ಫೈರ್ ಬ್ರಾಂಡ್ ಪ್ರಚೋದನಕಾರಿ ಚೈತ್ರಾ ಕುಂದಾಪುರ ಪೊಲೀಸರ ವಶ

JANANUDI.COM NETWORK


ಕುಂದಾಪುರ: ಫೈರ್ ಬ್ರಾಂಡ್ ಪ್ರಚೋದನಕಾರಿ ಹೇಳಿಕೆ ನೀಡಿ ಕುಖ್ಯಾತಿ ಪಡೆದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಕಲಬುರಗಿಯಲ್ಲಿ ಶಹಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚೈತ್ರಾ ಅವರು ಮಂಗಳವಾರ ನಡೆಯಲಿರುವ ಆಳಂದ ಚಲೋ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಲಬುರಗಿಗೆ ತೆರಳುತ್ತಿದ್ದು, ಈ ವೇಳೆ ಯಾದಗಿರಿ ಮಾರ್ಗವಾಗಿ ಕಲಬುರಗಿಗೆ ಪ್ರಯಾಣಿಸುವಾಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಚೈತ್ರಾ ಮತ್ತು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕಲಬುರಗಿ ಜಿಲ್ಲಾಡಳಿತವು ನಿರ್ಬಂಧ ಹೇರಿತ್ತು. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ. 27 ರಿಂದ ಮಾ. 3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರಿಗೆ ಕಲಬುರಗಿ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ.