ರಾಜ್ಯದಲ್ಲಿ ಕರಾವಳಿ ಸೇರಿದಂತೆ  ಹಲವೆಡೆ ಏಪ್ರಿಲ್ 6ರ ತನಕ ಭಾರೀ ಮಳೆ ಸಾಧ್ಯತೆ

JANANUDI.COM NETWORK

ಬೆಂಗಳೂರು; ರಾಜ್ಯದಲ್ಲಿ ಮತ್ತೆ ಮಳೆ ಬರುವ ಮುನ್ಸೂಚನೆದೊರೆತಿದೆ. ರಾಜ್ಯದ  ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 6 ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ  ಮಾಹಿತಿ ದೊರಕಿದೆ.  

    ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಬೆಂಗಳೂರು, ಉತ್ತರ ಕನ್ನಡ,ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.  

   ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಕೂಡ ಮಳೆಯಾಗುವ ಸಾಧ್ಯತೆಯಿದೆ.