ಮಂಗಳೂರು; ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ನವೆಂಬರ್ 08, 2025ರಂದು ಸಂಜೆ 4.00 ಗಂಟೆಗೆ ʼಕಾವ್ಯಾಂ ವ್ಹಾಳೊ-8ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಹಮ್ಮಿಕೊಂಡಿದೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ವಹಿಸಿಕೊಳ್ಳಲಿದ್ದಾರೆ. ದ.ಕ. ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಕೊಂಪದವು ಮುಖ್ಯ ಅತಿಥಿಯಾಗಿ ಹಾಗೂ ಕೊಂಕಣಿಯ ಹಿರಿಯ ಕವಿ, ಸಾಹಿತಿಯಾದ ಶ್ರೀ ಜೊಸ್ಸಿ ಪಿಂಟೊರವರು ಪ್ರಮುಖ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಖ್ಯಾತ ನಾಟಕಕಾರ ಹಾಗೂ ಚಲನಚಿತ್ರ ನಿರ್ಮಾಪಕರಾದ […]
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆಯ ಜಾಗೃತಿಯನ್ನು ಉತ್ತೇಜಿಸುವ ಉದ್ದೇಶದಿಂದ, ಡಾ. ಎ.ವಿ. ಬಾಲಿಗಾ ಮೆಮೋರಿಯಲ್ ಆಸ್ಪತ್ರೆಯ ಘಟಕವಾದ ಅಭಯ ಮಾನಸಿಕ ಪುನರ್ವಸತಿ ಕೇಂದ್ರದಲ್ಲಿ “ಒತ್ತಡ ಜಾಗೃತಿ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮವು ದೀಪಪ್ರಜ್ವಲನೆಯೊಂದಿಗೆ ಆರಂಭವಾಯಿತು. ದೀಪಪ್ರಜ್ವಲನೆಯನ್ನು ಅಭಯ ಪುನರ್ವಸತಿ ಕೇಂದ್ರದ ಶ್ರೀಮತಿ ಮೈತ್ರಿ ಶೆಟ್ಟಿ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಶ್ರೀಮತಿ ಚೇತನಾ ಆರ್. […]
ಶಿರೂರು: ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ನಾಡದೇವಿ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪಬೆಳಗಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿ ಕನ್ನಡ ಭಾಷೆ ಕಲಿಯಲು ಸುಲಭ, ಮಾತನಾಡಲು ಸರಳ, ಕನ್ನಡ ಲಿಪಿ ನೋಡಲು ಅಂದ, ಕನ್ನಡ ಮಾತು ಕೇಳಲು ಚೆಂದ, ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ […]
ಕುಂದಾಪುರ,ನ.5: “ಬಡವರಿಗೆ ಶುಭ ವಾರ್ತೆಯನ್ನು ಪ್ರಕಟಿಸಲು ನನಗೆ ಅಭಿಷೇಕ ಮಾಡಲಾಗಿದೆ ” ಎಂಬ ಧ್ಯೇಯ ವಾಕ್ಯದೊಂದಿಗೆ ಕೊಟೇಶ್ವರ ಸಂತ ಅಂತೋನಿ ಚರ್ಚಿನ ವಾರ್ಷಿಕ ಮಹಾಹಬ್ಬವು ಭಕ್ತಿ ಸಡಗರದ ಬಲಿದಾನದ ಅರ್ಪಿಸುವ ಮೂಲಕ ನವೆಂಬರ್ 5 ರಂದು ಆಚರಿಸಲಾಯಿತು. ಹಬ್ಬದ ಬಲಿದಾನವನ್ನು ನೇಟತ್ರತ್ವವನ್ನು ವಹಿಸಿಕೊಂಡ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಅ।ವಂ।ಸ್ಟೀಫನ್ ಡಿಸೋಜಾ ಬಲಿದಾನವನ್ನು ಅರ್ಪಿಸಿ ‘ಈ ಹಬ್ಬದಂದು ಬಡವರಿಗೆ ಶುಭ ವಾರ್ತೆಯನ್ನು ಪ್ರಕಟಿಸಲು “ನನಗೆ ಅಭಿಷೇಕ ಮಾಡಲಾಗಿದೆ” ಎಂಬ ವಿಷಯವಾಗಿದೆ. ಇದು ಏಸು ಸ್ವಾಮಿ ಹೇಳಿದಂತಹ ಮಾತು. […]
ಬೈಂದೂರು ; ಉಡುಪಿ ಜಿಲ್ಲಾ ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೈಂದೂರು, ಸೋಮೇಶ್ವರ, ದೊಂಬೆ, ಕರಾವಳಿ ಮಾರ್ಗವಾಗಿ ಶಿರೂರಿಗೆ ಸರಕಾರಿ ಕೆ.ಎಸ್.ಆರ್.ಟಿ.ಸಿ. ಬಸ್ಸು ಸಂಚರಿಸುವಂತೆ ವ್ಯವಸ್ಥೆ ಮಾಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಶಕ್ತಿ ಯೋಜನೆ, ಸಾರಿಗೆ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ನವಂಬರ್ 03 ರಂದು ಶಿರೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು.ಸಂಚಾಲಕಿ ನಾಗರತ್ನ ನಾಡ ರವರು ಮಾತನಾಡಿ ಈ ಹಿಂದೆ ಜುಲೈ 29 ರಂದು ಸ್ಥಳೀಯ ನಾಗರೀಕರೊಂದಿಗೆ ಹೋರಾಟ ನಡೆಸಿ ಮನವಿ […]
ಬಾರ್ಕೂರಿನ ನ್ಯಾಷನಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಗುರುವಾರ, ಅಕ್ಟೋಬರ್ 30, 2025 ರಂದು ಕಾಲೇಜು ಸಭಾಂಗಣದಲ್ಲಿ ಒಂದು ಪ್ರಬುದ್ಧ ಜಾಗೃತಿ ಅಧಿವೇಶನ ನಡೆಯಿತು. ಹದಿಹರೆಯದ ವಿವಿಧ ಸವಾಲುಗಳು ಮತ್ತು ಆಧುನಿಕ ಕಾಲದ ಗೊಂದಲಗಳ ಮೂಲಕ ಯುವ ಮನಸ್ಸುಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶವನ್ನು ಈ ಅಧಿವೇಶನ ಹೊಂದಿತ್ತು. ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ ಮಾಜಿ ಪ್ರಾಧ್ಯಾಪಕ ಮತ್ತು ಎಂಎಸ್ಡಬ್ಲ್ಯೂ ವಿಭಾಗದ ಮುಖ್ಯಸ್ಥ, ಪ್ರಸಿದ್ಧ ಸಲಹೆಗಾರ ಮತ್ತು ಪ್ರೇರಕ ಭಾಷಣಕಾರ ಪ್ರೊ. ಅನಿಲ್ ದಾಂತಿ ಈ ದಿನದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಮೂರು […]
ಕುಂದಾಪುರ; ರೆಡ್ ಕ್ರಾಸನ ಸಂಸ್ಥಾಪಕ ಜೀನ್ ಹೆನ್ರಿ ಡ್ಯೂನಾಂಟ್ ಅವರ ಪುಣ್ಯತಿಥಿಯನ್ನು ಕುಂದಾಪುರ ಇಂಡಿಯನ್ ರೆಡ್ ಕ್ರಾಸನಲ್ಲಿ ಆಚರಿಸಲಾಯಿತು. ಕುಂದಾಪುರ ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಸ್ಥಾಪಕ ಜೀನ್ ಹೆನ್ರಿ ಡ್ಯೂನಾಂಟ್ ಅಂದು ಸ್ಥಾಪಿಸಿದ ರೆಡ್ ಕ್ರಾಸ್ ಸಂಸ್ಥೆಯ ಯಶೋಗಾಥೆಯನ್ನು ವಿವರಸಿ, ಪ್ರಸ್ತುತ ಕುಂದಾಪುರ ತಾಲೂಕು ಘಟಕದ ಕಾರ್ಯ ಕ್ಷೇತ್ರದ ಪರಿಚಯ ಮಾಡಿಸಿದರು. ಸಮಾಜಕ್ಕೆ ಅಗತ್ಯವಿರುವ ಸಹಾಯ ಮಾಡುತ್ತಿರುವ ಕುಂದಾಪುರ ರೆಡ್ ಕ್ರಾಸ ಈ ಸಂದರ್ಭದಲ್ಲಿ ಮಳೆ, ಗಾಳಿ, […]
Shimoga Diocesan Commissions Planning Meeting held at Sannidhi hall Shivamogga. ಶಿವಮೊಗ್ಗ, ನವೆಂಬರ್ 1, 2025: ಆಯೋಗದ ನಿರ್ದೇಶಕರೊಂದಿಗೆ ಡೀನರಿ ಆಯೋಗದ ಸದಸ್ಯರ ವಾರ್ಷಿಕ ಸಭೆಯು ಅಕ್ಟೋಬರ್ 31, 2025 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30 ರವರೆಗೆ ಶಿವಮೊಗ್ಗದ ಸನ್ನಿಧಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಿವಮೊಗ್ಗ ಡಯೋಸಿಸನ್ನ ಅಪೋಸ್ಟೋಲಿಕ್ ಆಡಳಿತಾಧಿಕಾರಿ ಅತಿ ವಂದನೀಯ ಡಾ. ಡುಮಿಂಗ್ ಡಯಾಸ್ ವಹಿಸಿದ್ದರು.ಸಭೆಯು ವೆರಿ ರೆವರೆಂಡ್ ಶ್ರೀಮತಿ ಸ್ಟ್ಯಾನಿ ಡಿ’ಸೋಜಾ ಅವರ ನೇತೃತ್ವದಲ್ಲಿ ಪ್ರಾರ್ಥನಾ ಗೀತೆಯೊಂದಿಗೆ […]
ಬಲಿಷ್ಠ ,ಸ್ವಾವಲಂಬಿ ಮತ್ತು ಸ್ವಾಭಿಮಾನಿ ಭಾರತದ ಶಿಲ್ಪಿ ಮಾಜಿ ಪ್ರಧಾನಿ ಇಂದಿರಾಗಾಂಧಿ. ಅವರ ಆಡಳಿತ ಅವಧಿಯಲ್ಲಿ ಬಾಹ್ಯ ಮತ್ತು ಆಂತರಿಕ ಶತ್ರುಗಳ ವಿರುದ್ಧ ದುರ್ಗೆಯಂತೆ ಹೋರಾಡಿ ಹುತಾತ್ಮರಾದರು. ಬಡತನ ಮತ್ತು ಅಸಮಾನತೆಯ ನಿರ್ಮೂಲನೆಗಾಗಿ ಅವರು ಹಮ್ಮಿಕೊಂಡ ಕಾರ್ಯಕ್ರಮ ಗಳು ಇಂದಿಗೂ ಮಾದರಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಯಾಡಿ ಶಿವರಾಮ ಶೆಟ್ಟಿ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರು , ಗೃಹ ಸಚಿವರಾದ ಪಟೇಲರು ಸ್ವಾತಂತ್ರ್ಯ ಹೋರಾಟದಲ್ಲಿ ಮಂಚೂಣಿಯಲ್ಲಿದ್ದು , ಸ್ವಾತಂತ್ರ್ಯ […]

