ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಗುರು ವೇದಿಕ್ ಮಾಥ್ಸ್-2024 ರ ಅಂತಾರಾಷ್ಟ್ರೀಯ ಮಟ್ಟದ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿಅತ್ತ್ಯುತ್ತಮ ಪ್ರತಿಭೆತೋರ್ಪಡಿಸಿರುತ್ತಾರೆ ವಿಜೇತರ ಯಾದಿ :ರಿಷಿ ಎಸ್ ಶೆಟ್ಟಿ (IX ನೇ ತರಗತಿ ) ತೃತೀಯ ಸ್ಥಾನಪ್ರೇರಕ ಪ್ರಶಸ್ತಿ ಚಾಂಪಿಯನ್1.ನಿಖಿಲ್ ಜಿ ಶೆಟ್ಟಿ VII ನೇ ತರಗತಿ2..ಆತ್ಮಿಕಾ VIIನೇ ತರಗತಿ3.ಶ್ರೀಲಕ್ಷ್ಮಿ VIIನೇ ತರಗತಿಸಮಾಧಾನಕರ ಬಹುಮಾನ1.ದಿವ್ಯಾ ಆರ್ ಶೆಟ್ಟಿ VIIನೇ ತರಗತಿ2.ತನಿಶಾ ಶೆಟ್ಟಿ VIIನೇ ತರಗತಿ3.ರಾಜೇಶ್ವರಿ VII ನೇ ತರಗತಿ4.ಅಬಿಗೈಲ್ ರಾಜಿ […]
ನವೆಂಬರ್ 25, 2024: ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್ನಲ್ಲಿ 2024 ರ ನವೆಂಬರ್ 24 ರ ಭಾನುವಾರದಂದು ಕ್ರೈಸ್ಟ್ ದಿ ಕಿಂಗ್ ಫೀಸ್ಟ್ ಮತ್ತು ಯೂಕರಿಸ್ಟಿಕ್ ಮೆರವಣಿಗೆಯ ಅಂತರ-ಡೈಸಿಸನ್ ಆಚರಣೆಯು ಅತ್ಯಂತ ಭಕ್ತಿ ಮತ್ತು ಆಧ್ಯಾತ್ಮಿಕ ವೈಭವದಿಂದ ನಡೆಯಿತು. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯ, ಭದ್ರಾವತಿಯ ಸಿರೋ-ಮಲಬಾರ್ ಧರ್ಮಪ್ರಾಂತ್ಯ ಮತ್ತು ಪುತ್ತೂರಿನ ಸಿರೋ-ಮಲಂಕಾರ ಧರ್ಮಪ್ರಾಂತ್ಯದಿಂದ ಅಪಾರ ಸಂಖ್ಯೆಯ ಭಕ್ತರು, ಧರ್ಮಗುರುಗಳು, ಧರ್ಮಗುರುಗಳು ಆಗಮಿಸಿದ್ದರು. ಸೆಲೆಬ್ರಟರಿ ಕಾರ್ಯಕ್ರಮವು ಸಂಜೆ 4:30 ಕ್ಕೆ ರೋಸರಿಯೊಂದಿಗೆ ಪ್ರಾರಂಭವಾಯಿತು, ಫಾದರ್. ಸಂತೋಷ್ ಡಿ’ಕುನ್ಹಾ. […]
ಶ್ರೀನಿವಾಸಪುರ : ಸರ್ಕಾರದ ಸೌಲಭ್ಯಗಳನ್ನು ಹಾಗು ದಾನಿಗಳು ನೀಡುವಂತಹ ಲೇಖನಿ ಸಾಮಾಗ್ರಿಗಳನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾವಂತರಾಗುವಂತೆ ಎಂದು ದಾನಿ ಆವಲಕುಪ್ಪ ಎಂ. ರಂಗಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ತಾಲೂಕಿನ ಆವಲಕುಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ದಾನಿಗಳಾದ ಎಂ. ರಂಗಪ್ಪ ಕುಟುಂಬದವರಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು , ಬ್ಯಾಗ್, ಲೇಖನಿ , ಆಟದ ಸಾಮಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು.ಹಿಂದೆ ಬಡತನದ ಕಾರಣಕ್ಕಾಗಿ ಅನೇಕ ಮಕ್ಕಳು ಶಾಲೆಯನ್ನು ತೊರೆಯುತ್ತಿದ್ದರು ದೂರದ ಊರುಗಳಿಗೆ ಹೋಗಿ ಶಿಕ್ಷಣವನ್ನು ಪಡೆಯಲು […]
ಉಪಚುನಾವಣೆಯಲ್ಲಿ ಮೂರಕ್ಕೆ , ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿದ ಫಲಿತಾಂಶ ಬರುತ್ತಿದ್ದಂತೆ , ಕುಂದಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯ ಎದುರು ಪಕ್ಷದ ಮುಖಂಡರು , ಕಾರ್ಯಕರ್ತರು ಸಿಹಿ ಹಂಚಿ ,ಪಟಾಕಿ ಸಿಡಿಸಿ , ಸಂಭ್ರಮಿಸಿದರು. ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ ಶೇರಿಗಾರ್ , ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ ,ಪುರಸಭಾ ಸದಸ್ಯರಾದ ಪ್ರಭಾವತಿ ಶೆಟ್ಟಿ, ಅಬ್ಬು ಮೊಹಮ್ಮದ್ ,ಪಂಚಾಯತ್ ಸದಸ್ಯರಾದ ವಿಜಯಧರ್ ಕೆವಿ , […]
ಬೆಂಗಳೂರು: ತುಮಕೂರಿನಲ್ಲಿ ನ.24ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾ ಕೂಟದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಕ್ರೀಡಾ ಜ್ಯೋತಿ ರಥವನ್ನು ಸ್ವತಃ ಗೃಹಸಚಿವ ಜಿ.ಪರಮೇಶ್ವರ ಅವರೇ ಚಾಲನೆ ಮಾಡುವ ಮೂಲಕ ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು.ಕ್ರೀಡಾ ಜ್ಯೋತಿ ರಥದ ವಾಹನವನ್ನು ಗೃಹ ಸಚಿವವರು ಚಾಲಾಯಿಸಿದರೆ, ಅದಕ್ಕೆ ಅವರ ಪತ್ನಿ ಕನ್ನಿಕಾ ಪರಮೇಶ್ವರ ಅವರು ಹಸಿರು ನಿಶಾನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜಿ.ಪರಮೇಶ್ವರ ಅವರು, ಪತ್ರಕರ್ತರು ಸದಾ ಒತ್ತಡದ ನಡುವೆ ಕೆಲಸ ಮಾಡುತ್ತಿರುತ್ತಾರೆ. ಮಾನಸಿಕ ಒತ್ತಡ ನಿಭಾಯಿಸಲು […]
ಬೆಂಗಳೂರು;ಸೇಂಟ್ ಜೋಸೆಫ್ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ದಿ: 21.11. 2024 ರಂದು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮತ್ತು ಸಾಹಿತಿಗಳಾದ ರೆವರೆಂಟ್ ಫಾದರ್ ಪ್ರಶಾಂತ್ ವಿ ಮಾಡ್ತ ರವರು ಆಗಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರಾದ ಇವರ ಮಾತೃಭಾಷೆ ಕೊಂಕಣಿ. ಬೆಂಗಳೂರಿನ ವಿಶ್ವವಿದ್ಯಾಲಯದಲ್ಲಿ ಮೂರು ಚಿನ್ನದ ಪದಕಗಳನ್ನು ಗಳಿಸಿರುವ ಇವರು ಎಂಎ ಪದವಿಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಯಾಗಿದ್ದಾಗ ಸುಂದರ ಕನ್ನಡ ಭಾಷೆಯ […]
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 27ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ‘RUBYCON 2024’- 27ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ’ ಇದರ ಉದ್ಘಾಟನಾ ಸಮಾರಂಭವು ನವೆಂಬರ್ 21 ರಂದು ಬೆಳಿಗ್ಗೆ 9.30ಕ್ಕೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್ನಲ್ಲಿ ನಡೆಯಿತು. ಶ್ರೀ ದಿನೇಶ್ ಗುಂಡೂ ರಾವ್, ಮಾನ್ಯ ಉಸ್ತುವಾರಿ ಸಚಿವರು (ದಕ್ಷಿಣ ಕನ್ನಡ ಜಿಲ್ಲೆ) ಹಾಗೂ ಸ್ವಾಸ್ಥ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಕರ್ನಾಟಕ ಸರಕಾರ ಇವರು ಮುಖ್ಯ ಅತಿಥಿಗಳಾಗಿ […]
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು. ನಿನ್ನೆ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಶುರುವಾಗಿದೆ. ಈ ಕೂಂಬಿಂಗ್ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ […]
ಶ್ರೀನಿವಾಸಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲ್ಲೂಕಿನ ಕನಕ ಸಭಾಭನದಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶೀನಪ್ಪರವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ವಿದ ದಾನಗಳಿಗೆ ಹೆಸರುವಾಸಿಯಾದ ಕ್ಷೇತ್ರ… ಹಸಿದವನಿಗೆ ಅನ್ನ ನೀಡುವುದಕ್ಕಿಂತ ಅನ್ನವನ್ನು ಉತ್ಪಾದಿಸುವ ಕಲೆಯನ್ನು ಕಲಿಸಿಕೊಡಿ ಎನ್ನುವುದು ಧರ್ಮಾಧಿಕಾರಿಗಳ ಕಲ್ಪನೆ.. ಪೂಜ್ಯರ ಧರ್ಮಪತ್ನಿ ಮಾತೃಶ್ರೀ ಹೇಮಾವತಿ ಅಮ್ಮನವರ […]

