ಕಾಂತಾವರದ ಕುಟುಂಬಕ್ಕೆ ಅನಿತಾ ಡಿಸೋಜರಿಂದ ಗಣೇಶ ಚತುರ್ಥಿಯ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

JANANUDI.COM NETWORK

ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಅರ್ಥಿಕವಾಗಿ ತೀರಾ ಹಿಂದುಳಿದ ಮನೆಯೊಂದಕ್ಕೆ ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸಿನ ಅಧ್ಯಕ್ಷರಾದ “ಅನಿತಾ ಡಿಸೋಜ ಬೆಳ್ಮಣ್” ಭೇಟಿ ನೀಡಿ ಗಣೇಶ ಚತುರ್ಥಿಯ ಪ್ರಯುಕ್ತ ದಿನಬಳಕೆ ವಸ್ತುಗಳು ಮತ್ತು ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು. ಹಾಗೂ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗೊಂಡು ದುಡಿಯಲಾಗದೇ ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿರುವ ಬೋಳ ಗ್ರಾಮದ “ಸಂದೀಪ್” ಅವರ ಮನೆಗೂ ಭೇಟಿ ನೀಡಿ ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯರಾದ ಕಾರ್ಕಳ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ, ಜಯಕರ ಕೋಟ್ಯಾನ್, ಸಚಿನ್ ಕುಲಾಲ್, ಸಂತೋಷ್ ಕುಲಾಲ್ ಉಪಸ್ಥಿತರಿದ್ದರು.