ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಶ್ರೀನಿವಾಸಪುರ ಶಿಬಿರ ಕಛೇರಿಯಲ್ಲಿ ರಾಸು ವಿಮಾ ಪರಿಹಾರವಿತರಣೆ

ಶ್ರೀನಿವಾಸಪುರ : ಎಲ್ಲಾ ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸುಗಳ ವಿಮೆ ಮಾಡಿಸಬೇಕು, ಮೃತಪಟ್ಟ ರಾಸುಗಳ ವಿಮಾ ಪರಿಹಾರ 07 ಚೆಕ್‍ಗಳು ಮೊತ್ತ 3,90,000/- ರೂಗಳ ಚೆಕ್‍ಗಳನ್ನು ಯಲ್ದೂರು ಕ್ಷೇತ್ರದ ನಿರ್ದೇಶಕ ಎನ್.ಹನುಮೇಶ್ ವಿತರಿಸಿದರು.
ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಶ್ರೀನಿವಾಸಪುರ ಶಿಬಿರ ಕಛೇರಿಯಲ್ಲಿ ಸೋಮವಾರ ರಾಸು ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿದರು.
ಒಕ್ಕೂಟದ ಅಡ್ಡಗಲ್ ಕ್ಷೇತ್ರದ ನಿರ್ದೇಶಕರಾದ ಶ್ರೀ ಕೆ ಕೆ ಮಂಜುನಾಥ ರವರು ಮಾತನಾಡಿ, ಪ್ರಸ್ತುತ ವರ್ಷಕ್ಕೆ 2 ಬಾರಿ ರಾಸುವಿಮೆ ನೋಂದಣಿ ಮಾಡಲಾಗುತ್ತಿದ್ದು, ಇನ್ನು ಮುಂದೆ ವರ್ಷಕ್ಕೆ 3 ಬಾರಿ ರಾಸು ವಿಮೆ ನೋಂದಣಿ ಮಾಡಿಸಲು ಆಡಳಿತ ಮಂಡಳಿ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.
ಉಪ ವ್ಯವಸ್ಥಾಪಕರಾದ ಶ್ರೀ ಕೆ.ಎಂ.ಮುನಿರಾಜು ರವರು ಮಾತನಾಡಿ, ಪ್ರಸ್ತುತ ಒಕ್ಕೂಟದ ವತಿಯಿಂದ ಹಾಲಿನ ಧರವನ್ನು ಏರಿಕೆ ಮಾಡಲಾಗಿದ್ದು, ಸಂಘಗಳಲ್ಲಿ ವೈಜ್ಞಾನಿಕವಾಗಿ ಹಾಲಿನ ಗುಣಮಟ್ಟವನ್ನು ಪರೀಕ್ಷೆ ಮಾಡಿ ಪ್ಯಾಟ್ ಮತ್ತು ಎಸ್.ಎನ್.ಎಫ್. ಆಧಾರದ ಮೇಲೆ ಎಲ್ಲಾ ಯಂತ್ರಗಳನ್ನು ಬಳಸಿಕೊಂಡು ರೈತರಿಗೆ ಹೆಚ್ಚಿನ ಧರ ನೀಡಿದ್ದಲ್ಲಿ ರೈತರಿಗೆ ಸಂಘಗಳ ಮೇಲೆ ನಂಬಿಕೆ ಹೆಚ್ಚಾಗಿ ಉತ್ತಮ ಗುಣಮಟ್ಟ ಹಾಗೂ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುತ್ತಾರೆ, ಸಹಕಾರ ಸಂಘಗಳು ಅಭಿವೃದ್ಧಿಯಾಗುತ್ತವೆ ಹಾಗೂ ಖಾಸಗಿ ಡೇರಿಗಳ ಹಾವಳಿ ಸಹ ಕಡಿಮೆ ಆಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀನಿವಾಸಪುರ ಉಪ ಕಛೇರಿಯ ವಿಸ್ತರಣಾಧಿಕಾರಿಗಳಾದ ಕೆ.ಎಂ.ಮುನಿಸ್ವಾಮಿರೆಡ್ಡಿ, ಎನ್ ಶಂಕರ್, ಪಿ.ಕೆ.ನರಸಿಂಹರಾಜು, ಎಸ್.ವಿನಾಯಕ, ಅಣ್ಣಪ್ಪ ತಡಕೋಡ, ಗೋಪಾಲ ಕೃಷ್ಣ, ಕೆ.ಪಿ.ಶ್ವೇತ ಹಾಗೂ ಶಿಬಿರದ ಸಿಬ್ಬಂದಿಯವರು ಮತ್ತು ಸಂಘದ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರು, ಫಲಾನುಭವಿಗಳು ಹಾಜರಿದ್ದರು.