ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನಾಚರಣೆ

JANANUDI.COM NETWORK


ಕುಂದಾಪುರ,ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿಶೇಷ ಮಕ್ಕಳಿಂದ ವಿವಿಧ ಆಟಗಳು ಮತ್ತು ಮೋಜಿನ ಚಟುವಟಿಕೆಗಳನ್ನು ನಡೆಸಲಾಯಿತು. ಸಂತೋಷ ಮತ್ತು ಉತ್ಸಾಹದಿಂದ ಹೊ ಎಲ್ಲಾ ಮಕ್ಕಳು ಸಕ್ರಿಯವಾಗಿ ಆಟಗಳಲ್ಲಿ ಭಾಗವಹಿಸಿದರು.
ಮಧ್ಯಾಹ್ನ ನಾವು ಬಹುಮಾನಗಳನ್ನು ವಿತರಿಸಲು ಔಪಚಾರಿಕ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ವೇದಿಕೆಯಲ್ಲಿ ಹಿರಿಯ ವೈದ್ಯಾಧಿಕಾರಿ ಡಾ.ಕಾಶಿನಾಥ ಪೈ, ಸ್ವಾತಿ ಕ್ಲಿನಿಕ್ ಗಂಗೊಳ್ಳಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಕರಣ್ ಕುಮಾರ್ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಜುಡಿತ್ ಮೆಂಡೋನ್ಕಾ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಉಪಸ್ಥಿತರಿದ್ದರು.
ಅತಿಥಿಗಳು ತಮ್ಮ ಕ್ರೀಡಾ ಮತ್ತು ಪ್ರೇರಣಎಯ ಸಲಹೆಯೊಂದಿಗೆ ಮಕ್ಕಳು ಮತ್ತು ಶಾಲೆಯ ಸಿಬ್ಬಂದಿಯನ್ನು ಪ್ರೇರೇಪಿಸಿದರು. ಮಕ್ಕಳ ದಿನಾಚರಣೆಯ ಅಂಗವಾಗಿ ಎಲ್ಲ ಮಕ್ಕಳನ್ನು ಸನ್ಮಾನಿಸಿ, ಎಲ್ಲ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಟ್ರಸ್ಟಿಗಳು, ಸಿಬ್ಬಂದಿಗಳು ಮತ್ತು ಪೆÇೀಷಕರು ಸಕ್ರಿಯವಾಗಿ ಭಾಗವಹಿಸಿ ಈ ಮಕ್ಕಳ ದಿನಾಚರಣೆಯಲ್ಲಿ ಪಾಲ್ಗೊಂಡರು.