
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕೊರೊನಾ ಭಯದ ನಡುವೆ ಶ್ರೀರಾಮ ನವಮಿಯನ್ನು ಸರಳವಾಗಿ ಆಚರಿಸಲಾಯಿತು. ಬಹುತೇಕ ದೇವಾಲಯಗಳಲ್ಲಿ ಆಚರಣೆ ಪೂಜೆಗೆ ಸೀಮಿತವಾಗಿತ್ತು.ಪಟ್ಟಣದ ರಾಮ ಮಂದಿರದಲ್ಲಿ ಧರ್ಮದರ್ಶಿ ಕೆ.ಮೋಹನಾಚಾರಿ ರಾಮ ದೇವರ ಪಟಕ್ಕೆ ಪೂಜೆ ಸಲ್ಲಿಸಿ ಪಾನಕ ಪನಿಯಾರ ವಿತರಿಸಿದರು. ಪುರಸಭೆಯ ಮಾಜಿ ಸದಸ್ಯೆ ರಾಧಮ್ಮ ಇದ್ದರು.ಪಟ್ಟಣದ ಹೊರ ವಲಯದಲ್ಲಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ರಾಮ ದೇವರ ಮೆರವಣಿಗೆ ಏರ್ಪಡಿಸಲಾಗಿತ್ತು. ಗ್ರಾಮಸ್ಥರು ಸರಳವಾಗಿ ಮೆರವಣಿಗೆ ಆಚರಿಸಿದರು.ತಾಲ್ಲೂಕಿನ ಹನುಮ ದೇವಾಲಯಗಳಲ್ಲಿ ವಿಶೇಷ ಪೂಜೆ ಬಳಿಕ ಪಾನಕ ಪನಿಯಾರ ವಿತರಿಸಲಾಯಿತು. […]

JANANUDI.COM NETWORK ಬೆಂಗಳೂರು, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯ ತನಕ ವೀಕೆಂಡ್ ಸಂಪೂರ್ಣ ಕರ್ಫ್ಯೂ ವಿಧಿಸಿ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ.ಇದು ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿ ಆದೇಶ ಹೊರಡಿಸಿದ್ದಾರೆ.ಇದು ಮುಂದಿನ ಮೇ ತಿಂಗಳ 4ರ ತನಕ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಬೆಳಿಗ್ಗೆ 11 ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಧಾರ್ಮಿಕ ಕೇಂದ್ರಗಳು ಸಂಪೂರ್ಣ […]

JANANUDI.COM NETWORK ಶಿರಸಿ, ಎ. 20; ಕಾರವಾರದ ಶಾಸಕರಾಗಿದ್ದ ವಸಂತ ಆಸ್ನೋಟಿಕರ್ ಅವರನ್ನು ಕೊಲೆಗೈದಿದ್ದ ಸಂಜಯ್ ಮೋಹಿತೆಗೆ ಜೀವಾವಧಿ ಶಿಕ್ಷೆ ಹಾಗೂ 68,000/- ರೂ. ದಂಡ ವಿಧಿಸಿ ಶಿರಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಕಾರವಾರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ತಮ್ಮ ಮಗಳ ಮದುವೆ ಆರತಕ್ಷತೆಯ ತಯಾರಿಯನ್ನು ನೋಡಿಕೊಂಡು ಮನೆಗೆ ಹೊರಡುವ ಸಲುವಾಗಿ ಕಲ್ಯಾಣ ಮಂಟಪದ ಎದುರಿನ ರಸ್ತೆಯ ಪಕ್ಕದಲ್ಲಿ ಇತರರೊಂದಿಗೆ ನಿಂತುಕೊಂಡಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವಸಂತ ಅನ್ನೋಟಿಕರ್ ಅವರ ಮೇಲೆ […]

JANANUDI.COM NETWORK ಬೆಂಗಳೂರು,ಎ. 20: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಅಸಂಖ್ಯ ಜನ ಬಲಿಯಾಗಿದ್ದಾರೆ. ನಿತ್ಯವೂ ರಾಜ್ಯದಲ್ಲಿ ಸಾವಿರಾರು ಜನರು ಸೋಂಕಿಗೊಳಗಾಗಿತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ಉಪಸ್ಥಿತಿಯಲ್ಲಿ ವಿಧಾನ ಮಂಡಲದ ಉಭಯ ಸದನಗಳ ಪ್ರಮುಖರ ಸಭೆ ನಡೆಯಿತು.ಬೆಂಗಳೂರು ಸಹಿತ ರಾಜ್ಯದ ಪ್ರಮುಖ ನಗರಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗಾಗಿ ಸಿನಿಮಾ ಮಂದಿರಗಳು, ಬಾರ್-ಪಬ್ಗಳ ಸಹಿತ ಪ್ರಮುಖ ಉದ್ದಿಮೆ ಕೇಂದ್ರಗಳ ಚಟುವಟಿಕೆಗಳಿಗೆ ಅಂಕುಶ ಹಾಕಬೇಕೆಂಬ ಆಗ್ರಹ ಕೇಳಿಬಂತು.ಅದರಲ್ಲೂ ಮುಖ್ಯವಾಗಿ […]

JANANUDI.COM NETWORK ಮಂಗಳೂರು,ಎ.20; ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಜೂನ್ 17ರಂದು ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ಝರಾ ಆಡಿಟೋರಿಯಂನಲ್ಲಿ ‘ಸೌಹಾರ್ದ ಸಾಮೂಹಿಕ ವಿವಾಹ’ ಸಮಾರಂಭ ಹಮ್ಮಿಕೊಂಡಿದ್ದು, ಆಸಕ್ತ ವಧುವಿನ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಧರ್ಮ, ಜಾತಿ, ಮತಗಳ ಬೇಧವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, 4 ಪವನ್ ಚಿನ್ನಾಭರಣ […]

JANANUDI.COM NEYWORK 1-9 ನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ಉತ್ತೀರ್ಣ – ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆಯ ವಿವರ ಬೆಂಗಳೂರು, ಎ.20; ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ 1-9ನೇ ತರಗತಿವರೆಗೆ ಪರೀಕ್ಷೆ ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1-9ನೇ ತರಗತಿವರೆಗೆ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು. ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎಂದರು. 1-5ನೇ ತರಗತಿವರೆಗೆ ಹಾಗೂ 6-9ನೇ ತರಗತಿವರೆಗೆ ಮೌಲ್ಯಾಂಕನ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ 19 ತಡೆಯಲು ಸಹಕರಿಸಿ- ಮುಖ್ಯಾಧಿಕಾರಿ ಡಿ ಶೇಖರ್.ಶ್ರೀನಿವಾಸಪುರ : ಕಡ್ಡಾಯವಾಗಿ ಮಾಸ್ಕ್ ಧರಸಿ ಕೋವಿಡ್ -19 ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಅಗತ್ಯವಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಡಿ. ಶೇಖರ್ ರೆಡ್ಡಿ ತಿಳಿಸಿದರು .ಪಟ್ಟಣದ ಸಂತೇ ಮೈದಾನದಲ್ಲಿ ಕೊವಿಡ್ 19 ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮಾಸ್ಕ್ ಧರಸದೆ ಇರುವವರಿಗೆ ದಂಡವನ್ನು ವಿಧಿಸಿ ಮಾತನಾಡಿದ ಡಿ . ಶೇಖರ್ ಗ್ರಾಮೀಣ ಪ್ರದೇಶದ ಜನರು ವಿವಿದ ಕೆಲಸ […]

JANANUDI.COM NETWORK ಬೆಂಗಳೂರು; ಎ.18 ಬಂಟ್ವಾಳ ಕುರಿಯಾಲು ಗುತ್ತು ಕರ್ನಲ್ ಡಾ|ಪ್ರಹ್ಲಾದ್ ರೈ ತಾರೀಕು 17 ರಂದು ಬೆಂಗಳೂರಿನ ತಮ್ಮ ಸೇವಾ ವಿಹಾರ ಸ್ವಗ್ರಹದಲ್ಲಿ ದೈವಾಧಿನರಾಗಿದ್ದಾರೆ. ಇವರು ಭಾರತೀಯ ಸೇನಾವಿಭಾಗದಲ್ಲಿ ಸುಮಾರು 30 ವರ್ಷಗಳಿಗೂ ಮಿಕ್ಕಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಇವರು ಮಗ, ಮಗಳು ಮತ್ತು ಮೊಮ್ಮಕ್ಕಳನ್ನು ಅಗಲಿರುತ್ತಾರೆ.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಏ.17 : ಹಿಂದುಳಿದವರಿಗೆ ಸರ್ಕಾರಿ ಸೌಲತ್ತು ಸಿಗಬೇಕಾದರೆ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗದವರು ಸಂಘಟಿತರಾಗಬೇಕೆಂದು ಕೋಲಾರ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಎ.ಪ್ರಸಾದ್ಬಾಬು ಕರೆ ನೀಡಿದರು.ಅವರು ಮುಳಬಗಿಲು ಪಟ್ಟಣದ ಪ್ರಸಿದ್ಧ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮುಳಬಾಗಿಲು ತಾಲ್ಲೂಕು ಮಟ್ಟದ ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳ ಮುಖಂಡರ ಸಭೆಯಲ್ಲಿ ಮಾತನಾಡುತ್ತಿದ್ದರು. ತಾಲ್ಲೂಕಿನಲ್ಲಿ 30ಕ್ಕೂ ಹೆಚ್ಚು ಹಿಂದುಳಿದ ವರ್ಗಗಳಿಗೆ ಸೇರಿದ ವಿವಿಧ ಜಾತಿಗಳ ಸಮುದಾಯಗಳಿದ್ದು, ಇವರ ಅನೇಕ ಸಮಸ್ಯೆಗಳು ಸರ್ಕಾರಿ ಸೌಲಭ್ಯದಿಂದ […]