JANANUDI.COM NETWORK ಕುಂದಾಪುರ : ಜೀವನ ನಿರ್ವಹಣೆಗಾಗಿ ಕೋಳಿ ಮಾಂಸವನ್ನು ವಿತರಣೆ ಮಾಡ್ತಿದ್ದ ಮೂಡುಗೋಪಾಡಿಯ ಜುನೈದ್ (21) ಎಂಬ ಯುವಕನನ್ನು ನಿಶ್ಠುರವಾಗಿ ಥಳಿಸಿದ ಘಟನೆ ಕುಂದಾಪುರ ಸಮೀಪದ ಕೊಡಿಯಲ್ಲಿ ನಡೆದಿದೆ.ಇವರು ಪ್ರತಿದಿನದಂತೆ ಬುಧವಾರ ಮದ್ಯಾಹ್ನ 1.30 ರ ಸುಮಾರಿಗೆ ಮಹಿಂದ್ರಾ ಜೀಟೊ ವಾಹನದಲ್ಲಿ ಕೋಳಿ ಮಾಂಸ ವಿತರಿಸುತ್ತಾ ಕುಂದಾಪುರ ಚರ್ಚ್ ರಸ್ತೆಯಿಂದ ಕೋಡಿ ಕಡೆ ಹೋಗುತ್ತಿರುವಾಗ ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪ ಜುನೈದ್‍ನ ವಾಹನವು ಯಾಂತ್ರಿಕ ದೋಷದಿಂದ ರಸ್ತೆಯಲ್ಲೇ ನಿಂತು ಬಿಟ್ಟಿತು. ಅದನ್ನು ದೂಡಿ ವಾಹನ ಚಾಲೂ […]

Read More

JANANUDI.COM NETWORK ಮದ್ರಾಸ್: ಎಂಐ-17ವಿ5 ಸೇನಾ ಹೆಲಿಕಾಪ್ಟರ್ ಪತನವಾಗಿ ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಮತ್ತು ಪತ್ನಿ ಸಮೇತ 13 ಜನರು ಸಾವನ್ನಪ್ಪಿದ ಘಟನೆ ನಡೆದಿದೆ.ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆಂದು ಅಧಿಕೃತವಾಗಿ ಸೇನೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಸೋಮವಾರ ಡಾ. ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಮುಖಂಡ ಗುಂಜೂರು ಆರ್.ಶ್ರೀನಿವಾಸರೆಡ್ಡಿ ಮಾಲಾರ್ಪಣೆ ಮಾಡಿದರು.

Read More

JANANUDI.COM NETWORK ಕುಂದಾಪುರ: ಸಮಾಜದ ಸಂಘಟನೆಗಳು ಕಾರ್ಯಕ್ರಮ ಸಂಘಟಿಸಿದಾಗ ಸಮಾಜ ಬಾಂಧವ ಸಹಕಾರ ಅಗತ್ಯ. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಹೆಚ್ಚು ಸಮಾಜ ಬಾಂಧವರು ಆಗಮಿಸಿದಾಗ ಸಂಘಟಿಕರಿಗೆ ಕಾರ್ಯಕ್ರಮ ಆಯೋಜನೆ ಮಾಡಲು ಹುಮ್ಮಸ್ಸು ಹೆಚ್ಚುತ್ತೇದೆ. ಎಳೆಯ ಪ್ರಾಯದಲ್ಲೇ ತಮ್ಮ ಮಕ್ಕಳ ಪ್ರತಿಭೆಯನ್ನು ಪೋಷಕರು ಗುರುತಿಸಿದಾಗ ಆತ ಮುಂದೆ ಸಮಾಜದ ಆಸ್ತಿಯಾಗುತ್ತಾನೆ ಎಂದು ಉಡುಪಿ ಜಿಲ್ಲಾ ಸೋಮಕ್ಷತೀಯ ಗಾಣಿಗ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಹೇಳಿದರು.ಅವರು ಭಾನುವಾರ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆದ ಕೋಟೇಶ್ವರ ಗಾಣಿಗ ಯುವ […]

Read More

JANANUDI.COM NETWORK ಕುಂದಾಪುರ, ಡಿ.6: ಬಹಳ ವರ್ಷಗಳಿಂದ ಕುಂದಾಪುರದಲ್ಲಿ ಗಿಫ್ಟ್ ಸೆಂಟರ್ ಎಂಬ ಅಂಗಡಿಯನಿಟ್ಟುಕೊಂಡು ಗಿಫ್ಟ್ ವಸ್ತುಗಳ ಮಾರಾಟದಲ್ಲಿ ಉತ್ತಮ ಹೆಸರು ಗಳಿಸಿದ್ದ ಮೆಲ್ವಿನ್ ಕೊರೆಯ (66) ಮಂಗಳೂರು ಕಂಕನಾಡಿ ಆಸ್ಪತ್ರೆಯಲ್ಲಿ 6-12 ರಂದು ನಿಧನರಾದರು. ಅವರ ಯವೌನ ಪ್ರಾಯದಲ್ಲಿ ಉತ್ತಮ ಕಬಡಿ ಪಟುವಾಗಿ ಕುಂದಾಪುರದಲ್ಲಿ ಹೆಸರು ಗಳಿಸಿದರು.್ದ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತಿಮ ಸಂಸ್ಕಾರವು ಕುಂದಾಪುರದಲ್ಲಿ ನಡೆಯಲಿದೆಯೆಂದು ಕುಟುಂಬದವರು ತಿಳಿಸಿದ್ದಾರೆ.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿ. 4 : ವಿಶ್ವ ಉದಯ ಆದಾಗಿನಿಂದಲೂ ಅದರೊಟ್ಟಿಗೆ ಗಣಿತವೂ ಸಾಗಿಬಂದಿದೆ ಪ್ರತಿಯೊಂದಕ್ಕೂ ಗಣಿತ ಲೆಕ್ಕಾಚಾರ ಬೇಕೇಬೇಕು. ಆದ್ದರಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚು ಗಣಿತಕ್ಕೆ ಹೆಚ್ಚು ಒಲವು ನೀಡಿ, ಸಂತಸದಿಂದ ಕಲಿಯಲು ಶಿಕ್ಷಕರು ನೆರವಾಗುವ ಅಗತ್ಯವಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ತಿಳಿಸಿದರುನಗರದ ಸ್ಕೌಟ್ ಭವನದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ […]

Read More

JANANUDI.COM NETWORK ಇಂದು (4-12-21) ಕರ್ನಾಟಕದಲ್ಲಿ ಮಳೆ ಮುಂದುವರೆಯುತ್ತಿದ್ದು, ಇಂದಿನಿ0ದ ಮಳೆಯ ಜೊತೆಗೆ ನೆರೆಯ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಚ0ಡಮಾರುತವೂ ಅಪ್ಪಳಿಸಲಿದೆ. ಆಂಧ್ರಪ್ರದೇಶದ ಜೊತೆಗೆ ಒಡಿಶಾ, ಪಶ್ಚಿಮ ಬಂಗಾಳದಲ್ಲೂ ಇ0ದು ಜವಾದ್ ಚ0ಡಮಾರುತ ಆರ್ಭಟಿಸಲಿದೆ. ಚಂಡಮಾರುತದ ಪರಿಣಾಮದಿ0ದ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಇಂದಿನಿಂದ ಡಿ.6 ರವರೆಗೆ ವರುಣನ ಆರ್ಭಟಿವಿರಲಿದೆ.ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಅಜ್ಮಂಪುರ ತಾಲೂಕಿನ ಶಿವನಿ ಕರೆ ತುಂಬಿ ಹರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ […]

Read More

JANANUDI.COM NETWORK ರಾಜ್ಯದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಓಮಿಕ್ರಾನ್ ತಡೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಕೊರೊನಾ ಸೋಂಕು ಪತ್ತೆ ಪರೀಕ್ಷೆ ಹೆಚ್ಚಳ, ವಿಮಾನ ನಿಲ್ದಾಣಗಳಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಕಠಿಣ ಕ್ರಮ ಜಾರಿ ಮಾಡಲು ನಿರ್ಧರಿಸಿದೆ.ಮುದುವೆ ಮತ್ತು ವಿವಿಧ ಸಮಾರಂಭಗಳಿಗೆ 500 ಮಂದಿಗೆ ಪಾಲ್ಗೊಳ್ಳಲು ಅವಕಾಶ,ಚಿತ್ರಮಂದಿರ ಮತ್ತು ಮಾಲ್ ಗಳಿಗೆ ತೆರಳುವ ಮಂದಿಗೆ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರುವುದು ಹಾಗು ಶಾಲೆಗಗಳಿಗ ಮಕ್ಕಳನ್ನು ಬಿಡಲು ತೆರಳುವ ಪೆÇೀಷಕರು ಎರಡು ಡೋಸ್ ಲಸಿಕೆ […]

Read More

JANANUDI.COM NETWORK ಕೋಟೇಶ್ವರ: ಕೋಟೇಶ್ವರ ಗಾಣಿಗ ಯುವ ಸಂಘಟನೆಯ ದಶಮಾನೋತ್ಸವದ ಸಮಾರೋಪ ಸಮಾರಂಭ ಡಿ.5ರಂದು ಭಾನುವಾರ ಮಧ್ಯಾಹ್ನ 2.30ಕ್ಕೆ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆಯಲಿದೆ.ಇದೇ ಸಂದರ್ಭದಲ್ಲಿ ದಶಮಾನೋತ್ಸವದ ಪ್ರಯುಕ್ತ ಜರುಗಿದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಅಲ್ಲದೇ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದಿಂದ ಪ್ರತಿಭಾ ಪುರಸ್ಕøರ ಹಾಗೂ ಸಾಧಕರಿಗೆ ಸನ್ಮಾನ ಜರುಗಲಿದೆ.ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿಜೇತರು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಬಹುಮಾನವನ್ನು ಪಡೆಯಬೇಕೆಂದುಗಾಣಿಗ ಯುವ […]

Read More