

ಕುಂದಾಪುರ,ಮೇ. 5; ನಿನ್ನೆ ಸಂಜೆ , ದಾವಣಗೆರೆ ಹಾಗೂ ಬಾಗಲಕೋಟೆ ಚುನಾವಣಾ ಗೆಲುವಿನ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿಯ ಮುಂದೆ ಕಾಂಗ್ರೆಸ್ ಪಕ್ಷದ ಸದಸ್ಯರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ಟೊ , ಮಹಿಳಾ ಬ್ಲಾಕ್ ಅಧ್ಯಕ್ಷೆ ದೇವಕಿ ಸಣ್ಣಯ್ಯ , ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಅಭಿಜಿತ್ ಪೂಜಾರಿ , ಐಟಿ ಸೆಲ್ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ , ಜಿಲ್ಲಾ ಸೋಶಿಯಲ್ ಮೀಡಿಯಾ ಅಧ್ಯಕ್ಷ ರೋಷನ್ ಶೆಟ್ಟಿ , ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮುನಾಫ್ ಕೋಡಿ , ಇಂಟಕ್ ಘಟಕದ ಅಧ್ಯಕ್ಷರಾದ ಚಂದ್ರ ಅಮೀನ್ , ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ಜೋಸೆಫ್ ರೆಬೆಲ್ಲೊ , ಮಾಜಿ ಪುರಸಭಾ ಸದಸ್ಯ ಪ್ರಭಾವತಿ ಶೆಟ್ಟಿ, ನಾಮ ನಿರ್ದೇಶಿತ ಸದಸ್ಯರಾದ ಅಶೋಕ್ ಸುವರ್ಣ , ಶಶಿಧರ ನಂದಿಬೆಟ್ಟು , ಸದಾನಂದ ಖಾರ್ವಿ, ಹಿರಿಯರಾದ ಅಬ್ದುಲ್ಲಾ ಕೋಡಿ , ರತ್ನಾಕರ ಶೆಟ್ಟಿ , ಶಶಿಕುಮಾರ್ ,ಅರುಣ್ ಪಟೇಲ್ , ವೇಣು ಶಾಂತಿನಿಕೇತನ ,ವೇಲಾ ಬ್ರಗಾಂಜ , ಡಾಲ್ಫಿ ಡಿಕೋಸ್ಟ , ಆಲ್ವಿನ್ ಹೆರಿಕುದ್ರು ಇನ್ನಿತರರು ಉಪಸ್ಥಿತರಿದ್ದರು.


