ಭಾರತದ ಇಂದಿನ ದುಸ್ಥಿತಿಗೆ ಹಿಂದುತ್ವವಾದವೆ : ರಾಹುಲ್ ಗಾಂಧಿ

JANANUDUI.COM NETWORK

ನವದೆಹಲಿ 18-12-2021): ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ, ನೋವು ಮತ್ತು ದುಃಖಕ್ಕೆ ‘ಹಿಂದುತ್ವವಾದ ಹಿಂದುತ್ವವಾದಗಳೆ’ ನೇರ ಹೊಣೆ ಎಂದು ‘ಹಿಂದುತ್ವವಾದಿಗಳ’ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಮೇಥಿಯಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇಂದು ನಮ್ಮ ದೇಶ ಹಣದುಬ್ಬರ, ನೋವು, ದುಃಖಕ್ಕೆ ಒಳಗಾಗಿದ್ದು, ಅದಕ್ಕೆ ಹಿಂದುತ್ವವಾದಿಗಳ ಕೊಡುಗೆಯಾಗಿದೆ. “ಇಂದು, ಹಿಂದೂಗಳು ಮತ್ತು ಹಿಂದುತ್ವವಾದಿಗಳ ನಡುವೆ ಯುದ್ಧ ಏರ್ಪಟ್ಟಿದೆ. ಹಿಂದೂಗಳು ಸತ್ಯಾಗ್ರಹವನ್ನು ನಂಬಿದರೆ, ಹಿಂದುತ್ವವಾದಿಗಳು “ಸತ್ತಾಗ್ರಹ” (ರಾಜಕೀಯ ದುರಾಸೆ) ಯನ್ನು ನಂಬುತ್ತಾರೆ ಎಂದು ಅವರು ಹೇಳಿದರು.
ರಾಹುಲ್ ಗಾಂಧಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಂದು ಅಮೇಥಿಯಲ್ಲಿ 6 ಕಿ.ಮೀ ದೂರ ಪಾದಯಾತ್ರೆ ನಡೆಸಿದರು. 2019 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸೋತ 2.5 ವರ್ಷಗಳ ನಂತರ ಅಮೇಥಿಗೆ ರಾಹುಲ್ ಗಾಂಧಿ ಅವರ ಮೊದಲ ಭೇಟಿ ಇದಾಗಿದೆ.


ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ಪ್ರಧಾನಿಯವರು ಗಂಗಾ ನದಿಯಲ್ಲಿ ಸ್ನಾನ ಮಾಡುವಾಗ ಸಮಸ್ಯೆಗಳ ಬಗ್ಗೆ ಅವರು ಮೌನವಾಗಿರುತ್ತಾರೆ. ಉದಾಹರಣೆಗೆ ನಿರುದ್ಯೋಗ. ಇಂದು ದೇಶದಲ್ಲಿ ಏಕೆ ಜನರಿಗೆ ಉದ್ಯೋಗ ಸಿಗುತ್ತಿಲ್ಲ? ಹಣದುಬ್ಬರ ವೇಗವಾಗಿ ಯಾಕೆ ಹೆಚ್ಚುತ್ತಿದೆ?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಪ್ರಮುಖ ವಿಷಯಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರ ಮಾರ್ಕೆಟಿಂಗ್ನಲ್ಲಿ ನಿರತವಾಗಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು ಲಡಾಕ್ ನಲ್ಲಿ ಚೀನಾ ಭಾರತದ ನೆಲವನ್ನು ಕಿತ್ತು ತನ್ನದಾಗಿಸಿಕೊಂಡಿದೆ. ಆದರೆ ಪ್ರಧಾನಿ ಏನನ್ನೂ ಹೇಳುವುದಿಲ್ಲ.. ಭೂಮಿ ವಶಪಡಿಸಿಕೊಂಡಿಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಸ್ವಲ್ಪ ಸಮಯದ ನಂತರ, ರಕ್ಷಣಾ ಸಚಿವಾಲಯವು ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳುತ್ತದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ