ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟನೆ ಬಲಪಡಿಸಬೇಕು ; ಶಾಸಕ ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪು

ಶ್ರೀನಿವಾಸಪುರ: ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟನೆ ಬಲಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ವೆಂಕಟೇಶಗೌಡ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಡವರ ಮತ್ತು ರೈತರ ಸಮಸ್ಯೆಳ ಪರಿಹಾರ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರ ಬವಣೆ ಕೊನೆಗೊಳ್ಳಲು ಸಾಧ್ಯ ಎಂಬ ವಿಷಯವನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಮಾತನಾಡುವಾಗ, ತಾವು ಬಾಂಗ್ಲಾ ವಿಮೋಚನಾ ಚಳುವಳಿಯಲ್ಲಿ ಜೈಲು ವಾಸ ಅನುಭವಿಸಿದ್ದಾಗಿ ಸುಳ್ಳು ಹೇಳಿದ್ದಾರೆ. ಹೀಗೆ ಸುಳ್ಳು ಹೇಳುವುದು ಪ್ರಧಾನಿಯಾದವರಿಗೆ ಶೋಭ ತರುವ ವಿಚಾರ ಅಲ್ಲ. ಈ ವಿಷಯದಲ್ಲಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ನೆನೆಯಬೇಕು. ಒಂದು ಮಹತ್ತರ ಹಾಗೂ ಚರಿತ್ರಾರ್ಹ ಘಟನೆಗೆ ಪ್ರೇರಕರಾದವರನ್ನು ಹಾಗೂ ಕಾರಣರಾದವರನ್ನು ಮರೆಯಬಾರದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಮ್ಯಾಕಲ ನಾರಾಯಣಸ್ವಾಮಿ, ಗೋವಿಂದಸ್ವಾಮಿ, ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಎಂಎಸ್‍ಐಎಲ್ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಬ್ಯಾಟಪ್ಪ, ಮುಖಂಡರಾದ ಸಂಜಯ್ ರೆಡ್ಡಿ, ಅಕ್ಬರ್ ಷರೀಫ್, ಕೆ.ಕೆ.ಮಂಜು, ಶಿವರಾಜ್, ವೇಣು, ಈರಪ್ಪ, ವೆಂಕಟೇಶ್ ಇದ್ದರು.