ಕರಾವಳಿಯಲ್ಲಿ ಮಳೆಯ ಆರ್ಭಟ ನಾಳೆಯೂ ಶಾಲೆ ಕಾಲೇಜುಗಳಿಗೆ ರಜೆ -ನೆರೆಯ ಭೀತಿ ಕಾಡುತ್ತಿದೆ

JANANUDI.COM NETWORK  EDITOR : BERNARD D’COSTA

ಕುಂದಾಪುರ:  ಕರಾವಳಿ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆಯಾಗುವ ಹವಾಮಾನ ವರದಿಯ ಮುನ್ಸೂಚನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 6 ರಂದು ಬುಧವಾರ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು 6  ರಂದು ರಜೆ ಘೋಷಣೆ ಮಾಡಲಾಗಿದೆ.

ಅವ್ಯಾಹತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಸಾರಲಾಗಿತ್ತು. ಇದೀಗ ನಾಳೆಯೂ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಕೆಳಗಡೆ ಕಾಣುವ ಫೋಟೊಗಳು ಬಾರ್ಕೂರು ಪ್ರದೇಶದ ಫೋಟೊಗಳು

ಫೋಟೊಗಳು : ರೋಶನ್ ಡಿಆಲ್ಮೇಡಾ, ಬಾರ್ಕೂರು