ಬೆಳ್ಮಣ್ಣು ದೇವಸ್ಥಾನದಲ್ಲಿ ಅಕ್ಟೋಬರ್ 22 ರಂದು ಚಂಡಿಕಾಯಾಗ

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು

  ಇತಿಹಾಸ ಪ್ರಸಿದ್ದ ವನದುರ್ಗೆ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 22ರಂದು ಶುಕ್ರವಾರ ಚಂಡಿಕಾಯಾಗ ಜರಗಲಿದೆ.
    ಆ ಪ್ರಯಕ್ತ ಬೆಳಿಗ್ಗೆ ಘಂಟೆ 9 ರಿಂದ ಚಂಡಿಕಾಯಾಗ ಪೂಜೆ ಆರಂಭ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಮಧ್ಯಾಹ್ನ 1 ರಿಂದ ಮಹಾ ಅನ್ನಸಂತರ್ಪಣೆ ಜರಗಲಿದೆ ಎಂದು ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ ವೇದ ಮೂರ್ತಿ ಬಿ.ಎಂ.ಕೃಷ್ಣ ಭಟ್ ಮತ್ತು ವೇದ ಮೂರ್ತಿ ಬಿ.ಕೆ.ವಿಘ್ನೇಶ್ ಭಟ್ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.