

ಶ್ರೀನಿವಾಸಪುರ : ಸುಮಾರು 2 ವರ್ಷಗಳಿಂದಲೂ ತಾಲೂಕಿನ ಯಾವುದೇ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ? ಈ ನೀರು ಬರದೆ ಇರುವುದರಿಂದ ಅಂತರ್ಜಲಮಟ್ಟ ಕುಸಿದು , ಬೋರೆವೆಲ್ಗಳಲ್ಲಿ ನೀರು ಕಡಿಮೆಯಾಗುತ್ತಿದೆ. ಮತ್ತು ಅಂತರ್ಜಲ ವೃದ್ಧಿಯಾಗುತ್ತಿಲ್ಲ. ಇದರಿಂದ ರೈತಾಪಿ ವರ್ಗಕ್ಕೆ ವ್ಯವಸಾಯ ಮಾಡಲು ಮತ್ತು ಪ್ರಾಣಿ ಪಕ್ಷಿಗಳಿಗೆ ನೀರು ಉಣಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೆ ಕೆ.ಸಿ.ವ್ಯಾಲಿ ನೀರನ್ನು ತಾಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ, ಸಣ್ಣ ನೀರಾವರಿ ಸಚಿವರು ಮಧ್ಯಪ್ರವೇಶಿಸಿ ತಾಲೂಕಿನ ರೈತ ವರ್ಗಗಕ್ಕೆ ನ್ಯಾಯ ಒದಗಿಸಬೇಕು ಎಂದು ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಗುರುವಾರ ರೈತ ಸಂಘ ಹಾಗು ಹಸಿರು ಸೇನೆ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿಸುವಂತೆ ಆಗ್ರಹಿಸಿ ಧರಣಿ ನಡೆಸಿ , ಮುಖ್ಯ ಮಂತ್ರಿಗಳಿಗೆ ರವಾನಿಸಲು ತಹಶೀಲ್ದಾರ್ ಕಚೇರಿ ಮೂಲಕ ಮನವಿ ಪತ್ರ ಸಲ್ಲಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ನಂಬಿಹಳ್ಳಿ ಶ್ರೀರಾಮರೆಡ್ಡಿ ಮಾತನಾಡಿ ಕೆಸಿ ವ್ಯಾಲಿ ನೀರಿನ ಶುದ್ಧೀಕರಣಕ್ಕೆ ಸುಮಾರು 1500 ಕೋಟಿ ಖರ್ಚು ಮಾಡಿದರೂ ಸಹ ನಮ್ಮ ತಾಲೂಕಿನ ಕೆರೆಗಳಿಗೆ ನೀರು ಹರಿಸಿಲ್ಲ. ಕೂಡಲೇ ಕೆಸಿ.ವ್ಯಾಲಿ ನೀರನ್ನು ನಮ್ಮ ತಾಲೂಕಿನ ಕೆರೆಗಳಿಗೆ ಹರಿಸಬೇಕು ಎಂದು ಒತ್ತಾಯಿಸಿದರು. ಈ ಹಿಂದೆ ಸಿದ್ದರಾಮಯ್ಯ ರವರು ಸುಮಾರು ಕೋಟಿ ಖರ್ಚು ಮಾಡಿ ಎತ್ತಿನಹೊಳೆ ನೀರಿನ ಕಾಮಗಾರಿಗಾಗಿ ಗುದ್ದಲಿ ಪೂಜೆಯನ್ನು ಮಾಡಿದರೂ ಆದರೆ ಇದುವರೆಗೂ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಗ್ರಾಮಾಂತರ ಜಿಲ್ಲೆಗಳಿಗೆ ಇನ್ನು ನೀರು ಬಂದಿಲ್ಲ, ಮುಂದಿನ ದಿನಗಳಲ್ಲಿ ನಮ್ಮ ತಾಲೂಕಿಗೆ ಎತ್ತಿನಹೊಳೆ ನೀರನ್ನು ಹರಿಸಲು ಹೋರಾಟಮಾಡುವುದಾಗಿ ಎಚ್ಚರಿಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲವಕುಂಟೆ ಬೈರಾರೆಡ್ಡಿ ಮಾತನಾಡಿದರು. ರೈತ ಮುಖಂಡರಾದ ನಾಗಭೂಷಣ, ಎಚ್.ಎಸ್.ರಮೇಶ್, ಪಾಪರೆಡ್ಡಿ, ಮಲ್ಲಿ, ಮೋಹನ್, ವೆಂಕಟರಮಣಪ್ಪ, ಅಸ್ಲಾಂಪಾಷ, ಶ್ರೀಧರ್, ಬಿ.ಎನ್.ಚಲಪತಿ, ಕೆ.ಶ್ರೀನಿವಾಸರೆಡ್ಡಿ, ವಿ.ಚಂಗಲರಾಯಪ್ಪ, ಯರ್ರಕೋಟಪ್ಪ, ನರಸಿಂಹಪ್ಪ, ಜಿ.ವೆಂಕಟರಮಣಪ್ಪ , ಕದಿರಂಪಲ್ಲಿ ಶಶಿ ಇದ್ದರು.