ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ :ಪಿ.ಆರ್‌.ಸೂರ್ಯನಾರಾಯಣ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಮರ : ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಹೇಳಿದರು . ಪಟ್ಟಣದ ಬಸ್‌ ನಿಲ್ದಾಣದ ಸಮೀಪ , ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದ ಹಿನ್ನಲೆಯಲ್ಲಿ , ಶುಕ್ರವಾರ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕ ಹಾಗೂ ಇತರ ಸಮಾನ ಮನಸ್ಯ ಸಂಘಟನೆಗಳ ವತಿಯಿಂದ ಏರ್ಪಡಿಸಿದ್ದ ವಿಜಯೋತ್ಸವ ಸಮಾರಂಭದಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಮಾತನಾಡಿದ ಅವರು , ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತರ ಕುಟುಂಬಗಳಿಗೆ ತಲಾ ರೂ .೧೦ ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು . ಸಂಯುಕ್ತ ಹೋರಾಟ ಸಮಿತಿ ಮುಖಂಡರಾದ ವರ್ಕನಹಳ್ಳಿ ವೆಂಕಟೇಶ್ , ನರಸಿಂಹಮೂರ್ತಿ , ಶಿವಪ್ಪ … ಶ್ರೀನಾಥ್ , ಹಮಾಲಿ ಮೂರ್ತಿ , ಪ್ರೇಮ್ ಕುಮಾರ್ , ಶ್ರೀನಿವಾಸ್ , ಮಂಜುನಾಥರೆಡ್ಡಿ , ಲಕ್ಷ್ಮೀನಾರಾಯಣ , ರಿಜ್ವಾನ್ ಇದ್ದರು .