ಕುಂದಾಪುರ: ತಮ್ಮ ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿರುವಾಗ ರಸ್ತೆ ಅಪಘಾತ ಒಂದರಲ್ಲಿ ಮೃತಪಟ್ಟ ಕಂಚುಗೋಡು ಗ್ರಾಮದ ನಿವಾಸಿ ಹಾಗೂ ವಾಹನದ ಮಾಲೀಕ ಶ್ರೀ ನಾಗರಾಜ್ ಇವರ ಮೋಟಾರ್ ವಾಹನ ಪಾಲಿಸಿಯಲ್ಲಿ ಅಂತರ್ಗತವಾದ ಮರಣ ಸಂಬಂಧ ವಿಮಾ ಪರಿಹಾರ ಮೊತ್ತವಾದ ರೂ. 15,00,000/- ನ್ನು ಭಾರತ ಸರಕಾರದ ಉದ್ಯಮವಾದ ನ್ಯಾಷನಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಇದರ ಕುಂದಾಪುರ ಶಾಖೆಯಲ್ಲಿ ಇತ್ತೀಚೆಗೆ ಮೃತರ ಕಾನೂನು ಬದ್ಧ ವಾರಿಸುದಾರರಾದ ಪತ್ನಿ ಶ್ರೀಮತಿ ಜ್ಯೋತಿ, ತಾಯಿ ಶ್ರೀಮತಿ ಕುಪ್ಪುಹಾಗೂ ಮಕ್ಕಳಿಗೆ ಸಂಸ್ಥೆಯ ಶಾಖಾ ಪ್ರಬಂಧಕರಾದ ಶ್ರೀ ಕೆ ನಾಗೇಂದ್ರ ಭಟ್ ಹಾಗೂ ಇತರ ಅಧಿಕಾರಿಗಳು ಹಸ್ತಾಂತರಿಸಿದರು.
HOLY ROSARY CHURCH, KUNDAPUR – 450 th JUBILEE SOUVENIR 2021
ಶ್ರೀನಿವಾಸಪುರ ಪಟ್ಟಣದ ಎಸ್ ಎಫ್ ಎಸ್ ಶಾಲೆಯಲ್ಲಿ ಸಿ ಆರ್ ಸಿ ಪ್ರತಿಭಾ ಕಾರಂಜಿ ಕಾರ್ಯಕ್ರಮ
2024 ನೇ ಸಾಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶ್ರೀನಿವಾಸಪುರದ ಎಸ್ ಎಫ್ ಎಸ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಪುರಸಭೆ ಅಧ್ಯಕ್ಷರಾದ ಬಾಸ್ಕರ್,ಪುರಸಭೆ ಮುಖ್ಯಾಧಿಕಾರಿಗಳಾದ ಸತ್ಯನಾರಾಯಣ, ಎಸ್ ಎಫ್ ಎಸ್ ಶಾಲೆಯ ಪ್ರಾಂಶುಪಾಲರಾದ ಸ್ಯಾಂಟಿ ಕುರಿಯನ್ ಪ್ರಮುಖ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟನೆ ಮಾಡಿದರು.
ಉದ್ಘಾಟನೆ ನಂತರ ಪುರಸಭೆ ಅಧ್ಯಕ್ಷಕರಾದ ಶ್ರೀಯುತ ಭಾಸ್ಕರ್ ಮಾತನಾಡುತ್ತಾ.. “ಮಕ್ಕಳೆಲ್ಲರು ಗೆಲ್ಲಬೇಕೆಂದು” ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಬಂದಿದ್ದೀರಾ..ಎಲ್ಲಾ ಮಕ್ಕಳು ತಮ್ಮ ಪ್ರತಿಭೆಯನ್ನು ಉತ್ತಮವಾಗಿ ಪ್ರದರ್ಶನ ಮಾಡಿ ನಿಮಗೆಲ್ಲ ಒಳ್ಳೆಯದಾಗಲಿ” ಎಂದು ಎಲ್ಲಾ ಮಕ್ಕಳಿಗೆ ಶುಭ ಕೋರಿದರು.
ಹಾಗೆ ಎಸ್ ಎಫ್ ಎಸ್ ಶಾಲೆಯ ಪ್ರಾಂಶುಪಾಲರಾದ ಸ್ಯಾಂಟಿ ಕುರಿಯನ್ ಮಾತನಾಡುತ್ತಾ.. ನೀರಿನ ಕಾರಂಜಿಯಂತೆ ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಚೆಲ್ಲಬೇಕು.ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ರಂಗಾ ರಸ್ತೆ ಪ್ರೌಢಶಾಲೆಯ ನಿರ್ಮಲ್ ಕುಮಾರ್ ಸ್ವಾಗತ ಕೋರಿದರು.ಸಿಪಿ ಜಯಲಕ್ಷ್ಮಿ ಯವರು ನಿರೂಪಣೆ ಮಾಡಿದರು. ಸಿ ಆರ್ ಪಿ ರಾಧಾಕೃಷ್ಣ ವಂದನಾರ್ಪನೆ ತಿಳಿಸಿದರು. ಇಲಾಖೆಯಿಂದ ಬಿ ಆರ್ ಪಿ ವೆಂಕಟಾಚಲಪತಿ ಭಾಗವಹಿಸಿ ಶುಭ ಕೋರಿದರು”
ಕೋಲಾರ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ ಕ್ರೀಡಾಕೂಟ – ಸದೃಢ ಆರೋಗ್ಯಕ್ಕೆ ಪಠ್ಯದೊಂದಿಗೆ ಕ್ರೀಡೆಯೂ ಅಗತ್ಯ-ಜಿಲ್ಲಾಧಿಕಾರಿ ಅಕ್ರಂಪಾಷ
ಕೋಲಾರ:- ಸದೃಢ ಆರೋಗ್ಯಕ್ಕಾಗಿ ಮಕ್ಕಳಿಗೆ ಪಠ್ಯದಷ್ಟೇ ಕ್ರೀಡೆಗೂ ಒತ್ತು ನೀಡುವ ಅಗತ್ಯವಿದ್ದು, ವಿದ್ಯಾರ್ಥಿಗಳನ್ನು ಮಾನಸಿಕವಾಗಿಯೂ ಗಟ್ಟಿಗೊಳಿಸಲು ಆಟೋಟಗಳು ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ಅಭಿಪ್ರಾಯ ಪಟ್ಟರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕೋಲಾರ ಜಿಲ್ಲಾ ಮಟ್ಟದ 14-17 ವರ್ಷ ವಯೋಮಿತಿಯೊಳಗಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೊಟವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು,
ಈ ಕ್ರೀಡಾಕೂಟವನ್ನು ನೋಡುತ್ತಿದ್ದರೆ ನನ್ನ ಬಾಲ್ಯದ ವಿದ್ಯಾರ್ಥಿ ದೆಸೆಯಲ್ಲಿನ ಕ್ರೀಡಾ ಚಟುವಟಿಕೆಗಳು ನನೆಪಿಗೆ ಬರುತ್ತದೆ ಎಂದ ಅವರು, ಕ್ರೀಡೆಗಳಲ್ಲಿ ಸೋಲು ಗೆಲವು ಸಹಜ ಪ್ರಕ್ರಿಯೆ, ಸೋಲುಂಟಾದರೆ ಕ್ರೀಡೆಗಳಲ್ಲಿ ಭಾಗವಹಿಸುವಿಕೆಯಿಂದ ಹಿಂಜರಿಯುವಂತಾಗಬಾರದು ಇಂದಿನ ಸೋಲು ಮುಂದಿನ ಗೆಲುವಿನ ಸೋಪಾನ ಎಂದು ತಿಳಿದು ಮುಂದುವರೆಯಬೇಕೆಂದು ಕರೆ ನೀಡಿದರು,
ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳಿ, ಧೈರ್ಯದಿಂದ ಯಾವೂದೇ ಗೊಂದಲಕ್ಕೆ ಒಳಗಾಗದೆ ಭಾಗವಹಿಸಿ ನಿಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತನ್ನಿ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಅಂಕಗಳಿಕೆಗೆ ಮಾತ್ರ
ಗಮನ ಬೇಡ
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ಇಂದಿನ ಪೋಷಕರು ಮಕ್ಕಳ ಅಂಕ ಗಳಿಕೆಯ ಕಡೆ ಮಾತ್ರವೇ ಗಮನಹರಿಸುವುದರಿಂದ ಇಂದಿನ ಮಕ್ಕಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಲು ಕಾರಣವಾಗಿದೆ, ಕ್ರೀಡೆಗಳು ಓದಲು ಆತ್ಮಸ್ಥೈರ್ಯ ತುಂಬುತ್ತವೆ ಎಂಬುದನ್ನು ಮರೆಯಬಾರದು ಎಂದರು.
ಸದಾ ನಾಲ್ಕು ಗೋಡೆಗಳ ನಡುವೆ ಓದಿಗೆ ಸೀಮಿತರಾದರೆ ಅವರಲ್ಲಿ ಆಸಕ್ತಿ ಕಡಿಮೆಯಾಗುತ್ತದೆ ಎಂಬ ಕಾರಣದಿಂದಲೇ ಸಮಗ್ರ ಶಿಕ್ಷಣದ ಭಾಗವಾಗಿ ಕ್ರೀಡೆಗಳಿಗೂ ಆದ್ಯತೆ ನೀಡಲಾಗಿದೆ ಎಂದ ಅವರು, ಮಕ್ಕಳು ಕ್ರೀಡೆ, ವ್ಯಾಯಾಮ ಮರೆಯಬಾರದು ಎಂದರು.
ಕ್ರೀಡೆಗಳಲ್ಲಿ ತೀರ್ಪುಗಾರರ ಜವಾಬ್ದಾರಿ ಹೆಚ್ಚಿನದಾಗಿದೆ, ನೀವು ನಿಷ್ಪಕ್ಷಪಾತ ತೀರ್ಪು ನೀಡಿ, ಯಾವುದೇ ಗೊಂದಲಕ್ಕೆ ಅವಕಾಶ ನೀಡದಿರಿ ಎಂದು ಮನವಿ ಮಾಡಿ, ಮಕ್ಕಳು ಕ್ರೀಡೆಗಳಲ್ಲಿ ಗೆಲುವು,ಸೋಲಿನ ಕುರಿತು ಚಿಂತಿಸದೇ ಛಲದಿಂದ ಆಟವಾಡಿ ಎಂದು ಕಿವಿಮಾತು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿದೇಶಕಿ ಆರ್.ಗೀತಾ ಮಾತನಾಡಿ, ಪ್ರಸಕ್ತಸಾಲಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ ಬಾಲಕಿಯರ ಕ್ರೀಡಾಕೂಟದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ನಿಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸ ಬೇಕು, ವಿದ್ಯಾರ್ಥಿಗಳಿಗೆ ಶಿಕ್ಷಣವು ಎಷ್ಟು ಮುಖ್ಯವೋ ಕ್ರೀಡೆಗಳು ಸಹ ಅಷ್ಟೆ ಮುಖ್ಯ ಹಾಗಾಗಿ ಕ್ರೀಡೆಗಳಿಂದ ಮಾನಸಿಕ ಒತ್ತಡಗಳಿಂದ ಮುಕ್ತರಾಗಿ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವನ್ನು ಸಧೃಡವಾಗಿ ಕಾಪಾಡಿ ಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಸುವರ್ಣ ಸೆಂಟ್ರಲ್ ಶಾಲಾ ಮಕ್ಕಳಿಂದ ಪ್ರಾರ್ಥನೆ ಹಾಗೂ ನಾಡಗೀತೆಗಳಾದವು ಶಿಕ್ಷಕರಾದ ಡೇವೀಡ್ ಅವರ ನೇತ್ರತ್ವದಲ್ಲಿ ಬ್ಯಾಂಡ್ ಸೆಟ್ ನುಡಿಸಲಾಯಿತು, ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಕ್ರೀಡಾಪಟುಗಳಿಗೆ ಕ್ರೀಡಾ ಪ್ರತಿಜ್ಞೆ ಭೋಧಿಸಿದರು.
ಜಿಲ್ಲಾಧಿಕಾರಿಗಳು ಬಲೂನ್ ಹಾರಿ ಬಿಡುವ ಮೂಲಕ ಹಾಗೂ ಕ್ರೀಡಾ ಜ್ಯೋತಿ ಸ್ವೀಕಾರದ ಮೂಲಕ ಕ್ರೀಡೆಗಳಿಗೆ ಚಾಲನೆ ನೀಡಿದರು,
ವೇದಿಕೆಯಲ್ಲಿ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಚೌಡಪ್ಪ, ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣಪ್ಪ,ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳಾದ ಎಂ.ಮಂಜುನಾಥ್, ಹೆಚ್.ಶಿವಕುಮಾರ್, ಅಪ್ಪೇಗೌಡ, ವಿ.ಮುರಳಿಮೋಹನ್, ಆಂಜನೇಯ, ಕೆ.ನಾರಾಯಣರೆಡ್ಡಿ, ಆರ್.ನಾಗರಾಜ್, ಸಂತೋಷ ಕುಮಾರ್, ಸತೀಶ್ಕುಮಾರ್, ಮಾರ್ಕೋಂಡಪ್ಪ ಮುಂತಾದವರು ಉಪಸ್ಥಿತರಿದ್ದರು.
ರೈತರು ಪಡೆದುಕೊಂಡ ಕೃಷಿ ಸಾಲ ಸಕಾಲಕ್ಕೆ ಪಾವತಿಸಿಸಿದರೆ ಇನ್ನೂ ಹೆಚ್ಚಿನ ರೈತರಿಗೆ ಸಾಲ ನೀಡಲು ಸಾಧ್ಯ- ದಿಂಬಾಲ್ ಅಶೋಕ್
ಶ್ರೀನಿವಾಸಪುರ : ರೈತರು ಬ್ಯಾಂಕಿನಿಂದ ಪಡೆದುಕೊಂಡ ಕೃಷಿ ಸಾಲವನ್ನು ಸಕಾಲಕ್ಕೆ ಪಾವತಿಸಿಸಿದರೆ ಇನ್ನೂ ಹೆಚ್ಚಿನ ರೈತರಿಗೆ ಸಾಲ ನೀಡಲು ಸಾಧ್ಯವಾಗುತ್ತದೆ ಎಂದು ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಿಯಮಿತದ ಅಧ್ಯಕ್ಷರಾದ ದಿಂಬಾಲ್ ಅಶೋಕ್ ತಿಳಿಸಿದರು.
ಅವರು ಬ್ಯಾಂಕಿನ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡುತ್ತಾ, ಈ ಬ್ಯಾಂಕಿನ ಉದ್ದೇಶವೇ ರೈತರ ಕೃಷಿ ಅಭಿವೃದ್ದಿಗೆ ಸಾಲ ನೀಡುವುದು. ವಾಣಿಜ್ಯ ಬ್ಯಾಂಕುಗಳು ರೈತರಿಗೆ ಹೆಚ್ಚಿನ ಬಡ್ಡಿದರದಲ್ಲಿ ಸಾಲ ನೀಡುತ್ತವೆ. ಆದರೆ ನಮ್ಮ ಬ್ಯಾಂಕು ರೈತರ ಅಭಿವೃದ್ದಿಯ ದೃಷ್ಠಿಯಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದರಿಂದ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ವ್ಯವಸ್ಥಾಪಕಿ ಶೋಭ ಮಾತನಾಡಿ 2024-25 ನೇ ವಾರ್ಷಿಕ ವರಧಿಯನ್ನು ಸಲ್ಲಿಸಿದರು. ಈಗಾಗಲೇ ಬ್ಯಾಂಕ್ವತಿಯಿಂದ 14 ಲಕ್ಷ ಸಾಲವನ್ನು ನೀಡಲಾಗಿದೆ. 25 ಸಾವಿರ ರೂ ಪಾವತಿಯಾಗಿದೆ. ಇನ್ನು 6ಲಕ್ಷ 76 ಸಾವಿರ ಹಣ ಸಾಲಗಾರರಿಂದ ಬ್ಯಾಂಕಿಗೆ ಪಾವತಿಯಾಗಬೇಕಾಗಿದೆ ಎಂದು ಮಾಹಿತಿ ನೀಡಿದರು.
ಬ್ಯಾಂಕಿನ ಮಾಜಿ ವ್ಯವಸ್ಥಾಪಕ ಸಿ.ಎನ್.ಕೃಷ್ಣನ್ ಜಮಾಖರ್ಚುಗಳ ವರದಿಯನ್ನು ಮಂಡಿಸಿ 2024-25ನೇ ಸಾಲಿಗೆ 6.55.5000ರೂಗಳ ಬಜೆಟಿಗೆ ಅನುಮೋದನೆ ಪಡೆದುಕೊಂಡು 16 ಲಕ್ಷ ರೂಗಳ ಬ್ಯಾಂಕಿನ ಕಟ್ಟಡ ಕಾಮಗಾರಿಯ ಬಗ್ಗೆ ವಿವರಿಸಿದರು.
ಈ ಸಮಾರಂಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಬಿ.ಸುಬ್ಬಾರೆಡ್ಡಿ, ನಿರ್ದೇಶಕರಾದ ದಳಸನೂರು ಗೋಪಾಲಕೃಷ್ಣ, ಎಮ್.ಎನ್.ರಾಮಚಂದ್ರಾರೆಡ್ಡಿ, ಶ್ರೀಕಂಠರೆಡ್ಡಿ, ಕೆ.ನಾರಾಯಣಸ್ವಾಮಿ, ದೋಬಿ ಪಾಪನ್ನ, ಟಿ.ವಿ.ಗಂಗಿರೆಡ್ಡಿ, ಆವಲಪ್ಪ, ವೆಂಕಟಲಕ್ಷ್ಮಮ್ಮ, ಸುರೇಶ್ ಬಾಬು, ಪುರಸಭೆ ಮಾಜಿ ಅಧ್ಯಕ್ಷ ಬಿ.ಎಲ್.ಪ್ರಕಾಶ್, ತಾಪಂ ಮಾಜಿ ಸದಸ್ಯ ಕೆ.ಕೆ.ಮಂಜುನಾಥ್, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ವೆಂಕಟರೆಡ್ಡಿ, ಲೆಕ್ಕಾಧಿಕಾರಿ ವಿ.ಶ್ರೀನಿವಾಸನ್, ಕ್ಷೇತ್ರಾಧಿಕಾರಿ ಎಸ್.ಎನ್.ಮಂಜುನಾಥಾಚಾರಿ, ಸಿಬ್ಬಂದಿ ಕೆ.ಬಿ.ನರೇಶ್, ಆರ್.ವಿ.ರವೀಂದ್ರ ಹಾಜರಿದ್ದರು.
ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫಲಿತಾಂಶಗಳು / RESULTS OF THE UDUPI DISTRICT LEVEL BALL BADMINTON TOURNAMENT
ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫಲಿತಾಂಶಗಳು
ಸ್ಥಳ: ಎಸ್ವಿವಿಎನ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಹೆರಾಡಿ- ಬಾರ್ಕೂರು
ದಿನಾಂಕ: ಗುರುವಾರ, 19ನೇ ಸೆಪ್ಟೆಂಬರ್, 2024
17 ವರ್ಷದೊಳಗಿನ ಬಾಲಕರು:-
ವಿಜೇತರು: ಬ್ರಹ್ಮಾವರ ತಾಲೂಕು…
ನ್ಯಾಷನಲ್ ಜೂನಿಯರ್ ಕಾಲೇಜು, ಬಾರ್ಕೂರು,
ಓಟದ ದ್ವಿತೀಯ ಸ್ಥಾನ: ಕುಂದಾಪುರ ತಾಲೂಕು
ಶ್ರೀ ಸರಸ್ವತಿ ವಿದ್ಯಾ ಮಂದಿರ, ಗಂಗೊಳ್ಳಿ
17 ವರ್ಷದೊಳಗಿನ ಹುಡುಗಿಯರು:
ವಿಜೇತರು- ಬ್ರಹ್ಮಾವರ ತಾಲೂಕು.
SVVN ಆಂಗ್ಲ ಮಾಧ್ಯಮ ಪ್ರೌಢಶಾಲೆ, ಹೆರಾಡಿ – ಬಾರ್ಕೂರು
ರನ್ನರ್ಸ್ ಅಪ್: ಕಾರ್ಕಳ ತಾಲೂಕು
ಎಸ್ವಿಟಿ ಸರಕಾರಿ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ವಾಜೆ, ಕಾರ್ಕಳ.
14 ವರ್ಷದೊಳಗಿನ ಬಾಲಕರು
ವಿಜೇತರು: ಬ್ರಹ್ಮಾವರ ತಾಲೂಕು
SVVN ಆಂಗ್ಲ ಮಾಧ್ಯಮ ಪ್ರೌಢಶಾಲೆ, ಹೆರಾಡಿ – ಬಾರ್ಕೂರು
ರನ್ನರ್ಸ್ ಅಪ್: ಕುಂದಾಪುರ ತಾಲೂಕು..
ಶ್ರೀ ಸರಸ್ವತಿ ವಿದ್ಯಾ ಮಂದಿರ. ಗಂಗೊಳ್ಳಿ
14 ವರ್ಷದೊಳಗಿನ ಹುಡುಗಿಯರು
ವಿಜೇತರು: ಬ್ರಹ್ಮಾವರ ತಾಲೂಕು
SVVN ಆಂಗ್ಲ ಮಾಧ್ಯಮ ಪ್ರೌಢಶಾಲೆ, ಹೆರಾಡಿ – ಬಾರ್ಕೂರು
ರನ್ನರ್ಸ್ ಅಪ್: ಕುಂದಾಪುರ ತಾಲೂಕು
ಶ್ರೀ ಸರಸ್ವತಿ ವಿದ್ಯಾ ಮಂದಿರ. ಗಂಗೊಳ್ಳಿ
RESULTS OF THE UDUPI DISTRICT LEVEL BALL BADMINTON TOURNAMENT
Venue: SVVN English Medium High School, Heradi – Barkur
Date: Thursday, 19th September, 2024
Under 17 year’s boys:-
Winners: Brahmavar taluk…
National Junior College, Barkur,
Runner’s Second place: Kundapur taluk
Shri Sarswathi Vidhya Mandira, Gangolli
Under 17 years Girls:
Winners – Brahmavar taluk.
SVVN English Medium High School, Heradi – Barkur
Runners up: Karkala talluk
SVT Government Girls Model Higher Primary School Pervaje, Karkala.
Under 14 boys
Winners: Brahmavar Taluk
SVVN English Medium High School, Heradi – Barkur
Runners up: Kundapur Taluk..
Shri Sarswathi Vidhya Mandir. Gangolli
Under 14 girls
WINNERS: Brahmavara Taluk
SVVN English Medium High School, Heradi – Barkur
Runners up: Kundapur Taluk
Shri Sarswathi Vidhya Mandir. Gangolli
ಕರಾಟೆಯಲ್ಲಿ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳು ಸಾಧನೆ
ಕುಂದಾಪುರ (ಸೆ.20) : ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 15ನೇ ರಾಜ್ಯಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯನ್ ಶಿಪ್ 2024ರ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿರುತ್ತಾರೆ.
ವಿದ್ಯಾರ್ಥಿಗಳಾದ ಅರ್ನೋನ್ ಡಿ ಅಲ್ಮೆಡಾ ಕಟಾ – ಕುಮಿಟೆ ಯಲ್ಲಿ ಬೆಳ್ಳಿಯ ಪದಕಗಳನ್ನು, ಅಥರ್ವ ಖಾರ್ವಿ ಕುಮಿಟೆಯಲ್ಲಿ ಬೆಳ್ಳಿ ಪದಕವನ್ನು ಹಾಗೂ ಆರ್ಯನ್ ಕೆ ಪೂಜಾರಿ ಕುಮಿಟೆಯಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.
ಸೇಂಟ್ ಆಗ್ನೆಸ್ ಪಿಯು ಕಾಲೇಜ್ ಅಭಯ ಮಹಿಳಾ ವೇದಿಕೆಯಿಂದ -ಮಾನಸಿಕ ಆರೋಗ್ಯದ ಅಧಿವೇಶನ /St. Agnes PU College – Abhaya Session on Mental Health
ಅಭಯ ಮಹಿಳಾ ವೇದಿಕೆಯು 18ನೇ ಸೆಪ್ಟೆಂಬರ್ 2024 ರಂದು ಸೇಂಟ್ ಆಗ್ನೆಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯದ ಕುರಿತು ಜ್ಞಾನೋದಯ ಸೆಷನ್ ಅನ್ನು ಆಯೋಜಿಸಿದೆ. ಮೊದಲ ಅಧಿವೇಶನವನ್ನು ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಮತ್ತು ಎರಡನೇ ಅಧಿವೇಶನವನ್ನು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಲಾಯಿತು. ಮಂಗಳೂರಿನ ಮಾನಶಾಂತಿ ಕೌನ್ಸೆಲಿಂಗ್ನ ನಿರ್ದೇಶಕಿ ಡಾ.ರಮೀಳಾಶೇಖರ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಾನು ಯಾರು ಎಂಬ ಪ್ರಶ್ನೆಯನ್ನು ಪ್ರತಿಬಿಂಬಿಸಲು ಮತ್ತು ಅವರ ಆಲೋಚನೆಗಳನ್ನು ಹಂಚಿಕೊಳ್ಳಲು ವಿದ್ಯಾರ್ಥಿಗಳನ್ನು ಉತ್ತೇಜಿಸುವ ಚಟುವಟಿಕೆಯೊಂದಿಗೆ ಅವರು ಅಧಿವೇಶನವನ್ನು ಪ್ರಾರಂಭಿಸಿದರು. ಬಲವಾದ ಮನಸ್ಸನ್ನು ನಿರ್ಮಿಸುವ ಪ್ರಾಮುಖ್ಯತೆಯನ್ನು ಅವರು ಒತ್ತಿಹೇಳಿದರು, ಏಕೆಂದರೆ ಅದು ವ್ಯಕ್ತಿಯ ಶಕ್ತಿಯ ಮೂಲ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತದೆ. I CAN’T to I CAN ನಂತಹ ಪದಗಳು ಮತ್ತು ಪದಗುಚ್ಛಗಳನ್ನು ಮರುಹೊಂದಿಸುವ ಮೂಲಕ ನಕಾರಾತ್ಮಕ ಆಲೋಚನೆಗಳನ್ನು ಧನಾತ್ಮಕವಾಗಿ ಮರುಹೊಂದಿಸುವ ಅಗತ್ಯವನ್ನು ಅವರು ಎತ್ತಿ ತೋರಿಸಿದರು. ತನ್ನ ಸಕಾರಾತ್ಮಕ ಅಂಶದ ಜೊತೆಗೆ ದೈಹಿಕ ಋಣಾತ್ಮಕತೆಯನ್ನು ಸ್ವೀಕರಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಅವರು ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಹೇಗೆ ಎಂಬುದರ ಕುರಿತು ಪಾಯಿಂಟರ್ಗಳನ್ನು ನೀಡಿದರು ಮತ್ತು ಸ್ವಯಂ-ನಂಬಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಅವರು ಪಿಯುಸಿ ಜೀವನದ ಅತ್ಯುತ್ತಮ ಸಮಯ ಎಂದು ಬಲಪಡಿಸುವ ಮೂಲಕ ತೀರ್ಮಾನಿಸಿದರು ಮತ್ತು ವಿದ್ಯಾರ್ಥಿಗಳು ತಮ್ಮ ದಾರಿಯಲ್ಲಿ ಬರುವ ಅವಕಾಶಗಳನ್ನು ಬಳಸಿಕೊಳ್ಳುವಂತೆ ಪ್ರೋತ್ಸಾಹಿಸಿದರು.
ಶಿಹಾಮ ಅವರು ಮೊದಲ ಅವಧಿಯನ್ನು ನಿರೂಪಿಸಿದರು ಮತ್ತು ಶಮಿತಾ ಸ್ವಾಗತಿಸಿದರು ಮತ್ತು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಎರಡನೆ ಅವಧಿಗೆ ಭಾರ್ಗವಿ ಎಂಸಿ ಹಾಗೂ ಸಂಪನ್ಮೂಲ ವ್ಯಕ್ತಿಯನ್ನು ಅಂಜಲಿ ಪರಿಚಯಿಸಿದರು. ಪ್ರಜ್ನಾ ಮತ್ತು ಫೆರಿನ್ ಕ್ರಮವಾಗಿ ಪ್ರತಿ ಅಧಿವೇಶನಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಾಂಶುಪಾಲರಾದ ಶ್ರೀ ನೊರಿನ್ ಡಿಸೋಜ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
St. Agnes PU College – Abhaya Session on Mental Health
Abhaya the Women’s Forum organized an enlightening session on Mental Health for the students of St Agnes PU College on 18th September 2024. The first session was conducted for the students of commerce and arts stream and the second session for the students of science stream. DrRameelaShekhar, Director, ManashanthiCounseling, Mangaluru was the resource person. She began the session with an activity encouraging students to reflect on the question WHO AM I and share their thoughts. She emphasized the importance of building a strong mind, as it serves as the core foundation of a person’s strength. She highlighted the need to reframe negative thoughts to positive one by reframing words and phrases like I CAN’T to I CAN. She stressed on the need to accept physical negativity along with positive aspect of oneself. She gave pointers on how to manage stress effectively and accentuated the importance of self-belief. She concluded by reinforcing that PUC is the best time of life and encouraged students to make use of the opportunities that comes in their way.
Shihama compered the first session and Shamitha welcomed the gathering and introduced the resource person. Bhargavi was the MC for the second session and Anjali introduced the resource person. Prajna and Ferin delivered the vote of thanks for each session respectively. The Principal SrNorine Dsouza, staff and students were part of the session.
ಜಿಲ್ಲೆಯ ಸಮಸ್ಯೆಗಳ ಬಗ್ಗೆ ಆಧ್ಯತೆ ಮೇರೆಗೆ ಚರ್ಚೆ ಮಾಡಬೇಕು-ಬಿ. ಎಸ್ ಸುರೇಶ್
ಕೋಲಾರ : ಕೆಡಿಪಿ ಸಭೆಯು, ಜಿಲ್ಲೆಯಲ್ಲಿ ಅನುಷ್ಠಾನದಲ್ಲಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಆಧ್ಯತೆ ಮೇಲೆ ಚರ್ಚೆ ಆಗಬೇಕು. ಅಧಿಕಾರಿಗಳು ಸಭೆಗೆ ಅಪೂರ್ಣ ಮಾಹಿತಿ ತಂದರೆ, ಸಭೆಯ ಉದ್ದೇಶ ಈಡೆರುವುದಿಲ್ಲ. ರೈತರ ಬಗ್ಗೆ, ಬಡವರ ಬಗ್ಗೆ ಕಳಕಳಿ ಇರಬೇಕು. ಅಧಿಕಾರಿಗಳು ಜವಾಬ್ದರಿಯಿಂದ ಸಭೆಗೆ ಸರಿಯಾದ ಮಾಹಿತಿ ಮತ್ತು ಉತ್ತರ ನೀಡಬೇಕೆಂದು ಸಚಿವ ಬಿ. ಎಸ್. ಸುರೇಶ್ ಅವರು ಎಚ್ಚರಿಕೆ ನೀಡಿದರು.
ಅವರು ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನ ಜೂನ್ ಅಂತ್ಯಕ್ಕೆ ಕೊನೆಗೊಂಡ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕೃಷಿ, ಮಾರುಕಟ್ಟೆ, ತೋಟಗಾರಿಕೆ, ರೇಷ್ಮೆ, ಪಶುಪಾಲನಾ, ನೀರಾವರಿ ಇಲಾಖೆಗಳ ಅಧಿಕಾರಿಗಳು ಕೆಡಿಪಿ ಸಭೆಗೆ ಪೂರ್ಣ ಮಾಹಿತಿಯೊಂದಿಗೆ ಬರಬೇಕು. ವಾಸ್ತವಿಕ ವರದಿ ನೀಡುವದರಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಹಾಯವಾಗುತ್ತದೆ ಎಂದು ಸಚಿವರು ತಿಳಿಸಿದರು.
ಲೋಕೋಪಯೋಗಿ, ನೀರಾವರಿ ಮತ್ತು ಇತರ ಪ್ರಮುಖ ಇಲಾಖೆಗಳಲ್ಲಿ ಕಾಮಗಾರಿಗಳನ್ನು ಚುರುಕುಗೊಳಿಸಿ ಎಂದು ಸಚಿವರು ಸೂಚಿಸಿದರು.
ಜಿಲ್ಲೆಯಲ್ಲಿ ಜಲ್ ಜೀವನ ಮಿಷನ್ ಯೋಜನೆ ತೃಪ್ತಿಕರವಾಗಿ ಅನುಷಾಠನಗೊಳ್ಳುತ್ತಿಲ್ಲ.
ನಿಗದಿತ ಅವಧಿಯಲ್ಲಿ ಯೋಜನೆ ಮುಗಿಸದಿದ್ದರೆ ಮತ್ತು ಪ್ರತಿ ಹಂತದ ಕಾಮಗಾರಿಯನ್ನು ಕಾಲಮಿತಿಯಲ್ಲಿ
ಪೂರ್ಣಗೊಳಿಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಎಚ್ಚರಿಸಿದರು.
ಜಿಲ್ಲೆಯ ಶಾಸಕರ ಅಧ್ಯಕ್ಷತೆಯ ಫಲಾನುಭವಿ ಆಯ್ಕೆಯ ವಿವಿಧ ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಅಗತ್ಯ ಗೊಬ್ಬರ, ಬೀಜ ಇದೆ: ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಮಾ ಮಾತನಾಡಿ, ಈ ಮಾಹೆಯಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗುತ್ತಿದೆ. ಮುಂದಿನ 1 ತಿಂಗಳು ನಿರೀಕ್ಷಿಸಿ ಮಳೆ ಬಾರದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.ಜಿಲ್ಲೆಯಲ್ಲಿ ರಾಗಿ ಬಿತ್ತನೆ ನಡೆದಿದ್ದು ಬೆಳೆ ಕಟಾವಿಗೆ ಬಂದಿವೆ ಎಂದು ಸಭೆಗೆ ತಿಳಿಸಿದರು. ಅಗತ್ಯ ಬೀಜ, ರಸಗೊಬ್ಬರ ದಾಸ್ತಾನು ಇದೆ ಎಂದು ಅವರು ಹೇಳಿದರು.
ಪಶುಪಾಲನೆ ಇಲಾಖೆ ಪ್ರಗತಿ: ಉಪ ನಿರ್ದೇಶಕ ಡಾ. ಗಂಗಾತುಳಸಿರಾಮಯ್ಯ ಮಾತನಾಡಿ, ಇಲಾಖೆ ಯೋಜನೆಗಳು ಪ್ರಗತಿಯಲ್ಲಿವೆ. ಪಶುಪಾಲನೆ ಹೆಚ್ಚಳಕ್ಕೆ ಅಗತ್ಯ ಜನಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.
ಜಲ ಜೀವನ ಮಿಷನ್: ಜಲ್ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಗ್ರಾಮಗಳಲ್ಲಿ ನೀರು ಸರಬರಾಜು ವ್ಯವಸ್ಥೆಯನ್ನು ಆಯಾ ಗ್ರಾಮ ಪಂಚಾಯತಿಗಳಿಗೆ ವಹಿಸಲಾಗಿದೆ. ಉಳಿದ ಗ್ರಾಮ ಪಂಚಾಯತಗಳಿಗೆ ನೀರು ಸರಬರಾಜು ವ್ಯವಸ್ಥೆ ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮಾತನಾಡಿ, ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರಕಾರಿ ಜಮೀನುಗಳನ್ನು ಗುರುತಿಸಿ ಅವುಗಳ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಕೆರೆ, ಗೋಮಾಳ ಅತಿಕ್ರಮಣ ಆಗದಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆ ಯೋಜನೆಯನ್ನು ಸ್ಥಳೀಯ ಶಾಸಕರು ಹಾಗೂ ವಿಧಾನಸಭಾ ಸದಸ್ಯರೊಂದಿಗೆ ಚರ್ಚಿಸಿ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಕಡ್ಡಾಯವಾಗಿ ಅವರಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಅವರು ಸೂಚಿಸಿದ್ದಾರೆ
ಸರ್ಕಾರದ ಯೋಜನೆಗಳನ್ನು ಜನಪ್ರತಿನಿಧಿಗಳ ಮುಖಾಂತರ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ ಎಂದರು.
ಕೃಷಿ: ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಯೋಜನೆಗಳನ್ನು ಫಲಾನುಭವಿಗಳಿಗೆ ತಿಳಿಸುವಲ್ಲಿ ಅಧಿಕಾರಿಗಳು ಮುಂದಾಗಬೇಕು. ಅಂದಾಗ ಮಾತ್ರ ಪ್ರತಿ ರೈತರು ಸರ್ಕಾರಿ ಯೋಜನೆಯ ಫಲಾನುಭವಿಗಳಾಗಿ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದರು.
ಪಶು ಆಸ್ಪತ್ರೆ: ಕೋಲಾರದಲ್ಲಿ 108 ಪಶು ಆಸ್ಪತ್ರೆಗಳಿದ್ದು, 75 ಜನ ವೈದ್ಯರಿದ್ದು, ವೈದ್ಯರ ಕೊರತೆ ಇದೆ ಎಂದು ಪಶುವೈದ್ಯ ಅಧಿಕಾರಿಗಳು ಮಾತನಾಡಿದಾಗ ಉತ್ತರಿಸಿದ ಸಚಿವರು ವೈದ್ಯರ ಕೊರತೆ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಿ ತಕ್ಷಣವೇ ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು. ಪಶು ವೈದ್ಯಧಿಕಾರಿಗಳು ಸಂಬಂಧಿಸಿದ ರೋಗಕ್ಕೆ ಆಸ್ಪತ್ರೆಯಿಂದಲೇ ಔಷಧಿಯನ್ನು ವಿತರಿಸಬೇಕು. ವೈದ್ಯರು ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ ಸಮಸ್ಯೆಯನ್ನು ಆಲಿಸಿ ಪರಿಹರಿಸಬೇಕೆಂದರು.
ಶಿಕ್ಷಣ: ಈ ವರ್ಷ 10ನೇ ತರಗತಿಯಲ್ಲಿ ಕೋಲಾರ ಜಿಲ್ಲೆಯೂ ರಾಜ್ಯದಲ್ಲಿ ಉತ್ತಮ ಸ್ಥಾನಕ್ಕೆ ಬರುವಂತೆ ಮಾಡಲು ಶಿಕ್ಷಣ ಇಲಾಖೆ ಶ್ರಮ ವಹಿಸಬೇಕೆಂದರು. ಸ್ಥಳೀಯ ಶಾಸಕರು ಮತ್ತು ವಿಧಾನಸಭಾ ಸದಸ್ಯರನ್ನು ಭೇಟಿಯಾಗಿ ಅವರ ಅನುದಾನದಲ್ಲಿ ಶಾಲೆಗಳ ದುರಸ್ಥಿ ಮಾಡಿಸಿಕೊಳ್ಳಬೇಕೆಂದರು. ಶಾಲೆ, ನೀರು, ಸಮುದಾಯಗಳಿಗೆ ಪ್ರಥಮ ಆದ್ಯತೆ ನೀಡಬೇಕೆಂದರು. ಶಿಕ್ಷಣ ವಿಷಯದಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದರು.
ಆರೋಗ್ಯ ಇಲಾಖೆ: ಸರ್ಕಾರಿ ವೈದ್ಯರಾಗಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಪಟ್ಟಿಯನ್ನು ನೀಡಿ ಅವರನ್ನು ತಕ್ಷಣವೇ ಅವಮಾನತುಗೊಳಿಸ (ಸಸ್ಪೆಂಡ್) ಲಾಗುವುದೆಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸಚಿವರು ತಿಳಿಸಿದರು. ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಡಯಾಲಸಿಸ್, ಸಿಟಿ ಸ್ಕಾನ್ ಇನ್ನು ಮುಂತಾದ ಅನುಕೂಲಗಳು ಪ್ರತಿಯೊಬ್ಬರಿಗೂ ದೊರಕುವಂತೆ ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದರು. ಜಿಲ್ಲಾ ಆರೋಗ್ಯಾಧಿಕಾರಿಗಳು ಕಡ್ಡಾಯವಾಗಿ ತಾಲ್ಲೂಕುಗಳಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಬೇಕೆಂದರು.
ಸಮಾಜ ಕಲ್ಯಾಣ ಇಲಾಖೆ: ಇಲಾಖೆಯು ಜಾತಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ ಮಾಡದೇ ಸರಿಯಾದ ಸಮಯಕ್ಕೆ ಪ್ರಮಾಣ ಪತ್ರವನ್ನು ನೀಡಬೇಕು ನೊಂದವರಿಗೆ ಪರಿಹಾರ ನೀಡುವುದಕ್ಕಿಂತ ಮುಂಚೆ ಸಾರ್ವಜನಿಕರು ನೊಂದುಕೊಳ್ಳದಂತೆ ನೋಡಿಕೊಳ್ಳಬೇಕೆಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಜಿಲ್ಲೆಯಲ್ಲಿ 59 ವಸತಿ ನಿಲಯಗಳಲ್ಲಿದ್ದು, 13ಜನ ವಾರ್ಡ್ನಗಳಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸಚಿವರಿಗೆ ಮನವಿ ಮಾಡಿಕೊಂಡರು.
ಜಲ-ಜೀವನ್ ಮಿಷನ್: ಸರ್ಕಾರದ ಮಹತ್ವಕಾಂಕ್ಷಿ ಯೋಚನೆಯಾಗಿದ್ದು, ಈ ಯೋಜನೆಯಡಿ 1365 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಪ್ರತಿಯೊಂದು ಮನೆಗಳಿಗೂ ಶೀಘ್ರವಾಗಿ ನಲ್ಲಿ ನೀರು ಸಂಪರ್ಕ ನೀಡಬೇಕೆಂದು ಸೂಚಿಸಿದರು.
ಸಭೆಯಲ್ಲಿ ಸಂಸದರಾದ ಮಲ್ಲೇಶಬಾಬು, ಕೋಲಾರ ಶಾಸಕರಾದ ಕೊತ್ತೂರು. ಜಿ.ಮಂಜುನಾಥ್, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್. ಅನಿಲಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್, ಕೆಜಿಎಫ್ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಕೋಲಾರ ಶಾಸಕರ ಕ್ಷೇತ್ರಕ್ಕೆ 376 ಕೋಟಿ ಅನುದಾನ ಒದಗಿಸಲಾಗಿದ್ದು ನಮ್ಮ ಸರ್ಕಾರ ಅಭಿವೃದ್ಧಿಗೆ ಸಿದ್ದವಾಗಿದೆ : ಬಿ. ಎಸ್.ಸುರೇಶ್
ಕೋಲಾರ : ರಾಜ್ಯದಲ್ಲಿನ ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ಅನುದಾನ ಒದಗಿಸಲಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಅಗತ್ಯವಿರುವಷ್ಟು ಅನುದಾನ ಕೊಡಲು ಸರ್ಕಾರವು ಸಿದ್ಧವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್ ಸುರೇಶ್ ತಿಳಿಸಿದರು.
ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಇಂದು ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ಸೇರಿದಂತೆ ಒಟ್ಟು 13.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಭಾಗವಹಿಸಿ
ಮಾತನಾಡಿದ ಅವರು ಇಡೀ ರಾಜ್ಯದಲ್ಲಿ ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸರಮಾಲೆಯೇ ನಡೆಯುತ್ತಿದೆ. ವಿಪಕ್ಷಗಳು ಪಕ್ಷಗಳು ಆಡಳಿತ ಪಕ್ಷದ ಮೇಲೆ ಹಣ ಖಾಲಿಯಾಗಿದೆ ಎಂದು ಗೂಬೆ ಕೂರಿಸಲು ಹೊರಟಿದ್ದಾರೆ ಜನಕ್ಕೆ ಅಭಿವೃದ್ಧಿ ಕಣ್ಣಮುಂದೆಯೇ ಇದೆ ಎಂದರು.
ಹಿಂದಿನ ಸರಕಾರದಲ್ಲಿ 40% ಕಮಿಷನ್ ನಿಂದ ಅಭಿವೃದ್ಧಿ ಶೂನ್ಯವಾಗಿತ್ತು, ನಮ್ಮ ಸರಕಾರವು ಜನರ ದುಡ್ಡನ್ನೇ ಜನರಿಗೆ ಕೊಡುತ್ತಿದ್ದೇವೆ ಕಳೆದ ಸರ್ಕಾರದಲ್ಲಿ ಅವರಿಗೆ ತಿನ್ನಲು ಸಾಕಾಗಲಿಲ್ಲ ಅದಕ್ಕೆ ಅಭಿವೃದ್ಧಿ ಶೂನ್ಯವಾಗಿತ್ತು ನಾವು ರಾಜಕಾರಣವನ್ನು ಹೊಟ್ಟೆಪಾಡಿಗೆ, ವ್ಯಾಪಾರಕ್ಕೆ ಮಾಡಲು ಬಂದಿಲ್ಲ ಜನರ ಸೇವೆ ಮಾಡಲು ಬಂದಿದ್ದು ಅಭಿವೃದ್ಧಿಯೇ ನಮ್ಮ ಗುರಿ ಮತ್ತು ಉದ್ದೇಶವಾಗಿದೆ ಎಂದರು.
ರಾಜ್ಯದಲ್ಲಿ ಸರ್ಕಾರವು ನುಡಿದಂತೆ ನಡೆದಿದೆ. ಬಡವರಿಗೆ ಸಾಮಾನ್ಯ ಜನರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದವರು ಹೇಳಿದ ಸುಳ್ಳಿನ ಸರಪಳಿಯನ್ನು ತುಂಡರಿಸಿದ್ದೇವೆ ಜನ 136 ಸ್ಥಾನ ಕೊಟ್ಟು ಆಶೀರ್ವಾದ ಮಾಡಿದ್ದಾರೆ ಸರ್ಕಾರವು ಬಿದ್ದು ಹೋಗುತ್ತದೆ ಎಂದು ವಿಪಕ್ಷಗಳು ಸುಳ್ಳು ಹೇಳುತ್ತಿವೆ.ಜನಕ್ಕೆ ಅಭಿವೃದ್ಧಿಯಾರು ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ ಅಭಿವೃದ್ಧಿಯನ್ನು ಜನರಿಗೆ ಅನುಕೂಲವಾಗುವಂತೆ ಮಾಡಿದ್ದೇವೆ ಜನರೇ ಕೆಲಸ ಸರಿಯಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಗುಣಮಟ್ಟದ ಪರೀಕ್ಷೆಯನ್ನು ಗಮನಿಸಬೇಕು ಕಳಪೆ ಕೆಲಸವಾದರೆ ದೂರು ನೀಡಬೇಕು ಮಾಧ್ಯಮದವರ ಗಮನಕ್ಕೆ ತರಬೇಕು ಎಂದರು.
ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮತ್ತು ರಾಜಕೀಯ ಮಾಡಬಾರದು ಜನರಿಂದ ಆಯ್ಕೆಯಾದ ನಮ್ಮ ಸರಕಾರವು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡತ್ತಿದ್ದು ಇನ್ನೂ ಕೆಲವು ಕಡೆಗಳಲ್ಲಿ ಟೆಂಡರ್ ನಡೆದಿದ್ದು ಉಳಿದ ರಸ್ತೆಗಳನ್ನು ಹಂತ-ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ಸಚಿವರಿಗೆ ಮನವಿ ಮಾಡಿ ನರಸಾಪುರ ಕೈಗಾರಿಕಾ ಪ್ರದೇಶವಾಗಿದ್ದು ಇಲ್ಲಿ ಹೊಸದಾಗಿ ಪೋಲಿಸ್ ಹೊರ ಠಾಣೆಯನ್ನು ಪ್ರಾರಂಭಿಸಬೇಕು ಸೊಸೈಟಿ ನೂತನ ಕಟ್ಟಡಕ್ಕೆ ನಬಾರ್ಡ್ ವತಿಯಿಂದ 70 ಲಕ್ಷ ನೀಡಿದ್ದು ಉಳಿದ ಹಣವನ್ನು ಸಚಿವರು, ಶಾಸಕರು ಎಂಎಲ್ಸಿಗಳ ಮೂಲಕ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪದ್ಮಮ್ಮ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಪಿಎಲ್ಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಮಂಜುನಾಥ್, ಎಂಟಿಬಿ ಶ್ರೀನಿವಾಸ್, ಶ್ರೀರಾಮಪ್ಪ, ಜಾಲಿ ಬಾಬು ಜನಪನಹಳ್ಳಿ ನವೀನ್ ಕುಮಾರ್, ಮುಂತಾದವರು ಇದ್ದರು.