ಕಾವೇರಿ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯಕ್ಕೆ ಒಕ್ಸಿಜನ್ ಕಾನ್ಸಂಟ್ರೆಟರ್ ಕೊಡುಗೆ

ಕುಂಭಾಶಿ ಶ್ರೀ ವೆಂಕಟರಮಣ ಪ್ರಭು ಚಾರಿಟೇಬಲ್ ಟ್ರಸ್ಟ್, ಕಾವೇರಿ ಆಸ್ಪತ್ರೆ ಹಾಗೂ ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯಕ್ಕೆ “ಒಕ್ಸಿಜನ್ ಕಾನ್ಸಂಟ್ರೆಟರ್” ಹಸ್ತಾಂತರಿಸಲಾಯಿತು.
ರೋಟರಿ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ಕಾರ್ಯದರ್ಶಿ ಸಚಿನ್ ನಕ್ಕತ್ತಾಯ,ಮಾಜಿ ಅಧ್ಯಕ್ಷರುಗಳಾದ ಶಾಂತರಾಮ ಪ್ರಭು, ಡಾ. ವಿಶ್ವೇಶ್ವರ್ ಹಾಗೂ ಚಿತ್ರಕೂಟದ ಡಾ. ರಾಜೇಶ್ ಬಾಯರಿ, ಡಾ. ಅನುಲೇಖಾ ಬಾಯರಿ ಉಪಸ್ಥಿತರಿದ್ದರು.