ಕುಂದಾಪುರ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಭೆ

ಮಕ್ಕಳು ಮನೆಯ ಸಂಪತ್ತು. ಆ ಮಕ್ಕಳ ಆಗು ಹೋಗುಗಳನ್ನು ಪೋಷಕರು ಅರಿತುಕೊಳ್ಳಬೇಕು.ಪರಸ್ಪರ ಪ್ರೀತಿ ,ವಿಶ್ವಾಸ ಅವರಲ್ಲಿ ಬೆಳೆಸಬೇಕು ಎಂದು ಉಡುಪಿ ಧರ್ಮ ಪ್ರಾಂತ್ಯದ ಕುಟುಂಬ ಆಯೋಗದ ನಿರ್ದೇಶಕರು ಹಾಗೂ ಆಪ್ತ ಸಮಾಲೋಚರಾದ ಲೆಸ್ಲಿ ಆರೋಜಾರವರು ಹೇಳಿದರು.

ಸೈಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ರಕ್ಷಕ-ಶಿಕ್ಷಕ ಸಭೆಯಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಕುಟುಂಬ ಆಯೋಗದ ನಿರ್ದೇಶರು ಹಾಗೂ ಆಪ್ತ ಸಮಾಲೋಚಕರಾದ ಶ್ರೀ ಲೆಸ್ಲಿ ಆರೋಜಾರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಕರ್ತವ್ಯವಿದೆ. ಯವ್ವನ ಕಾಲಿಡುತ್ತಿರುವಾಗ ಮಕ್ಕಳ ಕಡೆ ತಮ್ಮ ಗಮನ ಅವಶ್ಯ. ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ನೋಡಿ ಕೊಳ್ಳಬೇಕು ಎಂದು ಅನೇಕ ಅಗತ್ಯ ಮಾಹಿತಿಗಳನ್ನು ಪೋಷಕರಿಗೆ ತಿಳಿಸಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆಗಳ ಸಂಚಾಲಕರು,ಸ್ಥಳೀಯ ಚರ್ಚಿನ ಧರ್ಮ ಗುರುಗಳು ಆಗಿರುವ ಅತೀ ವಂದನೀಯ ಫಾದರ್ ಸ್ಟ್ಯಾನಿ ತಾವರೋ ರವರು ವಹಿಸಿದ್ದು, ಪೋಷಕರಿಗೆ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ,ಅವರ ಊಟೋಪಚಾರ ಕಡೆ ತಮ್ಮ ಗಮನವಿರಲಿ ಎನ್ನುತ್ತ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹೆಚ್ಚು ತಯಾರಿ ಅಗತ್ಯ. ನಮ್ಮ ವಿದ್ಯಾ ಸಂಸ್ಥೆಯು ಸ್ಪರ್ಧಾತ್ಮಕ ಪರೀಕ್ಷೆ ಗೆ ಎಲ್ಲಾ ರೀತಿಯ ತರಬೇತಿ ನೀಡುತ್ತದೆ. ತಮ್ಮ ಮಕ್ಕಳನ್ನು ಕಳಿಸಿ ಪ್ರೋತ್ಸಾಹಿಸಿ ಎಂದು ಹೇಳಿದರು. ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿರುವ ರೇಷ್ಮಾ ಫೆರ್ನಾಂಡಿಸ್ ರವರು ಉಪಸ್ಥಿತರಿದ್ದು, ಪೋಷಕರಿಗೆ ಕಾಲೇಜಿನ ನಿಯಮಗಳನ್ನು ಹಾಗೂ ವಿದ್ಯಾರ್ಥಿಗಳು ಅವುಗಳನ್ನು ಸರಿಯಾಗಿ ಪಾಲಿಸುವ ಕುರಿತು ಮಾಹಿತಿ ನೀಡಿ, ಪೋಷಕರಿಗೆ ಧನ್ಯವಾದಗಳನ್ನು ಹೇಳಿದರು.

ಉಪ ಪ್ರಾಂಶುಪಾಲರಾದ ಮಂಜುಳಾ ನಾಯರ್ ,ಕಾರ್ಯಕ್ರಮದ ಸಂಯೋಜಕರು, ಅರ್ಥ ಶಾಸ್ತ್ರ ಉಪನ್ಯಾಸಕಿಯರ ಪ್ರಾರ್ಥನೆಯೊಂದಿಗೆ, ಕನ್ನಡ ಉಪನ್ಯಾಸಕ ನಾಗರಾಜ್ ಶೆಟ್ಟಿ ಸ್ವಾಗತಿಸಿದರು. ಸಂಯೋಜಕರಾದ ಪ್ರೀತಿ ಕ್ರಾಸ್ತಾರವರು ವಂದಿಸಿ, ರಸಾಯನ ಶಾಸ್ತ್ರದ ಉಪನ್ಯಾಕಿ ಉಷಾ ಕಾರ್ಯಕ್ರಮ ನಿರೂಪಿಸಿದರು.