ಪ್ರಾಥಮಿಕ ಶಿಕ್ಷಕರ ಪರಿಸರ ವರ್ಗಾವಣೆ ಪ್ರಕ್ರಿಯೆ ಸುಗಮ ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ ರೇವಣಸಿದ್ದಪ್ಪ

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ : ನಗರದ ಡಿಡಿಪಿಐ ಕಚೇರಿಯಲ್ಲಿ ಶುಕ್ರವಾರ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆಯಲ್ಲಿ ೧೦ ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡಿಪಿಐ ರೇವಣಸಿದ್ದಪ್ಪ ವರ್ಗಾವಣೆ ಆದೇಶ ವಿತರಿಸಿದರು . ಜಿಲ್ಲೆಯಲ್ಲಿ ಪಾಥಮಿಕ ಶಾಲಾ ವಿಭಾಗದಿಂದ ೨೦ ಮಂದಿ ಪರಸ್ಪರ ವರ್ಗಾವಣೆಗೆ ಅರ್ಜಿ ಹಾಕಿದ್ದು , ೧೨ ಮಂದಿ ಹಾಜರಾಗಿದ್ದರು ಮತ್ತು ೧೦ ಮಂದಿ ವರ್ಗಾವಣೆ ಆದೇಶ ಪಡೆದುಕೊಂಡರು . ವಿಕಲಚೇತನರೊಬ್ಬರು ಸ್ಥಳ ಆಯ್ಕೆ ಮಾಡಿಕೊಂಡಿದ್ದು , ಡಿಡಿಪಿಐ ರೇವಣಸಿದ್ದಪ್ಪ , ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್.ಅಶೋಕ್ ಅವರಿದ್ದ ಸ್ಥಳಕ್ಕೆ ಹೋಗಿ ಆದೇಶ ವಿತರಿಸಿದರು .
ಡಿಡಿಪಿಐ ರೇವಣ ಸಿದ್ದಪ್ಪ ಈ ಸಂದರ್ಭದಲ್ಲಿ ಮಾತನಾಡಿ , ವರ್ಗಾವಣೆಯಾಗಿರುವ ಶಿಕ್ಷಕರು ಸಮಯಪಜ್ಜೆಯಿಂದ ವರ್ತಿಸಿ , ಸಕಾಲಕ್ಕೆ ಹೋಗಿ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದರು .
ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು , ಶಿಕ್ಷಕರನ್ನು ಅಲೆಸದೇ ಸ್ಥಳದಲ್ಲೇ ವರ್ಗಾವಣೆ ಆದೇಶ ಪತ ವಿತರಿಸಲಾಗಿದೆ ಎಂದು ತಿಳಿಸಿದರು .
ಈ ಸ೦ದರ್ಭದಲ್ಲಿ ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್‌.ಅಶೋಕ್‌ , ಪಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪಧಾನ ಕಾರ್ಯದರ್ಶಿ ಎಂ.ನಾಗರಾಜ್ ಎಷಯ ಪರಿವೀಕ್ಷಕ ಕೃಷ್ಣಪ್ಪ , ಅಧೀಕ್ಷಕರಾದ ಮಂಜುನಾಥರೆಡ್ಡಿ ಗೋವಿಂದಗೌಡ , ಸಿಬ್ಬಂದಿ ಚಿರಂಜೀವಿ ಮತ್ತಿತರರಿದ್ದರು .