
ಚಿನ್ಮಯಿ ಆಸ್ಪತ್ರೆ ಮತ್ತು ರೋಟರಿ ಕುಂದಾಪುರ ದಕ್ಷಿಣ ಇದರ ಸಹಭಾಗಿತ್ವದಲ್ಲಿ “ಉಚಿತ ಮೂತ್ರಪಿಂಡ ತಪಾಸಣಾ ಶಿಬಿರ” ಚಿನ್ಮಯಿ ಆಸ್ಪತ್ರೆಯಲ್ಲಿ ಮಂಗಳೂರಿನ ಖ್ಯಾತ ವೈದ್ಯ ಡಾ. ಸಂತೋಷ ಪೈ ನೇತೃತ್ವದಲ್ಲಿ ಜರುಗಿತು. ಚಿನ್ಮಯಿ ಆಸ್ಪತ್ರೆಯ ಆಡಳಿತ ಪಾಲುದಾರರಾದ ರಾಜೇಂದ್ರ ಕಟ್ಟೆ, ರೋಟರಿ ವಲಯ ಒಂದರ ಸಹಾಯಕ ಗವರ್ನರ್ ಡಾ. ಉಮೇಶ ಪುತ್ರನ್, ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸತ್ಯನಾರಾಯಣ ಪುರಾಣಿಕ, ರೋಟರಿ ಸದಸ್ಯರು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. 40ಕ್ಕೂ ಅಧಿಕ ಮಂದಿ ಈ ಶಿಬಿರದಲ್ಲಿ ಪಾಲ್ಗೊಂಡು, ಇದರ ಸದುಪಯೋಗ ಪಡೆದುಕೊಂಡರು.