ಲಸಿಕೆ ನೀಡಲು ಸಾಧ್ಯವಾಗದಿದ್ದರೆ ತಪ್ಪು ಮಾಹಿತಿ ಕೊಡಬೇಡಿ: ಬಿಜೆಪಿಗೆ ಕಾಂಗ್ರೆಸ್ ತರಾಟೆ

JANANUDI.COM NETWORK

ಬೆಂಗಳೂರು: ನಿಮಗೆ ರಾಜ್ಯದ ಜನರಿಗೆ ಲಸಿಕೆ ನೀಡಲು ಸಾಧ್ಯವಾಗದಿದ್ದರೆ, ಅವೈಜ್ಞಾನಿಕ ಮಾಹಿತಿ ನೀಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿಗೆ ಕಾಂಗ್ರೆಸ್ ಹೇಳಿದೆ.  

 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು   ಸಾಮಾಜಿಕ ಜಾಲತಾಣದ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿಯ ನಾಯಕರು ಲಸಿಕೆಯ ಕುರಿತಂತೆ ತಪ್ಪುಸಂದೇಶಗಳನ್ನು  ಹರಡುತ್ತಿರುವ ಮಾಹಿತಿಗಳು ಬರುತ್ತಿವೆ.‌ ಈ ನಡೆ ಅಪಾಯಕಾರಿಯಾಗಿದೆ.  ಲಸಿಕೆ ಪ್ರಕರಣದಲ್ಲಿ ಬಿಜೆಪಿಯು ತನ್ನ ವೈಫಲ್ಯವನ್ನು ಜನರು ಪ್ರಶ್ನಿಸದಂತೆ ಮಾಡಲಾಗುತ್ತಿದೆ. ಬಿಜೆಪಿ ವೈಜ್ನಾನಿಕವಾಗಿ ಲಸಿಕೆ ನೀಡಲು ಸಾಧ್ಯವಾಗದಿದ್ದರೆ ಅವೈಜ್ಞಾನಿಕ ಮಾಹಿತಿ ನೀಡುವುದನ್ನು ನಿಲ್ಲಿಸಬೇಕು’ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.