


















































ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಘಟಕ, ಬಿ. ಡಿ. ಶೆಟ್ಟಿ ಕಾಲೇಜ್ ಮಾಬುಕಳ,Lions club Brahmavara- Barkur, Royal club Brahmavara ಮತ್ತು HDFC ಬೇಂಕ್ ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾಲೇಜಿನಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮ ದಲ್ಲಿ, ಸಭಾಪತಿ ಎಸ್ ಜಯಕರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಸಮಿತಿಯ ಸದಸ್ಯರಾದ ಸದಾನಂದ ಶೆಟ್ಟಿ ಉಪಸ್ಥಿತ ರಿದ್ದರು. ಅಲ್ಲದೇ ಕಾಲೇಜಿನ ಪ್ರಾಂಶುಪಾಲರು, ಮಾಜಿ ಪ್ರಾಂಶುಪಾಲರು, ಲಯನ್ಸ್ ಅಧ್ಯಕ್ಷರು ಮತ್ತು ಸದಸ್ಯರು, ರೊಟರಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ, ಡಿ.07: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಅವರ ಸಹಯೋಗದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಉಮೇಶ್ ಪುತ್ರನ್,ನಿರ್ದೇಶಕರು ಚಿನ್ಮಯ್ ಆಸ್ಪತ್ರೆ ಮತ್ತು ಉಪ ಸಭಾಪತಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರು ಮಾತನಾಡಿ ಕೆಲವು ವರ್ಷಗಳ ಹಿಂದೆ ಏಡ್ಸ್ ಎನ್ನುವುದು ಒಂದು ದೊಡ್ಡ ಕಾಯಿಲೆಯಾಗಿತ್ತು. ಈಗಿನ ದಿನಗಳಲ್ಲಿ ಏಡ್ಸ್ ಅನ್ನು ಸಹ ನಿವಾರಿಸುವಂತಹ ಔಷಧಿಗಳು ಉಚಿತವಾಗಿ ಸರಕಾರಿ ಆಸ್ಪತ್ರೆಗಳಲ್ಲಿ ದೊರೆಯುತ್ತದೆ. ನಾವು ಅದರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಏಡ್ಸ್ ಅಥವಾ ಹೆಚ್.ಐ.ವಿ ರೋಗಿಗಳಲ್ಲಿರುವ ಕೀಳಲಿರಿಮೆಯನ್ನು ಹೋಗಲಾಡಿಸುವ ಕೆಲಸ ಸಮಾಜ ಮಾಡಬೇಕು ಎಂದು ಹೇಳಿದರು. ಅಲ್ಲದೆ ಹೆಚ್.ಐ.ವಿ ಮತ್ತು ಏಡ್ಸ್ ಗಳ ನಡುವೆ ಇರುವ ವ್ಯತ್ಯಾಸವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿ ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಯಕರ್ ಶೆಟ್ಟಿ, ಸಭಾಪತಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಕಾರ್ಯದರ್ಶಿ ಸೀತಾರಾಮ್ ಶೆಟ್ಟಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯದ ಶುಭಕರ ಆಚಾರ್ಯ, ಕಾರ್ಯಕ್ರಮದ ಸಂಚಾಲಕರಾದ ಸತ್ಯನಾರಾಯಣ ಮತ್ತು ವಿದ್ಯಾರಾಣಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅರ್ಪಿತಾ ದ್ವಿತೀಯ ಬಿ.ಎಎಸ್.ಸಿ ಸ್ವಾಗತಿಸಿ, ನಿಶಾ ದ್ವಿತೀಯ ಬಿ.ಸಿ.ಎ ವಂದಿಸಿ, ಸೋನಾಲಿ ದ್ವಿತೀಯ ಬಿ.ಎಸ್.ಸಿ ನಿರೂಪಿಸಿ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪುರ : ‘ ಈ ಭೂಮಿಗೆ ನಾವು ತಾಯಿಯ ಗರ್ಭದಿಂದ ಹೊರಗೆ ಬಂದಾಗ ಒಂದು ಹೆಣ್ಣಾಗಿ ಬಂದಿದ್ದಕ್ಕೆ ಯಾವತ್ತೂ ದೇವರಲ್ಲಿ ಚಿರಋಣಿಯಾಗಿರಬೇಕು’ ಎಂದು ಡಾ. ಸೋನಿ ಡಿಕೋಸ್ಟ ಅವರು ಹೇಳಿದರು. ಅವರು ಇತ್ತೀಚಿಗೆ ಇಲ್ಲಿನ ಭಂಡಾರಕಾರ್ಸ್ ಕಾಲೇಜಿನ ಮಹಿಳಾ ವೇದಿಕೆಯವರು ಆಯೋಜಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮಾರ್ಚ್ 8ನೇ ತಾರೀಕು ಬಂದಾಗ ನಾವು ಪೇಪರಲ್ಲಿ, ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಂ ಎಲ್ಲಾ ಕಡೆಯಲ್ಲೂ ಮಹಿಳಾ ದಿನದ ಸೆಲೆಬ್ರೇಶನ್ ನೋಡಬಹುದು. ವರ್ಷದ 365 ದಿನಗಳಲ್ಲಿ ಒಂದು ದಿನ ಮಾತ್ರ ಹೆಣ್ಣಿಗೆ ಮಹತ್ವವನ್ನು ಕೊಡುತ್ತಾರೆ. ಆದರೆ ಹೆಣ್ಣಾಗಿ ಹುಟ್ಟಿದ ನಾವೆಲ್ಲರೂ ನಿಜವಾಗಿ ನಮ್ಮನ್ನೇ ನಾವು ಅಭಿನಂದಿಸಿಕೊಳ್ಳಬೇಕು. ನಮ್ಮಲ್ಲಿಯೇ ಒಂದು ರೀತಿಯ ಹೆಮ್ಮೆ ಇರಬೇಕು. ಹತ್ತು ಇಪ್ಪತ್ತು ವರ್ಷಗಳ ಹಿಂದೆ ಹೋದರೆ ಪುರುಷ ಪ್ರಧಾನ ಸಮಾಜ ಇತ್ತು. ಆದರೆ ಈಗ ಒಂದು ಹೆಣ್ಣು ಎಲ್ಲಾ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಕ್ಕೆ ಹೋಗಿದ್ದಾಳೆ. ಹೆಣ್ಣು ಮಕ್ಕಳು ಯಾವಾಗಲೂ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಎನ್. ಪಿ ನಾರಾಯಣ್ ಶೆಟ್ಟಿ,ಪ್ರಾಂಶುಪಾಲರು ಭಂಡಾರಕಾರ್ಸ್ ಕಾಲೇಜು ಕುಂದಾಪುರ ಇವರು ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಡಾ. ಶುಭಕರ್ ಆಚಾರ್ಯ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ಮತ್ತು ಮಹಿಳಾ ರಕ್ಷಣಾ ವೇದಿಕೆಯ ಸಂಯೋಜಕರಾದ ಪ್ರೊ. ಮೀನಾಕ್ಷಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಇವರು ಉಪಸ್ಥಿತರಿದ್ದರು.
700ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರೊ. ಮೀನಾಕ್ಷಿ ಸ್ವಾಗತಿಸಿ, ಉಪನ್ಯಾಸಕಿ ಓಂಶ್ರೀ, ವಾಣಿಜ್ಯ ವಿಭಾಗ ನಿರೂಪಿಸಿ, ಉಪನ್ಯಾಸಕಿ ವಿಜಯಲಕ್ಷ್ಮಿ ಗಣಕ ವಿಜ್ಞಾನ ವಿಭಾಗ ಪರಿಚಯಿಸಿ , ಉಪನ್ಯಾಸಕಿ ಮಮತಾ, ವಾಣಿಜ್ಯ ವಿಭಾಗ ವಂದಿಸಿ ಕಾರ್ಯಕ್ರಮ ನಿರ್ವಹಿಸಿದರು.
ಬೆಂಗಳೂರು, ಡಿ. 9 : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ರಾಜ್ಯದಲ್ಲಿ ಮಳೆ ಆರ್ಭಟ ಶುರುವಾಗಲಿ ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ.ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುತ್ತಿದೆ. ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ರಾಜ್ಯ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬಿರುಗಾಳಿ ‘ಮಂಡೌಸ’ ಈ ಹೆಸರು ಸಂಯುಕ್ತ ಅರಬ ಅಮರಾತ ನೀಡಿದೆ. ಅರಬಿ ಭಾಷೆಯಲ್ಲಿ ಇದರ ಅರ್ಥ ‘ಖಜಿನಾ’ ಎಂದಾಗುತ್ತದೆ
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ನೀಡಿದೆ. ಡಿಸೆಂಬರ್ 9 ಮತ್ತು 10 ರಂದು ಗುಡುಗು ಸಹಿತ ವ್ಯಾಪಕ ಮಳೆ ಬರುವ ಸಾಧ್ಯತೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಮ್ಯಾಂಡಸ್ ಚಂಡಮಾರುತ ತಮಿಳುನಾಡು ಮತ್ತು ಪುದುಚೇರಿ ಕರಾವಳಿಗೆ ಅಪ್ಪಳಿಸಲಿದ್ದು, ನೆರೆಯ ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗಲಿದೆ.ರಾಜಧಾನಿ ಬೆಂಗಳೂರಿನಲ್ಲಿ ವಾತಾವರಣ ಸಹಜ ಸ್ಥಿತಿಯಲ್ಲಿದ್ದು, ಚಳಿ, ಸಾಧಾರಣ ಮಳೆಯಾಗಲಿದೆ. ಬೆಳಗಿನ ಜಾವ ದಟ್ಟ ಮಂಜು ಇರಲಿದೆ. ಡಿಸೆಂಬರ್ ೧೦ ರವರೆಗೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆ ಸುರಿಯುವ ಸಾಧ್ಯತೆ ಕಂಡುಬರಲಿದ್ದು, ಹಿಂಗಾರು ಮಳೆ ಮತ್ತೆ ಚುರುಕು ಪಡೆಯಲಿದೆ. ಡಿಸೆಂಬರ್ ೮ ರಿಂದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಶುರುವಾಗಲಿದೆ.ಮ್ಯಾಂಡಸ್ ಚಂಡಮಾರುತ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳಲಿದೆ. ಈ ಹಿನ್ನೆಲೆ ತಮಿಳುನಾಡು ಮತ್ತು ಪುದುಚೇರಿ ಭಾಗದಲ್ಲಿ ಎನ್ಡಿಆರ್ಎಫ್ ತಂಡ ಅಲರ್ಟ್ ಆಗಿದೆ. ದಕ್ಷಿಣ ಒಳನಾಡಿನ ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೊಡಗುಮ ಚಿಕ್ಕಮಗಳೂರಿನಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಈ ದಿನದಂದು ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ರಾಜ್ಯದಲ್ಲಿ 5,200 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚೆನ್ನೈನಲ್ಲಿ 169 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದು, ರಸ್ತೆ, ಕಟ್ಟಡಗಳಲ್ಲಿ ನಿಲ್ಲುವ ಮಳೆ ನೀರು ತೆರವಿಗೆ ೮೦೫ ಪಂಪ್ಸೆಟ್ಗಳನ್ನು ಸಿದ್ಧತೆಯಲ್ಲಿಡಲಾಗಿದೆ’ ಎಂದು ಅವರು ಹೇಳಿದರು.ತಮಿಳುನಾಡಿನ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬಳಿಕ ಮಳೆ ತರಿಸುವ ಮೋಡಗಳು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದ್ದು ತೀವ್ರಗೊಳ್ಳಬಹುದು ಎಂದಿದೆ. ಈ ಅವಧಿಯಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ತಮಿಳುನಾಡಿನ ವಿಲ್ಲುಪುರಂ, ಚೆಂಗಲ್ಪಟ್ಟು, ಕಡಲೂರು, ಕಾಂಚೀಪುರಂ, ತಿರುವಳ್ಳೂರು, ಅರಿಯಲೂರ್, ಪೆರಂಬಲೂರ್, ಚೆನ್ನೈ, ಕಲ್ಲಕುರಿಚಿ, ಮೈಲಾಡುತುರೈ, ತಂಜಾವೂರು, ತಿರುವಾರೂರ್ ಮತ್ತು ನಾಗಪಟ್ಟಣಂ ಸೇರಿದಂತೆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.ಹವಾಮಾನ ಇಲಾಖೆಯಿಂದ ದಕ್ಷಿಣದ 3 ರಾಜ್ಯಗಳಲ್ಲಿ ‘ಮ್ಯಾಂಡಸ್ ’ ಬಿರುಗಾಳಿ ಬರುವ ಎಚ್ಚರಿಕೆ ನೀಡಲಾಗಿದೆ. ತಮಿಳುನಾಡು, ಪಾಂಡಿಚರಿ ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲಿ ಈ ಬಿರುಗಾಳಿ ಬರುವ ಸಾಧ್ಯತೆ ಇದೆ..
ಈ ಬಿರುಗಾಳಿಯಿಂದ ಪಂಜಾಬ, ಹರಿಯಾಣ, ಉತ್ತರಪ್ರದೇಶ, ದೆಹಲಿ ಮತ್ತು ರಾಜಸ್ಥಾನ ಈ ರಾಜ್ಯಗಳಲ್ಲಿ 3 ದಿನ ಮೋಡ ಕವಿದ ವಾತಾವರಣ ಮತ್ತು ಮಳೆ ಬೀಳುವ ಸಾಧ್ಯತೆ ಇದೆ. ಇದರಿಂದ ಉತ್ತರ ಭಾರತದಲ್ಲಿ ಚಳಿಯ ಹೊಸ ಹಂತ ಶುರುವಾಗುವ ಸಾಧ್ಯತೆ ಇದೆ.
ಕೋಲಾರ:- ರಾಜ್ಯ ಸರ್ಕಾರ 7ನೇ ವೇತನ ಆಯೋಗ ರಚಿಸುವ ಮೂಲಕ ನೌಕರ ಸ್ನೇಹಿ ಕೆಲಸ ಮಾಡಿದೆ, ಇದೀಗ ಆಯೋಗದ ಮುಂದೆ ಮಂಡಿಸಬೇಕಾದ ತಮ್ಮ ಇಲಾಖೆಯ ವಿಷಯ, ಸಮಸ್ಯೆಗಳನ್ನು ಲಿಖಿತ ದಾಖಲೆಗಳೊಂದಿಗೆ ಜಿಲ್ಲಾ ಸಂಘಕ್ಕೆ ಸಲ್ಲಿಸುವಂತೆ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ವಿವಿಧ ಇಲಾಖೆಗಳ ವೃಂದ ಸಂಘಗಳ ಪದಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನಿರಂತರ ಪ್ರಯತ್ನದಿಂದ ನಮ್ಮೆಲ್ಲರ ನಿರೀಕ್ಷೆಯ 7ನೇ ವೇತನ ಆಯೋಗವನ್ನು ಸರ್ಕಾರ ರಚಿಸಿ, ಅದು ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ಸೌಲಭ್ಯ,ಸಿಬ್ಬಂದಿಯನ್ನು ಒದಗಿಸಿದ್ದು, ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲೆಯ ಸಮಸ್ತ ನೌಕರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಇದೀಗ ವೇತನ ಆಯೋಗ ತನ್ನ ಕಾರ್ಯ ಆರಂಭಿಸಿದ್ದು, ಆಯೋಗದ ಮುಂದೆ ವಿವಿಧ ಇಲಾಖೆಗಳು ತಮ್ಮ ವೇತನ, ಭತ್ಯೆ ಮತ್ತಿತರ ಸಮಸ್ಯೆಗಳನ್ನು ಮಂಡಿಸಬೇಕಿದ್ದಲ್ಲಿ ಆಯಾ ಇಲಾಖೆಯ ವೃಂದ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಲಿಖಿತ ರೂಪದಲ್ಲಿ ಸಮಸ್ಯೆಗಳನ್ನು ಪಟ್ಟಿ ಮಾಡಿ ದಾಖಲೆಗಳೊಂದಿಗೆ ಡಿ.10ರ ಸಂಜೆ 6 ಗಂಟೆಯೊಳಗೆ ಜಿಲ್ಲಾ ಸಂಘಕ್ಕೆ ನೀಡುವಂತೆ ಅವರು ಕೋರಿದ್ದಾರೆ.
ಕೋಲಾರ:- ಮಹಿಳೆಯರಂತೆ ಪುರುಷರು ಸಾಲ ಮರುಪಾವತಿಯಲ್ಲಿ ನಂಬಿಕೆ ಉಳಿಸಿಕೊಂಡರೆ ಮತ್ತಷ್ಟು ಪುರುಷ ಸಂಘಗಳಿಗೆ ಸಾಲ ಸೌಲಭ್ಯ ಒದಗಿಸುವುದಾಗಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಭರವಸೆ ನೀಡಿದರು.
ನಗರದ ಖಾದ್ರಿಪುರ ಬಡಾವಣೆಯಲ್ಲಿ ಡಿಸಿಸಿ ಬ್ಯಾಂಕಿನಿಂದ ಪುರುಷ ಸಂಘಗಳಿಗೆ ಸಾಲ ವಿತರಿಸಿ ಅವರು ಮಾತನಾಡಿ, ಡಿಸಿಸಿ ಬ್ಯಾಂಕ್ ಉಳಿಸಿ ಬೆಳೆಸಿದವರೇ ಮಹಿಳೆಯರು, ಅವರು ಸಕಾಲಕ್ಕೆ ಸಾಲ ಮರುಪಾವತಿಸುವ ಮೂಲಕ ಬ್ಯಾಂಕಿನ ಹಿರಿಮೆ ಕಾಪಾಡಿದ್ದಾರೆ ಎಂದರು.
ಪುರುಷರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಅಗತ್ಯವಿರುವ ಸಾಲವನ್ನು ಒದಗಿಸಲು ಬ್ಯಾಂಕ್ ಸಿದ್ದವಿದೆ ಎಂದ ಅವರು, ಸಾಲ ಮರುಪಾವತಿಯಲ್ಲಿ ವಿಳಂಬ ತೋರುತ್ತಾರೆ ಎಂಬ ಅಪವಾದದಿಂದ ಮುಕ್ತವಾಗಲು ಮನವಿ ಮಾಡಿದರು.
ಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ಅತಿ ಹೆಚ್ಚು ಮಂದಿ ಮಹಿಳೆಯರಿಗೆ ಸಾಲ ಸೌಲಭ್ಯ ಒದಗಿಸಿದೆ, ಇದರಿಂದ ಅನೇಕ ಮಹಿಳೆಯರು ತಮ್ಮ ಬದುಕು ಕಟ್ಟಿಕೊಂಡಿದ್ದಾರೆ, ಅನೇಕರು ಸ್ವಾವಲಂಬಿ ಜೀವನ ನಡೆಸಲು ಈ ಸಾಲ ನೆರವಾಗಿದೆ, ಅದೇ ರೀತಿ ಪುರುಷ ಸಂಘಗಳಿಗೆ ಸಾಲ ನೀಡಿದ್ದು ನಾವೇ ಮೊದಲು ಎಂದರು.
ಈಗಾಗಲೇ ಹಲವಾರು ಪುರುಷ ಸಂಘಗಳಿಗೆ ಸಾಲ ಸೌಲಭ್ಯ ಒದಗಿಸಿದ್ದು, ಮರುಪಾವತಿ ಸಮರ್ಪಕವಾಗಿದೆ ಎಂದು ತಿಳಿಸಿದ ಅವರು, ನೀವು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿಸಿದರೆ ಬಡ್ಡಿಯ ಸಂಕಷ್ಟದಿಂದ ಪಾರಾಗಬಹುದು, ಕಂತು ತಡವಾದರೆ ಬಡ್ಡಿ ಬೀಳುತ್ತದೆ ಎಂದು ಎಚ್ಚರಿಸಿದರು.
ಸಾಲ ಪಡೆಯಲು ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ಮಾಡಿದ್ದೇವೆ, ನಿಮ್ಮ ಉಳಿತಾಯ ಖಾತೆಗೆ ನಿಮ್ಮ ಸಾಲದ ಹಣ ಜಮಾ ಆಗುವಂತೆ ಕ್ರಮ ಕೈಗೊಂಡಿದ್ದೇವೆ, ನೀವು ಯಾವ ದಲ್ಲಾಳಿಗೂ ಲಂಚ ನೀಡುವ ಅಗತ್ಯವಿಲ್ಲ, ಎಲ್ಲವೂ ಪಾರದರ್ಶಕವಾಗಿದೆ ಎಂದು ತಿಳಿಸಿದರು.
ಬ್ಯಾಂಕ್ ವಿರುದ್ದ ಟೀಕಾಕಾರರು ಕೆಲಸ ಮಾಡುತ್ತಿದ್ದಾರೆ, ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ, ನಾವು ತಪ್ಪು ಮಾಡಿದ್ದರೆ ಸಾಕ್ಷಿಸಹಿತ ತಿಳಿಸಲಿ ಅದು ಬಿಟ್ಟು ಬ್ಯಾಂಕ್ ವಿರುದ್ದ ಸಲ್ಲದ ಟೀಕೆ ಮಾಡಿ ಬ್ಯಾಂಕಿನ ಘನತೆಗೆ ಕುತ್ತು ತರುತ್ತಿದ್ದಾರೆ ಎಂದು ವಿಷಾದಿಸಿದರು.
ಸಾಲಕ್ಕಾಗಿ ಮಾತ್ರವೇ ಡಿಸಿಸಿ ಬ್ಯಾಂಕ್ ಅಲ್ಲ
ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ವಿ.ದಯಾನಂದ್ ಮಾತನಾಡಿ, ಕೇವಲ ಸಾಲಕ್ಕಾಗಿ ಮಾತ್ರ ಡಿಸಿಸಿ ಬ್ಯಾಂಕ್ ಎಂಬ ಭಾವನೆ ಬಿಟ್ಟುಬಿಡಿ, ನಿಮ್ಮ ಉಳಿತಾಯ, ವಹಿವಾಟನ್ನು ಇದೇ ಬ್ಯಾಂಕಿನಲ್ಲಿ ಮಾಡಿದರೆ ನಿಮಗೆ ಮತ್ತಷ್ಟು ಸಾಲ ಸಿಗಲಿದೆ ಎಂದು ತಿಳಿಸಿದರು.
ವಾಣಿಜ್ಯ ಬ್ಯಾಂಕುಗಳು ನಿಮಗೆ ಭದ್ರತೆ ಇಲ್ಲದೇ ಸಾಲ ನೀಡೋಲ್ಲ ಜತೆಗೆ ನಿಮ್ಮನ್ನು ಸಾಲಕ್ಕಾಗಿ ಅಲೆದಾಡಿಸುತ್ತಾರೆ, ಅಂತಹ ದುಸ್ಥಿತಿ ಡಿಸಿಸಿ ಬ್ಯಾಂಕಿನಲ್ಲಿ ಇಲ್ಲ, ನಿಮ್ಮ ಮನೆ ಬಾಗಿಲಿಗೆ ಬಂದು ಸಾಲ ನೀಡುತ್ತಿದ್ದೇವೆ, ಇದನ್ನು ಸದ್ಬಳಕೆ ಮಾಡಿಕೊಳ್ಳಿ, ಸಾಲವನ್ನು ಸರಿಯಾಗಿ ಪಾವತಿಸುವ ಮೂಲಕ ನಂಬಿಕೆ ಉಳಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಸಾಲವನ್ನು ಈ ಭಾಗದ ಮಹಿಳೆಯರ ಮೂಲಕವೇ ವಿತರಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ಸಾಲ ಮರುಪಾವತಿಗೆ ಅವರನ್ನು ಆದರ್ಶವಾಗಿ ಪಾಲಿಸಿ ಎಂದು ತಿಳಿಸಿದ್ದಾರೆ, ಹಿಂದೆ ಬ್ಯಾಂಕ್ ಮುಳುಗಿಹೋದಾಗ ಯಾರೂ ಇತ್ತ ಸುಳಿಯಲಿಲ್ಲ, ಇದೀಗ ಬ್ಯಾಂಕ್ ಅಭಿವೃದ್ದಿಯಾದ ನಂತರ ದಿನವೂ ಟೀಕೆ ಮಾಡುವವರು ಇದ್ದಾರೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಶಶಿಧರ್, ಸ್ಥಳೀಯ ಮುಖಂಡರಾದ ವಿಶ್ವನಾಥ್, ರಾಮು, ಬೆಟ್ಟಪ್ಪ ಮತ್ತಿತರರಿದ್ದರು.
ಕೋಲಾರ: ಕಂಪ್ಯೂಟರ್ ಹಾಗೂ ಟೈಪಿಂಗ್ ಕಲಿಕೆ ಹಿಂದೆ ಆಯ್ಕೆಯಾಗಿತ್ತು ಆದರೆ ಈಗ ಅನಿವಾರ್ಯವಾಗಿದೆ ಮತ್ತು ಭವಿಷ್ಯದಲ್ಲಿ ಬದುಕು ಕಟ್ಟಿಕೊಳ್ಳಲು ಅತ್ಯಗತ್ಯವೂ ಆಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯ ಕೆ.ಎಸ್.ಗಣೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ವೆಂಕಟೇಶ್ವರ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾಸಂಸ್ಥೆ ಆಶ್ರಯದಲ್ಲಿ ಗುರುವಾರ 2023ರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.
ಕಲಿಕೆಗೆ ಅವಕಾಶ ಇರುವಾಗ ಸಮಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಕಾಲ ವ್ಯರ್ಥ ಮಾಡಬಾರದು ಎಂದ ಅವರು, ಸಾಧನೆಗೆ ಪ್ರತಿಕ್ಷಣವೂ ಪ್ರಾಮುಖ್ಯತೆಯನ್ನು ಪಡೆದಿದ್ದು, ಸಿಕ್ಕಿರುವ ಅವಕಾಶ ಬಳಸಿಕೊಳ್ಳಿ, ಶ್ರದ್ಧೆಯಿಂದ ಕಲಿತು ನಿಮ್ಮ ಜೀವನ ರೂಪಿಸಿಕೊಳ್ಳಿ ಎಂದರು.
ಹೊಸ ವರ್ಷದಲ್ಲಿ ಹೊಸ ಸಂಕಲ್ಪ ಮಾಡಿ, ಹಿಂದಿನ ವರ್ಷದಲ್ಲಿ ಮಾಡಿದ ತಪ್ಪುಗಳು ಮರುಕಳಿಸದಂತೆ ಸರಿದಾರಿಯಲ್ಲಿ ನಡೆಯುವ ಆಲೋಚನೆ ಮಾಡಿ, ಸಮಾಜಮುಖಿಯಾಗಿ ಕೆಲಸ ಮಾಡುವ ದೃಢ ನಿರ್ಧಾರದೊಂದಿಗೆ ಹೆಜ್ಜೆ ಇಡಿ ಎಂದು ಕರೆ ನೀಡಿದರು.
ಕಂಪ್ಯೂಟರ್ ಶಿಕ್ಷಣ ಉಳಿಸಲು ಹೋರಾಟ
ಹಿಂದೆ ವಾಣಿಜ್ಯ ವಿದ್ಯಾಸಂಸ್ಥೆಗಳನ್ನು ಮುಚ್ಚುವ ಯತ್ನ ನಡೆದಾಗ ವೆಂಕಟೇಶ್ವರ ವಾಣಿಜ್ಯ ವಿದ್ಯಾಸಂಸ್ಥೆ ಅಧ್ಯಕ್ಷ ಸುಧಾಕರ್ ರಾಜ್ಯಮಟ್ಟದಲ್ಲಿ ಹೋರಾಟ ರೂಪಿಸಿ ಯಶಸ್ಸು ಸಾಧಿಸಿದರು. ಅವರ ಪ್ರಯತ್ನದಿಂದ ಇಂದು ಅಂಗೀಕೃತ ಪರೀಕ್ಷಾ ಮಂಡಳಿ ಆಶ್ರಯದಲ್ಲಿ ಕಂಪ್ಯೂಟರ್ ಶಿಕ್ಷಣ ವಿದ್ಯಾರ್ಥಿಗಳಿಗೆ ಸಿಗುವಂತಾಗಿದೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲದಿಂದ ಅವರು ಈ ಸಂಸ್ಥೆಯನ್ನು ನಡೆಸಿಕೊಂಡು ಬಂದಿದ್ದು, ಈ ಸಂಸ್ಥೆಯಲ್ಲಿ ಕಲಿಕೆ ಮುಗಿಸಿದ ಸಾವಿರಾರು ಮಂದಿ ಜೀವನ ರೂಪಿಸಿಕೊಂಡಿದ್ದಾರೆ ಎಂದು ಅಭಿನಂದಿಸಿದರು.
ಸಂಸ್ಥೆಯ ಅಧ್ಯಕ್ಷ ಎಸ್.ವಿ.ಸುಧಾಕರ್ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳು ಮಾತ್ರವಲ್ಲ ಖಾಸಗಿ ಕಂಪನಿಗಳಲ್ಲೂ ಇಂದು ಕಂಪ್ಯೂಟರ್ ಜ್ಞಾನವಿಲ್ಲದೇ ಕೆಲಸ ಸಿಗುವುದಿಲ್ಲ, ಇದರ ಮಹತ್ವವನ್ನು ಅರಿತು ನಮ್ಮ ಸಂಸ್ಥೆ ಸಾವಿರಾರು ವಿದ್ಯಾರ್ಥಿಗಳಿಗೆ ಗಣಕ ಶಿಕ್ಷಣ ನೀಡುತ್ತಿದೆ, ಇದರ ಪ್ರಯೋಜನವನ್ನು ಅನೇಕರು ಪಡೆದುಕೊಂಡಿದ್ದಾರೆ ಎಂದರು.
ಹೊಸ ವರ್ಷದಲ್ಲಿ ಮತ್ತಷ್ಟು ಸುಸಜ್ಜಿತ ಸೌಲಭ್ಯಗಳೊಂದಿಗೆ ಗಣಕ ಶಿಕ್ಷಣ ನೀಡುವ ಆಲೋಚನೆ ಇದ್ದು, ಒಟ್ಟಾರೆ ನಮ್ಮ ಜಿಲ್ಲೆಯ ವಿದ್ಯಾರ್ಥಿಗಳ ಬದುಕು ಹಸನಾಗಿಸುವ ಸಣ್ಣ ಪ್ರಯತ್ನ ತಮ್ಮ ಸಂಸ್ಥೆಯದು ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆ ಕಾರ್ಯದರ್ಶಿ ರತ್ನ ಸುಧಾಕರ್, ಲಕ್ಷ್ಮೀನಾರಾಯಣ, ತರಬೇತುದಾರ ಶಿಕ್ಷಕರಾದ ಲಾವಣ್ಯ, ವಿಜಯ, ಮಾಧುರಿ, ಸವಿತಾ, ಅಶ್ವಿನಿ, ಸುಖೇಶ್, ಬಿಂದು, ಸಿಂಧು, ಸುಕನ್ಯಾ ಮತ್ತಿತರರಿದ್ದರು.