JANANUDI.COM NETWORK ಬೆಂಗಳೂರು.ಜೂ.24: ಬೆಂಗಳೂರಿನ ಮಾಜಿ ಲೇಡಿ ಕಾರ್ಪೊರೇಟರ್ ಒಬ್ಬಳನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಹತ್ಯೆ ಮಾಡಲಾದ ದಾರುಣಕರ ಘಟನೆ ನಡೆದಿದೆ. ಬೆಂಗಳೂರು ಛಲವಾದಿ ಪಾಳ್ಯದ ಫವರ್ ಗಾರ್ಡನ್ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರೇ ದುಷ್ಕರ್ಮಿಗಳು ಹತ್ಯೆಯಾದ ನತದ್ರಷ್ಟೆ. ದುಷ್ಕರ್ಮಿಗಳು ಅವರನ್ನು ಮನೆಯಿಂದ ಹೊರ ಕರೆಸಿಕೊಂಡು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ ಬರುವಂತೆ ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಅವರ ಮೇಲೆ […]
ಮನುಷ್ಯನಿಗೆ ಛಲ, ಆತ್ಮ ವಿಶ್ವಾಸ, ಧ್ಯೇಯ, ಇಚ್ಚಾಸಕ್ತಿ ಇದ್ದರೆ ತಮ್ಮ ಗುರಿಯನ್ನು ಸಾಧಿಸಬಹುದು ಎಂಬುದಕ್ಕೆ ಈ ಲೇಖನದ ಪ್ರಧಾನರಾದ ರಾಜು ಎಂಬ ಅಲೆಮಾರೀ ಪಂಗಡದ ಯವಕನಾದ ರಾಜು ಅರ್. ಎಂಬವರ, ಸಾಧನೆ ಯಾಕೆಂದರೆ ರಾಜು ಅವರ ಜಾತಿ ದೊಂಬಿದಾಸ ಕುಟುಂಬದ ಮೂಲ ಕಸುಬು ಊರು ಊರು ಊರು ತಿರುಗಿ ಸ್ಟೇಷನರಿ ವಸ್ತುಗಳಾದ ಸೂಜಿ, ಪೀನ, ಕರೆಮಾಣೆ, ಕರೆಮಾಣಿದಾರ, ಉಡುದಾರ, ಟೇಪ್, ದಬ್ಲ, ರಬ್ಬರ್, ಬಾಚ್ಚಣಿಗೆ ಇತ್ಯಾದಿ ವಸ್ತುಗಳನ್ನು ಮಾರಾಟ ಮಾಡಿ ಜೀವನ ನಡೆಸುವ ಅಲೇಮಾರಿಯ ಬಡ ಕುಟುಂಬ.ಆ […]
JANANUDI.COM NETWORK ಬೆಂಗಳೂರು,ಜೂ. 22: 10 ವರ್ಷದ ಹಿಂದೆ ಸಂದರ್ಶನ ನೀಡಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನೈಸ್ ಕಾರಿಡಾರ್ ಕಂಪನಿ ವಿರುದ್ಧ ತಮ್ಮ ಆರೋಪವನ್ನು ಮಾಡಿದ್ದರು, ಆದರೆ ಆ ಆರೋಪವನ್ನು ಸಾಬೀತುಪಡಿಸಲು ವಿಫಲರಾಗಿರುವುದರಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ 2 ಕೋಟಿ ರೂ ಮಾನ ಹಾನಿಯ. ಪರಿಹಾರವಾಗಿ ನೀಡಬೇಕೆಂದು ಕೋರ್ಟ್ ಆದೇಶಿಸಿದೆ. 10 ವರ್ಷಗಳ ಹಿಂದೆ ಖಾಸಗಿ ಸುದ್ದಿವಾಹಿನಿಗೆ ಒಂದಕ್ಕೆ ಸಂದರ್ಶನ ನೀಡಿದ್ದ ದೇವೇಗೌಡರು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಸಂಸ್ಥೆ ಗೌರವಕ್ಕೆ ಧಕ್ಕೆ ತರುವ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪೌರ ಕಾರ್ಮಿಕರು ಸ್ವಚ್ಛತೆಗೆ ಹೆಚ್ಚು ಗಮನ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ಸಭೆಯಲ್ಲಿ ಮಾತನಾಡಿ, ಪೌರ ಕಾರ್ಮಿಕರು ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ರೂ.1420 ಕೊಟ್ಟು ವಿಮೆ ಮಾಡಿಸಿದಲ್ಲಿ, ಆಕಸ್ಮಿಕ ಮರಣ ಹೊಂದಿದಲ್ಲಿ, ಮರಣ ಹೊಂದಿದ ಪೌರ ಕಾರ್ಮಿಕನ ಕಟುಂಬಕ್ಕೆ ರೂ.20 ಲಕ್ಷ ಪರಿಹಾರ ನೀಡಲಾಗುವುದು. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ಕಾರ್ಯನಿರ್ವಹಿಸುವಾಗ ಕೈಗವಸು ಹಾಗೂ ಮಾಸ್ಕ್ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೋವಿಡ್ ಕಾಲದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯಗಳನ್ನು ಶಾಲೆಯ ಮಾದರಿಯಲ್ಲಿ ನಿರ್ವಹಣೆ ಮಾಡಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಬೇಕೆಂದು ಸಮಾಜ ಸೇವಕ ಸಿಎಂಆರ್ಶ್ರೀನಾಥ್ ಹೇಳಿದರು.ನಗರದ ಗ್ರಂಥಾಲಯದ ಆವರಣದಲ್ಲಿ ಸೋಮವಾರ ಮೇಲ್ವಿಚಾರಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಓದುಗರಿಗೆ ಪುಸ್ತಕಗಳನ್ನ ಕೊಂಡುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಗ್ರಂಥಾಲಯದ ಮೂಲಕ ಪುಸ್ತಕಗಳನ್ನ ಕೊಟ್ಟು ವಿದ್ಯಾವಂತರನ್ನಾಗಿ ರೂಪಿಸುವಲ್ಲಿ ಗ್ರಂಥಾಲಯದ ಮೇಲ್ವಿಚಾರಕರ ಪಾತ್ರ ದೊಡ್ಡದು ಎಂದರು.ದೇಶ ಮತ್ತು ರಾಜ್ಯಕ್ಕೆ ಉನ್ನತ ಅಽಕಾರಿಗಳನ್ನ ಕೊಟ್ಟ […]
JANANUDI.COM NETWORK ನವದೆಹಲಿ,ಜೂ.20: ಮೋದಿ ಅಧಿಕಾರಕ್ಕೆ ಬಂದರೆ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಿಂದ ವಾಪಾಸ್ಸು ತರುತ್ತೇನೆಂದು ಹೇಳಿ ದೆಹಲಿ ಗದ್ದುಗೆ ಏರಿದ್ದರು ಇದೀಗ ಮೋದಿಯ ಆಡಳಿತದಲ್ಲೇ ಅತಿ ಹೆಚ್ಚು ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಲಾಗಿದೆ ಎನ್ನುವ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ ಈ ಬಾರಿ 20,700 ಕೋಟಿಗೆ ಏರಿಕೆಯಾಗಿದೆ ಎಂದು ಸ್ವಿಟ್ಜರ್ಲ್ಯಾಂಡ್ ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ. […]
ಬೆಂಗಳೂರು ಜೂ. 20: ಕೊವೀಡ್ 19 ರಾಜ್ಯದಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಕೆಎಸ್ಸಾರ್ಟಿಸಿ ಮಾಹಿತಿಯ ಪ್ರಕಾರ ಕೆಎಸ್ಸಾರ್ಟಿಸಿ ಬಸ್ಗಳು ನಾಳೆಯಿಂದ ಸಂಚರಿಸಲಿವೆ ಎಂದು ತಿಳಿದು ಬಂದಿದೆ. ಮೈಸೂರು ಹೊರತುಪಡಿಸಿ ಜೂನ್ 21ರ ಬಳಿಕ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ನಾಳೆ ಸುಮಾರು 3 ಸಾವಿರ ಬಸ್ ಗಳು ರಸ್ತೆಗಿಳಿಯಲಿವೆ ಎಂದು ಮಾಹಿತಿ ಇದೆ. ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ […]
JANANUDI.COM NETWORK (ಉಡುಪಿ, ದ.ಕನ್ನಡ ಸಡಲಿಕೆ ಇಲ್ಲ) ಬೆಂಗಳೂರು : ರಾಜ್ಯದಲ್ಲಿ ಶೇ. 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ. ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲಾಗುತ್ತಿದೆ. ಜೊತೆಗೆ ಶೇ. 50 ರಷ್ಟು ಪ್ರಯಾಣಿಕರೊಂದಿಗೆ ಸಾರಿಗೆ ಸಂಚಾರ , ಹೋಟೆಲ್ , ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ಸಹ ಶೇ. 50 ರಷ್ಟು ಜನರೊಂದಿಗೆ ತೆರೆಯೋದಕ್ಕೂ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ . ಈ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ […]
ಮೈಸೂರು, ಜೂ.18: ಅನ್ಯ ಜಾತಿಯ ಯುವಕನನ್ನು ಮಗಳು ಪ್ರೀತಿಸಿದಳು ಎಂದು ಪಾತಕಿ ತಂದೆಯೊಬ್ಬ ಸ್ವಂತ ಮಗಳನ್ನೆ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಗಾಯತ್ರಿ 18 ವರ್ಷ ವಯಸ್ಸಿನ ದುರ್ಧೈವಿ ಮಗಳು ತನ್ನ ಪಾಪಿ ತಂದೆಯಿಂದಲೇ ಹತ್ಯೆಗೀಡಾದ ಯುವತಿಯಾಗಿದ್ದಾಳೆ. ಪಿರಿಯಾಪಟ್ಟಣದ ಮಹದೇಶ್ವರ ದೇವಸ್ಥಾನದ ಬೀದಿಯಲ್ಲಿ ಈ ಭಯಾನಕ ಘಟನೆ ನಡೆದಿದ್ದು ಹತ್ಯಾರಿ ತಂದೆ ಪೊಲೀಸರಿಗೆ ಶರಣಾಗಿದ್ದನೆ. ಗಾಯಿತ್ರಿ ಅನ್ಯ ಜಾತಿಯ ಹುಡುಗನೊಂದಿಗೆ, ಪ್ರೇಮಿಸುತಿದ್ದಳು, , ಮನೆಯವರುಒಪ್ಪಿರಲಿಲ್ಲ. […]

