ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ವೇಳೆ ಅವರಿಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನತೆಯ ಹತ್ತಿರ ಕೋರಿಕೊಂಡಿದ್ದಾರೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. […]
ಮಂಗಳೂರು, ಬಿಜೈ: ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಛೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು.ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿತು. ಸಂಸ್ಥೆಯ ನಿರ್ದೇಶಕ ಶ್ರೀ ಡಿಯೋನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಅವರು ದೀಪ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು.ಓಣಂ ಹಬ್ಬದ ಹೂವಿನ ಅಲಂಕಾರ ( ಪೂಕಳಂ ), ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ […]
ಗಂಗೊಳ್ಳಿ; ಶಿಕ್ಷಕ ದಿನಾಚರಣೆಯ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಕಥೊಲಿಕ್ ಸಭಾ ಘಟಕವು ದೀರ್ಘ ಕಾಲ ಶಿಕ್ಷಕರಾಗಿ ಸೇವೆಯನ್ನು ನೀಡಿ ನಿವ್ರತರಾದ ಗಂಗೊಳ್ಳಿಯ ಚರ್ಚಿನಾ 8 ಶಿಕ್ಷಕರನ್ನು ಅವರವರ ಮನೆಗೆ ಭೇಟಿ ಕೊಟ್ಟು ಗೌರವ ನೀಡಿ ಸನ್ಮಾನಿಸಿದರು.ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಎಡ್ವರ್ಡ್ ಫೆರ್ನಾಂಡಿಸ್ , ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ)ಇದರ ಪ್ರಥಮ ಅಧ್ಯಕ್ಶರಾದ ಕಿರಣ್ ಕ್ರಾಸ್ತಾ ಹಾಗು ಆನೇಕ ಪದಾದಿಕಾರಿಗಳು , ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕುಂದಾಪುರ, ಸೆಪ್ಟೆಂಬರ್ 6; ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಸಿ.ಎಸ್.ಐ. ಕೃಪಾ ವಿದ್ಯಾಲಯದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ವಾರ್ಷಿಕೋತ್ಸವದ ಸ್ಮರಣಾರ್ಥ ಸೆಪ್ಟೆಂಬರ್ 4, 2025 ರಂದು ‘ಶಿಕ್ಷಕರ ದಿನ’ವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಅದ್ಭುತ ಕಾರ್ಯಕ್ರಮವನ್ನು ಆಯೋಜಿಸಿದರು. ಶಿಕ್ಷಕರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಶಿಕ್ಷಕರನ್ನು ಹೂವುಗಳು ಮತ್ತು ಶುಭಾಶಯ ಪತ್ರಗಳೊಂದಿಗೆ ಸ್ವಾಗತಿಸಲಾಯಿತು. ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ 2 ದಿನಗಳ ಮೊದಲು ವಿದ್ಯಾರ್ಥಿಗಳು ನಡೆಸಿದ ಆಟಗಳ ಬಹುಮಾನಗಳನ್ನು ಶಿಕ್ಷಕರಿಗೆ ನೀಡಲಾಯಿತು. […]
ಕುಂದಾಪುರ: ಅಸೋಸಿಯೇಷನ್ ಆಫ್ ಕನ್ಸಜ್ಟಿಂಗ್ ಸಿವಿಲ್ ಇಂಜಿನಿಯರ್ ಮತ್ತು ಅರ್ಕಿಟೆಕ್ಟರ್ (ರಿ)ಕುಂದಾಪುರ ಇದರ ವತಿಯಿಂದ ಮಹಾಮೇಧಾವಿ ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನ ಇಂಜಿಸಿಯರ್ಸ್ ಡೇ ಕಾರ್ಯಕ್ರಮವನ್ನು ಸಪ್ಟೆಂಬರ್ 15ರ ಸೋಮವಾರ ಸಂಜೆ 50ಕ್ಕೆ ಕುಂದಾಪುರದ ಚಿಕ್ಕನಸಾಲ್ ರಸ್ತೆಯ ಮೊಗವೀರ ಭವನದಲ್ಲಿ ನಡೆಯಲಿದೆ. ಎಂ ಐ.ಟಿ ಮಣೆಪಾಲ ಸಿವಿಲ್ ಇಂಜಿಸಿಯರಿಂಗ್ ಮುಖ್ಯಸ್ಥರಾದ ಡಾ.ಪುರುಪೋತ್ತಮ ಜಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಇಂಜಿನಿಯರ್ ಗಣೇಶ್ ಗುಲ್ವಾಡಿ, ಬೀಜಾಡಿ ಪೂಜಾ ಟೈಲ್ಸ್ ಮತ್ತು ಮಾರ್ಬಲ್ಸ್ ನ ಸುಭಾಷ್ ಜೈನ್, […]
Blessing of the new flagpole at St. Anthony’s Basilica, Dornahalli ದೋರ್ನಹಳ್ಳಿ, ಕೆ.ಆರ್. ನಗರ ಮೈಸೂರು; ಸೇಂಟ್ ಆಂಥೋನಿ ಬೆಸಿಲಿಕಾ ದೋರ್ನಹಳ್ಳಿ, ಕೆ.ಆರ್. ನಗರ ಮೈಸೂರು. ಸೆಪ್ಟೆಂಬರ್ 4, 2025 ರಂದು ಹೊಸ ಧ್ವಜ ಸ್ತಂಭವನ್ನು ಮೈಸೂರು ಡಯಾಸಿಸ್ನ ಅಪೋಸ್ಟೋಲಿಕ್ ಆಡಳಿತಾಧಿಕಾರಿ ಆರ್ಚ್ ಬಿಷಪ್ ಎಮೆರಿಟಸ್ ಮೋಸ್ಟ್ ರೆವ್. ಡಾ. ಬರ್ನಾರ್ಡ್ ಮೊರಾಸ್ ಅವರು ಆಶೀರ್ವದಿಸಿದರು. ಮೈಸೂರು ಡಯಾಸಿಸ್ನ ಶ್ರೀಮತಿ ಆಲ್ಫ್ರೆಡ್ ಜಾನ್ ಮೆಂಡೋನ್ಸಾ ವಿಕಾರ್ ಜನರಲ್ ಮತ್ತು ಮೈಸೂರು ಡಯಾಸಿಸ್ನ ರೆವ್. ಫಾದರ್ […]
ಬೈಂದೂರು: ಎಂಸಿಸಿ ಬ್ಯಾಂಕ್, ಮಂಗಳೂರು ಇದರ ಬೈಂದೂರು ಶಾಖೆಯಲ್ಲಿ ಸೆಪ್ಟೆಂಬರ್ 4, 2025 ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಹೊಸಾಡು ರಾಮ ಶೇರಿಗಾರ್ ಮತ್ತು 2025ರ ಐಐಬಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತರಾದ ಶ್ರೀಮತಿ ಆಶಾ ವೀಣಾ ಡಯಾಸ್ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ಎಂಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ಎಲ್ರಾಯ್ ಕೆ. […]
ರಚನಾ ಪ್ರಶಸ್ತಿ 2023-2025 ಪ್ರಕಟಣೆ ಮಂಗಳೂರು;1998ರಲ್ಲಿ ಕಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿದ ರಚನಾ ಸಂಸ್ಥೆಯು ತನ್ನ ಮೂಲ ಆಶಯವಾದ ಕಥೊಲಿಕ್ ಯುವಜನರಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ತರಬೇತಿ, ಬಂಡವಾಳ ಜೋಡಿಸುವಿಕೆ, ತಾಂತ್ರಿಕ ಸಹಕಾರ ನೀಡುವುದರ ಜೊತೆಗೆ ಸಂಸ್ಥೆಯ ಸದಸ್ಯರಲ್ಲಿ ಸಹಕಾರ ಹಾಗೂ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಶ್ರಮಿಸುತ್ತಾ ಬಂದಿದೆ.ಇದಕ್ಕೆ ಪೂರಕವಾಗಿ ರಚನಾ ಉದ್ಯಮ ತರಬೇತಿ ವಿಭಾಗವನ್ನು ಆರಂಭಿಸಿ ಕಳೆದ ಕೆಲವು ವರ್ಷಗಳಿಂದ ಹಲವು ಯುವ ಜನರಿಗೆ ತರಬೇತಿಯನ್ನು ನೀಡಲಾಗಿದೆ.ಕ್ರೈಸ್ತ ಕಥೊಲಿಕ್ ಸಮಾಜದ ಯಶಸ್ವಿ […]
ಹಂಗಾರಕಟ್ಟೆಯ ಸರ್ಕಾರಿ ಪ್ರೌಢಶಾಲೆಯ ಅತ್ಯಂತ ಪ್ರತಿಭಾನ್ವಿತ ಮತ್ತು ಸಮರ್ಪಿತ ಶಿಕ್ಷಕಿ ಶ್ರೀಮತಿ ವೀಣಾ ಉದಯ ಶೆಟ್ಟಿ ಅವರನ್ನು ಉಡುಪಿ ಜಿಲ್ಲಾ ಮಟ್ಟದ ಪ್ರತಿಷ್ಠಿತ ‘ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ – 2025’ಕ್ಕೆ ಅರ್ಹವಾಗಿ ಆಯ್ಕೆ ಮಾಡಲಾಗಿದೆ ಎಂಬ ಸಂತೋಷದ ಸುದ್ದಿಯನ್ನು ಹಂಚಿಕೊಳ್ಳಲು ನಾವು ಅಪಾರ ಹೆಮ್ಮೆಪಡುತ್ತೇವೆ. ವಿಜ್ಞಾನ ವಿಷಯ ತಜ್ಞರಾದ ಶ್ರೀಮತಿ ವೀಣಾ ಅವರು ತಮ್ಮ ವಿಶಿಷ್ಟ ಬೋಧನಾ ವಿಧಾನ, ಕುತೂಹಲವನ್ನು ಪೋಷಿಸುವ ಬದ್ಧತೆ ಮತ್ತು ಸಂಶೋಧನೆ ಮತ್ತು ವೈಜ್ಞಾನಿಕ ಪ್ರಯೋಗಗಳಲ್ಲಿ ಯುವ ಮನಸ್ಸುಗಳನ್ನು ಪ್ರೇರೇಪಿಸುವ ಉತ್ಸಾಹದಿಂದ ಪೀಳಿಗೆಯ […]

