ಕೊರೋನಾಗೆ ರಾಜ್ಯದಲ್ಲಿ ಇಂದು 349 ಬಲಿ, ಒಟ್ಟು 41,664 ಮಂದಿಗೆ ಪಾಸಿಟಿವ್ 34425 ಗುಣಮುಖರಾಗಿದ್ದಾರೆ

JANANUDI.COM NETWORK


ಬೆಂಗಳೂರು,ಮೇ.15; ಇಂದು (15-5-21) ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 349 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 21434ಕ್ಕೆ ಏರಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶನಿವಾರ ಒಂದೇ ದಿನ ಬರೋಬ್ಬರಿ 349 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 21434ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 41,664 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 34425 ಗುಣಮುಖರಾಗಿದ್ದಾರೆ,ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 13,402 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 10,42,714ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 94 ಮಂದಿ ಬಲಿಯಾಗಿದ್ದಾರೆ, ಉಡುಪಿ ಜಿಲ್ಲೆಯಲ್ಲಿ 1146 ಸೋಂಕಿತರು, 7ಜನರ ಸಾವು, 1496 ಜನ ಬಿಡುಗಡೆ ಹೊಂದಿದ್ದಾರೆ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ,1787 ಸೋಂಕಿತರು,3 ಜನರ ಸಾವು,ಮತ್ತು 1490 ಜನ ಬಿಡುಗಡೆ ಹೊಂದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಹಾಗೇ ರಾಜ್ಯದಲ್ಲಿ ಇಂದು 34425 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 15,44,982ಕ್ಕೆ ಏರಿಕೆಯಾಗಿದೆ. ಇನ್ನು 6,05494 ಸಕ್ರೀಯ ಪ್ರಕರಣಗಳಿವೆ. ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ 21434 ಜನ ಸಾವನ್ನಪ್ಪಿದ್ದಾರೆ.