HOLY ROSARY CHURCH, KUNDAPUR – 450 th JUBILEE SOUVENIR 2021

Sad  Demise Rithesh Monteiro 35 (Belman)

passed away on 1st December 2022 in the morning

Husband of Jenifer Preetha

Father of Rivan Monteiro.

Son of Walter Monteiro and Helen Monteiro

Brother of Nikil Rakesh/ Priya,

Son in Law of Jerald Dsouza and Philomena Dsouza.

Passed away on 1st December 2022 in the morning.

Funeral cortege leaves from Monteiro Villa on 3rd December 2022 for St. Joseph’s Church Belman at 3.15pm followed by Mass at 4.00 pm.
Contact no:- 9632004121 , 9833995799

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿಗುವ ಎಲ್ಲಾ ಸೌಲಭ್ಯಗಳಿಂದ ಪ್ರತಿ ಕುಟುಂಬ, ಪ್ರತಿ ಗ್ರಾಮದವರು ಅಭಿವೃದ್ಧಿ ಆಗಬೇಕು ಕೆ.ಮುರಳಿಧರಶೆಟ್ಟಿ

ಶ್ರೀನಿವಾಸಪುರ 1 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಗ್ರಾಮದ ಪ್ರತಿಯೊಂದು ಕುಟುಂಬದವರು ಹಾಗು ಗ್ರಾಮಸ್ಥರು ಬಳಸಿಕೊಂಡು ಅಭಿವೃದ್ಧಿಯಾಗಬೇಕು ಎಂದು ಕೋಲಾರ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ನಿರ್ದೇಶಕ ಕೆ.ಮುರಳಿಧರಶೆಟ್ಟಿ ಹೇಳಿದರು.
ತಾಲೂಕಿನ ದೊಡಮಲದೊಡ್ಡಿ ಗ್ರಾಮದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಜೀರ್ಣೋಧ್ಧಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವತಿಯಿಂದ 2.50 ಲಕ್ಷ ರೂ ಗಳ ಡಿಡಿಯನ್ನು ದೇವಸ್ಥಾನದ ಆಡಳಿತ ಮಂಡಲಿಗೆ ಬುಧವಾರ ಹಸ್ತಾಂತರಿಸಿದರು.
ತಾಲೂಕು ಯೋಜನಾಧಿಕಾರಿ ಎಸ್.ಸುರೇಶ್‍ಗೌಡ, ದೇವಸ್ಥಾನ ಕಮಿಟಿ ಅಧ್ಯಕ್ಷ ಎಂ.ಶ್ರೀನಿವಾಸಪ್ಪ, ಉಪಾಧ್ಯಕ್ಷ ಮುನಿರಾಜು, ಹಾಗೂ ಕಾರ್ಯದರ್ಶಿಗಳಾದ ಶಿವರಾಮಯ್ಯ, ನಂಬಿಹಳ್ಳಿ ವಲಯ ಮೇಲ್ವಿಚಾರಕ ಮೂರ್ತಿ ಸೇವಾಪ್ರತಿನಿಧಿ ಉಮಾ ಹಾಗೂ ಗ್ರಾಮಸ್ಥರು ಇದ್ದರು.
ಪೋಟು 1 : ತಾಲೂಕಿನ ದೊಡಮಲದೊಡ್ಡಿ ಗ್ರಾಮದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಜೀರ್ಣೋಧ್ಧಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವತಿಯಿಂದ 2.50 ಲಕ್ಷ ರೂ ಗಳ ಡಿಡಿಯನ್ನು ದೇವಸ್ಥಾನದ ಆಡಳಿತ ಮಂಡಲಿಗೆ ಕೋಲಾರ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ನಿರ್ದೇಶಕ ಕೆ.ಮುರಳಿಧರಶೆಟ್ಟಿ ಹಸ್ತಾಂತರಿಸಿದರು.

ಕ್ಷೇತ್ರದ ಅಭಿವೃದ್ದಿಯೇ ನನ್ನ ಮೂಲ ಮಂತ್ರ, ನನಗೆ ಮತ ಹಾಕಿದ ಜನತೆಯ ಅಭಿವೃದ್ದಿಯೇ ನನ್ನ ಗುರಿ:ಶಾಸಕ ಕೆ.ಆರ್.ರಮೇಶ್‍ಕುಮಾರ್

ಶ್ರೀನಿವಾಸಪುರ 2 : ಕ್ಷೇತ್ರದ ಅಭಿವೃದ್ದಿಯೇ ನನ್ನ ಮೂಲ ಮಂತ್ರ, ನನಗೆ ಮತ ಹಾಕಿದ ಜನತೆಯ ಅಭಿವೃದ್ದಿಯೇ ನನ್ನ ಗುರಿ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.
ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಹಾಗು ಕುಂದ ಕೊರತೆ ಸಭೆಗೆ ಚಾಲನೆ ನೀಡಿ ಮಾತನಾಡಿದರು.
ನನ್ನ ಕ್ಷೇತ್ರಕ್ಕೆ ಸಂಬಂದಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡಿ, ಮತದಾರನ ಋಣವನ್ನು ತೀರಿಸುತ್ತಾ , ಮತದಾರನು ನೀಡಿರುವ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳುಲಾಗುವುದು ಎಂದರು.
ಗ್ರಾಮಗಳಲ್ಲಿ ಆಗಿರುವ ಪ್ರತಿ ಒಂದು ಅಭಿವೃದ್ದಿ ಕಾಮಗಾರಿಗಳ ಪರಿಶೀಲಿನೆ ಮಾಡಲಾಯಿತು. ಉಳಿದಿರುವ ಕಾಮಗಾರಿಗಳನ್ನು ಪೂರ್ಣಗಳಿಸುವಂತೆ ಗ್ರಾಮಸ್ಥರಿಗೆ ತಿಳಿಸಿದರು. ಸರ್ಕಾರದ ಅನುದಾನವನ್ನು ಗ್ರಾಮಸ್ಥರು ಸಮರ್ಪಕವಾಗಿ ಬಳಿಸಿಕೊಂಡಾಗ ಗ್ರಾಮಗಳು ಅಭಿವೃದ್ದಿಯಾಗಲು ಸಾಧ್ಯ ಎಂದರು.
ಮುಖಂಡರಾದ ದ್ವಾರಸಂದ್ರ ಮುನಿವೆಂಕಟರೆಡ್ಡಿ, ಸನಂತ್, ಸಾತಾಂಡ್ಲಹಳ್ಳಿ ಮಂಜುನಾಥರೆಡ್ಡಿ , ಟಿ.ನಾರಾಯಣಸ್ವಾಮಿ, ಮಂಜೇಶ್ ಇತರರು ಇದ್ದರು.

ಮಾಲೂರು ತಾಲ್ಲೂಕಿನ ಅಗಲಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ದಾನಿ ಎಸ್.ಆರ್.ಧರ್ಮೇಶ್ ಸಮವಸ್ತ್ರ ನೀಡಿದರು.

ಶೈಕ್ಷಣಿಕ ಅಭಿವೃದ್ಧಿಗೆ ನೆರವು ನೀಡಿ

ಶ್ರೀನಿವಾಸಪುರ: ದಾನಿಗಳು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನೆರವು ನೀಡಬೇಕು ಎಂದು ಸಿಆರ್‍ಪಿ ಸುಬ್ರಮಣಿ ಹೇಳಿದರು.
ಮಾಲೂರು ತಾಲ್ಲೂಕಿನ ಅಗಲಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸಮವಸ್ತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕ ಹಾಗೂ ದಾನಿ ಎಸ್.ಆರ್.ಧರ್ಮೇಶ್ ತಮ್ಮ ಸಂಬಳದಲ್ಲಿ ಉಳಿಸಿ ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುತ್ತಿದ್ದಾರೆ. ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತಿದ್ದಾರೆ. ಅವರ ನಡೆ ಸ್ತುತ್ಯಾರ್ಹ ಎಂದು ಹೇಳಿದರು.
ಧರ್ಮೇಶ್ ಮಕ್ಕಳಿಗೆ ಸಮವಸ್ತ್ರ ಮತ್ತಿತರ ಸೌಲಭ್ಯ ವಿತರಿಸಿ ಮಾತನಾಡಿ, ನಾನು ಮಕ್ಕಳಲ್ಲಿ ದೇವರನ್ನು ಕಾಣುತ್ತೇನೆ. ಮಾನವ ಸೇವೆಯೇ ಮಾಧವ ಸೇವೆ ಎಂಬು ಮಾತಿನಲ್ಲಿ ನಂಬಿಕೆ ಇಟ್ಟಿದ್ದೇನೆ. ಅದರಂತೆ ನಡೆದುಕೊಳ್ಳುತ್ತಿದ್ದೇನೆ. ಕೊಡುವುದರಲ್ಲಿ ತೃಪ್ತಿ ಕಂಡುಕೊಂಡಿದ್ದೇನೆ. ಇನ್ನೊಬ್ಬರಿಗೆ ಸಹಾಯ ಮಾಡಿದಾಗ ಸಿಗುವ ಸಂತೋಷವೇ ಬೇರೆ. ಅಂಥ ಸಂತೋಷಕ್ಕಾಗಿ ಹಾತೊರೆಯುತ್ತೇನೆ ಎಂದು ಹೇಳಿದರು.
ಮುಖ್ಯ ಶಿಕ್ಷಕ ವೆಂಕಟೇಶಪ್ಪ, ಸಿಆರ್‍ಪಿ ಅರುಣ್ ಕುಮಾರ್, ಎಸ್‍ಡಿಎಂಸಿ ಅಧ್ಯಕ್ಷ ಅರುಣ್ ಕುಮಾರ್ ಇದ್ದರು.

ಲೇಖಕಿ – ಶಿಕ್ಷಕಿ ಸಮಿತ್ರಾ ಐತಾಳ ನಿಧನ(58)

ಕುಂದಾಪುರದ ಖ್ಯಾತ ಲೇಖಕಿ, ಕುಂದಾಪ್ರ ಕನ್ನಡದಲ್ಲಿ ರೂಪಕ, ನಾಟಕ,ಸಾಹಿತ್ಯರಚನೆ ಮಾಡಿದ ಶಿಕ್ಷಕಿ ಸಮಿತ್ರಾ ಐತಾಳ(58)ಡಿ 1ರಂದು ಸಂಜೆ ನಿಧನರಾದರು.ಇತ್ತೀಚಿನ ತನಕ ಟಿವಿ,ರೆಡಿಯೋ ಮಾಧ್ಯಮಗಳಲ್ಲಿ ಕಾರ್ಯಕ್ರಮ ನೀಡುತ್ತಿದ್ದರು. ಕಿರಿಮಂಜೇಶ್ವರ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿಯಾಗಿರುವ ಇವರು ಹಲವಾರು ಪ್ರಶಸ್ತಿಗಳನ್ನು ಪಡೆದವರು. ಕೆಲವು ದಿನಗಳ ಹಿಂದೆ ಅವರ ಪುಸ್ತಕ ಬಿಡುಗಡೆ,ನಾಟಕ ಪ್ರದರ್ಶನ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿತ್ತು.ಆದರೆ ಅವರ ಅನಾರೋಗ್ಯದ ಕಾರಣ ಮುಂದೂಡಲಾಗಿತ್ತು. ಇವರು ಪತಿ,ಪುತ್ರನನ್ನು ಅಗಲಿದ್ದಾರೆ.

ಲಕ್ಷ್ಮೀಪುರ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘ ನಿ. ವತಿಯಿಂದ ರೈತರಿಗೆ ಕೆಸಿಸಿ ಸಾಲ ಮತ್ತು ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳಿಗೆ ವಿತರಣೆ

ಶ್ರೀನಿವಾಸಪುರ : ಬದುಕು ಒಂದೇ ದಿನದಲ್ಲಿ ಬದಲಾಗುತ್ತದೆ ಎನ್ನಲು ಸಾಧ್ಯವಿಲ್ಲ ಆದರೆ ಒಂದು ಒಳ್ಳೇಯ ನಿರ್ಧಾರ ಬದಕನ್ನೇ ಬದಲಾಯಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಅವನ ದೃಡ ನಿರ್ಧಾರವೇ ಪ್ರೇರಕ ಶಕ್ತಿಯಾಗಿದ್ದು , ಈ ಮಾರ್ಗದಲ್ಲಿ ಗಟ್ಟಿ ಹೆಜ್ಜೆಗಳನ್ನಿಟ್ಟಾಗಲೇ ಯಶಸ್ಸು ದೊರೆಯುತ್ತದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಅಭಿಪ್ರಾಯಪಟ್ಟರು.
ತಾಲೂಕಿನ ಲಕ್ಷ್ಮೀಪುರ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘ ನಿ. ವತಿಯಿಂದ ರೈತರಿಗೆ ಕೆಸಿಸಿ ಸಾಲ ಮತ್ತು ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳಿಗೆ ಬುಧವಾರ 1ಕೋಟಿ 15 ಲಕ್ಷ ಸಾಲದ ಚೆಕ್ ವಿತರಣೆ ಮಾಡಿ ಮಾತನಾಡಿದರು.
ಸ್ವಾವಲಂಬಿ ಬದುಕಿಗಾಗಿ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಅಲೆದಾಡಿದರು ಸಾಲವನ್ನು ಪಡೆಯುಲು ಸಾಧ್ಯವಾಗುತ್ತಿಲ್ಲ . ಇದಕ್ಕೆ ಅಪವಾದವೆಂಬತೆ ಹಣ ಕೊರತೆ ನಿವಾರಿಸುವ ಸಲುವಾಗಿ ಯಾವುದೇ ಮಧ್ಯವರ್ತಿಗಳಿಲ್ಲದೆ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‍ವತಿಯಿಂದ ಅವಳಿ ಜಿಲ್ಲೆಗಳ ನೂರಾರು ಮಹಿಳಾ ಸಂಘಗಳಿಗೆ ಹಾಗು ಬೀದಿ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿದರದ ಸಾಲವನ್ನು ವಿತರಿಸಲಾಗುತ್ತಿದ್ದು ಹಣವನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು .
ತಾಲೂಕು ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರೆಡ್ಡಿ, ಸೊಸೈಟಿ ಅಧ್ಯಕ್ಷ ತೂಪಲ್ಲಿ ಕೃಷ್ಣಾರೆಡ್ಡಿ, ಉಪಾಧ್ಯಕ್ಷ ಜಮೀಲ್‍ಪಾಷ, ನಿರ್ದೇಶಕರಾದ ಮುನಯ್ಯ, ಪೇಪರ್ ವೆಂಕಟೇಶ್, ತಾ.ಪಂ.ಮಾಜಿ ಸದಸ್ಯ ಕೆ.ಕೆ.ಮಂಜುನಾಥ್, ಕೋಚಿಮುಲ್ ಮಾಜಿ ಅಧ್ಯಕ್ಷ ಕೊಂಡಸಂದ್ರ ಶಿವಾರೆಡ್ಡಿ, ಮುಖಂಡ ಟಿ.ವಿ.ನಾರಾಯಣಸ್ವಾಮಿ, ಗ್ರಾ.ಪಂ.ಉಪಾಧ್ಯಕ್ಷೆ ಮಂಗಮ್ಮ ನಡುಪನ್ನ ಇದ್ದರು.
ಪೋಟು 1 : ಲಕ್ಷ್ಮೀಪುರ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘ ನಿ. ವತಿಯಿಂದ ರೈತರಿಗೆ ಕೆಸಿಸಿ ಸಾಲ ಮತ್ತು ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳಿಗೆ 1ಕೋಟಿ 15 ಲಕ್ಷ ಸಾಲದ ಚೆಕ್‍ಗಳನ್ನು ಶಾಸಕ ಕೆ.ಆರ್.ರಮೇಶ್‍ಕುಮಾರ್ ವಿತರಣೆ ಮಾತನಾಡಿದರು.

ದಳಸನೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೊಡಿಚೆರುವು ಶಿವಾರೆಡ್ಡಿ ಅವಿರೋಧವಾಗಿ ಆಯ್ಕೆ

ಶ್ರೀನಿವಾಸಪುರ 1 : ತಾಲೂಕಿನ ದಳಸನೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೊಡಿಚೆರುವು ಶಿವಾರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಳಸನೂರು ಗ್ರಾಮಪಂಚಾಯತಿಗೆ ಸಂಬಂದಿಸಿದಂತೆ ಒಟ್ಟು 16 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 11 ಸದಸ್ಯರಿದ್ದು, ಜೆಡಿಎಸ್ ಬೆಂಬಲಿತ 5 ಸದಸ್ಯರು ಇದ್ದಾರೆ. ಈ ಹಿಂದೆ ಇದ್ದ ಉಪಾಧ್ಯಕ್ಷರಾಗಿ ವಿ.ಜಗದೀಶ್ ಕಾರ್ಯನಿರ್ವಹಿಸಿ ರಾಜಿನಾಮೆಯಿಂದ ತೆರವುಗೊಂಡಿದ್ದ ಉಪಾಧ್ಯಕ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಗೆ ಕೊಡಿಚೆರುವು ಶಿವಾರೆಡ್ಡಿ ಏಕೈಕ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಉಪಾಧ್ಯಕ್ಷರಾಗಿ ಶಿವಾರೆಡ್ಡಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ರೇಷ್ಮೆ ಇಲಾಖೆ ನಿರ್ದೇಶಕ ಕೃಷ್ಣಪ್ಪ ತಿಳಿಸಿದರು.
ರಾಜ್ಯ ಮಾವು ಮಂಡಲಿ ಮಾಜಿ ಅಧ್ಯಕ್ಷ ದಳಸನೂರು ಗೋಪಾಲಕೃಷ್ಣ ಮಾತನಾಡಿ ಎಲ್ಲಾ ಸದಸ್ಯರು ಒಮ್ಮತದಿಂದ ಪಂಚಾಯಿತಿ ಅಭಿವೃದ್ಧಿಗೆ ಸಹಕರಿಸಬೇಕು. ಪಕ್ಷವನ್ನು ಬೆಳಸುವ ನಿಟ್ಟಿನಲ್ಲಿ ಪಂಚಾಯಿತಿಯ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದರು. ಅಧಿಕಾರ ಬರುವುದು ಎಲ್ಲರ ಹಕ್ಕು ಅದೇ ರೀತಿಯಾಗಿ ಅಧಿಕಾರವನ್ನು ನಿಭಾಯಿಸಿ, ನಿರ್ವಹಿಸುವ ಜವಾಬ್ದಾರಿ ವಹಿಸಬೇಕು. ಪಂಚಾಯಿತಿವತಿಯಂದ ಸಿಗುವಂತಹ ಸೌಲಭ್ಯಗಳನ್ನು ಪಕ್ಷಾತೀತವಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವಂತೆ ಮಾಡಿ ನಿಮ್ಮ ನಾಯಕತ್ವವನ್ನು ಬೆಳಸಿಕೊಳ್ಳಬೇಕು.
ಸಿಗುವಂತಹ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳದೇ, ಸಿಗುವಂತಹ ಅಧಿಕಾರವನ್ನು ಸದ್ಭಳಕೆ ಮಾಡಿಕೊಂಡು ನಾಯಕತ್ವವು ನೀವು ಮಾಡುವಂತಹ ಕೆಲಸ ಕಾರ್ಯಗಳ ಮೇಲೆ ಬೆಳೆಯುತ್ತದೆ. ಜನರಿಗೆ ಬೇಕಾದ ಸೌಲಭ್ಯಗಳ ಕಾಲಕಾಲಕ್ಕೆ ನೀಡುವಂತೆ ಸದಸ್ಯರಿಗೆ ಸಲಹೆ ನೀಡಿದರು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶ್ರೀನಿವಾಸಪುರ ಪೊಲೀಸರು ಬಂದೊಬಸ್ತು ಮಾಡಿದ್ದರು.
ಪಿಡಿಒ ವಿಜಯಮ್ಮ, ಗ್ರಾ.ಪಂ ಅಧ್ಯಕ್ಷೆ ಸರಸ್ವತಮ್ಮ, ರೈತ ಮುಖಂಡ ವೀರಭದ್ರಸ್ವಾಮಿ, ಮುಖಂಡರಾದ ಆದಿನಾರಾಯಣಶೆಟ್ಟಿ, ಪಾಳ್ಯ ಗೋಪಾಲರೆಡ್ಡಿ, ವೆಂಕಟೇಶ್, ಹರಿ, ವೀರಭದ್ರಗೌಡ ಇದ್ದರು.

“ಹೊಂಗನಸು” ವಿಶೇಷ ಕಾರ್ಯಕ್ರಮ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಜನ ಸಾಮಾನ್ಯರ ಸಂಘ – ಸತೀಶ್ ಪೂಜಾರಿ ಅಬ್ಬನಡ್ಕ

ನಂದಳಿಕೆ : ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ. ಪ್ರತಿ ಬಾರಿ ಹೊಸತನದ ಯೋಜನೆ ಹಾಗೂ ಹೊಸ ಕಾರ್ಯಕ್ರಮಗಳ ಮೂಲಕ ಸಂಘಟನೆಯನ್ನು ಬೆಳೆಸಬಲ್ಲ ವ್ಯಕ್ತಿಯೇ ನಿಜವಾದ ನಾಯಕ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಎನ್ನುವುದು ಜನ ಸಾಮಾನ್ಯರ ಸಂಘ ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳ ತೆರೆದಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಹೇಳಿದರು.
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಆದಿತ್ಯವಾರ ಜರಗಿದ 23ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ “ಹೊಂಗನಸು” ವಿಶೇಷ ಕಾರ್ಯಕ್ರಮದ ಮೂಲಕ ಮಾತನಾಡಿದರು.
ಸಂಘದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿಯವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಭಜನಾ ಸಮಿತಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಲಲಿತಾ ಆಚಾರ್ಯ, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಉಪಾಧ್ಯಕ್ಷೆ ಲೀಲಾ ಪೂಜಾರಿ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್ ಮೊದಲಾದವರಿದ್ದರು. ಕೋಶಾಧಿಕಾರಿ ಅಶ್ವಿನಿ ಪ್ರಭಾಕರ್ ಕಾರ್ಯಕ್ರಮ ನಿರೂಪಿಸಿದರು.

ರಾಯಲ್ಪಾಡು ಹೋಬಳಿಯ ಕೊರಕೋನಪಲ್ಲಿ,ಜಿಂಕೆಯನ್ನು ನುಂಗಿದ ಬೃಹತ್ ಗಾತ್ರದ ಹೆಬ್ಬಾವಿನಿಂದ ವ್ಯಕ್ತಿಯ ಮೇಲೆ ದಾಳಿ

ರಾಯಲ್ಪಾಡು ಹೋಬಳಿಯ ಕೊರಕೋನಪಲ್ಲಿ ಗ್ರಾಮದ ಸಮೀಪ ಮಂಗಳವಾರ ಜಿಂಕೆಯೊಂದನ್ನ ನುಂಗಿ ಪರದಾಡುತ್ತಿದ್ದ ಸಮಯದಲ್ಲಿ ಬೃಹತ್ ಗಾತ್ರದ ಹೆಬ್ಬಾವುನಿಂದ .ಜಿಂಕೆಯನ್ನು ರಕ್ಷಣೆ ಮಾಡಲು ಮುಂದಾದ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಹೆಬ್ಬಾವು. ಸುಮಾರು 20 ಅಡಿ ಉದ್ದದ 50 ಕೆಜಿ ತೂಕದ ಹೆಬ್ಬಾವು. ಹೆಬ್ಬಾವಿನಿಂದ ಜಿಂಕೆ ರಕ್ಷಣೆ ಮಾಡಲು ಪ್ರಯತ್ನಿಸಿದ ಗ್ರಾಮಸ್ಥರು. ದರೆ ಹೆಬ್ಬಾವಿನ ಹೊಟ್ಟೆಯಲ್ಲಿ ಜಿಂಕೆ ಮೃತವಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ಪರಿಶೀಲನೆ ಮಾಡಿದರು.