ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ – ಅಂತರಾಷ್ಟ್ರೀಯ ಪ್ರಜಾಪ್ರಭುತ್ತ ದಿನಾಚರಣೆ ಅಂಗವಾಗಿ ಭಾರತದಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ 1864 ವಿದ್ಯಾರ್ಥಿಗಳು ಮತ್ತು ಉಪಪ್ರಾಂಶುಪಾಲರಾದ ಶ್ರೀ ಕಿರಣ ಹೆಗ್ಡೆ ಉಪನ್ಯಾಸಕರು, ಅಧ್ಯಾಪಕರು ಭಾಗವಹಿಸಿರುತ್ತಾರೆ. ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂವಿಧಾನದ ಪ್ರತಿಜ್ಞಾ ವಿಧಿಯನ್ನು, ಉಪನ್ಯಾಸಕರಾದ ಶ್ರೀ ಉದಯ ಕುಮಾರ ಶೆಟ್ಟ ಇವರು ನಿರ್ವಹಿಸಿದರು.