ಸರ್ವವ್ಯಾಪಿ ಅಭಿವೃದ್ಧಿಗೆ ಪೂರಕವಾದ ಬಜೆಟ್: ಯಲ್ಲಪ್ಪ

ಕೋಲಾರ:- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಸರ್ವ ಜನಾಂಗದ ಕಲ್ಯಾಣಕ್ಕೆ ಬಜೆಟ್ ಮಂಡಿಸಿದ್ದಾರೆ ಎಂದು ಐ.ಎನ್.ಟಿ.ಯು.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಜಾರಿಯ ಜೊತೆಯಲ್ಲಿಯೇ ಪ್ರತಿಯೊಂದು ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ವಿಶೇಷವಾಗಿ ಕಾರ್ಮಿಕರ ಉಳಿವಿಗಾಗಿ ಈ ಮಧ್ಯಂತರದ ಬಜೆಟ್ ನಲ್ಲಿ ಹೆಚ್ಚಿನ ಅಧ್ಯತೆ ನೀಡಿದ್ದಾರೆ ಮುಂದಿನ ದಿನಗಳಲ್ಲಿ ಕಾರ್ಮಿಕರ ಉಳಿವಿಗಾಗಿ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಈ ಬಜೆಟ್ ಎಲ್ಲಾ ಜಿಲ್ಲೆಗಳಿಗೂ ವಿವಿಧ ಯೋಜನೆಗಳನ್ನು ನೀಡಿ ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸುವ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದ್ದಾರೆ.