ಶ್ರೀನಿವಾಸಪುರ : ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಶ್ರೀ ಪಾರ್ವತಿ ಸಮೇತ ಸಹಮನೇಶ್ವರಸ್ವಾಮಿ ಬ್ರಹ್ಮರಥೋತ್ಸವವು ಗುರುವಾರ ಭಕ್ತಿಭಾವದಿಂದ, ಸಂಪ್ರದಾಯಬದ್ಧವಾಗಿ ಹಾಗೂ ಅದ್ದೂರಿಯಾಗಿ ನಡೆಯಿತು. ಉತ್ಸವದ ಅಂಗವಾಗಿ ಬೆಳಗ್ಗಿನಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆಗಳು, ಅಭಿಷೇಕ, ಅಲಂಕಾರ ಕಾರ್ಯಗಳು ನೆರವೇರಿದವು. ನಂತರ ಗ್ರಾಮ ದೇವರ ಉತ್ಸವ ಮೂರ್ತಿಯನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಭಕ್ತರು ಹೂವು, ಹಣ್ಣು, ಪೂಜೆ ಸಾಮಗ್ರಿಗಳನ್ನು ಸಮರ್ಪಿಸಿ ಭಕ್ತಿಭಾವದಿಂದ […]
ಉಡುಪಿ: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ (ಮೊಂಡಿ ಥರ್ಸ್ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮವು ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್ನಲ್ಲಿ ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಜರಗಿತು. ಧರ್ಮಾಧ್ಯಕ್ಷರು 12 ಮಂದಿ ಪ್ರೆಷಿತರ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರೀತಿಯ […]
ಕುಂದಾಪುರ : ಕಳೆದ 40 ವರ್ಷಗಳಿಂದ ಗ್ರಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸಿ ಇದೀಗ ವಯೋ ನಿವೃತ್ತಿ ಹೊಂದಿರುವ ಜೋಸೆಫ್ ಡಿಸೋಜಾ ಅವರನ್ನು ಪತ್ನಿ ಆಶಾ ಡಿಸೋಜ ಸಹಿತ ಕಂಡ್ಲುರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಮ್ಮಾನಿಸಿ ಬೀಳ್ಕೊಡಲಾಯಿತು.ಕುಂದಾಪುರ, ಗಂಗೊಳ್ಳಿ, ಕೋಟ, ಬೈಂದೂರು, ಶಂಕರನಾರಾಯಣ, ಕಂಡ್ಲುರು ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಇವರು ತುರ್ತು ಸಂದರ್ಭಗಳಲ್ಲಿ ರಾಜ್ಯದ ವಿವಿದೆಡೆಗಳಲ್ಲೂ ಕರ್ತವ್ಯ ನಿಭಾಯಿಸಿದ್ದಾರೆ.ಈ ಸಂದರ್ಭದಲ್ಲಿ ಠಾಣಾ ಉಪ ನೀರಿಕ್ಷಕ ನಿರಂಜನ್ ಗೌಡ ಹಾಗೂ ಸಿಬಂದಿಗಳು ಉಪಸ್ಥಿತರಿದ್ದು ಶುಭ ಹಾರೈಸಿದರು. ತಮ್ಮ […]
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, 450 ಹಾಸಿಗೆಗಳ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಇಂದಿರಾ ಗಾಂಧಿ ಆಸ್ಪತ್ರೆಯ ಹೊಸ ಆಡಿಟೋರಿಯಂವನ್ನು ಭರ್ಜರಿಯಾಗಿ ಉದ್ಘಾಟಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ), ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಿರಿಯ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅವರು ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು. ಆಸ್ಪತ್ರೆಯಲ್ಲಿ ಕೈಗೊಂಡಿರುವ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಅವರು ಪ್ರಶಂಸಿಸಿದರು. ಈ ಹೊಸ ಸಭಾಂಗಣವನ್ನು ವೈದ್ಯಕೀಯ ವಿಚಾರ ಸಂಕಿರಣಗಳು, […]
Mount Carmel Central School Celebrates ATL Community Day with Innovation ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯು ಎಟಿಎಲ್ ಸಮುದಾಯ ದಿನವನ್ನು ನಾವೀನ್ಯತೆಯೊಂದಿಗೆ ಆಚರಿಸುತ್ತದೆಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯು ಮಂಗಳವಾರ, ಮಾರ್ಚ್ 31, 2026 ರಂದು ಎಟಿಎಲ್ ಸಮುದಾಯ ದಿನವನ್ನು ಅತ್ಯಂತ ಉತ್ಸಾಹ ಮತ್ತು ಬೌದ್ಧಿಕ ಚೈತನ್ಯದಿಂದ ಆಚರಿಸಿತು. ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಶ್ರೀ ಕರಿಸ್ಸಿಮಾ ಅವರ ಮಾರ್ಗದರ್ಶನದಲ್ಲಿ, ಗಣಿತ ಮತ್ತು ವಿಜ್ಞಾನ ಅಧ್ಯಾಪಕರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಆಯೋಜಿಸಲಾದ ಶೈಕ್ಷಣಿಕ ಅವಧಿಗಳು ಮತ್ತು ಆಕರ್ಷಕ […]
ಬದ್ರುಲ್ ಹುದಾ ಹೈಯರ್ ಸೆಕೆಂಡರಿ ಮದ್ರಸ ಬಂಟ್ವಾಳದ ಇರಾ ಮೂಲೆ ಯಲ್ಲಿ ಅತೀ ಪ್ರೌಢವಾಗಿ 29/03/26 ಭಾನುವಾರದಂದು ನಡೆಯಿತು. ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ ಯವರ ಅಧ್ಯಕ್ಷತೆಯಲ್ಲಿ ಜರುಗಿತು.ಬದ್ರ್ ಶುಹದಾಗಳನ್ನು ಸ್ಮರಿಸಿ ದುಆ ಕ್ಕೆ ನೇತೃತ್ವ ನೀಡಿದ ಖತೀಬ್ ಉಸ್ತಾದ್ ಯಾಕೂಬ್ ಲತೀಫಿ ಸಭೆಯನ್ನು ಉದ್ಘಾಟನೆ ನಿರ್ವಹಿಸಿ,ಇಲ್ಮಿನ ಶ್ರೇಷ್ಠತೆ, ಪ್ರಾಧಾನ್ಯತೆಯ ಬಗ್ಗೆ ಅರಿವು ಮೂಡಿಸಿದರು.ನಂತರ ಮಾತಾಡಿದ ಸದರ್ ಉಸ್ತಾದ್ ಝೈನುಲ್ ಆಬಿದ್ ನಈಮಿ ಮದ್ರಸಾ ನಿಯಮಾವಳಿಗಳನ್ನು ರಕ್ಷಕರಿಗೂ ಮಕ್ಕಳಿಗೂ ಜಾಗೃತಿ ಮೂಡಿಸಿದರು.ಜೊತೆಗೆ ಸ್ವಾಗತ ಭಾಷಣದಲ್ಲಿ ಮಾತಾಡಿದ ಮುಅಲ್ಲಿಂ ನುಅ್-ಮಾನ್ ಸಅದಿ ಉಸ್ತಾದ್ […]
ಬೆಂಗಳೂರು; ರಾಜ್ಯದಲ್ಲಿ ಬಿಸಿಲಿನ ಝಳದಿ೦ದ ಕ೦ಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆಯಪ್ರಕಾರ ಮಾರ್ಚ್ 30 ರಿ೦ದ ಏಪ್ರಿಲ್ 5 ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತಮಳೆಯಾಗುವ ಸಾಧ್ಯತೆಯಿದೆ ಎ೦ದು ಮುನ್ಸೂಚನೆ ನೀಡಲಾಗಿದೆ. ಬ೦ಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿ ದುಬ್ಬಲಗೊಳ್ಳುತ್ತಿರುವ ಪರಿಣಾಮವಾಗಿ ರಾಜ್ಯದ ವಿವಿಧೆಡೆಹವಾಮಾನದಲ್ಲಿ ಏರುಪೇರಾಗಲಿದ್ದು, ವರುಣನ ಆಗಮನವಾಗಲಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಈ ಕೆಳಗಿನ ಭಾಗಗಳಲ್ಲಿ ಮಳೆಯ ಆರ್ಭಟ ಇರಲಿದೆ,ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇ೦ದು ಸ೦ಜಿ ವೇಳೆಗೆ ಮಳೆ ಸುರಿಯುವ […]
ಉಡುಪಿ, ಮಾರ್ಚ್ 29: ಉಡುಪಿ ಡಯಾಸಿಸ್ನ ಕಲ್ಯಾಣಪುರದ ಮಿಲಾಗ್ರೆಸ್ ಕ್ಯಾಥೆಡ್ರಲ್ನಲ್ಲಿ ಮಾರ್ಚ್ 29, 2026 ರ ಭಾನುವಾರದಂದು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾದ ಪಾಸ್ಚಲ್ ರಹಸ್ಯವನ್ನು ಪೂರ್ಣಗೊಳಿಸಲು ಕ್ರಿಸ್ತನ ಜೆರುಸಲೆಮ್ಗೆ ಪ್ರವೇಶವನ್ನು ಸ್ಮರಿಸುವ ಗರಿಗಳ ಭಾನುವಾರ ಆಚರಿಸಲಾಯಿತು. ಗರಿಗಳ ಭಾನುವಾರ ಸೇವೆ ಪ್ರಾರಂಭವಾಗುವ ಮೊದಲು, ಅಲ್ಲಿ ಉಡುಪಿ ಡಯಾಸಿಸ್ನ ಅಪೋಸ್ಟೋಲಿಕ್ ಆಡಳಿತಾಧಿಕಾರಿ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ, ರೆಕ್ಟರ್ ವೆರಿ ರೆವ್. ಮೊನ್ಸಿಂಝ್ಹೊರ್ ಫರ್ಡಿನಾಂಡ್ ಗೊನ್ಸಾಲ್ವೆಸ್ ಮತ್ತು ಸಹಾಯಕ ಪ್ಯಾರಿಷ್ ರೆವ್. ಫಾದರ್ […]
ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ವಂದನೀಯ ಧರ್ಮಗುರು ವಿನ್ಸೆಂಟ್ ಕುವೆಲ್ಲೋ ಮತ್ತು ಸಹಾಯಕ ಧರ್ಮಗುರು ಪ್ರಥ್ವಿ ರೊಡ್ರಿಗಸ್ ರವರ ನೇತ್ರತ್ವದಲ್ಲಿ ಗರಿಗಳ ಭಾನುವಾರದ ಆಚರಣೆ ಆಚರಿಸಲಾಯಿತು.ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಕ್ರೈಸ್ತ ಬಾಂಧವರು ಉಪಸ್ಥಿತರಿದ್ದರು.

