ಹೆಬ್ರಿ ಅಮೃತ ಭಾರತಿ ವಿದ್ಯಾಸಂಸ್ಥೆ ಎಸ್ ಎಸ್ ಎಲ್ ಸಿ. ಪರೀಕ್ಷಾ ಪೂರ್ವ ತಯಾರಿ ಶಿಬಿರ

JANANUDI.COM NETWORK

ಅಮೃತ ಭಾರತಿ ವಿದ್ಯಾಸಂಸ್ಥೆ ಹೆಬ್ರಿ ಇಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಕುರಿತ ಮಾಹಿತಿ ಶಿಬಿರವನ್ನು ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿಬಿ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು ನಡೆಸಿಕೊಟ್ಟರು.
ಈ ಶಿಬಿರವನ್ನು ಕುಂದಾಪುರ ತಾಲೂಕು ಖಾಸಗಿ ಶಿಕ್ಷಕರ – ಉಪನ್ಯಾಸಕರ ಸಂಘ ಮತ್ತು ಅಮೃತ ಭಾರತಿ ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಅಪರ್ಣಾ ಆಚಾರ್ಯ ಉಪಸ್ಥಿತರಿದ್ದರು.
ಅಮೃತ ಭಾರತಿ ವಿದ್ಯಾಸಂಸ್ಥೆಯ ಶಿಕ್ಷಕರಾದ ಶ್ರೀ ಮಹೇಶ್ ಹೈಕಾಡಿ ಇವರು ಸಂಪನ್ಮೂಲ ವ್ಯಕ್ತಿ ಗಳಾದ ಕೃಷ್ಣಮೂರ್ತಿಯವರ ಪರಿಚಯವನ್ನು ಮಾಡಿ, ಕಾರ್ಯಕ್ರಮವ ನಿರ್ವಹಣೆ ಮಾಡಿದರು.