

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ರಜತಾದ್ರಿ ಮಣಿಪಾಲ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಕಾರ್ಕಳ ಇವರ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ U14 ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ತುಳಸಿ ವಿದ್ಯಾ ಮಂದಿರದ ವಿದ್ಯಾರ್ಥಿಗಳಾದ ಸಾಕ್ಷರ್ ಶೆಟ್ಟಿ ( 8th ) ಹಾಗೂ ಆಶಿಕ್ ( 6th ) ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದು ನಮ್ಮ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರಿಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ – ಶಿಕ್ಷಕೇತರ ವೃಂದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.











































