದಾನದಲ್ಲಿ ಕಳೆದ 5 ವರ್ಷದಿಂದ ಎಷ್ಟು ಸಂಘ- ಸಂಸ್ಥೆ, ಗಡಿ ಭಾಗದ ಶಾಲೆ, […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡ್ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 105 ಸ್ತ್ರೀ ಶಕ್ತಿ ಸಂಘಗಳಿಗೆ ₹4.75 ಕೋಟಿ ಸಾಲ ವಿತರಿಸಿ ಮಾತನಾಡಿದರು.ಮಹಿಳೆಯರ ಸಬಲೀಕರಣ ಇಂದಿನ ಅಗತ್ಯವಾಗಿದೆ. ಅವರನ್ನು ಖಾಸಗಿ ಬಡ್ಡಿ ವ್ಯಾಪಾರಿಗಳ ಶೋಷಣೆಯಿಂದ ಮುಕ್ತಪಡಿಸಬೇಕಾಗಿತ್ತು. ಆದ್ದರಿಂದಲೇ ಸತತ ಪ್ರಯತ್ನ ಮಾಡಿ ಬಡ್ಡಿ ರಹಿತ ಸಾಲ ನೀಡುವ ವ್ಯವಸ್ಥೆ ಜಾರಿಗೆ ತರಲಾಯಿತು. ಈಗ ಪ್ರತಿ ಸದಸ್ಯರಿಗೆ ₹50 ಸಾವಿರ ಮಾತ್ರ ಸಾಲವಾಗಿ ಸಿಗುತ್ತಿದೆ. ಇದರಿಂದ ಹೆಚ್ಚು ಪ್ರಯೋಜನವಾಗುತ್ತಿಲ್ಲ. ₹1 ಲಕ್ಷ ಸಾಲ […]