ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಭಾರತ ದೇಶವನ್ನು 2025 ರೊಳಗಾಗಿ ಕುಷ್ಠರೋಗ ಮುಕ್ತವಾಗಲು ಪಣ ಜಿಲ್ಲೆಯಲ್ಲಿ ಸೆ.5 ರಿಂದ 23 ರವರೆಗೆ ಕುಷ್ಠರೋಗ ಪತ್ತೆ ಆಂದೋಲನ : ಡಾ.ವಿಜಯ ಕುಮಾರ್  ಕೋಲಾರ: ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರವು 2025 ರೊಳಗಾಗಿ ಭಾರತವನ್ನು ಕುಷ್ಠ ರೋಗ ಮುಕ್ತ ದೇಶವಾಗಿಸಲು ಪಣತೊಟ್ಟಿದ್ದು, ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳನ್ನು ಪತ್ತೆಹಚ್ಚುವ ಅಭಿಯಾನವನ್ನು ಸೆ.5 ರಿಂದ 23 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ವಿಜಯಕುಮಾರ್ ಅವರು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ಏರ್ಪಡಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ತರಬೇತಿ ಸಭೆಯಲ್ಲಿ ಸಂಪನ್ನೂಲ ವ್ಯಕ್ತಿ ಜಿ.ಕೆ.ನಾರಾಯಣಸ್ವಾಮಿ ಮಾತನಾಡಿದರು. ಶ್ರೀನಿವಾಸಪುರ:  ಮತದಾರರ ಪಟ್ಟಿ  ಪರಿಷ್ಕರಣೆೆಯನ್ನು ಎಚ್ಚರಿಕೆಯಿಂದ ಮಾಡಬೇಕು. ಮತದಾರರ ಪಟ್ಟಿಗೆ ಸೇರಿಸಿಕೊಳ್ಳುವ ಹಾಗೂ ಪಟ್ಟಿಯಿಂದ ತೆಗೆಯಲು ನೀಡಲಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಜಿ.ಕೆ.ನಾರಾಯಣಸ್ವಾಮಿ ಹೇಳಿದರು.   ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ಜನವರಿ 1, 2020 ಅರ್ಹತಾ ದಿನಾಂಕಕ್ಕೆ ಒಳಪಟ್ಟಂತೆ ಭಾವ ಚಿತ್ರ ಇರುವ ಮತಾದರರ ಪಟ್ಟಿಯ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ತರಕಾರಿ ಮಾರುಕಟ್ಟೆಗೆ ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್‌  ಭೇಟಿ ನೀಡಿ ಮಾರುಕಟ್ಟೆ ಸ್ಥಳಾಂತರ ಕುರಿತು ವರ್ತಕರೊಂದಿಗೆ ಚರ್ಚಿಸಿದರು. ಶ್ರೀನಿವಾಸಪುರ: ಪಟ್ಟಣದಲ್ಲಿ ತರಕಾರಿ ಸಗಟು ವಹಿವಾಟನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್‌ ಹೇಳಿದರು.   ಪಟ್ಟಣದ ತರಕಾರಿ ಮಾರುಕಟ್ಟೆಗೆ  ಭೇಟಿ ನೀಡಿ ಪರವಾನಗಿ ಪಡೆದ ವರ್ತಕರೊಂದಿಗೆ ಮಾತನಾಡಿ, ಮಾರುಕಟ್ಟೆ ಪ್ರಾಂಗಣದಲ್ಲಿ ರೂ.97 ಲಕ್ಷ ವೆಚ್ಚದಲ್ಲಿ ತರಕಾರಿ ಮಾರುಕಟ್ಟೆಗೆ ಅಗತ್ಯವಾದ ಸೌಲಭ್ಯ ಕಲ್ಪಿಸಲಾಗಿದೆ.   ಹಲವು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರದಲ್ಲಿ ಕರ್ನಾಟಕ ಜನಸೇನೆ ಸಂಘಟನೆಯಿಂದ ಜಾಗೃತಿ ಜಾಥಾ ಕೋಲಾರ: ಕರ್ನಾಟಕ ಜನಸೇನೆ ಸಂಘಟನೆಯು ಕೋಲಾರದಲ್ಲಿ ಋಣಮುಕ್ತ ಕಾಯ್ದೆ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಥಾವನ್ನು ನಡೆಸಿ ನಂತರ ಕೋಲಾಋ ಉಪವಿಭಾಗಾಧಿಕಾರಿಗಳಿಗೆ ಸಾರ್ವಜನಿಕರ ಪರವಾಗಿ ಬೇಡಿಕೆಗಳ ಮನವಿ ಪತ್ರವನ್ನು ನೀಡಿತು.ಕರ್ನಾಟಕ ಜನಸೇನೆ ಸಂಘಟನೆಯು ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಮತ್ತು ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದು, ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದಿರುವ ಕರ್ನಾಟಕ ಋಣಮುಕ್ತ ಪರಿಹಾರ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭೆ ಕಾರ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಪೌರ ಕಾರ್ಮಿಕರಿಗೆ ಸುರಕ್ಷಾ ಕವಚಗಳನ್ನು ವಿತರಿಸಿದರು. ಶ್ರೀನಿವಾಸಪುರ: ಪೌರ ಕಾರ್ಮಿಕರು ಆರೋಗ್ಯ ರಕ್ಷಣೆಗೆ ಸುರಕ್ಷಾ ಕವಚ ಧರಿಸಬೇಕು.  ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಹೇಳಿದರು.   ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪೌರ ಕಾರ್ಮಿಕರಿಗೆ ಸುರಕ್ಷಾ ಕವಚಗಳನ್ನು ವಿತರಿಸಿ ಮಾತನಾಡಿ, ಕೈಗವಚ, ಬಾಯಿಗವಚ, ಬೂಟು ಹಾಗೂ ಹೆಲ್ಮೆಟ್‌ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬವನ್ನು ಆಚರಿಸೋಣ – ಜೆ. ಮಂಜುನಾಥ್ ಕೋಲಾರ : ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಗೆ ಯಾವುದೇ ಧಕ್ಕೆಯಾಗದಂತೆ ಎಲ್ಲರೂ ಸೇರಿ ಗೌರಿ ಗಣೇಶ ಹಬ್ಬವನ್ನು ಆಚರಿಸೋಣ ಎಂದು ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ತಿಳಿಸಿದರು.    ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿವಿಧ ಧರ್ಮದ ಮುಖಂಡರೊಂದಿಗೆ ಹಮ್ಮಿಕೊಂಡಿದ್ದ ಶಾಂತಿ ಸೌಹಾರ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಧಾರ್ಮಿಕ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಹೊರ ವಲಯದಲ್ಲಿನ ಪುಂಗನೂರು ಕ್ರಾಸ್‌ ಸಮೀಪದ ಸೀತಾ ರಾಮ ಕಲ್ಯಾಣ ಮಂಟಪದಲ್ಲಿ  ಏರ್ಪಡಿಸಿದ್ದ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ಪ್ರದೇಶಿಕ ಸಭೆಯನ್ನು ಕೋಚಿಮುಲ್‌ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಚ್‌.ವಿ.ತಿಪ್ಪಾರೆಡ್ಡಿ ಉದ್ಘಾಟಿಸಿದರು. ಶ್ರೀನಿವಾಸಪುರ: ಹಾಲು ಉತ್ಪಾದಕರ ಸಹಕಾರ ಸಂಘಗಳು ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಬೇಕು ಎಂದು ಕೋಚಿಮುಲ್‌ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಚ್‌.ವಿ.ತಿಪ್ಪಾರೆಡ್ಡಿ ಹೇಳಿದರು.   ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಪ್ರಮಾಣ ಕುಸಿದಿದೆ. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಹಿಳೆಯರ, ಮಕ್ಕಳ ಸುರಕ್ಷತೆಗಾಗಿ ಸಜ್ಜಾದ ಕೋಲಾರಮ್ಮ ಪಡೆ -ಕೆ.ವಿ ಶರತ್‍ಚಂದ್ರ ಕೋಲಾರ: ಶಾಲಾ-ಕಾಲೇಜು ಸಾರ್ವಜನಿಕ ಸ್ಥಳಗಳು ಸೇರಿದಂತೆ ಮಹಿಳೆಯರ, ಮ್ಕಕಳ ಸುರಕ್ಷತೆಗಾಗಿ ಕಾರ್ಯನಿರ್ವಹಿಸಲು ಕೋಲಾರಮ್ಮ ಪಡೆಯು ಸಜ್ಜಾಗಿದೆ ಎಂದು ಬೆಂಗಳೂರು ಕೇಂದ್ರವಲಯದ ಪೊಲೀಸ್ ಮಹಾನಿರೀಕ್ಷಕರಾದ ಕೆ.ವಿ ಶರತ್‍ಚಂದ್ರ ಅವರು ತಿಳಿಸಿದರು.   ಇಂದು ನಗರದ ಕೋಲಾರ ಜಿಲ್ಲಾ ಪೊಲೀಸ್ ಮತ್ತು ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ,  ಗಲ್‍ಪೇಟೆ ಪೊಲೀಸ್ ಠಾಣೆ ಮುಂಭಾಗದಲ್ಲಿ ನಿರ್ಮಿಸಿರುವ ಪೊಲೀಸ್ ಫಾರ್ಮ ಮತ್ತು ಕೋಲಾರಮ್ಮ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಹಿಳಾ ಸ್ವಸಹಾಯ ಸಂಘಗಳಿಗೆ 10 ಕೋಟಿ ರೂ ಸಾಲ ವಿತ ರಣೆ , ವಾಣಿಜ್ಯ ಬ್ಯಾಂಕುಗಳಿಗೆ ಬಡವರ ಬಗ್ಗೆ ಕಾಳಜಿಯಿಲ್ಲ-ಶಾಸಕ ಕೆ.ಆರ್.ರಮೇಶ್‍ಕುಮಾರ್ ಬ್ಯಾಂಕುಗಳಿಗೆ ಬಡವರ ಬಗ್ಗೆ ಕಾಳಜಿಯಿಲ್ಲ ಎಂದ ಮೇಲೆ ಸರ್ಕಾರದ ವಿವಿಧ ಇಲಾಖೆಗಳ ಹಣ ಈ ಬ್ಯಾಂಕುಗಳಲ್ಲಿ ಏಕೆ ಠೇವಣಿ ಇಡಬೇಕು ಎಂದು ಮಾಜಿ ಸ್ವೀಕರ್ ಮತ್ತು ಶಾಸಕ ಕೆ.ಆರ್.ರಮೇಶ್‍ಕುಮಾರ್ ಕೋಲಾರ:- ಸಾವಿರಾರು ಕೋಟಿ ರೂ ದೋಚಿಕೊಂಡು ಹೋಗುವ ಸಾಹುಕಾರರಿಗೆ ಸಾಲ ನೀಡುವ ವಾಣಿಜ್ಯ ಬ್ಯಾಂಕುಗಳಿಗೆ ಬಡವರ ಬಗ್ಗೆ ಕಾಳಜಿಯಿಲ್ಲ […]

Read More