ಕುಂದಾಪುರದಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಆಯತಪ್ಪಿ ಕೆಳಗೆ ಬಿದ್ದು ಸೆಂಟ್ರಿಂಗ್ ಕಾರ್ಮಿಕ ಸಾವು

JANANUDI.COM NETWORK


ಕುಂದಾಪುರ: ಕುಂದಾಪುರದ ನಾರಾಯಣ ಗುರು ರಸ್ತೆಯಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸೆಂಟ್ರಿಂಗ್ ಕೆಲಸ ಮಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದ ಕಾರ್ಮಿಕ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಉತ್ತರ ಪ್ರದೇಶದ ಶುಭಂ ಎಂಬಾತ ಒಂದನೆ ಮಹಡಿಯಲ್ಲಿ ಕೆಲಸ ಮಾಡುತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಆಯತಪ್ಪಿ ನೆಲಕ್ಕೆ ಬಿದ್ದಿದ್ದ , ಕೂಡಲೇ ಕುಂದಾಪುರ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿತ್ತು. ನಂತರ ಸಂಜೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿರುವಾಗ ಫಲಿಕಾರಿಯಾಗದೇ ಮೃತ ಪಟ್ಟಿದ್ದಾರೆ.ಈ ಘಟನೆ ನ.17 ರಂದು ನಡೆದಿದ್ದು. ಈ ಬಗ್ಗೆ ಕುಂದಾಪುರ ಪೆÇಲೀಸ್ ಠಾಣೆ ಪ್ರಕರಣ ದಾಖಲಾಗಿದೆ.