
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು : ಸರ್ಕಾರಿ ಕೆಲಸ ದೇವರ ಕೆಲಸ ಎಂಬ ಭಾವನೆಯೊಂದಿಗೆ ನಾನು ಕಳೆದ 31 ವರ್ಷಗಳ ಕಾಲ ನಿರ್ವಹಿಸಿದ್ದೇನೆ. ನನಗೆ ಕೆಲಸ ಸಮಯದಲ್ಲಿ ಸಹಕರಿಸಿದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಹಾಗು ಸಹುದ್ಯೋಗಿ ಮಿತ್ರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕೃಷ್ಣಮೂರ್ತಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.ರಾಯಲ್ಪಾಡಿನ ಪೋಸ್ಟ್ ಆಫೀಸ್ನ ಕೃಷ್ಣಮೂರ್ತಿಯವರು ಎಬಿಪಿಎಂ ಆಗಿ 31ವರ್ಷ ಕಾರ್ಯನಿರ್ವಹಿಸಿರುವ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಲಾಖೆವತಿಯಿಂದ ಹಾಗು ಗ್ರಾಮದ ಮುಖಂಡರು ಸನ್ಮಾನಿಸಿದರು.ಅಧೀಕ್ಷಕರಾದ ಅವದೇಶ್ಸಿಂಗ್,ಮೆಲ್ವರಿಸಿಗಳಾದ ರಘುನಾಥ್,ಕೃಷ್ಣಪ್ಪ ಹಾಗು ಪೋಸ್ಟ್ಮಾಸ್ಟರ್ ಎಂ.ಕರುಣಾಕರ ಹಾಗು […]

ಹೋಲಿ ರೋಸರಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ಅತಿವಂದನೀಯ ಸ್ಟ್ಯಾನಿ ತಾವ್ರೋ ಮಾತನಾಡಿ, ಕೊರೋನ ಸಂಕಷ್ಟದ ಸಮಯದಲ್ಲಿ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿದ ಕೆಥೊಲಿಕ್ ಸಭಾದ ಸೇವೆ ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಸಹಾಯಕ ಧರ್ಮಗುರುಗಳಾದ ವಂ. ವಿಜಯ ಡಿಸೋಜ, ಕೆಥೊಲಿಕ್ ಸಭಾ ಘಟಕದ ಅಧ್ಯಕ್ಷರಾದ ಬರ್ನಾರ್ಡ್ ಡಿಕೋಸ್ಟಾ, ಪದಾಧಿಕಾರಿಗಳಾದ ಡಾ. ಸೋನಿ ಡಿಕೋಸ್ಟಾ, ವಿನ್ಸೆಂಟ್ ಡಿಸೋಜ, ಶೈಲಾ ಅಲ್ಮೇಡಾ, ಪ್ರೇಮಾ ಡಿಕುನ್ಹಾ, ಮಾರ್ಕ್ ಡಿಸೋಜಾ, ಉಲ್ಲಾಸ್ ಕ್ರಾಸ್ತಾ, ಲೋನಾ ಡಿಸೋಜ, ವಿನೋದ್ ಕ್ರಾಸ್ಟೋ ಮತ್ತು ಪಾಲನಾ ಮಂಡಳಿಯ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಸೋಂಕಿನ ಆತಂಕದಲ್ಲೂ ನ್ಯಾಯ ವಿಲೇವಾರಿ ವಿಳಂಬವಾಗದಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್ ಕರೆ ನೀಡಿದರು.ಶುಕ್ರವಾರ ನಗರದ ಜಿಲ್ಲಾ ಕಾರಗೃಹದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರಾಗೃಹ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಚಾರಣಾಧೀನ ಖೈದಿಗಳಿಗಾಗಿ ಹಮ್ಮಿಕೊಂಡಿದ್ದ ಕೋವಿಡ್ ಮಾರ್ಗಸೂಚಿಗಳಡಿ ಪಾಲಿಸಬೇಕಾದ ನಿಯಮಗಳ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು […]

JANANUDI.COM NETWORK ಮಂಗಳೂರು: ಬಡ ಆಟೊ ಚಾಲಕ ಬಶೀರ್ ಗೆ ಕೊವೀಡ್ ಲಾಕ್ ಡೌನ್ ಪರಿಹಾರವೆಂದು ಸರಕಾರ ನೀಡಿರುವ 3 ಸಾವಿರ ರೂ. ಸಹಿತ ಬ್ಯಾಂಕ್ ಖಾತೆಯಲ್ಲಿದ್ದ 2,700ನ್ನೂ ಎಲ್ಲವನ್ನು ಬಶೀರ್ ಮನೆ ಸಾಲದ ಕಂತಿಗಾಗಿ ಕೊರೊನಾ ತೆಗೆದುಕೊಂಡಿದ್ದಕ್ಕೆ ಎನನ್ನು ಪರಿಹಾರ ಕೊಡದೆ, ಮುರಿದುಕೊಂಡಿದೆ, ಬ್ಯಾಂಕ್ನ ವರ್ತನೆಗೆ ನೆಟ್ಟಿಗರು ಕಟು ಟೀಕೆ ವ್ಯಕ್ತಪಡಿಸಿದ್ದರು. ಈ ಕುರಿತು ದೊಡ್ಡ ಚರ್ಚೆಯನ್ನೇ ಅದು ಹುಟ್ಟುಹಾಕಿತು. ಯೂನಿಯನ್ ಪದಾಧಿಕಾರಿಗಳು ಬಶೀರ್ಗೆ ಹಾಗೂ ಈ ರೀತಿ ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರದ (ರೀ ಷೆಡ್ಯೂಲ್ ಅವಕಾಶದ) […]

JANANUDI.COM NETWORK ಬೆಂಗಳೂರು.ಜೂ.24: ಬೆಂಗಳೂರಿನ ಮಾಜಿ ಲೇಡಿ ಕಾರ್ಪೊರೇಟರ್ ಒಬ್ಬಳನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಹತ್ಯೆ ಮಾಡಲಾದ ದಾರುಣಕರ ಘಟನೆ ನಡೆದಿದೆ. ಬೆಂಗಳೂರು ಛಲವಾದಿ ಪಾಳ್ಯದ ಫವರ್ ಗಾರ್ಡನ್ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರೇ ದುಷ್ಕರ್ಮಿಗಳು ಹತ್ಯೆಯಾದ ನತದ್ರಷ್ಟೆ. ದುಷ್ಕರ್ಮಿಗಳು ಅವರನ್ನು ಮನೆಯಿಂದ ಹೊರ ಕರೆಸಿಕೊಂಡು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ ಬರುವಂತೆ ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಅವರ ಮೇಲೆ […]

ಮನುಷ್ಯನಿಗೆ ಛಲ, ಆತ್ಮ ವಿಶ್ವಾಸ, ಧ್ಯೇಯ, ಇಚ್ಚಾಸಕ್ತಿ ಇದ್ದರೆ ತಮ್ಮ ಗುರಿಯನ್ನು ಸಾಧಿಸಬಹುದು ಎಂಬುದಕ್ಕೆ ಈ ಲೇಖನದ ಪ್ರಧಾನರಾದ ರಾಜು ಎಂಬ ಅಲೆಮಾರೀ ಪಂಗಡದ ಯವಕನಾದ ರಾಜು ಅರ್. ಎಂಬವರ, ಸಾಧನೆ ಯಾಕೆಂದರೆ ರಾಜು ಅವರ ಜಾತಿ ದೊಂಬಿದಾಸ ಕುಟುಂಬದ ಮೂಲ ಕಸುಬು ಊರು ಊರು ಊರು ತಿರುಗಿ ಸ್ಟೇಷನರಿ ವಸ್ತುಗಳಾದ ಸೂಜಿ, ಪೀನ, ಕರೆಮಾಣೆ, ಕರೆಮಾಣಿದಾರ, ಉಡುದಾರ, ಟೇಪ್, ದಬ್ಲ, ರಬ್ಬರ್, ಬಾಚ್ಚಣಿಗೆ ಇತ್ಯಾದಿ ವಸ್ತುಗಳನ್ನು ಮಾರಾಟ ಮಾಡಿ ಜೀವನ ನಡೆಸುವ ಅಲೇಮಾರಿಯ ಬಡ ಕುಟುಂಬ.ಆ […]

JANANUDI.COM NETWORK ಬೆಂಗಳೂರು,ಜೂ. 22: 10 ವರ್ಷದ ಹಿಂದೆ ಸಂದರ್ಶನ ನೀಡಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನೈಸ್ ಕಾರಿಡಾರ್ ಕಂಪನಿ ವಿರುದ್ಧ ತಮ್ಮ ಆರೋಪವನ್ನು ಮಾಡಿದ್ದರು, ಆದರೆ ಆ ಆರೋಪವನ್ನು ಸಾಬೀತುಪಡಿಸಲು ವಿಫಲರಾಗಿರುವುದರಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ 2 ಕೋಟಿ ರೂ ಮಾನ ಹಾನಿಯ. ಪರಿಹಾರವಾಗಿ ನೀಡಬೇಕೆಂದು ಕೋರ್ಟ್ ಆದೇಶಿಸಿದೆ. 10 ವರ್ಷಗಳ ಹಿಂದೆ ಖಾಸಗಿ ಸುದ್ದಿವಾಹಿನಿಗೆ ಒಂದಕ್ಕೆ ಸಂದರ್ಶನ ನೀಡಿದ್ದ ದೇವೇಗೌಡರು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಸಂಸ್ಥೆ ಗೌರವಕ್ಕೆ ಧಕ್ಕೆ ತರುವ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪೌರ ಕಾರ್ಮಿಕರು ಸ್ವಚ್ಛತೆಗೆ ಹೆಚ್ಚು ಗಮನ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ಸಭೆಯಲ್ಲಿ ಮಾತನಾಡಿ, ಪೌರ ಕಾರ್ಮಿಕರು ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ರೂ.1420 ಕೊಟ್ಟು ವಿಮೆ ಮಾಡಿಸಿದಲ್ಲಿ, ಆಕಸ್ಮಿಕ ಮರಣ ಹೊಂದಿದಲ್ಲಿ, ಮರಣ ಹೊಂದಿದ ಪೌರ ಕಾರ್ಮಿಕನ ಕಟುಂಬಕ್ಕೆ ರೂ.20 ಲಕ್ಷ ಪರಿಹಾರ ನೀಡಲಾಗುವುದು. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ಕಾರ್ಯನಿರ್ವಹಿಸುವಾಗ ಕೈಗವಸು ಹಾಗೂ ಮಾಸ್ಕ್ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೋವಿಡ್ ಕಾಲದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯಗಳನ್ನು ಶಾಲೆಯ ಮಾದರಿಯಲ್ಲಿ ನಿರ್ವಹಣೆ ಮಾಡಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಬೇಕೆಂದು ಸಮಾಜ ಸೇವಕ ಸಿಎಂಆರ್ಶ್ರೀನಾಥ್ ಹೇಳಿದರು.ನಗರದ ಗ್ರಂಥಾಲಯದ ಆವರಣದಲ್ಲಿ ಸೋಮವಾರ ಮೇಲ್ವಿಚಾರಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಓದುಗರಿಗೆ ಪುಸ್ತಕಗಳನ್ನ ಕೊಂಡುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಗ್ರಂಥಾಲಯದ ಮೂಲಕ ಪುಸ್ತಕಗಳನ್ನ ಕೊಟ್ಟು ವಿದ್ಯಾವಂತರನ್ನಾಗಿ ರೂಪಿಸುವಲ್ಲಿ ಗ್ರಂಥಾಲಯದ ಮೇಲ್ವಿಚಾರಕರ ಪಾತ್ರ ದೊಡ್ಡದು ಎಂದರು.ದೇಶ ಮತ್ತು ರಾಜ್ಯಕ್ಕೆ ಉನ್ನತ ಅಽಕಾರಿಗಳನ್ನ ಕೊಟ್ಟ […]