HOLY ROSARY CHURCH, KUNDAPUR – 450 th JUBILEE SOUVENIR 2021

ಫಿಟ್ ಇಂಡಿಯಾ ಪ್ರೀಡಂ ರನ್ ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮ


ಅಕ್ಟೋಬರ್ 30ರಂದು ಭಂಡಾರ್ಕಾರ್ಸ್ ಕಾಲೇಜಿನ ಏನ್ ಎಸ್ ಎಸ್ ಘಟಕ , ಮಂಗಳೂರಿನ ಯಾನೆಪೋಯ ದಂತ ವಿಜ್ಞಾನ ಕಾಲೇಜಿನ ಏನ್ ಏಸ್ ಎಸ್ ಘಟಕ, ನಾವುಂದ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ನಾವುಂದ ಇವರ ಸಹಯೋಗದಲ್ಲಿ ಫಿಟ್ ಇಂಡಿಯಾ ಫ್ರಿಡಂ ರನ್ 3.0 ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮವು ನಾವುಂದ ಗ್ರಾಮ ಪಂಚಾಯತ್ ಪರಿಸರದಲ್ಲಿ ನಡೆಯಿತು.
ಸುಮಾರು 200 ಏನ್ ಎಸ್ ಎಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಚಗೊಳಿಸಿದರು.
ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಹಾಗೂ ಸ್ಥಾಪಕ ಅದ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಹಾಗೂ ಎಲ್ಲಾ ಲಯನ್ಸ್ ಸದಸ್ಯರು, ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಶಿಧರ ಶೆಟ್ಟಿ ಸ್ವಾಗತಿಸಿದರು, ಕಾರ್ಯದರ್ಶಿ ದಿನೇಶ್ ಆಚಾರ್ ವಂದಿಸಿದರು.ಯೆನೆಪೋಯ ಕಾಲೇಜಿನ ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ಡಾ. ಇಮ್ರಾನ್, ಭಂಡಾರ್ಕರ್ಸ್ ಕಾಲೇಜಿನ ಏನ್ ಎಸ್ ಎಸ್ ಯೋಜಾನಾಧಿಕಾರಿಗಳಾದ ರಾಮಚಂದ್ರ ಆಚಾರ್ ಹಾಗೂ ಅರುಣ್ ಎ ಎಸ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ|ಶುಭಕಾರಾಚಾರಿ ಹಾಗೂ ಉಪನ್ಯಾಸಕರಾದ ಅಣ್ಣಪ್ಪ ಪೂಜಾರಿ, ಶರಣ್ ಹಾಗೂ ಸಂತೋಷ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕುಂದಾಪುರದಲ್ಲಿ ವಿದುಷಿ ಸುಜಾತ ಗುರವ್ ಹಿಂದುಸ್ಥಾನಿ ಗಾಯನ ನಡೆಯಲಿದೆ


ವಿದುಷಿ ಶ್ರೀಮತಿ ಸುಜಾತ ಗುರವ್ ಅವರ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ನ. 6 ರಂದು ಆದಿತ್ಯವಾರ ಕುಂದಾಪುರದ ಪಾರಿಜಾತ ಹೋಟೆಲ್‍ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.
ಕುಂದಾಪುರದ ಸಂಗೀತ ಭಾರತಿ ಟ್ರಸ್ಟ್ (ರಿ.) ಮತ್ತು ಆರ್. ಕೆ. ಸಂಜೀವ ರಾವ್ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್, ಖಂಬದಕೋಣೆ ಇವರ ಜಂಟಿ ಆಶ್ರಯದಲ್ಲಿ ಶ್ರೀಮತಿ ಸುಶೀಲಾ ಸಂಜೀವ ರಾವ್, ಶ್ರೀಮತಿ ನಿರ್ಮಲಾ ಪ್ರಕಾಶ್ ರಾವ್ ಮತ್ತು ಶ್ರೀ ಪ್ರಕಾಶ್ ರಾವ್ ಸ್ಮಾರಕ ಹಿಂದುಸ್ಥಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮಕ್ಕೆ ಸಂಗೀತಾಸಕ್ತರನ್ನ ಆಹ್ವಾನಿಸಲಾಗಿದೆ.
ತಬಲಾದಲ್ಲಿ ಟಿ. ರಂಗ ಪೈ, ಮಣಿಪಾಲ, ಹಾರ್ಮೋನಿಯಂನಲ್ಲಿ ಶಶಿಕಿರಣ, ಮಣಿಪಾಲ ಸಹಕರಿಸಲಿದ್ದಾರೆ. ಶ್ರೀಮತಿ ಸುಜಾತ ಗುರವ್ ಪ್ರಸಿದ್ಧ ಸಂಗೀತಕಾರ ಸಂಗಮೇಶ್ವರ ಗುರವ್ ಅವರ ಪುತ್ರಿಯಾಗಿದ್ದಾರೆ. ಇವರ ಸಹೋದರ ಕೈವಲ್ಯ ಕುಮಾರ್ ಗುರವ್ ಸಹ ಇವರ ಗುರುವಾಗಿದ್ದಾರೆ.

ಟಿಪ್ಪರ್- ಬಸ್ ಡಿಕ್ಕಿ; ಮೂವರು ಸ್ಥಳದಲ್ಲೇ ಮೂವರ ಸಾವು

ರಾತ್ರಿ ಸಂಚಾರ ಸುರಕ್ಷತೆಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆಗೆ ಪೊಲೀಸರ ಜಾಗೃತಿ

ಕುಂದಾಪುರ ರೆಡ್ ಕ್ರಾಸನಿಂದ ವಿಶ್ವ ಪರಿಸರ ದಿನಾಚರಣೆ

ಮಿಲಾಗ್ರೆಸ್ ನರ್ಸಿಂಗ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನ/INTERNATIONAL YOGA DAY CELEBRATED AT MILAGRES COLLEGE OF NURSING

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಆಶ್ರಯದಲ್ಲಿ ಪರಿಸರ ದಿನಾಚರಣೆ

ಬಾರ್ಕೂರು ನ್ಯಾಷನಲ್ ಹೈಸ್ಕೂಲ್‌ ; ಸ್ವಾಮಿ ಪುರುಷೋತ್ತಮಾನಂದ ಜಿ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ’ಪ್ರತಿಭಾ ಪುರಸ್ಕಾರ’

ಬ್ಯಾಂಕ್ ಆಫ್ ಬರೋಡಾ ‘bob Golden Goal Deposit Scheme’ ಅನ್ನು ಪರಿಚಯಿಸಿದೆ – 555 ದಿನಗಳ ಅವಧಿಗೆ ವಾರ್ಷಿಕ 7.40% ವರೆಗೆ ಬಡ್ಡಿದರ

Bank of Baroda Introduces the ‘bob Golden Goal Deposit Scheme’ offering Interest Rates of up to 7.40% p.a. for a tenor of 555 Days

ಜೂನ್ 28 ರಂದು ಆನೆಗುಡ್ಡೆಯಲ್ಲಿ 20ನೇ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು: ‘ಎವಿಡೆನ್ಸಿಯಾ 2026’ ಸಾಕ್ಷ್ಯ ಆಧಾರಿತ ಹೋಮಿಯೋಪತಿ ಸಂಶೋಧನೆಯನ್ನು ಬಲಪಡಿಸುತ್ತದೆ/ Mangaluru: ‘EVIDENCIA 2026’ strengthens evidence-based homoeopathic research