HOLY ROSARY CHURCH, KUNDAPUR – 450 th JUBILEE SOUVENIR 2021

ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು, ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು : ಎನ್.ಬಿ.ಗೋಪಾಲಗೌಡ

ಶ್ರೀನಿವಾಸಪುರ: ಯುವ ಸಮುದಾಯ ದುಶ್ಚಟಗಳಿಂದ ದೂರವಿದ್ದು, ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಹೇಳಿದರು.
ಪಟ್ಟಣದ ವೆಂಕಟೇಗೌಡ ಕಲ್ಯಾಣ ಮಂಟಪದಲ್ಲಿ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಘಟಕದ ನಿರ್ದೇಶಕ ಮುರಳೀಧರ ಶೆಟ್ಟಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಈವರೆಗೆ 1630 ಮದ್ಯವರ್ಜನ ಶಿಬಿರ ನಡೆಸಲಾಗಿದೆ. ಸಾವಿರಾರು ಮದ್ಯ ವ್ಯಸನಿಗಳು ಮದ್ಯವರ್ಜನ ಮಾಡಿ ಸಂತೋಷದಿಂದ ತಮ್ಮ ಕುಟುಂಬದೊಂದಿಗೆ ಜೀವನ ಸಾಗಿಸುತ್ತಿದ್ದಾರೆ ಎಂದು ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಲವಾರು ಸಮಾಜ ಸೇವಾ ಕಾರ್ಯ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಬಡವರ ಆರ್ಥಿಕ ಮಟ್ಟ ಸುಧಾರಣೆಗೆ ಅಗತ್ಯವಾದ ಯೋಜನೆ ರೂಪಿಸಿ ಜಾರಿಗೆ ತರಲಾಗಿದೆ. ದೇವಾಲಯಗಳ ನಿರ್ಮಾಣ ಹಾಗೂ ಪುನರುಜ್ಜೀವನಕ್ಕೆ ಆರ್ಥಿಕ ನೆರವು ನೀಡಲಾಗುತ್ತಿದೆ. ಕೆರೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಎಂ.ಲಕ್ಷ್ಮಣಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ರಾಜೇಂದ್ರ ಪ್ರಸಾದ್ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್, ಪ್ರಾದೇಶಿಕ ನಿರ್ದೇಶಕ ಎಂ.ಸೀನಪ್ಪ, ಯೋಜನಾಧಿಕಾರಿ ಗಣೇಶ್ ಆಚಾರ್ಯ, ಎಸ್.ಸುರೇಶ್ ಗೌಡ ಇದ್ದರು.

ಗ್ರಾಮೀ ಪ್ರದೇಶದ ವಿದ್ಯಾರ್ಥಿಗಳು ದಾನಿಗಳ ನೆರವು ಪಡೆದು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು : ಎಚ್.ನಾರಾಯಣಸ್ವಾಮಿ

ಶ್ರೀನಿವಾಸಪುರ: ಗ್ರಾಮೀ ಪ್ರದೇಶದ ವಿದ್ಯಾರ್ಥಿಗಳು ದಾನಿಗಳ ನೆರವು ಪಡೆದು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು ಎಂದು ಸಮಾಜ ಸೇವಕ ಎಚ್.ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನ ಕಲ್ಲೂರು ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು. ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಶಾಲೆಯ ಮುಖ್ಯ ಶಿಕ್ಷಕಿ ಮಮತಾ ರಾಣಿ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದ ಎಲ್ಲ ಯೋಜನೆಗಳನ್ನೂ ಜಾರಿಗೆ ತಂದಿದೆ. ಜತೆಗೆ ದಾನಿಗಳು ಸರ್ಕಾರಿ ಶಾಲಾ ಮಕ್ಕಳ ನೆರವಿಗೆ ಬರುತ್ತಿದ್ದಾರೆ. ಮಕ್ಕಳ ಶೈಕ್ಷಣಿಕ ಅಗತ್ಯ ಪೂರೈಸುವಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ಅದರ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೋಮುಲ್ ಮಾಜಿ ನಿರ್ದೇಶಕ ಪಾಳ್ಯ ಬೈರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ.ನಾಗೇಶ್, ಮುಖಂಡ ಬೈರಾರೆಡ್ಡಿ, ತಾಲ್ಲೂಕು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕಿ ಸುಲೋಚನ, ಎಸ್‍ಡಿಎಂಸಿ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಶಿಕ್ಷಕ ಲೋಕೇಶ್, ಶಿಕ್ಷಕಿ ಮಂಜುಳ ಇದ್ದರು.

ಶ್ರೀನಿವಾಸಪುರ : ಐಎಎಸ್ ಅಧಿಕಾರಿ ವಿನಾಯಕ್ ಘೋರ್ಪಡೆ, ನರೇಗಾ ಯೋಜನೆಯಡಿ ಕೈಗೊಳ್ಳಲಾಗಿದ್ದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು

ಶ್ರೀನಿವಾಸಪುರ: ತಾಲ್ಲೂಕಿಗೆ ಮಂಗಳವಾರ ಭೇಟಿ ನೀಡಿದ್ದ ಐಎಎಸ್ ಅಧಿಕಾರಿ ವಿನಾಯಕ್ ಘೋರ್ಪಡೆ, ನರೇಗಾ ಯೋಜನೆಯಡಿ ಕೈಗೊಳ್ಳಲಾಗಿದ್ದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಸುರಿಯುತ್ತಿದ್ದ ಮಳೆ ಮಧ್ಯೆ ತಾಲ್ಲೂಕಿನ ಕಾಡುದೇವಂಡಹಳ್ಳಿ ಗ್ರಾಮದ ಸಮೀಪ ಧನಂಜಯಗೌಡ ನರೇಗಾ ಯೋಜನೆಯಡಿ ಬೆಳೆಸಿರುವ ಡ್ರ್ಯಾಗನ್ ಫ್ರೂಟ್ ತೋಟಕ್ಕೆ ಭೇಟಿ ನೀಡಿ ಪರಿಶೀಲಸಿದರು. ರೈತರು ವಿಶೇಷ ಕಾಳಜಿ ವಹಿಸಿ ಬೆಳೆಸಿರುವ ತೋಟ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಗಾಂಡ್ಲಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾಗಿರುವ ಅಂಗನವಾಡಿ ಕಟ್ಟಡ ವೀಕ್ಷಿಸಿದರು. ಕಶೆಟ್ಟಿಪಲ್ಲಿ ಗ್ರಾಮದ ಹೊರವಲಯದಲ್ಲಿ ರೂ.5ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಸ್ಮಶಾನ ಅಭಿವೃದ್ಧಿ ಕಾಮಗಾರಿ, ರೂ.4 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಗೋಟುಂಟೆ ನಿರ್ಮಾಣ ಕಾಮಗಾರಿ, ರೂ.42 ಸಾವಿರ ವೆಚ್ಚದಲ್ಲಿ ನಿರ್ಮಿಸಲಾಗಿರುವ ಜಾನುವಾರು ನೀರಿನ ತೊಟ್ಟಿ ವೀಕ್ಷಿಸಿದರು.
ಆಲವಟ್ಟ ಗ್ರಾಮದ ಸಮೀಪ ರೂ.13.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂಜೀವಕ ಶೆಡ್, ಪಾತಪಲ್ಲಿ ಗ್ರಾಮದಲ್ಲಿ ರೂ.8 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಶಾಲಾ ಕೊಠಡಿಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಂಜನಿಯರ್‍ಗಳು ನರೇಗಾ ಕಾಮಗರಿಗಳ ಗುಣಮಟ್ಟ ಕೆಡದಂತೆ ಎಚ್ಚರ ವಹಿಸಬೇಕು. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಹಣ ದುರುಪಯೋಗಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಮಂಜುನಾಥಸ್ವಾಮಿ, ಎಡಿಪಿಸಿ ಸತೀಶ್, ಎಂಜಿನಿಯರ್‍ಗಳಾದ ಚೇತನ್, ಟಿ.ಸಿ.ರಾಜು ಇದ್ದರು.

Visit of Cardinal Filipe Neri Ferrao of Goa and Daman and the Patriarch of the East Indies to Bethany Mother House.

“Bethany Sisters are ready to undertake the synodal journey, by being synodal persons like Jesus, ready to walk with Him, grow in intimacy with Him, and witness to His love, to His concern, to His compassion especially those on the peripheries of the society. Thus all could be missionary disciples of Jesus” empowered Cardinal Filipe Neri Ferrao of Goa and Daman, the Patriarch of the East Indies and the Chairman of the Laity Commission in the CBCI after meeting Bethany Sisters on Saturday, December 10, 2022, at 3.30 PM. On his arrival, he paid tribute to the Servant of God Raymond FC Mascarenhas at his Memorial – A Monument that has stayed in place though the tides have changed. Along with the Cardinal, Sr Rose Celine BS, the Superior General of Bethany Congregation and her Councillors, SrShanthiPriya, Sr Mariette, Sr Santhosh Maria, Sr Sandhya and Sr Violet, the procurator General, Most Rev. Peter Machado, the Archbishop of Bangalore, SrJyoti,the former Superior General, Sr Cicilia Mendonsa BS, the Provincial Superior of Mangalore Province, Sr Shaila BS, the Administrator, Rev. Fr Cedric Prakash SJ, and Sr Dona BS, the Superior of Mother House were the other dignitaries who evoked spiritual blessings of the Servant of God. He passed by the Heritage Park – A plethora that is more than just the spiritual traditions of Bethany.

It was a singular honour and a joy granted to Bethany Sisters, Mangalore, to welcome and felicitate the Cardinal at Bethany Mother House. Sr Mariette, the General Councilor, facilitated the ceremonious welcome to the Prelate through her inspiring vibes. He was overwhelmed seeing the exuberant dancers who welcomed him with warm-hearted gestures to the Dhol beats full of vibrancy, enthusiasm, and energy. Offering a jubilant welcome, Sr Rose Celine, the Superior General, felicitated the Cardinal with a shawl. The General  Councilors joined her in showing gestures of honor to him and offered him a book on Founder Raymond FC Mascarenhas. All the gathered had an opportunity to make this event memorable through a photo session with His eminence.

The Cardinal was the Chief Guest for the Golden Jubilee Celebrations of the Mangalore Diocesan Pastoral Parishad (DPP) in the morning held at Father Muller Convention Centre, Mangalore. He is the Indian Prelate who was recently elevated to the rank of Cardinal by Pope Francis.

“ಜನತಾ ಅವಿಷ್ಕಾರ್ 2022” ವಿಜ್ಞಾನ ಮಾದರಿ ಸ್ಫರ್ಧೆಯಲ್ಲಿ ಸಂತ ಮೇರಿಸ್ ಪ್ರೌಢ ಶಾಲಾ ತಂಡಕ್ಕೆ ದ್ವಿತೀಯ ಸ್ಥಾನ

ಕುಂದಾಪುರ: ದಿನಾಂಕ 14-2-22 ರಂದು ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ “ಜನತಾ ಅವಿಷ್ಕಾರ್ 2022” ಎಂಬ ಕಾರ್ಯಕ್ರಮದಲ್ಲಿ ಕುಂದಾಪುರ ಹಾಗೂ ಬೈಂದೂರು ವಲಯದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ಸ್ಫರ್ಧೆ ಹಮ್ಮಿಕೊಂಡಿದ್ದು, ಇದರಲ್ಲಿ ಕುಂದಾಪುರ ಸಂತ ಮೇರಿಸ್ ಪ್ರೌಢ ಶಾಲೆಯ ನಾಲ್ಕು ವಿದ್ಯಾರ್ಥಿಗಳ ಒಂದು ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಇವರಿಗೆ ಸಂತ ಮೇರಿಸ್ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ಸ್ಮಿತಾ ಡಿಸೋಜಾ ಇವರ ಮಾರ್ಗದರ್ಶನ ನೀಡಿದ್ದರು.

ರೋಟರಿ ಶಿರ್ವದ ವತಿಯಿಂದ್ ಕ್ರಿಸ್ಮಸ್ ಆಚರಣೆ


ಶಿರ್ವ: ಶಿರ್ವ ರೋಟರಿ ಹಾಗೂ ಶಿರ್ವ ರೋಟರ್ಯಾಕ್ಟ್ ಕ್ಲಬ್ಬಿನ ಸಹಯೋಗದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಕುಟುಂಬ ಸಹಮಿಲನ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಶ್ರೀ. ಜಿತೇಂದ್ರ ಪುರ್ಟಾಡೊ ಮಾತನಾಡಿ, ಸ್ನೆಹ, ಪ್ರೀತಿ, ಭಾಂಧವ್ಯದ ಬೇಸುಗೆಯಾಗಿ ಕ್ರೈಸ್ತ ಬಾಂಧವರು ಈ ಆಚರಣೆ ಮಾಡುತ್ತಾರೆ ಎಂದು ಅವರು ತಿಳಿಸಿದರು.
ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಶಶಿಕಾಂತ ಕರಿಂಕರವರು ಮಾತನಾಡಿ, ‘ಏಸು ಸ್ವಾಮಿಯ ಮಾನವ ಜಗತ್ತಿಗೆ ನೀಡಿದ ಸಂದೇಶವು ರೋಟರಿಯ ತತ್ವ ಸಂದೇಶವು ಒಂದೇ ಆಗಿದೆ’ ಎಂದು ಹೇಳಿದರು.
ಶಿರ್ವ ರೋಟರಿ ಅಧ್ಯಕ್ಷ ಡಾ. ವಿಟ್ಠಲ್ ನಾಯಕ್ ಅಧ್ಯಕ್ಷತೆಯನ್ನು ವಹಿಸಿದ್ದರು. ಜಾಕ್ಸನ್ ಕಾಬ್ರಲ್ ಶುಭಶಂಶನೆ ನೀಡಿದರು. ಪಿಲೀಫ್ ಕಾಸ್ತಲೀನೊ ರವರು ಸಂತಾಕ್ಲಾಸ್ ಪಾತ್ರಧಾರಿಯಾಗಿ ಸಭೆಯಲ್ಲಿ ಆಗಮಿಸಿ ಸದಸ್ಯರಿಗೆ ಆಕರ್ಷಣೆ ನೀಡಿದರು. ರೋಟರಿ ಹಾಗೂ ಶಿರ್ವ ರೋಟರ್ಯಾಕ್ಟ್ ಸದಸ್ಯರು ವಿವಿಧ ಮನೊರಂಜನಾ ಸ್ಪರ್ಧೆ, ಹಾಡು, ನೃತ್ಯ ಗಳ ಮೂಲಕ ಮನೊರಂಜನೆ ನೀಡಿದರು.
ಮೆಲ್ವಿನ್ ಡಿಸೋಜಾ ಪ್ರಾಸ್ತಾವಿಕಾ ಮಾತನಾಡಿ, ಸ್ವಾಗತಿಸಿದರು. ಕಾರ್ಯದರ್ಶಿ ರೊ. ದಿನೇಶ್ ಕುಲಾಲ್ ವಂದಿಸಿದರು.

ಕಂದಾವರ ಜಯಶೀಲ ಶೆಟ್ಟಿ ಅವರಿಗೆ ಜ್ಞಾನಸಿಂಧು ರಾಜ್ಯ ಪ್ರಶಸ್ತಿ

ಕೋಡಿ ಹಾಜಿ ಕೆ ಮೊಹಿದ್ದಿನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕ,ರಾಜ್ಯ ಸಂಪನ್ಮೂಲ ವ್ಯಕ್ತಿ ಕಂದಾವರ ಜಯಶೀಲ ಶೆಟ್ಟಿ ಅವರಿಗೆ ಶಿಕ್ಷಣ ಜ್ಞಾನ ಪತ್ರಿಕೆ ಕೊಡಮಾಡುವ ಪ್ರತಿಷ್ಠಿತ ಜ್ಞಾನ ಸಿಂಧು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಪ್ರಸ್ತುತ ಇವರು ಉಡುಪಿ ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಶಸ್ತಿಯನ್ನು ಡಿ.17ರಂದು ಶನಿವಾರ ಹೊಸದುರ್ಗದಲ್ಲಿ ನಡೆಯವ ಪತ್ರಿಕೆ ರಾಜ್ಯ ಸಮಾವೇಶದಲ್ಲಿ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕುಂದಾಪುರದ ಆರ್. ಎನ್. ಶೆಟ್ಟಿ‌ ಪದವಿ ಪೂರ್ವ ಕಾಲೇಜಿನ‌ಲ್ಲಿ ವಾರ್ಷಿಕೋತ್ಸವ

ಕುಂದಾಪುರ: “ಶಿಕ್ಷಣದಿಂದ ವ್ಯಕ್ತಿತ್ವದಲ್ಲಿ ಪಡೆದ ಬದಲಾವಣೆಯನ್ನು ನಿತ್ಯ ಜೀವನದಲ್ಲಿ ಹೇಗೆ ಬಳಸಿಕೊಳ್ಳುತ್ತೀರಿ ಅನ್ನುವುದು ಮುಖ್ಯ. ಈ ನಿಟ್ಟಿನಲ್ಲಿ ಉನ್ನತ ವ್ಯಾಸಂಗ ಮುಗಿಸಿದ ವಿದ್ಯಾರ್ಥಿಗಳು ಭಾರತದಲ್ಲಿಯೇ ಉದ್ಯೋಗ ಪಡೆದು, ದೇಶದ ರಾಷ್ಟ್ರೀಯ ಆದಾಯವನ್ನು ಹೆಚ್ಚಿಸುವಂತಾಗಬೇಕು’ ಎಂದು ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿಯ ಎಮ್.ಜಿ.ಎಮ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ರವರು ತಿಳಿಸಿದರು‌.

ಇನ್ನೋರ್ವ ಮುಖ್ಯ ಅತಿಥಿ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ಇವರು ಪದವಿ ಪೂರ್ವ ವಿಭಾಗದ ಮೂರು ವಿಭಾಗಗಳಲ್ಲಿ ವಿದ್ಯಾರ್ಥಿಗಳು ಯಾವ ವಿಭಾಗವನ್ನು ಆಯ್ಕೆ ಮಾಡಿದರೂ ಶುದ್ಧ ಮನದ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಜೀವನದಲ್ಲಿ ಸಂತೃಪ್ತಿ ಪಡೆಯಲು ಸಾಧ್ಯ ಎಂದು ತಿಳಿಸಿದರು. 

ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಸಂಚಾಲಕರೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಶ್ರೀ ಸುಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಶ್ಲಾಘಿಸಿದರು.


ಕಾಲೇಜಿನ ಆಡಳಿತ ಮಂಡಳಿ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ಶ್ರೀ ಸೀತಾರಾಮ ನಕ್ಕತ್ತಾಯರು ಅತಿಥಿಗಳನ್ನು ಸ್ವಾಗತಿಸಿದರು. ಕುಂದಾಪುರ ಎಜುಕೇಶನ್ ಸೊಸೈಟಿಯ ಜೊತೆ ಕಾರ್ಯದರ್ಶಿ ಶ್ರೀ ಸುಧಾಕರ್ ಶೆಟ್ಟಿ  ಭಾಂಢ್ಯ ಮತ್ತು ಸದಸ್ಯರಾದ ಶ್ರೀ ಅರುಣ್ ಕುಮಾರ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ‌ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ವಾರ್ಷಿಕ ಶೈಕ್ಷಣಿಕ ವರದಿ ವಾಚಿಸಿದರು. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಶ್ರೀಮತಿ ಜಯಶೀಲಾ ಪೈಯವರು ಸಾಧಕ ವಿದ್ಯಾರ್ಥಿಗಳ ಸನ್ಮಾನ ಪತ್ರ ವಾಚಿಸಿದರು.  ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಸುಷ್ಮಾ ಶೆಣೈ, ಶ್ರೀಮತಿ ಶುಭಾ ಎಂ, ಶ್ರೀಮತಿ ಅರಣಾ ಹೊಳ್ಳ, ಹಾಗೂ ಜಾನೀಸ್ ನತಾಶಾ ಡಿಸೋಜಾರವರು ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿದ್ಯಾರ್ಥಿಗಳಾದ ಜೊಯೆಲ್ ಜೋ ಹಾಗೂ ಅಬು ಸುಫಿಯಾನ್ ಅತಿಥಿಗಳನ್ನು  ಪರಿಚಯಿಸಿದರು‌. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ.ಬಿಯವರು ಧನ್ಯವಾದ ಸಲ್ಲಿಸಿದರು‌. ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಸಾಹಿತ್ಯ ಮತ್ತು ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಸೌಮ್ಯ ಇವರು ಕಾರ್ಯಕ್ರಮ ನಿರೂಪಿಸಿದರು. 

ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಸೂಕ್ಷ್ಮ ಧ್ಯಾನದ ಬಗ್ಗೆ ಕಾರ್ಯಾಗಾರ

ಕೋಲಾರ,ಡಿ.13 ನಗರದ ಹೊರವಲಯದಲ್ಲಿರುವ ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಸೂಕ್ಷ್ಮ ಧ್ಯಾನದ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಕೆನಡಾದ ಪೀಸ್ ಟ್ರೀ ಸಂಸ್ಥೆಯ ಡಾ. ಸುಮನ್ ಕೊಲ್ಲಿಪಾರ ಅವರು ಕ್ಷೇಮ ಹಾಗೂ ಏಕತಾ ಭಾವ ಸ್ವ-ಸಹಾನುಭೂತಿ ಸಾಧಿಸುವಲ್ಲಿ ಹೇಗೆ ಸಹಕಾರಿ ಎಂಬುದನ್ನು ತಿಳಿಸಿದರು. ಸೂಕ್ಷ್ಮ ಧ್ಯಾನ ಇದೊಂದು ಪ್ರಾಚೀನ ಚಿಕಿತ್ಸಾ ಪದ್ಧತಿಯಾಗಿದ್ದು, ಇದನ್ನು ಮಾಸ್ಟರ್
ಸುನೀತಾ ಅಮ್ಮ ಅವರು ಪುನರ್ವಿನ್ಯಾಸಗೊಳಿಸಿದ್ದಾರೆ. ಈ ಚಿಕಿತ್ಸಾ ಪದ್ಧತಿಯು ಆಧುನಿಕ ಜೀವಶೈಲಿಯ ಅತಿ ಒತ್ತಡವನ್ನು ನಿಭಾಯಿಸಿಕೊಂಡು, ಯೋಗದ ಉನ್ನತ ಸ್ಥಿತಿಯಾದ ಸಮಾಧಿಯನ್ನು (ಏಕತಾ ಭಾವ) ಸುಲಭವಾಗಿ ತಲುಪಲು ಹೇಗೆ ಸಹಕಾರಿಯಾಗಿದೆ ಎಂಬುದನ್ನು ತಿಳಿಸಿದರು.
ದೇಹದಲ್ಲಿರುವ ಕೋಟ್ಯಂತರ ಜೀವಕೋಶಗಳನ್ನು ದುರಸ್ತಿಗೊಳಿಸಿ, ನವ ಚೈತನ್ಯವನ್ನುತುಂಬಿ, ಪುನಶ್ಚೇತನಗೊಳಿಸಲು ಸೂಕ್ಷ್ಮ ಧ್ಯಾನ ಅವಕಾಶ ಮಾಡಿಕೊಡುವುದಲ್ಲದೇ, ಮನಸ್ಸು ಪೂರ್ಣ ನಿಶ್ಚಲ ಸ್ಥಿತಿಯನ್ನು ಅನುಭವಿಸಿ, ಆತ್ಮದ ನಿಜಸ್ಥಿತಿಯಾದ ಪೂರ್ಣಾನಂದವನ್ನು ಆಸ್ವಾದಿಸಲು ಹೇಗೆಲ್ಲ ದಾರಿ ಮಾಡಿಕೊಡುತ್ತದೆ ಎಂಬುದನ್ನು ವಿವರಿಸಿದರು. ಒಟ್ಟಾರೆಯಾಗಿ ಹೇಳುವುದಾದರೆ ಸೂಕ್ಷ್ಮ ಇದು ಕ್ಷೇಮ, ಪೂರ್ಣತೆ ಹಾಗೂ ಏಕತಾ ಭಾವವನ್ನು ಹೊಂದಲು ಇರುವ ಮಾರ್ಗ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು.