HOLY ROSARY CHURCH, KUNDAPUR – 450 th JUBILEE SOUVENIR 2021

ಮೂಡ್ಲಕಟ್ಟೆ ಎಂ ಐ ಟಿ, Honeywell: Center of Excellence ತರಬೇತಿ ಉದ್ಘಾಟನಾ ಕಾರ್ಯಕ್ರಮ

ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ಮಹಾ ವಿದ್ಯಾಲಯವು, ಸಾಫ್ಟ್ವೇರ್ ದಿಗ್ಗಜ Honeywell ನ, Center of Excellence ಕಾರ್ಯಕ್ರಮದ ಕೇಂದ್ರವಾಗಿ ಆಯ್ಕೆಯಾಗಿದ್ದು ಇದರ ಉದ್ಘಾಟನೆಯನ್ನು 06/12/22  ರಂದು ಐಸಿಟಿ ಅಕಾಡೆಮಿ ಕರ್ನಾಟಕ ರಾಜ್ಯ ಮುಖ್ಯಸ್ಥರಾದ  ಶ್ರೀ ವಿಷ್ಣು ಪ್ರಸಾದ್ ಡಿ ನೆರವೇರಿಸಿದರು. 

ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ “ಶ್ರೀ ಅಜಿತ್ ಕುಮಾರ್, ಹಿರಿಯ ಶಾಖಾ ವ್ಯವಸ್ಥಾಪಕರು ಯೂನಿಯನ್‌ ಬ್ಯಾಂಕ್ ಆಫ್ ಇಂಡಿಯಾ” ವಿಧ್ಯಾರ್ಥಿಗಳು ವಿಧ್ಯೆಯ ಜೊತೆಗೆ ಇನ್ನಿತರ ಕೌಶಲ್ಯಗಳನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ತಾನಾಗಿಯೇ ದೊರೆಯುತ್ತದೆ ಎಂದು ಕಿವಿಮಾತು ಹೇಳಿದರು, ಇದೇ ವೇಳೆ ಶ್ರೀ ವಿಷ್ಣು ಪ್ರಸಾದ್ ಡಿ” ಅವರು ಮಾತನಾಡಿ, ವಿಧ್ಯಾರ್ಥಿಗಳಿಗೆ ಈ ತರಬೇತಿ ಎಷ್ಟು ಮಹತ್ವವಾದುದು, ಅದರ ಪ್ರಯೋಜನಗಳೇನು ಹಾಗು ಇದರಿಂದ ಉದ್ಯೋಗಾವಕಾಶಗಳನ್ನು ಹೇಗೆ ಪಡೆಯಬಹುದು ಎಂದು ವಿವರಿಸಿ ಹೇಳಿದರು.

ಈ ಕಾರ್ಯಕ್ರಮದ ಪ್ರಥಮ ಹಂತವಾಗಿ 15 ದಿನದ ತರಬೇತಿ ಕಾರ್ಯಕ್ರಮವು ಆಧುನಿಕ ತಂತ್ರಜ್ಞಾನ ಯು ಐ ಪಾತ್ ಮೇಲೆ ನಡಿಯಲಿದೆ.

ಭಾರತದಲ್ಲಿ ಹನಿವೆಲ್ ಸೆಂಟರ್ ಆಫ್ ಎಕ್ಸೆಲೆನ್ಸ್ ಕೇಂದ್ರವಾಗಿ ಕೇವಲ 50 ಕಾಲೇಜುಗಳು ಮಾತ್ರ ಆಯ್ಕೆಯಾಗಿದ್ದು ಕರ್ನಾಟದಲ್ಲಿ ಕೇವಲ 9 ಕಾಲೇಜ್ ಗೆ ಮಾತ್ರ ಅವಕಾಶ ಸಿಕ್ಕಿರುತ್ತದೆ. ಈ 9 ಕಾಲೇಜ್ ಗಳಲ್ಲಿ ಎಂ ಐ ಟಿ ಕುಂದಾಪುರವು ಒಂದಾಗಿದ್ದು ಮತ್ತು ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಏಕೈಕ ಕಾಲೇಜು ಎನ್ನುವುದು ಹೆಮ್ಮೆಯ ವಿಷಯವಾಗಿದೆ ಎಂದು ಕಾಲೇಜಿನ ಅಧ್ಯಕ್ಷರಾದ ಸಿದ್ದಾರ್ಥ ಜೆ ಶೆಟ್ಟಿ ಅವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

“IMJ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಶ್ರೀ. ದೋಮ ಚಂದ್ರಶೇಖರ, ಅವರು ಅಧ್ಯಕ್ಷತೆ ವಹಿಸಿದ್ದು,ಕಾರ್ಯಕ್ರಮದಲ್ಲಿ “ಎಂಐಟಿಕೆ ಪ್ರಾಂಶುಪಾಲರಾದ, ಡಾ. ಚಂದ್ರರಾವ್ ಮದಾನೆ”, “ಎಂಐಟಿಕೆ ಉಪ ಪ್ರಾಂಶುಪಾಲರಾದ, ಪ್ರೊ.ಮೆಲ್ವಿನ್ ಡಿಸೋಜಾ”, “ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ| ಪ್ರತಿಭಾ ಎಂ ಪಟೇಲ್”, “ಪ್ಲೇಸ್ಮೆಂಟ್ ಡೀನ್ ಪ್ರೊ.ಅಮೃತಮಾಲಾ”, ಎಲ್ಲಾ ಡೀನ್‌ಗಳು, ವಿಭಾಗ ಮುಖ್ಯಸ್ಥರು, ಸಿಬ್ಬಂದಿ ಮತ್ತು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬೈಂದೂರು ಹೋಲಿಕ್ರಾಸ್ ಇಗರ್ಜಿ : ಸಮುದಾಯ ದಿನಾಚರಣೆ

ಬೈಂದೂರು: ಸ್ಥಳೀಯ ನ ಹೋಲಿಕ್ರಾಸ್ ಇಗರ್ಜಿಯಲ್ಲಿ ಧರ್ಮಗುರು ವಂದನೀಯ ವಿನ್ಸೆಂಟ್ ಕುವೆಲ್ಲೊ ರವರ ಅಧ್ಯಕ್ಷತೆಯಲ್ಲಿ ಸಮುದಾಯದ ದಿವಸವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಮಾತನಾಡಿದ ಉಡುಪಿ ಧರ್ಮಪ್ರಾಂತ್ಯದ ಕಿರುಕ್ರಿಸ್ತ ಸಮುದಾಯ ಆಯೋಗದ ನಿರ್ದೇಶಕರಾದ ವಂದನೀಯ ಹೆರಾಲ್ಡ್ ಪೀರೆರಾರವರು “ಸಮುದಾಯಕೋಸ್ಕರ ನಾವುಗಳು, ನಮಗಾಗಿ ಸಮುದಾಯ ಎಂಬ ಚಿಂತನೆಯಲ್ಲಿ ಜೀವಿಸಿದರೆ ಸಮಾಜದಲ್ಲಿ ಏಕತೆ, ಒಗ್ಗಟ್ಟು ಬಲಿಷ್ಠವಾಗಿರುತ್ತದೆ” ಎಂದರು

ವೇದಿಕೆಯಲ್ಲಿ ಕುಂದಾಪುರ ವಲಯದ ಪ್ರಧಾನ ಧರ್ಮಗುರು ವಂದನೀಯ ಸ್ಟ್ಯಾನಿ ತಾವ್ರೋ, ಕೋಟ ಇಗರ್ಜಿಯ ಧರ್ಮಗುರು ವಂದನೀಯ ಎ. ಡಿಲೀಮಾ, ಸಿಸ್ಟರ್ ಆ್ಯನ್ಸಿ, ಉಪಾಧ್ಯಕ್ಷ ಸ್ಟ್ಯಾನಿ ಡಾಯಸ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನಿತಾ ನಜ್ರೆತ್ ಸ್ವಾಗತಿಸಿದರು, ಆಯೋಗಗಳ ಸಂಯೋಜಕಿ ಮೇಬಲ್ ನಜ್ರೆತ್ ವಂದಿಸಿದರು. ವೀಣಾ ಫೆರ್ನಾಂಡಿಸ್ ಮತ್ತು ರೋಶನ್ ರೋಡ್ರಿಗಸ್ ಕಾರ್ಯಕ್ರಮ ನಿರ್ವಹಿಸಿದರು

ರಾಮಭಂಟ ಹನುಮನ ದೇವಾಲಯಗಳ ತವರೂರು ಕೋಲಾರದಲ್ಲಿ ಹನುಮದ್ವ್ರತ
ಹನುಮಜಯಂತಿಯಾಗಿ ಆಚರಣೆ-ಎಲ್ಲೆಡೆಯೂ ವಿಶೇಷ ಪೂಜೆ, ಭಜನೆ-ಅನ್ನದಾನ

ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ವರಪ್ರಸಾದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮದ್ವ್ರತ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿದ್ದು, ಸಹಸ್ರಾರು ಮಂದಿ ದರ್ಶನ ಪಡೆದರು.
ಕೋಲಾರದ ಕಾಳಮ್ಮ ಗುಡಿ ರಸ್ತೆಯಲ್ಲಿನ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮದ್ವ್ರತ ಹಾಗೂ ಹನುಮಜಯಂತಿ ಅಂಗವಾಗಿ ವಿಶೇಷ ಅಲಂಕಾರ,ಪೂಜೆ ನೇತೃತ್ವವನ್ನು ನಡೆಸಲಾಯಿತು.

ಕೋಲಾರ:- ಹನುಮನ ದೇವಾಲಯಗಳ ತವರೂರು ಎಂದೇ ಖ್ಯಾತವಾಗಿರುವ ಕೋಲಾರ ಜಿಲ್ಲೆಯಲ್ಲಿ ಹನುಮದ್ವ್ರತವನ್ನು ಹನುಮಜಯಂತಿಯಾಗಿ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಿದ್ದು, ಆಂಜನೇಯನ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ,ಭಜನೆ, ಅನ್ನದಾಸೋಹ ನಡೆದಿದ್ದು, ಭಕ್ತರ ಸಮೂಹವೇ ಹರಿದು ಬಂತು.
ಹನುಮಂತನಿಗೂ ಕೋಲಾರಕ್ಕೂ ಇರುವ ಸಂಬಂಧ ಆಶ್ಚರ್ಯ ತರಿಸುವಂತದ್ದು, ಏಕೆಂದರೆ ಜಿಲ್ಲೆಯಲ್ಲಿರುವ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಹನುಮಂತ ದೇವಾಲಯಗಳನ್ನು ಗಮನಿಸಿದರೆ ಇಂತದ್ದೊಂದು ಅನುಮಾನ ಕಾಡದಿರದು, ಹನುಮದ್ವ್ರತವಾದ ಇಂದು ಜಿಲ್ಲೆಯಲ್ಲಿ ಹನುಮ ಜಯಂತಿಯಾಗಿ ಆಚರಿಸುವುದು ವಾಡಿಕೆಯಾಗಿದೆ.
ಹನುಮಜಯಂತಿ ಅಂಗವಾಗಿ ಇಂದು ಎಲ್ಲಾ ಹನುಮ ದೇಗುಲಗಳಲ್ಲೂ ವಿಶೇಷ ಪೂಜೆ, ಹೂವಿನ ಅಲಂಕಾರ, ಪ್ರಸಾದ ವಿನಿಯೋಗ,ಭಜನೆ ಮುಂಜಾನೆಯಿಂದಲೇ ನಡೆಯುತ್ತಿದ್ದು, ಸಹಸ್ರಾರು ಮಂದಿ ದೇವಾಲಯಗಳಿಗೆ ತೆರಲಿ ಸ್ವಾಮಿಯ ದರ್ಶನ ಪಡೆದರು.
ಪೌರಾಣಿಕ, ಐತಿಹಾಸಿಕ ಹಿನ್ನೆಲೆಯ ಹತ್ತಾರು ಹನುಮಂತ ದೇವಾಲಯಗಳ ಜೊತೆಗೆ ಹೊಸ ಬಡಾವಣೆಗಳಲ್ಲಿಯೂ ನಿರ್ಮಿಸಲ್ಪಟ್ಟಿರುವ ಅನೇಕ ಹನುಮಂತ ದೇವಾಲಯಗಳು ಕೋಲಾರ ಜಿಲ್ಲೆಯಲ್ಲಿವೆ.
ಗಲ್ಲಿಗೊಂದು ರಸ್ತೆ ಬದಿಯ ಕನಿಷ್ಟ ಪ್ರತಿ 3 ಕಿ.ಮೀ.ಗೊಂದು ಹನುಮನ ದೇವಾಲಯವನ್ನು ಕಾಣಬಹುದಾಗಿದೆ. ನಗರದಲ್ಲಿಯಂತೂ ಹನುಮಾನ್ ಜಯಂತಿಯಂದು ಪ್ರತಿ ರಸ್ತೆಯಲ್ಲಿಯೂ ಪೂಜೆ, ಭಜನೆ, ರಥೋತ್ಸವ ನಡೆಯುತ್ತಿರುವುದು ವಿಶೇಷವೆನಿಸುತ್ತದೆ.


ಹನುಮನ ಪೂಜಿಸಿಯೇ ಕೋಲಾರಕ್ಕೆ ಪ್ರವೇಶ


ಕೋಲಾರ ನಗರವನ್ನು ಬೆಂಗಳೂರು ಕಡೆಯಿಂದ ಪ್ರವೇಶಿಸುವಾಗ ಎಪಿಎಂಸಿ ಮಾರುಕಟ್ಟೆ ಮುಂಭಾಗ ಮೊಟ್ಟ ಮೊದಲಿಗೆ ಸಿಗುವುದೇ ಕೊಂಡರಾಜನಹಳ್ಳಿ ಆಂಜನೇಯಸ್ವಾಮಿ ದೇವಾಲಯ.
ಕೋಲಾರದಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸುವ ಭಕ್ತಾಧಿಗಳು ಕೊಂಡರಾಜನಹಳ್ಳಿ ಆಂಜನೇಯನಿಗೆ ಕೈಮುಗಿದು ಮುಂದೆ ಸಾಗಿದರೆ ಕೋಲಾರಕ್ಕೆ ಬರುವವರು ಕೊಂಡರಾಜನ ಹನುಮಂತನಿಗೆ ನಮಿಸಿಯೇ ಪ್ರವೇಶಿಸುವ ವಾಡಿಕೆ ಇದೆ.


ಹನುಮಜಯಂತಿ ಎಲ್ಲೆಡೆಯೂ ಪೂಜೆ


ಕೋಲಾರದ ಬಸ್ ನಿಲ್ದಾಣ ಪಕ್ಕದಲ್ಲಿಯೇ ಇರುವ ಕೀಲುಕೋಟೆ ಆಂಜನೇಯ ಸ್ವಾಮಿ ದೇವಾಲಯ, ಅಲ್ಲಿನ ನೂರು ಮೀಟರ್ ಅಂತರದಲ್ಲಿ ಶಾರದಾ ಚಿತ್ರಮಂದಿರ ರಸ್ತೆಯಲ್ಲಿರುವ ವಕ್ಕಲೇರಿ ಆಂಜನೇಯಸ್ವಾಮಿ ದೇವಾಲಯ, ಇದರ ಮಂದಿನ ರಸ್ತೆಯ ಬ್ರಾಹ್ಮಣರ ಬೀದಿಯಲ್ಲಿರುವ ದೊಡ್ಡಾಂಜನೇಯಸ್ವಾಮಿ ದೇವಾಲಯ, ಗಾಣಿಗರ ಬೀದಿಯ ಆಂಜನೇಯಸ್ವಾಮಿ ದೇವಾಲಯ, ಹಳೇ ಅಂಚೆ ಕಚೇರಿ ಸಮೀಪ ಇರುವ ಕೋಟೆ ಬಾಗಿಲು ಪಂಚಮುಖಿ ಆಂಜನೇಯಸ್ವಾಮಿ ದೇವಾಲಯ, ನಚಿಕೇತ ನಿಲಯದ ಮುಂಭಾಗ ಪೆಟ್ರೋಲ್ ಬಂಕ್ ಪಕ್ಕದಲ್ಲಿರುವ ಖೀಲೇ ಆಂಜನೇಯಸ್ವಾಮಿ ದೇವಾಲಯ, ಕುರುಬರ ಪೇಟೆ ಆಂಜನೇಯಸ್ವಾಮಿ ದೇವಾಲಯ, ಅಮ್ಮವಾರಿಪೇಟೆ ಆಂಜನೇಯಸ್ವಾಮಿ ದೇವಾಲಯ, ಯುವಜನ ಕೇಂದ್ರದ ಬಳಿ ಇರುವ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯ,ಎಸ್ಪಿ ಕಚೇರಿ ಮುಂಭಾಗದ ದೇವಾಲಯ, ಪಶುಪಾಲನಾ ಇಲಾಖೆಯ ಆವರಣದಲ್ಲಿರುವ ಆಂಜನೇಯಸ್ವಾಮಿ ದೇವಾಲಯ, ಗಲ್‍ಪೇಟೆಯ ಉಪ್ಪರ ಬೀದಿಯಲ್ಲಿರುವ ಆಂಜನೇಯ ದೇವಾಲಯ, ಮುಂತಾದ ದೇಗುಲಗಳಲ್ಲಿ ಹನುಮಜಯಂತಿ ಅಂಗವಾಗಿ ವಿಶೇಷ ಪೂಜೆ ನಡೆಯಿತು.
ಎಲ್ಲಾ ಕಡೆಗಳಲ್ಲೂ ಸ್ವಾಮಿಯನ್ನು ವಿಶೇಷವಾಗಿ ಹೂಗಳಿಂದ ಅಲಂಕರಿಸಿದ್ದು, ಮುಂಜಾನೆಯಿಂದಲೇ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.

ಶೈಕ್ಷಣಿಕ ಪ್ರವಾಸ ಹೊರಡ ಸರ್ಕಾರಿ ಶಾಲಾ ಮಕ್ಕಳಿಗೆ
ತಿಂಡಿ,ಹಣ್ಣು ಕೊಡುಗೆಯಾಗಿ ನೀಡಿ ಶುಭ ಹಾರೈಕೆ

ಕೋಲಾರ:- ತಮಿಳುನಾಡು ರಾಜ್ಯಕ್ಕೆ ಶೈಕ್ಷಣಿಕ ಪ್ರವಾಸ ಹೊರಟ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರು ಹಾಗೂ ಸಮಾಜ ಸೇವಕರಾದ ಧರ್ಮೇಶ್, ಇಸಿಒ ಬೈರೆಡ್ಡಿ ಮತ್ತಿತರರು ಶುಭ ಹಾರೈಸಿ ತಿಂಡಿ,ತಿನಿಸು,ಹಣ್ಣು ಕೊಡುಗೆಯಾಗಿ ನೀಡಿದರು.
ಭಾನುವಾರ ಮಧ್ಯರಾತ್ರಿ ಪ್ರವಾಸಕ್ಕೆ ತೆರಳಿದ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಇಸಿಒ ಬೈರೆಡ್ಡಿ, ಪ್ರವಾಸ ಮಕ್ಕಳ ಶೈಕ್ಷಣಿಕ ಕಲಿಕೆಗೆ ಪೂರಕವಾಗಿರಲಿ, ಪ್ರವಾದಲ್ಲಿ ಮಕ್ಕಳು ಎಚ್ಚರಿಕೆಯಿಂದಿರಿ, ಆರೋಗ್ಯ ರಕ್ಷಣೆಗೆ ಒತ್ತು ನೀಡಿ ಎಂದು ಕಿವಿಮಾತು ಹೇಳಿದರು.
ಶಿಕ್ಷಕ ಹಾಗೂ ಕೊಡುಗೈ ದಾನಿ ಸುಗಟೂರು ಧರ್ಮೇಶ್, ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತಷ್ಟು ದಾನಿಗಳ ನೆರವು ಹರಿದು ಬರಬೇಕಾಗಿದೆ, ನನ್ನ ವೇತನದ ಅರ್ಧವನ್ನು ಪ್ರತಿ ತಿಂಗಳು ಸರ್ಕಾರಿ ಶಾಲಾ ಬಡ ಮಕ್ಕಳಿಗೆ ಬಳಸುತ್ತಿರುವುದಾಗಿ ತಿಳಿಸಿದರು.
ಮುಖ್ಯಶಿಕ್ಷಕ ಸಿ.ಎನ್.ಪ್ರದೀಪ್‍ಕುಮಾರ್, ಶಾಲೆಯ ಮಕ್ಕಳು ಪ್ರವಾಸದಲ್ಲಿ ಸಂತಸದಿಂದ ಕಳೆಯಲು ಅಗತ್ಯ ತಿನಿಸು ಒದಗಿಸಿದ ಶಿಕ್ಷಕ ಧರ್ಮೇಶ್, ಬೈರೆಡ್ಡಿ, ಎಸ್‍ಡಿಎಂಸಿ ಸದಸ್ಯರಾದ ಮಂಜುನಾಥ್, ವೆಂಕಟಾಚಲಪತಿ, ರಾಮಚಂದ್ರ ಅವರಿಗೆ ಧನ್ಯವಾದ ತಿಳಿಸಿದರು.
ಎಸ್‍ಡಿಎಂಸಿ ಅಧ್ಯಕ್ಷ ಎ.ಮಹೇಂದ್ರ ಮಾತನಾಡಿ, ಉಳ್ಳವರೆಲ್ಲರಿಗೂ ದಾನ ನೀಡುವ ಗುಣ ಬಾರದು, ಶಿಕ್ಷಕರಾಗಿದ್ದು, ಸರ್ಕಾರಿ ಶಾಲೆಯ ಮಕ್ಕಳಿಗೆ ನೆರವಾಗುವ ಗುಣ ಮೆಚ್ಚುವಂತದ್ದು, ಈಗಾಗಲೇ ಶಾಲೆಗೆ ಧರ್ಮೇಶ್ ಧ್ವನಿವರ್ಧಕ ಕೊಡುಗೆಯಾಗಿ ನೀಡಿದ್ದಾರೆ, ಬೈರೆಡ್ಡಿ ನೋಟ್ ಪುಸ್ತಕ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಉಪಾಧ್ಯಕ್ಷೆ ಲಕ್ಷ್ಮಿ, ಸದಸ್ಯರಾದ ರಾಮಚಂದ್ರಪ್ಪ, ರಾಘವೇಂದ್ರ, ನಾರಾಯಣಸ್ವಾಮಿ, ಮಂಜುನಾಥ್, ವೆಂಕಟಾಚಲಪತಿ, ಶಿಕ್ಷಕರಾದ ಗೋಪಾಲಕೃಷ್ಣ, ವೆಂಕಟರೆಡ್ಡಿ, ಸುಗುಣಾ, ಫರೀದಾ ಮತ್ತಿತರರಿದ್ದರು.

ಶ್ರೀನಿವಾಸಪುರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ತಹಶೀಲ್ದಾರ್ ಶಿರಿನ್ ತಾಜ್ ಬಿಡುಗಡೆ

ಶ್ರೀನಿವಾಸಪುರ: ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಡಿ.9 ರಂದು ನಡೆಯಲಿರುವ 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ತಹಶೀಲ್ದಾರ್ ಶಿರಿನ್ ತಾಜ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಗಡಿ ಭಾಗದಲ್ಲಿ ನಡೆಯುವ ಸಾಹಿತ್ಯ ಸಮ್ಮೇಲನಕ್ಕೆ ತನ್ನದೇ ಆದ ಮಹತ್ವ ಇರುತ್ತದೆ. ಸಾಂಘಿಕ ಪ್ರಯತ್ನದ ಮೂಲಕ ಸಮ್ಮೇಳನ ಯಶಸ್ವಿಗೊಳಿಸಬೇಕು. ಯಶಸ್ಸಿನಲ್ಲಿ ಸ್ಥಳೀಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರ ಮುಖ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಮಾತನಾಡಿ, ಸಮ್ಮೇಳನಾಧ್ಯಕ್ಷರ ಆಯ್ಕೆ ಸರ್ವಾನುಮತದಿಂದ ಕೂಡಿದ್ದು, ಎಲ್ಲ ಕಾರ್ಯಕ್ರಮಗಳನ್ನೂ ಪಾರದರ್ಶಕವಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಪರ ಸಂಘ ಸಂಸ್ಥೆಗಳು, ಶಿಕ್ಷಕ ಸಮುದಾಯ, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಸಾಹಿತ್ಯ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪಿ.ಎಸ್.ಮಂಜುಳ, ತಾಲ್ಲೂಕು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಎಂ.ಬೈರೇಗೌಡ, ಶ್ರೀರಾಮೇಗೌಡ, ಜಿ.ವಿ.ಚಂದ್ರಪ್ಪ, ಮುನೇಗೌಡ, ರಮೇಶ್, ಮೋಹನ್ ಗುಪ್ತ, ಕಲಾ ಶಂಕರ್, ಆರ್.ರವಿಕುಮಾರ್, ನಟರಾಜ್, ಅನಿಲ್ ಕುಮಾರ್, ಸುಧಾಕರ್, ವೆಂಕಟರವಣ, ಸುಬ್ರಮಣಿ ಮತ್ತಿತರರು ಇದ್ದರು.

ಪ್ರತಿಯೊಬ್ಬ ಪ್ರಜೆ, ದೇಶದ ಆರ್ಥಿಕ, ಸಾಮಾಜಿಕ ವಿಚಾರದಲ್ಲಿ ಮಾಹಿತಿ ಹೊಂದಿರಬೇಕಾದುದು ಮುಖ್ಯ – ಕೆ. ಜಯಪ್ರಕಾಶ್ ಹೆಗ್ಡೆ

ವಿ. ಮೋಹನ್ ರಾವ್ ಅವರ “ಟೆಸ್ಟಿಂಗ್ ಟೈಮ್ಸ್ ಫಾರ್ ಇಂಡಿಯನ್ ಇಕಾನಮಿ” ಪುಸ್ತಕ ಬಿಡುಗಡೆ


ಕುಂದಾಪುರ
: “ಪ್ರತಿಯೊಬ್ಬ ಪ್ರಜೆ, ದೇಶದ ಆರ್ಥಿಕ, ಸಾಮಾಜಿಕ , ರಾಜಕೀಯ ವಿಚಾರಗಳ ಬಗ್ಗೆ ಮಾಹಿತಿ ಹೊಂದಿ, ಜಾಗೃತನಾದಾಗ, ಪ್ರಶ್ನೆ ಮಾಡಲು ಕಲಿತಾಗ, ಸತ್ಯ ಹೇಳುವ ಧೈರ್ಯ ಮಾಡಿದಾಗ, ದೇಶ ಸ್ವಚ್ಛ ಭಾರತ, ಸ್ವಸ್ಥ ಭಾರತ ಆಗಲು ಸಾಧ್ಯ. ಪ್ರಜೆಗಳು ತಿಳಿಯುವ ಆಸಕ್ತಿ ತೋರದಿದ್ದಾಗ, ತಿಳಿದೂ ನಿರ್ಲಕ್ಷ ವಹಿಸಿದಾಗ ಸಮಸ್ಯೆ ಉಂಟಾಗುತ್ತದೆ. ಭ್ರಷ್ಟಾಚಾರ ನಡೆದಾಗ ಜನ ಪ್ರಶ್ನೆ ಮಾಡದಿದ್ದರೆ ನಷ್ಟ ಆಗುವುದು ಜನರಿಗೆ. ಹೆಚ್ಚಿನ ತೆರಿಗೆ ಜನರು ಕಟ್ಟುವ ಪರಿಸ್ಥಿತಿ ಬರುತ್ತದೆ” ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಕುಂದಾಪುರ ಭಂಡಾರ್‍ಕಾರ್ಸ್ ಕಾಲೇಜಿನ ರಾಧಾಬಾಯಿ ರಮಣ ಪ್ರಭು ಸಭಾಂಗಣದಲ್ಲಿ ವಿ. ಮೋಹನ್ ರಾವ್ ಅವರ “ಟೆಸ್ಟಿಂಗ್ ಟೈಮ್ಸ್ ಫಾರ್ ಇಂಡಿಯನ್ ಇಕಾನಮಿ” ಎನ್ನು ಪುಸ್ತಕ ಬಿಡುಗಡೆ ಮಾಡುತ್ತಾ ಅವರು ಹೇಳಿದರು.
“ವಿ. ಮೋಹನ್ ರಾವ್ ಅವರ ಪುಸ್ತಕ ದೇಶದ ಆರ್ಥಿಕ ವಿಚಾರಗಳ ಕುರಿತು ಹಲವು ಉಪಯುಕ್ತ ಮಾಹಿತಿ ನೀಡುತ್ತಿದೆ. ಈ ಬಗ್ಗೆ ವಿಚಾರ ವಿನಿಮಯಗಳು ನಡೆಯಬೇಕು. ಶಾಸಕಾಂಗದಲ್ಲಿರುವವರ ಜನೋಪಯೋಗಿ ಚಿಂತನೆಗಳನ್ನು ಕಾರ್ಯಾಂಗದವರು ಕಾರ್ಯಗತಗೊಳಿಸುವ ವ್ಯವಸ್ಥೆಯಿಂದ ಮಾತ್ರ ಉತ್ತಮ ಕಾರ್ಯ ಆಗಲು ಸಾಧ್ಯ. ಸಂಬಂಧಪಟ್ಟವರು ಇಂತಹ ಉತ್ತಮ ಪುಸ್ತಕಗಳ ಅಧ್ಯಯನ ಮಾಡಬೇಕು” ಎಂದು ಕೆ. ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯ ಪಟ್ಟರು.

ಭಂಡಾರ್‍ಕಾರ್ಸ್ ಕಾಲೇಜಿನ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಲೆಕ್ಕ ಪರಿಶೋಧಕ ಟಿ. ಕೃಷ್ಣರಾಯ ಶ್ಯಾನುಭಾಗ ಕೃತಿಯ ಬಗ್ಗೆ ಮಾತನಾಡಿ “ವಿ. ಮೋಹನ್ ರಾವ್ ತಮ್ಮ ಕೃತಿಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆಯ ಎಲ್ಲ ಮಜಲುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅಧ್ಯಯನ ಮಾಡಿ ಬರೆದಿರುವುದು ತಿಳಿಯುತ್ತದೆ. ಇವರು ಅಭಿನಂದನೀಯರು ಇದು ಸಂಗ್ರಾಹಯೋಗ್ಯ ಪುಸ್ತಕ. ಕರೋನಾ ಸಮಸ್ಯೆ ನಡುವೆಯೂ ದೇಶಕ್ಕೆ ಆರ್ಥಿಕ ದೃಢತೆ ನೀಡುವಲ್ಲಿ ಸರಕಾರ ಬಹಳ ಶ್ರಮ ಪಟ್ಟಿದೆ ಎಂದರು.
ಮುಖ್ಯ ಅತಿಥಿ ಸಿಂಡಿಕೇಟ್ ಬ್ಯಾಂಕ್‍ನ ನಿವೃತ್ತ ಡೆಪ್ಯೂಟಿ ಜನರಲ್ ಮೆನೇಜರ್ ಸುಜೀಶ್ ಪ್ರಭಾಕರ್ ಶುಭ ಹಾರೈಸಿ ವಿ. ಮೋಹನ್ ರಾವ್ ಪ್ರಕಟಿಸಿದ ಎರಡೂ ಕೃತಿಗಳು ದೇಶದ ಅರ್ಥ ವ್ಯವಸ್ಥೆಯ ಕನ್ನಡಿಯಂತಿವೆ ಎಂದರು.
ಸದರ್ನ್ ಇಕಾನಾಮಿಸ್ಟ್ ಬೆಂಗಳೂರು ಹಾಗೂ “ಕುಂದಪ್ರಭ” ಆಶ್ರಯದಲ್ಲಿ ನಡೆದ ಈ ಸಮಾರಂಭದಲ್ಲಿ ಲೇಖಕ ವಿ. ಮೋಹನ್ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಯು. ಎಸ್. ಶೆಣೈ ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಹ. ಸೋಮಶೇಖರ ಶೆಟ್ಟಿ ವಂದಿಸಿದರು.

ಕುಂದಾಪುರ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಕುಂದಾಪುರ : ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಉತ್ಸಾಹದಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಜೀವನದಲ್ಲಿ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ತುಂಬಾ ಸಹಕಾರಿ. ಸ್ಪರ್ಧೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕುಂದಾಪುರ ಹೋಲಿ ರೋಜರಿ ಚರ್ಚ್ ಉಪಾಧ್ಯಕ್ಷ, ನಿವೃತ್ತ ಮುಖ್ಯ ಶಿಕ್ಷಕ ಲೂಯಿಸ್ ಜೆ.ಫೆರ್ನಾಂಡೀಸ್ ಹೇಳಿದರು.
ಅವರು ಕುಂದಾಪುರ ಗಾಂಧಿ ಮೈದಾನದಲ್ಲಿ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಪಥಸಂಚಲನೆಯ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ಶಾಲಾ ಸಂಚಾಲಕರೂ,ಕುಂದಾಪುರ ವಲಯದ ಪ್ರಧಾನ ಧರ್ಮಗುರು ವಂ.ಫಾ.ಸ್ಟ್ಯಾನಿ ತಾವ್ರೊ ಸಮಾರಂಭದ ಅಧ್ಯಕ್ಷತೆ ವಹಿಸಿ ಕ್ರೀಡಾಧ್ವಜ ಅರಳಿಸಿ ಮಾತನಾಡಿದರು. ಸ್ವೀಕರಿಸಿದರು. ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷೆ ಡಾ.ಸೋನಿ ಕ್ರೀಡಾಕೂಟ ಉದ್ಘಾಟಿಸಿದರು. ಕುಂದಾಪುರ ಹೋಲಿ ರೋಜರಿ ಚರ್ಚ್‍ನ ಸಹಾಯಕ ಧರ್ಮಗುರು ಫಾ.ಅಶ್ವಿನ್, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಾಗರ್ ಕ್ರೀಡಾ ಜ್ಯೋತಿಯನ್ನು ಬೆಳೆಗಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೂಹ ಸಂಪನ್ಮೂಲ ಅಧಿಕಾರಿ ಶಂಕರ್ ಶೆಟ್ಟಿ,ಸೈಂಟ್ ಮೇರಿಸ್ ಪ್ರೌಢಶಾಲಾ ಆಡಳಿತ ಮಂಡಳಿಯ ಸದಸ್ಯೆ ಶಾಲೆಟ್ ರೆಬೆಲ್ಲೋ, ಸೈಂಟ್ ಮೇರಿಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೊರೊತಿ ಸುವಾರಿಸ್, ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೇಜಾ ಶಾಂತಿ, ಹೋಲಿ ರೋಜರಿ ಕಿಂಡರ್ ಗಾಟೀನ್ ಮುಖ್ಯ ಶಿಕ್ಷಕಿ ಶೈಲಾ ಲೂಯಿಸ್, ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಜೋನಿಟಾ ಮೆಂಡೊನ್ಸಾಪ್ರತಿಜ್ಞಾವಿಧಿ ಭೋದಿಸಿದನು.
ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೇಷ್ಮಾ ಫೆರ್ನಾಂಡೀಸ್ ಸ್ವಾಗತಿಸಿದರು. ಸೈಂಟ್ ಮೇರಿಸ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ವಂದಿಸಿದರು. ಶಿಕ್ಷಕರಾದ ಚಂದ್ರಶೇಖರ ಬೀಜಾಡಿ,ನಾಗರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ

ಶಿರ್ವ: ಪ್ರಸ್ತುತ ತಾಂತ್ರಿಕ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ಕಾರ್ಯಗಳು ಎಲ್ಲಾ ಕ್ಷೇತ್ರಗಳಲ್ಲಿ ಸುಲಭವಾಗಿ ನಡೆಯಲು ಮತ್ತು ಅತ್ಯಂತ ವೇಗವಾಗಿ ಪರಿಣಾಮಕಾರಿಯಾಗಿ ಮಾನವನ ಕೆಲಸವನ್ನು ಕಂಪ್ಯೂಟರ್ ಬಳಕೆಯಿಂದ ಸಾಗುತ್ತಿದೆ. ಇಂದಿನ ಯುವಕರಲ್ಲಿ ಕಲಿಕೆಯ ಜೊತೆಗೆ ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳುವ ಮೂಲಕ ಮುಂದೆ ತಮ್ಮ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಿಸಬಹು ದು. ಕಲಿಕೆಗೆ ವಯಸ್ಸು ಮುಖ್ಯ ಅಲ್ಲ ಮನಸು ಮುಖ್ಯ ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ ಸಾಕ್ಷರತ ಕೋಶ ಜಂಟಿಯಾಗಿ ಏರ್ಪಡಿಸಿದ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ ದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಕಚೇರಿ ದ್ವಿತೀಯ ದರ್ಜೆಯ ಸಹಾಯಕಿ ಶ್ರೀಮತಿ ಜಾಕ್ಲೈನ್ ​​ಮೆಂಡೋನ್ಸಾ ರವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ತಮ್ಮ ಅನುಭವವನ್ನು ವ್ಯಕ್ತಪಡಿಸಿದರು.
ಈ ದಿನದ ಪ್ರಯುಕ್ತ ಹಲವು ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ, ಮುಂದಿನ ಉದ್ಯೋಗ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಿರಂತರ ಕಂಪ್ಯೂಟರ್ ಕಲಿಕೆಯನ್ನು ವಿದ್ಯಾರ್ಥಿಗಳು ಕಾಲೇಜು ಹಂತಗಳಲ್ಲಿ ಅಭ್ಯಾಸನವನ್ನು ಮಾಡಬೇಕೆಂದು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು.

ಶೈಕ್ಷಣಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಕಲಿಕೆ ಇಂದಿನ ದಿನ ಅತ್ಯಂತ ಪ್ರಮುಖವಾಗಿದೆ.ಇದರ ಪ್ರಯುಕ್ತ ಕಾಲೇಜಿನಲ್ಲಿ ವಿಭಾಗದ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಬೇಸಿಕ್ ಮತ್ತು ಟ್ಯಾಲಿ ಕೋರ್ಸುಗಳ ತರಬೇತಿ ನೀಡಿ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಇದರ ಪ್ರಯೋಜನವನ್ನು ಪಡೆದುಕೊಂಡ ಮುಂದಿನ ಉದ್ಯೋಗ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ಇಂಥ ಸರ್ಟಿಫಿಕೇಟ್ ಗಳು ವಿದ್ಯಾರ್ಥಿಗಳಿಗೆ ಸಹಾಯಕಾರಿ ಎಂದು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ಅವರು ಮಾತನಾಡಿದರು

ದ್ವಿತೀಯ ಬಿಎ ವಿದ್ಯಾರ್ಥಿ ಪವನ್ ಕುಮಾರ್ ತಮ್ಮ ಕಂಪ್ಯೂಟರ್ ಕಲಿಕೆಯ ಜ್ಞಾನದ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು .
ಪ್ರಥಮ ಬಿಸಿಎ ವಿದ್ಯಾರ್ಥಿ ಆದಿತ್ಯ ಶೆಟ್ಟಿಗಾರ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕಿ ಸಂಗೀತ ಪೂಜಾರಿ, ಪ್ರಿಯಾಂಕ, ಅಧ್ಯಾಪಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಕ್ ನಾಯಕ್ ಮತ್ತು ಅಲ್ಲಿಸ್ಟರ್ ಸುಜಾ ಡಿಸೋಜ ಕಾರ್ಯಕ್ರಮಕ್ಕೆ ಸಹಕರಿಸಿದರು. ಕಂಪ್ಯೂಟರ್ ಸಾಕ್ಷರತೆ ಕೋಶನ ಸಂಯೋಜಕಿ ಶ್ರೀಮತಿ ದಿವ್ಯಶ್ರೀ ರವರು ಸ್ವಾಗತಿಸಿ, ಕು. ಸೆಲ್ಮಾ ಪಿಂಟು ವಂದಿಸಿದರು. ಕು. ರಕ್ಷಾ ಮತ್ತು ಬಳಗ ಪ್ರಾರ್ಥಿಸಿ ಕು. ಶ್ರೇಯ ಸಫಲಿಗ ಕಾರ್ಯಕ್ರಮ ನಿರೂಪಿಸಿದರು

ಕುಂದಾಪುರ: ಜೆಇ ಲಸಿಕಾ ಅಭಿಯಾನಕ್ಕೆ ಚಾಲನೆ

ಕೋಟ:ಕರ್ನಾಟಕದ ಆಯ್ದ 10 ಜಿಲ್ಲೆಗಳಲ್ಲಿ ಜೆಇ ಲಸಿಕಾಕರಣ ಅಭಿಯಾನ ನಡೆಯುತ್ತಿದ್ದು, ಇದರಲ್ಲಿ 1ರಿಂದ 15 ವರ್ಷಗಳವರೆಗಿನ ಎಲ್ಲಾ ಮಕ್ಕಳಿಗೂ ಜೆಸಿ ಲಸಿಕೆಯನ್ನು ಉಚಿತವಾಗಿ ಸರಕಾರ ನೀಡುತ್ತಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್ ಹೇಳಿದರು.
ಅವರು ಸೋಮವಾರ ಉಡುಪಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ,ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರದ ಆಶ್ರಯದಲ್ಲಿ ಜೆಇ ಲಸಿಕಾ ಅಭಿಯಾನಕ್ಕೆ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಚಾಲನೆ‌ ನೀಡಿ ಮಾತನಾಡಿದರು. ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ‌ವೈದ್ಯೆ ಡಾ.ದೀಪಾ‌ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸೈಂಟ್ ಮೇರಿಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸುಂತಾ ಲೋಬೋ‌ ವಹಿಸಿದ್ದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಬಿ.ಐ.ಇ.ಆರ್.ಟಿಯ ಶಂಕರ್ ಕುಲಾಲ್,ಸಿಆರ್ ಪಿ ಶಂಕರ ಶೆಟ್ಟಿ,ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡೋರಾ ಸುವಾರಿಸ್,ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆರೇಜಾ ಶಾಂತಿ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ಚಂದ್ರ ಶೇಖರ ಬೀಜಾಡಿ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.