ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಂ.ವಿ.ಶ್ರೀನಾಥ್, ಉಪಾಧ್ಯಕ್ಷೆಯಾಗಿ ರಾಮಕ್ಕ ಅವಿರೋಧ ಆಯ್ಕೆ

ಶ್ರೀನಿವಾಸಪುರ: ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಂ.ವಿ.ಶ್ರೀನಾಥ್, ಉಪಾಧ್ಯಕ್ಷೆಯಾಗಿ ರಾಮಕ್ಕ ಅವಿರೋಧ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಪ್ರತಿಸ್ಪರ್ಧಿಯಾಗಿದ್ದ ಕೃಷ್ಣಮ್ಮ ತಮ್ಮ ನಾಮಪತ್ರ ಹಿಂಪಡೆದ ಪರಿಣಾಮವಾಗಿ ಎಂ.ವಿ.ಶ್ರೀನಾಥ್ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಮೂವರು ಸ್ಪರ್ಧಿಸಿದ್ದರಾದರೂ, ಕೃಷ್ಣಮ್ಮ ಅವರ ನಾಮಪತ್ರ ತಿರಸ್ಕøತವಾಯಿತು. ನಜಿಮುನ್ನೀಸಾ ಅವರು ತಮ್ಮ ನಾಮಪತ್ರ ಹಿಂಪಡೆದರು. ಹಾಗಾಗಿ ರಾಮಕ್ಕ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು.
ಚುನಾವಣಾಧಿಕಾರಿ ಗಣೇಶ್, ಪಿಡಿಒ ಮಂಜುನಾಥಸ್ವಾಮಿ ಚುನಾವಣಾ ಕಾರ್ಯ ನಿರ್ವಹಿಸಿದರು. ಎ.ನಾಗೇಶ್ ಬಾಬು, ಕಾರಂಗಿ ರಮೇಶ್, ಹರೀಶ್, ಆಂಜಿ, ನಾಗರಾಜ್, ಎಂ.ಕೆ.ನಾರಾಯಣಸ್ವಾಮಿ, ಶ್ರೀನಿವಾಸ್, ರಮೇಶ್ ಇದ್ದರು.
ಚುನಾಣೆ ನಂತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಜೇತ ಅಭ್ಯರ್ಥಿಗಳೊಂದಿಗೆ ವಿಜಯೋತ್ಸವ ಆಚರಿಸಿದರು.