HOLY ROSARY CHURCH, KUNDAPUR – 450 th JUBILEE SOUVENIR 2021

ಸಂತ ಮೇರಿ ಮಹಾವಿದ್ಯಾಲಯ ಶಿರ್ವದಲ್ಲಿ ವೆಬ್ ಅಭಿವೃದ್ಧಿ ಕಾರ್ಯಗಾರ

ಶಿರ್ವ:ವೆಬ್ ಅಭಿವೃದ್ಧಿಯು ಇಂಟರ್ನೆಟ್ ಅಥವಾ ಇಂಟ್ರಾನೆಟ್ ಗಾಗಿ ವೆಬ್‌ಸೈಟ್ ಅನ್ನು ಅಭಿವೃದ್ಧಿಪಡಿಸುವಲ್ಲಿ ಒಳಗೊಂಡಿರುವ ಕೆಲಸವಾಗಿದೆ. ವೆಬ್ ಅಭಿವೃದ್ಧಿಯು ಸರಳ ಪಠ್ಯದ ಏಕ ಸ್ಥಿರ ಪುಟವನ್ನು ಅಭಿವೃದ್ಧಿಪಡಿಸುವುದರಿಂದ ಹಿಡಿದು ಸಂಕೀರ್ಣ ವೆಬ್ ಅಪ್ಲಿಕೇಶನ್‌ಗಳು, ಎಲೆಕ್ಟ್ರಾನಿಕ್ ವ್ಯವಹಾರಗಳು ಮತ್ತು ಸಾಮಾಜಿಕ ನೆಟ್‌ವರ್ಕ್ ಸೇವೆಗಳವರೆಗೆ ಇರುತ್ತದೆ.
ವೆಬ್ ಅಭಿವೃದ್ಧಿಯು ಬೆಳೆಯುತ್ತಿದೆ ಮತ್ತು ಅದರ ಪರಿಧಿಯನ್ನು ವಿಸ್ತರಿಸುತ್ತಿದೆ.
ವೆಬ್ ಇಂಟರ್‌ಫೇಸ್‌ಗಳನ್ನು ಸ್ವಯಂಚಾಲಿತಗೊಳಿಸುವುದರಿಂದ ಹಿಡಿದು ಮಿಷನ್-ನಿರ್ಣಾಯಕ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸುವವರೆಗೆ, ವೆಬ್ ಅಭಿವೃದ್ಧಿಯು ಕನಸುಗಳನ್ನು ವಾಸ್ತವಿಕವಾಗಿ ಪರಿವರ್ತಿಸುತ್ತಿದೆ.ಕಂಪ್ಯೂಟರ್ ಪದವೀಧರರು ತಮ್ಮ ಕೌಶಲ್ಯಗಳನ್ನು ನಿಯಮಿತವಾಗಿ
ಅಭಿವೃದ್ಧಿ ಕೌಶಲ್ಯಗಳಲ್ಲಿ ಪ್ರಾವೀಣ್ಯತೆಯನ್ನು ಹೊಂದಲು ಉದ್ಯಮಕ್ಕೆ ಇದು ಅತ್ಯಂತ ಅಗತ್ಯವಾಗಿದೆ. ಇತ್ತೀಚಿನ ತಂತ್ರಜ್ಞಾನಗಳನ್ನು ಅಪ್ಡೇಟ್ ಮತ್ತು ಅಪ್‌ಗ್ರೇಡ್ ಆಗುವ ಮೂಲಕ ವಿದ್ಯಾರ್ಥಿಗಳಿಗೆ ಉದ್ಯಮದಲ್ಲಿ ವಿಫಲ ಉದ್ಯೋಗ ಅವಕಾಶಗಳಿವೆ ಎಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಮತ್ತು ಶ್ರೀ ಮದ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜ್, ಬಂಟ ಕಲ್ಲು ಸಂಯುಕ್ತವಾಗಿ ಒಡಂಬಡಿಕೆಯ ಅನ್ವಯ ಡಿಸೆಂಬರ್ 12 ಮತ್ತು 13 ರಂದು ಏರ್ಪಡಿಸಿದ ವೆಬ್ ಅಭಿವೃದ್ಧಿ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಬಂಟಕಲ್ಲಿ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯ ಜೆ ಭಟ್ ಮಾತನಾಡಿದರು.

ಪ್ರಸ್ತುತ ಯುಗದಲ್ಲಿ ವಿದ್ಯಾರ್ಥಿಗಳು ಉದ್ಯಮದ ಗುಣಮಟ್ಟವನ್ನು ಪೂರೈಸುವ ಅಗತ್ಯವಿದೆ. ಕಾಲೇಜಿನ ವಿದ್ಯಾರ್ಥಿದೆಸೆಯಲ್ಲೇ ಉತ್ತಮ ಉದ್ಯೋಗವನ್ನು ಪಡೆಯಲು ಅವರು ಪ್ರಸ್ತುತ ಪ್ರವೃತ್ತಿಗಳನ್ನು ತಿಳಿದುಕೊಳ್ಳಬೇಕು ಮತ್ತು ಅವರ ಕೌಶಲ್ಯಗಳನ್ನು ಸುಧಾರಿಸಿಕೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು

ಬಂಟಕಲ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರಾದ ಸಹನಾ ಮತ್ತು ಸೌಮ್ಯ ಎಸ್ ರವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರಾತೇಕ್ಷಿಕ ಮೂಲಕ ಕಾರ್ಯಗಾರ ಬಗ್ಗೆ ತರಬೇತಿ ನೀಡಿದರು.

ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಾಹಿತಿ ತಂತ್ರಜ್ಞಾನ ಕ್ಲಬ್ ನ ನಿರ್ದೇಶಕ ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್ ರವರು ಕಾರ್ಯಗಾರದ ಮುಖ್ಯ ಉದ್ದೇಶ ಮತ್ತು ಪ್ರಾಮುಖ್ಯತೆ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಪ್ರಕಾಶ್, ಸುಷ್ಮಾ, ದಿವ್ಯಶ್ರೀ,ಬಿಸಿಎ ವಿಭಾಗದ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು. ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಾದ ರಕ್ಷಿತ್ ಎಚ್ ಕಲ್ಮಾಡಿ, ಸಂಪತ್ ಕುಮಾರ್, ಯಜ್ಞೇಶ್,ವಿಶ್ವಾಸ್ ಪ್ರಭು ಕಾಲೇಜಿನ ಅನುಪ್ ನಾಯಕ್, ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದರು. ಕು. ಪದ್ಮಶ್ರೀ ಮತ್ತು ಬಳಗ ಪ್ರಾರ್ಥಿಸಿ, ಗೌರವ್ ಬಂಗೇರ ವಂದಿಸಿದರು. ವಿಕ್ಷಾ ಶೆಟ್ಟಿ ಸ್ವಾಗತಿಸಿ, ರಿತ ರಿಷಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಕುಸ್ತಿ ಪಂದ್ಯಾಟ:ಪುರುಷ/ಮಹಿಳಾ ವಿಭಾಗಳಲ್ಲಿ ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಪುರುಷರ ಮತ್ತು ಮಹಿಳಾ ವಿಭಾಗದಗೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಸಮಗ್ರ ಪ್ರಶಸ್ತಿಯೊಂದಿಗೆ ಪ್ರಥಮ ಸ್ಥಾನ ಪಡೆಯಿತು.
ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಮಂಗಳೂರಿನ ಎಸ್.ಜಿ.ಸಿ ಕಾಲೇಜು, ತೃತೀಯ ಸ್ಥಾನವನ್ನು ವಿಶ್ವವಿದ್ಯಾಲಯ ಕಾಲೇಜು, ಮಂಗಳೂರು ಮತ್ತು ಚತುರ್ಥ ಸ್ಥಾನವನ್ನು ಮಂಗಳೂರಿನ ಕಾರ್ ಸ್ಟ್ರೀಟ್ ನ ಜಿ.ಎಫ್.ಜಿ.ಸಿ ಕಾಲೇಜು ಪಡೆಯಿತು.


ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ವಿಶ್ವವಿದ್ಯಾಲಯ ಕಾಲೇಜು ಮಂಗಳೂರು, ತೃತೀಯ ಸ್ಥಾನವನ್ನು ಮಂಗಳೂರು ವಿಶ್ವವಿದ್ಯಾಲಯ, ಕೊಣಾಜೆ, ಚತುರ್ಥ ಸ್ಥಾನವನ್ನು ಉಜಿರೆಯ ಎಸ್.ಡಿ.ಎಂ ಕಾಲೇಜು ಪಡೆಯಿತು.
ಬಹುಮಾನ ವಿತರಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಪೋಲಿಸ್ ಅಧಿಕಾರಿ ಆದರ್ಶ್ ಕುಮಾರ್ ಶೆಟ್ಟಿ, ವಕ್ವಾಡಿಯ ಗುರು ಹನುಮ ಕೇಟರಿಂಗ್ ಇದರ ಭರತ್ ಕುಮಾರ್ ಶೆಟ್ಟಿ, ಕಾಂತಾರ ಸಿನಿಮಾ ಖ್ಯಾತಿಯ ರಕ್ಷಿತ್ ಶೆಟ್ಟಿ, ವೀಕ್ಷಕರಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ಡಾ. ಹರಿದಾಸ ಕೂಳೂರು, ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಕುಸ್ತಿ ಸಂಘಟನೆಯಿಂದ ಕಾಲೇಜಿನ ದೈಹಿಕ ನಿರ್ದೇಶಕ ಶಂಕರನಾರಾಯಣ ಅವರನ್ನು ಸನ್ಮಾನಿಸಲಾಯಿತು.

ವಿದ್ವಾನ್ ವಾಗೀಶ್ ಭಟ್ ಭಕ್ತಿ ಸಂಗೀತ ಕಾರ್ಯಕ್ರಮ


ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಮೂಲ ಪುರುಷ ಶ್ರೀ ಸುಬ್ರಾಯ ಆಚಾರ್ಯ (ಸುಬ್ಬ ಪೈ) ಇವರ ಪುಣ್ಯ ಸ್ಮರಣೆಯ ಅಂಗವಾಗಿ ನಾದೋಪಾಸಕ, ವಿದ್ವಾನ್ ವಾಗೀಶ್ ಭಟ್ ಅವರಿಂದ ಭಕ್ತಿ ಸಂಗೀತ ಸಾಂಸ್ಕøತಿಕ ಕಾರ್ಯಕ್ರಮ ದೇವಸ್ಥಾನದಲ್ಲಿ ನಡೆಯಿತು.
ತಬಲಾದಲ್ಲಿ ವಿದ್ವಾನ್ ಸತೀಶ ಹಂಪಿಹೋಳಿ ಹಾಗೂ ಹಾರ್ಮೋನಿಯಂನಲ್ಲಿ ಲಕ್ಷ್ಮೀ ಗೋವಿಂದ ಭಟ್ ಸಹಕರಿಸಿದರು.

ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು : ಕೆ.ಎಲ್.ಜಯರಾಂ

ಶ್ರೀನಿವಾಸಪುರ: ಎಲ್ಲಾ ಕಡೆಗಳಲ್ಲಿ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಗ್ರೇಡ್ 2 ತಹಶೀಲ್ದಾರ್ ಕೆ.ಎಲ್.ಜಯರಾಂ ಹೇಳಿದರು.
ತಾಲ್ಲೂಕಿನ ಲಕ್ಷ್ಮೀಪುರ ಪ್ರೌಢ ಶಾಲೆ ಆವರಣದಲ್ಲಿ ಜಿಲ್ಲಾ ಎನ್‍ಡಿಆರ್‍ಎಫ್ ಇಲಾಖೆ, ತಾಲ್ಲೂಕು ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪ್ರೌಢ ಶಾಲೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಶಾಲಾ ಸುರಕ್ಷತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎನ್‍ಡಿಆರ್‍ಎಫ್ ಇನ್ಸ್‍ಪೆಕ್ಟರ್ ಅಜಯ್ ಕುಮಾರ್ ಮಾತನಾಡಿ, ಸುರಕ್ಷತೆ ಸಾಮಾಜಿಕ ಜವಾಬ್ದಾರಿ. ಅದರ ನಿರ್ವಹಣೆ ಪ್ರತಿಯೊಬ್ಬರಿಗೂ ಸೇರಿದ್ದು. ಹಾಗಾಗಿ ವಿದ್ಯಾವಂತ ಸಮುದಾಯ ಸುರಕ್ಷತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಬೆಂಕಿ, ನೀರು, ವಿಷ ಜಂತುಗಳಿಂದ ರಕ್ಷಣೆ ಪಡೆಯುವ ಬಗ್ಗೆ ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಪ್ರಥಮ ಚಿಕಿತ್ಸೆ ಕಲಿಯಬೇಕು. ತುರ್ತು ಪರಿಸ್ಥಿತಿಯಲ್ಲಿ ಅಗ್ನಿಶಾಮಕ ದಳ, 108 ವಾಹನ, ಮಕ್ಕಳ ಸಹಾಯವಾಣಿಯಂಥ ಸಂಸ್ಥೆಗಳ ಸೇವೆ ಪಡೆಯಬೇಕು. ತುರ್ತು ಸೇವೆ ನೀಡುವ ದೂರವಾಣಿ ಸಂಖ್ಯೆಗಳನ್ನು ಇಟ್ಟುಕೊಳ್ಳಬೇಕು ಎಂದು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಶಾಲಾ ಅವರಣದಲ್ಲಿ ಗಿಡ ನೆಡಲಾಯಿತು. ಪರಿಸರ ಮಾಲೀನ್ಯದ ದುಷ್ಪರಿಣಾಮ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಲಾಯಿತು.
ಪಿಡಿಒ ಮಂಗಳಾಂಬ, ಕಂದಾಯ ನಿರೀಕ್ಷಕ ಅಬೀಬ್, ಎನ್‍ಡಿಆರ್‍ಎಫ್ ಸಬ್ ಇನ್ಸ್‍ಪೆಕ್ಟರ್ ರಾಜ್ ಕುಮಾರ್, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಗೋವಿಂದರಾಜು, ಮುಖ್ಯ ಶಿಕ್ಷಕ ಕೆ.ಆರ್.ಶ್ರೀನಿವಾಸಲು, ಶಿಕ್ಷಕರಾದ ಸತೀಶ್ ರೆಡ್ಡಿ, ವೆಂಕಟರಮಣ, ಶಿಕ್ಷಕಿ ಅರುಣ, ಜಿಲ್ಲಾ ಅಗ್ನಿಶಾಮಕ ದಳಸ ಅಧಿಕಾಇ ಮುನಿರಾಜು, ತಾಲ್ಲೂಕು ಘಟಕದ ಅಧಿಕಾರಿ ಮುನಿರಾಜು, ಜಬೀವುಲ್ಲಾ ಇದ್ದರು.

ಬೈಂದೂರು ಚರ್ಚಿನ ನೂತನ ಪಾಲನಾಮಂಡಳಿ – ಉಪಾಧ್ಯಕ್ಷರಾಗಿ ಸ್ಟೇಪನ್ ಡಾಯಸ್ ಆಯ್ಕೆ

ಇಲ್ಲಿನ ಹೋಲಿಕ್ರಾಸ್ ಚರ್ಚಿನಲ್ಲಿ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೊರವರ ನೇತ್ರತ್ವದಲ್ಲಿ ನೆಡೆದ 2023-2025ನೇ ಸಾಲಿನ ಪಾಲನಾ ಮಂಡಳಿಯ ಚುನಾವಣೆಯಲ್ಲಿ ನೂತನ ಉಪಾಧ್ಯಕ್ಷರಾಗಿ ಸ್ಟೇಪನ್ ಡಾಯಸ್, ಕಾರ್ಯದರ್ಶಿಯಾಗಿ ವೀಣಾ ಫೆರ್ನಾಂಡಿಸ್, ಆಯೋಗಗಳ ಸಂಯೋಜಕಿಯಾಗಿ ಅನಿತಾ ನಜ್ರೆತ್ ರವರು ಆಯ್ಕೆಯಾಗಿರುತ್ತಾರೆ ಎಂದು ಮಾಧ್ಯಮ ಪ್ರತಿನಿಧಿ ಲಾರೆನ್ಸ್ ಫೆರ್ನಾಂಡಿಸ್ ರವರ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಪ್ರಧಾನ ಕಛೇರಿಯಲ್ಲಿ ರೋಜರಿ ಸಭಾ ಭವನ ಉದ್ಘಾಟನೆ – ಸಂಸ್ಥಾಪಕರ ದಿನಾಚರಣೆ

ಕುಂದಾಪುರ, ಡಿ.11: ಹೆಸರಾಂತ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆ ತನ್ನ 31 ವರ್ಷಕ್ಕೆ ಕಾಲಿಡುವ ಸಂದರ್ಭದಲ್ಲಿ ಕುಂದಾಪುರದ ಪ್ರಧಾನ ಕಛೇರಿಯ ಕಟ್ಟಡದಲ್ಲಿ ಸುಸಜ್ಜಿತ ನಿರ್ಮಿಸಲ್ಪಟ್ಟ ರೋಜರಿ ಸಭಾಭವನ ಉದ್ಘಾಟನ ಕಾರ್ಯಕ್ರಮ ಮತ್ತು ಸಂಸ್ಥಾಪಕರ ದಿನವನ್ನು ನೂತನ ಸಭಾಭವನದಲ್ಲಿ ಆಚರಿಸಲಾಯಿತು.
ನೂತನ ಸಭಾಭವನವನ್ನು ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.ಇದರ ಅಧ್ಯಕ್ಷ ಜೊನ್ಸನ್ ಡಿ ಆಲ್ಮೇಡಾ ಉದ್ಘಾಟಿಸಿ “ನಮ್ಮ ಸಂಸ್ಥೆಯ ಹಲವಾರು ಯೋಜನೆಗಳಲ್ಲಿ ಈ ಸಭಾಭವನದ ಕನಸು ಒಂದಾಗಿತ್ತು, ಕಡಿಮೆ ಖರ್ಚಿನಲ್ಲಿ ಉತ್ತಮ ರೀತಿಯಲ್ಲಿ ಇದನ್ನು ನಿರ್ಮಿಸಿದ್ದೇವೆ, ಜೊತೆಗೆ ನಾವು ಇಂದು ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸುತಿದ್ದೇವೆ. ಇದು ಕೂಡ ನಮ್ಮ ಬಹಳ ದಿನಗಳ ಆಶೆಯಾಗಿತ್ತು, ಯಾಕೆಂದರೆ, ನಮ್ಮ ಹಿರಿಯರು ಬಹಳ ಒತ್ತಾಸೆಯಿಂದ ನಮ್ಮ ಹಿತಕ್ಕಾಗಿ ಸ್ಥಾಪಿಸಲ್ಪಟ್ಟ ಸೊಸೈಟಿಯಾಗಿದ್ದು. ಅವರೆಲ್ಲಾ ಈ ಸಂಸ್ಥೆಗೆ ನಿಸ್ವಾರ್ಥದಿಂದ ಸೇವೆ ನೀಡಿದ್ದಾರೆ,ಅವರ ನೆಟ್ಟ ಗೀಡ ಇಂದು ಹೆಮ್ಮರವಾಗಿ ಬೆಳೆದಿದೆ, ಅವರನೆಲ್ಲಾ ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಆಗಿದೆ ಎನ್ನುತ್ತಾ, ಬ್ಯಾಂಕಿನ ಏಳಿಗೆಯ ಜೊತೆ ನಮ್ಮ ಸಂಸ್ಥೆಯ ಸದಸ್ಯರ ಮಕ್ಕಳಿಗೆ ಕಡಿಮೆ ದರದಲ್ಲಿ ಶಿಕ್ಷಣಕ್ಕೆ ಸಾಲ ಕೊಡುವ ಯೋಜನಯನ್ನು ಜ್ಯಾರಿಗೊಳಿಸಿದ್ದೇವೆ, ಇದರ ಪ್ರಯೋಜನವನ್ನು ಸದಸ್ಯರು ಸದುಪಯೋಗವನ್ನು ಸದಸ್ಯರು ಪಡಿಸಿಕೊಳ್ಳಬೇಕೆಂದು” ಅವರು ತಿಳಿಸಿದರು.
ದೀಪ ಬೆಳಗಿಸಿ ಆಶಿರ್ವಚನ ಮಾಡಿದ ಸಂಸ್ಥೆಯ ಅಧ್ಯಾತ್ಮಿಕ ನಿರ್ದೇಶಕ ಕುಂದಾಪುರ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಸಂಸ್ಥೆ ವಿಶ್ವಾಸ, ಪ್ರಮಾಣಿಕತೆಯಿಂದ ಸೇವೆ ನೀಡಿದ್ದರಿಂದ ಸಮಾಜದಲ್ಲಿ ಗುರುತಿಸಿಕೊಂಡಿದೆ, ಇದರ ಯಶಸ್ಸಿ ಹಿಂದೆ ಸಂಸ್ಥಾಪಕರು, ನಿರ್ದೇಶಕರು ಮತ್ತು ಸಿಬಂದಿ ವರ್ಗ ಕಾರ್ಯಕ್ಷಮತೆ ಇದೆ, ಆದರೆ ರೋಜರಿ ಅಮ್ಮನವರ ಆಶಿರ್ವಾದದಿಂದ ಸ್ಥಾಪನೆಯಾದ ಈ ಸಂಸ್ಥೆಯ ಸಂಸ್ಥಾಪಕಿ ರೋಜರಿ ಮಾತೆಯೆ ಆಗಿದ್ದಾರೆ ಎಂದು ತಿಳಿಸಿ, ಅವರು ಇನ್ನೂ ಹೆಚ್ಚಿನದನ್ನು ಆಶಿರ್ವದಿಸಲಿ” ಎಂದು ಹರಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಬ್ರಹ್ಮಾವರ ಇದರ ಅಧ್ಯಕ್ಷರಾದ ವಲೇರಿಯನ್ ಮಿನೇಜಸ್ “ಸಹಕಾರಿ ಸಂಘ ಅಂದರೆ ಒಂದೊ ಅಟೋ ರಿಕ್ಷಾ ಇದ್ದಂತೆ, ಅದರ ಮುಂದಿನ ಚಕ್ರ ಸದಸ್ಯರು ಹಿಂದಿನ ಎರಡು ಚಕ್ರಗಳಲ್ಲಿ ಒಂದು ನಿರ್ದೇಶಕರು ಮತ್ತೊಂದು ಸಿಬಂದಿ, ಈ ಮೂವರು ಸಮಾನವಾಗಿ ನಡೆದರೆ, ಸಂಘ ಸುರಕ್ಷಿತವಾಗಿರುವುದು, ಸಂಘಕ್ಕೆ ಕಟ್ಟಡ, ಬ್ರಾಂಚುಗಳು, ಕೋಟಿಕಟ್ಟಲೆ ವ್ಯವಹಾರ ಮುಖ್ಯವಲ್ಲ, ಸಂಘದ ಸದಸ್ಯರ್ ಹಿತದ್ರಷ್ಟಿ ಮುಖ್ಯ ಸದಸ್ಯರಿಗೆ ಉಪಯೋಗ ಆಗುವಂತಹ ಯೋಜನೆಗಳಿರಬೇಕು, ಇಂತಹ ಸಹಕಾರಿ ಸಂಘಗಳು ಸೇರಿಕೊಂಡು ಒಂದು ಒಕ್ಕೂಟ ಆದರೆ ಉತ್ತಮ, ಎಲರೂ ಸೇರಿ ಉಪಯುಕ್ತ ಸಲಹೆ ಸೂಚನೆಗಳನ್ನು ಪಡೆದುಕೊಂಡು ಪಡೆದು, ಸಹಕಾರಿ ಸಂಸ್ಥೆಗಳು ಇನ್ನಷ್ಟು ಯಶಸ್ವಿಯಾಗಿ ಮುನ್ನಡೆಸಬಹುದು” ಎಂದು ಅಭಿಪ್ರಾಯ ಪಟ್ಟರು.
ಸಂಸ್ಥೆಯ ಸ್ಥಾಪಕ ನಿರ್ದೇಶಕರಾದ ಫಿಲಿಫ್ ಡಿಕೋಸ್ತಾ ರೋಜರಿ ಕ್ರೆಡಿಟ್ ಸಂಸ್ಥೆ ನಡೆದು ಬಂದ ನೋಟವನ್ನು ಸಭೆಯ ಮುಂದಿಟ್ಟರು.
ಈ ಸಂದರ್ಭದಲ್ಲಿ ಈ ಸಹಕಾರಿ ಸಂಘದ ಕನಸು ಕಂಡ ಸ್ಥಾಪಕ ಅಧ್ಯಕ್ಷರಾದ ಪಡುಕೋಣೆಯ ಆಲ್ಫೊನ್ಸ್ ಲೋಬೊ (ದಿವಂಗತ) ಅವರ ಪರವಾಗಿ ಅವರ ಪುತ್ರ ನವೀನ್ ಲೋಬೊ, ನಂತರ ಅಧ್ಯಕ್ಷರಾದ ಬೇಸಿಲ್ ಡಿಸೋಜಾ, ದಿವಗಂತ ಮಾರ್ಟಿನ್ ಡಾಯಸ್ ಪರವಾಗಿ ಅವರ ಪತ್ನಿ ಶಾಂತಿ ಡಾಯಸ್, ಫಿಲಿಫ್ ಡಿಕೋಸ್ತಾ, ಎ.ಜೆ ಬುತೆಲ್ಲೊ ಇವರನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ಎಲ್ಲಾ ಮಾಜಿ ನಿರ್ದೇಶಕರನ್ನು ಸನ್ಮಾನಿಸಲಾಯಿತು, ಈ ಕಾರ್ಯಕ್ರಮವನ್ನು ಹಾಲಿ ನಿರ್ದೇಶಕಿ ಡಯಾನಾ ಡಿಆಲ್ಮೇಡಾ ನೇರವೆರಿಸಿದರು. ಎಲ್ಲಾ ಹಾಲಿ ನಿದೇಶಕರನ್ನು ಕೂಡ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಹಾಲಿ ನಿರ್ದೇಶಕಿ ಶಾಂತಿ ಆರ್. ಕರ್ವಾಲ್ಲೊ ನಡೆಸಿಕೊಟ್ಟರು. ಸುಧಿರ್ಘ ಸೇವೆ ನೀಡಿ ದಿವಂಗತ ಮುಖ್ಯ ನಿರ್ವಹಣಾಧಿಕಾರಿ ಪಾಸ್ಕಲ್ ಡಿಸೋಜಾರ ಪರವಾಗಿ ಅವರ ಪತ್ನಿ ವಿನೀತಾ ಡಿಸೋಜಾರನ್ನು ಸನ್ಮಾನಿಸಲಾಯಿತು. ಸಭಾಭವನ ನಿರ್ಮಿಸುವಲ್ಲಿ ಸಹಕಾರ ನೀಡಿದ ಎಂಜಿನಿಯರ್ ಮತ್ತು ಇತರರಿಗೆ ಗುರುತಿಸಲಾಯಿತು.
ಸಂಸ್ಥೆಯ ಉಪಾಧ್ಯಕ್ಷ ಕಿರಣ್ ಮೆಲ್ವಿನ್ ಲೋಬೊ ಸ್ವಾಗತಿಸಿದರು, ಮುಖ್ಯ ನಿರ್ವಹಣಾಧಿಕಾರಿ ಮೇಬಲ್ ಡಿಆಲ್ಮೇಡಾ ವಂದಿಸಿದರು. ನಿರ್ದೇಶಕ ವಿನೋದ್ ಕ್ರಾಸ್ಟೊ ನಿರೂಪಿಸಿದರು.

PASSED AWAY MRS. THERESA D’SA (89) KUNDAPUR-THE FUNERAL WILL BE HELD ON12TH DECEMBER

PASSED AWAY MRS. THERESA D’SA (89) KUNDAPUR

WIFE OF LATE PHILIP D’SA

MOTHER OF STANLEY / RANJINI, DOROTHY, DAINY / DYMPHNA, JEEVAN / VEENA, ALEXANDER & VINOD.

GRAND MOTHER OF RAYNOLD, RICKY, SASKIA,  SAHIL, SHANA, DEONA, DELON, JOVIN, GAVIN, ALVITA & ALWIN PASSED AWAY ON 10TH DECEMBER 2022.

Funeral cortège leaves the residence 184A CHURCH ROAD KUNDAPURA FOR HOLY ROSARY CHURCH AT 3:30 PM ON 12TH December and Holy Mass at 4PM.

Contact. +918254233819

And Mobile: VINOD +919632095900

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳನ್ನು ಜಾಗತೀಕರಣಗೊಳಿಸಲು ಕೋಲಾರ ಸುದ್ಧಿ ಮನೆ ವೆಬ್ ಸೈಟ್‍ನ್ನು ಲೋಕಾರ್ಪಣೆ ಮಾಡಲಾಗುವುದು

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳನ್ನು ಜಾಗತೀಕರಣಗೊಳಿಸಲು ಕೋಲಾರ ಸುದ್ಧಿ ಮನೆ ವೆಬ್ ಸೈಟ್‍ನ್ನು ಜನವರಿ ತಿಂಗಳಿನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಪ್ರಕಟಿಸಿದರು.
ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ವೆಬ್‍ಸೈಟ್‍ಗೆ ಕೋಲಾರ ಸುದ್ದಿಮನೆ ಎಂದು ಹೆಸರಿಡಲಾಗಿದೆ ಎಂದು ತಿಳಿಸಿದರು.
ಜನವರಿ ತಿಂಗಳ ಸಂಕ್ರಾಂತಿ ವೇಳೆಗೆ ವೆಬ್‍ಸೈಟ್ ಲೋಕಾರ್ಪಣೆ ಮಾಡಲಾಗುವುದು. ಅದೇ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಸದಸ್ಯರು ಮತ್ತು ಕುಟುಂಬದವರಿಗಾಗಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಆಯೋಜಿಸಿ ಸಂಕ್ರಾಂತಿ ಸುಗ್ಗಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್.ಗಣೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಸಂಘವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂಬ ರೂಪುರೇಶೆಗಳನ್ನು ದೊರಕಿಸುವ ರೀತಿಯಲ್ಲಿ ಸಂಘದ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್ ವಾರ್ಷಿಕ ವರದಿ ಮಂಡಿಸಿದರು. ಖಜಾಂಚಿ ಎ.ಜಿ.ಸುರೇಶ್ ಕುಮಾರ್ ವಾರ್ಷಿಕ ಲೆಕ್ಕಪತ್ರಗಳಿಗೆ ಅನುಮೋಧನೆ ಪಡೆದುಕೊಂಡರು.
ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ.ಮುನಿರಾಜು, ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿಗೌಡ ಹಾಗೂ ಟೇಕಲ್ ಲಕ್ಷ್ಮೀಶ್, ಕಾರ್ಯದರ್ಶಿ ಸಿ.ಜಿ.ಮುರಳಿ ವೇದಿಕೆಯಲ್ಲಿದ್ದರು.

ಬಾಕ್ಸ್ ಕಲ್ಯಾಣಿನಿಧಿ ಸಂಗ್ರಹ

ಜಿಲ್ಲೆಯ ಪತ್ರಕರ್ತರಿಗೆ ಯಾವುದೇ ಅಪತ್ತಿನ ಸಂದರ್ಭದಲ್ಲಿ ಸಂಘದ ವತಿಯಿಂದ ನೆರವಾಗಲು ಅನುಕೂಲವಾಗುವಂತೆ 1 ಕೋಟಿ ರೂ.ಗಳ ಪತ್ರಕರ್ತರ ಕಲ್ಯಾಣ ನಿಧಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಿಳಿಸಿದರು.
ಕಲ್ಯಾಣ ನಿಧಿಗಾಗಿ ಇದುವರೆಗೂ ಸಂಗ್ರಹವಾಗಿರುವ 1 ಲಕ್ಷ 33 ಸಾವಿರ ರೂ.ಗಳನ್ನು ಬ್ಯಾಂಕ್‍ನಲ್ಲಿ ಠೇವಣಿ ಇರಿಸಲಾಗಿದೆ ಎಂದು ತಿಳಿಸಿದರು.
ಪತ್ರಕರ್ತರ ಸಂಘದ ಸ್ವಾವಲಂಬನೆ ಮತ್ತು ಸ್ವಾಭಿಮಾನ ಹೆಚ್ಚಿಸುವುದು ನಮ್ಮ ಆಡಳಿತ ಮಂಡಳಿ ಉದ್ದೇಶವಾಗಿದೆ. ಹಾಗಾಗಿ ಯಾರ ಬಳಿಯೂ ಸಂಘದ ಕಾರ್ಯಚಟುವಟಿಕೆಗಳಿಗಾಗಿ ಕೈಯೂಡ್ಡದೆ ಸ್ವಂತ ಸಂಪನ್ಮೂಲ ಕ್ರೋಡಿಕರಣಕ್ಕೆ ಮುಂದಾಗಿದ್ದೇವೆ ಎಂದು ಗೋಪಿನಾಥ್ ವಿವರಿಸಿದರು.