ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ. ವೆಂಕಟಶಿವಾರೆಡ್ಡಿ ಬಜೆಟ್‌ಗೆ ಪ್ರತಿಕ್ರಿಯೆ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ

ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ , ಎಲ್ಲರನ್ನು ತೃಪ್ತಿಪಡಿಸಲು ಸಾಧ್ಯವಿಲ್ಲ . ಇದು ಚುನಾವಣಾ ಪೂರ್ವ ಬಜೆಟ್ ಆಗಿದ್ದು, ಬ್ಯಾಲೆನ್ಸ್ ಮಾಡಿದ್ದಾರೆ , ರೈತರಿಗೂ ನೆರವಾಗಿದ್ದಾರೆ , ಆದರೆ ರಾಜ್ಯಕ್ಕೆ ಹೆಚ್ಚಿನ ಯೋಜನೆಗಳನ್ನು ಕೊಟ್ಟಿಲ್ಲ , ಬಜೆಟ್‌ನಲ್ಲಿ ರಾಜ್ಯದ ಕಡೆಗಣನೆ ಕಂಡು ಬರುತ್ತಿದೆ , ಜನರ ನಿರೀಕ್ಷೆಯಷ್ಟು ಕಾರ್ಯಕ್ರಮಗಳನ್ನು ನೀಡಲು ವಿಫಲವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ .