ಬೆಂಗಳೂರು : ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಢದಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಹಿಂದುತ್ವವಾದಿ ಭಾಷಣಗಾರ್ತಿ , ಕುಂದಾಪುರದ ಚೈತ್ರಾ ಮತ್ತು ಅವಳ ತಂಡದ ವಿರುದ್ಧ 68 ಸಾಕ್ಷಿಗಳು ಕಲೆ ಹಾಕಿ 800 ಪುಟಗಳ ಚಾರ್ಜ್ ಶೀಟ್ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಬುಧವಾರ ನಗರದ 3ನೇ ಎಸಿಎಂಎಂ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 75 ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿರುವ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ […]
ಹಾಸನ, ನ.9: ಹಾಸನ ಬಿಇಒ ಕಚೇರಿ ಅಧೀಕ್ಷಕರೊಬ್ಬರು ‘ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ’ ಎಂದು ತನ್ನ ಟೇಬಲ್ ಮೇಲೆ ಬೋರ್ಡ್ ಹಾಕಿರುವ ದೃಶ್ಯದ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಹಾಸನ ಬಿಇಒ ಕಚೇರಿಯ ಅಧೀಕ್ಷರಾಗಿರುವ ಡಿ.ಎಸ್.ಲೋಕೇಶ್ ತಮ್ಮ ಟೇಬಲ್ ಮೇಲೆ ‘ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ’ ಎನ್ನುವ ಬೋರ್ಡ್ ಹಾಕಿರುವುದು ಗಮನ ಸೆಳೆದಿದೆ. ಲೋಕೇಶ್ ಅವರು ತಮ್ಮ ಪ್ರಾಮಾಣಿಕತೆ ಹಾಗೂ ದಕ್ಷತೆಯ ಕಾರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಸನ ಸಂಸದರಾಗಿದ್ದ ಅವಧಿಯಲ್ಲಿ ಅವರ ಕಚೇರಿಯ ಆಪ್ತ […]
ಬೆಂಗಳೂರು: ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಟಾನೆಯಲ್ಲಿ ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ಗೆ ಸಿಲುಕಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಮಹಿಳೆ ಶ್ವೇತಾ(33) ಎಂದು ತಿಳಿದು ಬಂದಿದೆ. ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಽ ಕೆಮಿಕಲ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು, ಮಲ್ಲತ್ತಹಳ್ಳಿಯಲ್ಲಿ ವಾಸ ಮಾಡುತಿದ್ದ ಶ್ವೇತಾ, ಬುಧವಾರ ದಿವಸ ಶ್ರೀಪೇಂಟ್ಸ್ ಫ್ಯಾಕ್ಟರಿಯಲ್ಲಿ ಡ್ಯೂಟಿಯಲ್ಲಿದ್ದು ಬಣ್ಣ ಬೆರೆಸುವ ಗ್ರೈಂಡರ್ ನಲ್ಲಿ ಜಡೆ ಸಿಲುಕಿದ ಪರಿಣಾಮ ಶ್ವೇತಾಳ ತಲೆ ಸೆಳೆದುಕೊಂಡಿದೆ, ಪರಿಣಾಮ ತಲೆ ಕತ್ತರಿಸಿ ಹೋಗಿ ಶ್ವೇತಾ ಮೃತಪಟ್ಟಿದ್ದಾರೆ ಎಂದು ತಿಳಿದು […]
ಕುಂದಾಪುರ: ನವೆಂಬರ್ 8ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಮಹಿಳಾ ಕುಂದುಕೊರತೆ ಪರಿಹಾರ ಕೋಶ ಮತ್ತು ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ ವಿದ್ಯಾರ್ಥಿನಿಯರಿಗಾಗಿ “ಉತ್ತಮ ನೈರ್ಮಲ್ಯ ಮತ್ತು ಸಾಮಾಜಿಕ ಅಭಿವೃದ್ಧಿ” ಎಂಬ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರದ ಮನೀಶ್ ಆಸ್ಪತ್ರೆಯ ವೈದ್ಯರು ಮತ್ತು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ. ಪ್ರಮೀಳಾ ನಾಯಕ್ ಮಾತನಾಡಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನಾವು ಸೇವಿಸುವ ಆಹಾರ ಆರೋಗ್ಯಪೂರ್ಣವಾಗಿರಬೇಕು. ನಿತ್ಯವು ಒಂದು ಜಾತಿಯ ತರಕಾರಿ, ಒಂದು ಲೋಟ […]
ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಜನರು ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲ್ಲೂಕು ಕೇಂದ್ರದ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ರಾಯಲ್ಪಾಡ್ ಹೋಬಳಿ […]
ಬೆಂಗಳೂರು,ನ.6: ಬೆಂಗಳೂರಿನ ಸಹಕಾರ್ ನಗರದ ಹೋಲಿ ತ್ರಿನಿಟಿ ಚರ್ಚಿನಲ್ಲಿ ನ. 5 ರಂದು ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ಮರುನಾಮಕರಣದ ಸುವರ್ಣ ಮಹೋತ್ಸವ ಉತ್ಸಾಹ ಸಂಭ್ರಮದಿಂದ ಆಚರಿಸಲಾಯಿತು ಜೊತೆಗೆ ರಾಜ್ಯೋತ್ಸವದ ಸ್ಥಳೀಯ ಲಯನ್ಸ್ ಕ್ಲಬ್ ನೇತ್ರತ್ವದಲ್ಲಿ, ಸ್ವಯಂ ರಕ್ತದಾನ ಶಿಬಿರ ನಡೆಯಿತು.ಬೆಳಿಗೆನೇ ಬಲಿದಾನದ ಬಳಿಕ ಕನ್ನಡ ಧ್ವಜರೋಹಣ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಲಾಯಿತು. ಸೆಕ್ರೆಟ್ ಹಾರ್ಟ್ ಶಾಲೆಯ ಅಧ್ಯಾಪಕ ಧರ್ಮಗುರು ವಂ|ರಾಯಪ್ಪನವರು ಧ್ವಜರೋಹಣ ಗೈದು. ಕನ್ನಡ ಭಾಶೆಯ ಬಗ್ಗೆ ಸೂಕ್ತವಾದ ತಿಳುವಳಿಕೆ ನೀಡಿದರು. “ಕನ್ನಡ […]
ಬೆಂಗಳೂರು: ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದ ಚೈತ್ರಾ ಮತ್ತು ತಂಡದ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಪೊಲೀಸರು, ಮುಂದಿನ ವಾರ ಚಾರ್ಚ್ಶೀಟ್ ಸಲ್ಲಿಸಲಿದ್ದಾರೆ. ಪ್ರಕರಣದ ಸಂಬಂಧ 68 ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, 68 ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳಿಂದ ನಗದು, ಕಾರುಗಳು, ಚಿನ್ನಾಭರಣ ಸಹಿತ 5 ಕೋಟಿ ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, […]
ಬೆಂಗಳೂರು: ರಾಜ್ಯದ ಹಲವೆಡೆ ನವೆಂಬರ್ 4ರಿಂದ 8ರವರೆಗೂ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ.
ಮಂಗಳೂರು: ಕರ್ನಾಟಕ ರಾಜ್ಯೋತ್ಸವವು ರಾಜ್ಯ ಸ್ಥಾಪನೆಯನ್ನು ನೆನಪಿಸುವುದು ಮಹತ್ವದ ದಿನವಾಗಿದೆ. ಈ ಮಹತ್ವದ ಸಂದರ್ಭವನ್ನು ನವೆಂಬರ್ 1, 2023 ರಂದು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಬಹಳ ಉತ್ಸಾಹದಿಂದ ಆಚರಿಸಲಾಯಿತು. ಪ್ರಾರ್ಥನೆ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸುವ ರೋಮಾಂಚಕ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು. ಕಾಲೇಜು ಸಭಾಂಗಣವು ಜಾನಪದ ನೃತ್ಯಗಳ ಕೆಲಿಡೋಸ್ಕೋಪ್, ಜಾನಪದ ಹಾಡುಗಳ ಮಿಶ್ರಣ ಮತ್ತು ಜಾನಪದ ಆಧಾರಿತ ನೃತ್ಯ ನಾಟಕದೊಂದಿಗೆ ಜೀವಂತವಾಯಿತು, ಇವೆಲ್ಲವೂ ಕನ್ನಡ ಸಂಸ್ಕೃತಿ, ಸಂಪ್ರದಾಯ ಮತ್ತು […]

