HOLY ROSARY CHURCH, KUNDAPUR – 450 th JUBILEE SOUVENIR 2021

ರಾಜ್ಯದ ಸರ್ವತೋಮು ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷ ಜೆಡಿಎಸ್‍ನ್ನು ಬೆಂಬಲಿಸಬೇಕು : ನಿಖಿಲ್ ಕುಮಾರಸ್ವಾಮಿ

ಶ್ರೀನಿವಾಸಪುರ: ರಾಜ್ಯದ ಸರ್ವತೋಮು ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಬೆಂಬಲಿಸಬೇಕು ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಸ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಆಡಳಿತದಲ್ಲಿ ದೇಶ ಅಥವಾ ರಾಜ್ಯ ಅಭಿವೃದ್ಧಿ ಕಂಡಿಲ್ಲ. ಬಿಜೆಪಿ ಮತೀಯ ಭಾವನೆ ಕೆರಳಿಸುವುದರಲ್ಲಿ ನಿರತವಾಗಿದೆ. ಆಡಳಿತ ನಡೆಸಿದ ಕಾಂಗ್ರೆಸ್ ಮುಖಂಡರು ಮೂರು ತಲೆಮಾರಿಗೆ ಸಾಕಾಗುಷ್ಟು ಸಂಪತ್ತು ಗಳಿಸಿದ್ದಾರೆ. ಈ ಮಾತು ಕಾಂಗ್ರೆಸ್ ಮುಖಂಡರ ಬಾಯಿಂದಲೇ ಬಂದಿದೆ. ಇಂಥ ಪರಿಸ್ಥಿತಿಯಲ್ಲಿ ಜೆಡಿಎಸ್ ಅತ್ಯುತ್ತಮ ಪರ್ಯಾಯವಾಗಿದೆ ಎಂದು ಹೇಳಿದರು.

ಕೆರೆಗಳಗೆ ಕೆಸಿ ವ್ಯಾಲಿ ನೀರು ಹರಿಸುವುದರ ಮೂಲಕ ಜನರ ಆರೋಗ್ಯದ ಮೇಲೆ ಬರೆ ಎಳೆಯಲಾಗಿದೆ. ಸಮರ್ಪಕವಾಗಿ ಶುದ್ಧೀಕರಿಸದೆ ಹರಿಸುತ್ತಿರುವ ನೀರಿನಿಂದ ಜನರು ಅಪಾಯಕಾರಿ ಕಾಯಿಲೆಗೆ ತುತ್ತಾಗುವ ಸಂಭವ ಇದೆ ಎಂದು ಹೇಳಿದರು.

ಗಡಿ ಭಾಗದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತಿರುವುದು ಸ್ವಾಗತಾರ್ಹ. ಇಲ್ಲಿನ ಜನರ ಕನ್ನಡ ಪ್ರೇಮ ಅನುಕರಣೀಯ. ಆದರೆ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಸಬೇಕು. ಕನ್ನಡ ಬದುಕಿನ ಭಾಗವಾಗಿ ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟರು.

ತಾಲ್ಲೂಕಿನ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿ, ನಾಡು ನುಡಿ ರಕ್ಷಣೆ ಎಲ್ಲರ ಹೊಣೆ. ಅದಕ್ಕೆ ಗಡಿನಾಡು ನಡುನಾಡು ಎಂಬ ಭೇದವಿಲ್ಲ. ಕರ್ನಾಟಕದಲ್ಲಿ ವಾಸಿಸುವ ಎಲ್ಲರೂ ಕನ್ನಡಿಗರು. ಆದ್ದರಿಂದ ಇಲ್ಲಿನ ನೆಲ, ಜಲ ಹಾಗೂ ಭಾಷೆ ಬಗ್ಗೆ ಗೌರವ ಭಾವನೆ ಹೊಂದಿರಬೇಕು ಎಂದು ಹೇಳಿದರು.

ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಎಂ.ವಿ.ಶ್ರೀನಿವಾಸ್, ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಗಾಯಿತ್ರಿ ಮುತ್ತಪ್ಪ, ಮುಖಂಡರಾದ ಮಂಜುನಾಥರೆಡ್ಡಿ, ಬಿ.ವೆಂಕಟರೆಡ್ಡಿ, ಎಂ.ಶ್ರೀನಿವಾಸಪ್ಪ, ಜಯಲಕ್ಷ್ಮಿ, ಕೃಷ್ಣಾರೆಡ್ಡಿ, ಅಪ್ಪೂರು ರಾಜು, ಆನಂದಗೌಡ, ಪೂಲ ಶಿವಾರೆಡ್ಡಿ, ಸಿಎಂಆರ್ ಶ್ರೀನಾಥ್, ಸುಧಾಕರ್, ಡಾ. ವಿ.ಎಂ.ರಮೇಶ ಬಾಬು, ಎಸ್.ಆರ್.ಶ್ರೀನಿವಾಸ್, ಸತ್ಯನಾರಾಯಣ, ಕಾರ್ ಬಾಬು, ಇಮ್ರಾನ್ ಪಾಷ, ಎನ್.ಎಂ.ನೂರ್‍ಅಹ್ಮದ್, ನಜ್ಮ ನಜೀರ್, ಜಬೀರ್ ಅಹ್ಮದ್ ಇದ್ದರು.

ಜಿಲ್ಲೆಗೆ ಬಂದಿರುವ ಬೃಹತ್ ಕಂಪನಿಗಳು ತಮ್ಮ ಸಿಎಸ್‍ಆರ್ ನಿಧಿಯಿಂದ
ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಹಕಾರ ನೀಡಬೇಕು-ಎಸ್ಪಿ ಡಿ.ದೇವರಾಜ್

ಕೋಲಾರ:- ಜಿಲ್ಲೆಯಲ್ಲಿ ಆರಂಭವಾಗಿರುವ ಬೃಹತ್ ಕಂಪನಿಗಳು ತಮ್ಮ ಸಿಎಸ್‍ಆರ್ ನಿಧಿಯಿಂದ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ದಿಗೆ ಕೊಡುಗೆ ನೀಡಲು ಮುಂದೆ ಬರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಮನವಿ ಮಾಡಿದರು.
ತಾಲ್ಲೂಕಿನ ಕ್ಯಾಲನೂರು ಕರ್ನಾಟಕ ಪಬ್ಲಿಕ್ ಶಾಲೆಗೆ ವಿಸ್ಟ್ರಾನ್ ಕಂಪನಿ ಅಧಿಕಾರಿಗಳ ಮನವೊಲಿಸಿ ಶಾಲೆಗೆ ಕರೆತಂದಿದ್ದ ಎಸ್ಪಿಯವರು ಶಾಲೆ ಆವರಣದಲ್ಲಿ ಕಳೆದ ಬಾರಿ ಬಿದ್ದ ಮಳೆಗೆ ನೆಲಸಮವಾಗಿದ್ದ ಎರಡು ಕೊಠಡಿಗಳನ್ನು ತೋರಿಸಿ ಮಾತನಾಡುತ್ತಿದ್ದರು.
ಸರ್ಕಾರಿ ಶಾಲೆಗಳಿಗೆ ಸರ್ಕಾರ ಸೌಲಭ್ಯ ನೀಡುತ್ತಿದೆ ಆದರೆ ಇಂದಿ ಸ್ಪರ್ಧಾತ್ಮಕ ಪೈಪೋಟಿಗೆ ಅನುಗುಣವಾಗಿ ಬಲವರ್ಧನೆಗೆ ದಾನಿಗಳು, ಕಂಪನಿಗಳ ನೆರವು ಅಗತ್ಯವಿದೆ ಎಂದ ಅವರು, ಈ ನಿಟ್ಟಿನಲ್ಲಿ ನರಸಾಪುರ,ವೇಮಗಲ್ ಭಾಗದಲ್ಲಿ ಇರುವ ಕಂಪನಿಗಳು ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಮುಂದಾಗಬೇಕು ಎಂದರು.
ಸರ್ಕಾರಿ ಶಾಲೆಗಳನ್ನು ಉಳಿಸುವ ಮೂಲಕ ಸಮಾಜದ ಪ್ರತಿಯೊಬ್ಬರಿಗೂ ಶಿಕ್ಷಣ ಕೊಡಿಸುವುದು ಜವಾಬ್ದಾರಿಯಾಗಿದೆ, ಸರ್ಕಾರ ನೀಡುವ ಸೌಲಭ್ಯಗಳ ಜತೆಗೆ ಕಂಪನಿಗಳು ಸಿಎಸ್‍ಆರ್ ನಿಧಿ ಕೊಡುಗೆಯಾಗಿ ನೀಡಿದರೆ ಶಾಲೆಗಳ ಆಕರ್ಷಣೀಯವಾಗಿ ಮಕ್ಕಳು ಸರ್ಕಾರಿ ಶಾಲೆಗಳತ್ತ ಬರಲು ಸಹಕಾರಿಯಾಗಲಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿತ, ಆತಂಕಕಾರಿ ಬೆಳವಣಿಗೆಯಾಗಿದೆ, ಪ್ರತಿಯೊಬ್ಬರಲ್ಲೂ ಕಾನ್ವೆಂಟ್ ವ್ಯಾಮೋಹ ಇದಕ್ಕೆ ಕಾರಣವಾಗಿದೆ, ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಿಕ್ಷಣ ನೀಡುವ ಮೂಲಕ ಪೋಷಕರ ಮನಸೆಳೆಯಬೇಕಿದೆ ಎಂದ ಅವರು, ಕ್ಯಾಲನೂರು ಕೆಪಿಎಸ್ ಶಾಲೆಯಲ್ಲಿ 426 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇದೊಂದು ದೊಡ್ಡ ಶಾಲೆಯಾಗಿದೆ, ಇಲ್ಲಿಗೆ ಸೌಲಭ್ಯಗಳು ಹರಿದುಬರಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಇಂದು ಉನ್ನತ ಸ್ಥಾನದಲ್ಲಿದ್ದಾರೆ, ಜನತೆಗೆ ಸರ್ಕಾರಿ ಶಾಲೆಗಳ ಕುರಿತು ಇರುವ ಕೀಳಿರಿಮೆ ಹೋಗಬೇಕು, ಈ ನಿಟ್ಟಿನಲ್ಲಿ ಶಿಕ್ಷಕರ ಪರಿಶ್ರಮವೂ ಅಗತ್ಯವಿದೆ ಎಂದ ಅವರು, ಇಲ್ಲೇ ನುರಿತ ಶಿಕ್ಷಕರಿದ್ದಾರೆ ಇದನ್ನು ಪೋಷಕರು ಅರಿಯಬೇಕು ಎಂದರು.
ಇದೇ ಸಂದರ್ಭದಲ್ಲಿ ವಿಸ್ಟ್ರಾನ್ ಕಂಪನಿ ಅಧಿಕಾರಿ ನಾಗರಾಜ್ ಮಾತನಾಡಿ ಕಂಪನಿಯ ಆಡಳಿತವರ್ಗದೊಂದಿಗೆ ಮಾತನಾಡಿ, ಸಿಎಸ್‍ಆರ್ ನಿಧಿಯ ಹಣವನ್ನು ಕ್ಯಾಲನೂರು ಶಾಲೆಗೆ ಒದಗಿಸುವುದಾಗಿ ಭರವಸೆ ನೀಡಿದರು.
ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಪ್ರಾರ್ಥನಾ ಸ್ಥಳಕ್ಕಾಗಿ ಸಿಮೆಂಟ್ ಮೈದಾನ ಮಾಡಿಕೊಡುವ ಬಗ್ಗೆ ಹಾಗೂ ಐಟೆಕ್ ಶೌಚಾಲಯ ನಿರ್ಮಾಣ ಮಾಡಿಕೊಡವ ಬಗ್ಗೆ ಚರ್ಚಿಸಲಾಯಿತು ಹಾಗೂ ವಿಸ್ಟ್ರೋನ್ ಕಂಪನಿಯ ಸಹಯೋಗದಲ್ಲಿ ನಿರ್ಮಿಸಿ ಕೊಡುವ ಬಗ್ಗೆ ಭರವಸೆಯನ್ನು ಅಧಿಕಾರಿಗಳು ನೀಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು,ಸದಸ್ಯರು, ಎಸ್‍ಡಿಎಂಸಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಎಸ್ಪಿ ದೇವರಾಜ್, ಶಾಲೆಗೆ ಇರುವ ಅಗತ್ಯತೆಗಳ ಕುರಿತು ಚರ್ಚಿಸಿ ಇದೆಲ್ಲವನ್ನೂ ವಿಸ್ಟ್ರಾನ್ ಸಿಎಸ್‍ಆರ್ ನಿಧಿಯಲ್ಲಿ ಪೂರೈಸಲು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಎಸ್ಪಿ ಡಿ.ದೇವರಾಜ್ ಹಾಗೂ ವಿಸ್ಟ್ರನ್ ಕಂಪನಿ ಅಧಿಕಾರಿ ನಾಗರಾಜ್‍ರನ್ನು ಶಾಲೆಯ ಮುಖ್ಯಶಿಕ್ಷಕ ಓ.ಮಲ್ಲಿಕಾರ್ಜುನ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕ ಶಿವರಾಜ್, ಗ್ರಾ.ಪಂ ಅಧ್ಯಕ್ಷೆ ಸಹೀದಾ ಜಂಷೀರ್ ಪಾಷ, ಉಪಾಧ್ಯಕ್ಷ ರತ್ನಮ್ಮ ನಾರಾಯಣಸ್ವಾಮಿ, ಗ್ರಾ.ಪಂ ಸದಸ್ಯ ನವೀನ್, ರಾಜೇಂದ್ರ ಪ್ರಸಾದ್, ಸದಸ್ಯರಾದ ಸುರೇಶ್,ರಮೇಶ್, ಲೋಕೇಶ್, ನವೀನ್, ರಾಜೇಂದ್ರಪ್ರಸಾದ್, ಬಾಬಾ ಸಾಬ್, ಜಂಷೀರ್‍ಪಾಷ, ಎಸ್‍ಡಿಎಂಸಿ ಅಧ್ಯಕ್ಷ ನಾರಾಯಣಮೂರ್ತಿ, ಉಪಾಧ್ಯಕ್ಷ ರಾಮಾಂಜಿನಪ್ಪ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

ರಾಜ್ಯದ ಅಭಿವೃದ್ಧಿಗಾಗಿ ಮತದಾರರು ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕು:ಎಚ್.ಡಿ.ಕುಮಾರಸ್ವಾಮಿ

ಶ್ರೀನಿವಾಸಪುರ: ರಾಜ್ಯದ ಅಭಿವೃದ್ಧಿಗಾಗಿ ಮತದಾರರು ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕು ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ತಾಲ್ಲೂಕಿನ ರೋಜೇನಹಳ್ಳಿ ಕ್ರಾಸ್ ಸಮೀಪ ಜೆಡಿಎಸ್ ಪಂಚರತ್ನ ರಥಯಾತ್ರೆ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಎತ್ತಿನ ಹೊಳೆ ನೀರಿಗೆ ಬದಲಾಗಿ, ಕೆಸಿ ವ್ಯಾಲಿ ಕೊಳಚೆ ನೀರು ಹರಿಸಲಾಗುತ್ತಿದೆ. ಅಂಥ ನೀರು ಬಳಸಿಕೊಂಡು ಬೆಳೆದ ಟೊಮೆಟೊ ತರಕಾರಿಗೆ ಬೆಲೆ ಸಿಗುತ್ತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳು ಸ್ವಾಭಿಮಾನದಿಂದ ಬದುಕಲು ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು. ರೈತರ ಮಕ್ಕಳಿಗೆ ಹೆಣ್ಣು ಸಿಗದ ಪರಿಸ್ಥಿತಿ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಕ್ಕೆ ಬಂದ 24 ಗಂಟೆ ಒಳಗೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡಲಾಗುದು. ಪಂಚರತ್ನ ಯೋಜನೆ ಜಾರಿ ಮೂಲಕ ಸಮಾಜದ ಎಲ್ಲ ವರ್ಗದ ಜನರಿಗೆ ಉತ್ತಮ ಬದುಕು ನೀಡಲಾಗುವುದು ಎಂದು ಹೇಳಿದರು.
ಸುಗಟೂರು ಗ್ರಾಮದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ಕಾರಣ. ರಮೇಶ್ ಕುಮಾರ್ ಹೇಳಿರುವಂತೆ ಕಾಂಗ್ರೆಸ್ ಮುಖಂಡರು ಮೂರು ತಲೆಮಾರಿಗೆ ಸಾಕಾಗುವಷ್ಟು ಆಸ್ತಿ ಮಾಡಿದ್ದಾರೆ. ಅವರು ಜನರ ಕಷ್ಟಕ್ಕೆ ಎಲ್ಲಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಸ್ತ್ರೀ ಶಕ್ತಿ ಸಂಘದ ಸದಸ್ಯರು ಪಡೆದಿರುವ ಡಿಸಿಸಿ ಬ್ಯಾಂಕ್ ಸಾಲ ರಮೇಶ್ ಕುಮಾರ್ ತೀರಿಸುವುದಿಲ್ಲ. ಅಧಿಕಾರಕ್ಕೆ ಬಂದರೆ ನಾನು ತೀರಿಸುತ್ತೇನೆ. ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಅವರನ್ನು ಗೆಲ್ಲಿಸಿಕೊಡಿ, ನಾನು ಮಂತ್ರಿ ಮಾಡುತ್ತೇನೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮಾಜಿ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ, ಶ್ರೀನಿವಾಸಪುರ ಜೆಡಿಎಸ್ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ, ಮಾಲೂರು ಅಭ್ಯರ್ಥಿ ಜೆಇ ರಾಮೇಗೌಡ. ಕೋಲಾರ ಅಭ್ಯರ್ಥಿ ಸಿಎಂಆರ್ ಶ್ರೀನಾಥ್, ಮುಖಂಡರಾದ ಬಿ.ವಿ.ಶಿವಾರೆಡ್ಡಿ, ನಿಖಿಲ್ ಕುಮಾರಸ್ವಾಮಿ, ಮಂಗಮ್ಮ ಮುನಿಶಾಮಿ, ಜಂಜಪ್ಪ, ಗೋಪಾಲ್, ಗಾಯಿತ್ರಿ ಮುತ್ತಪ್ಪ, ಎಚ್.ನಾರಾಯಣಸ್ವಾಮಿ, ಪೂಲ ಶಿವಾರೆಡ್ಡಿ, ಮಂಜುನಾಥರೆಡ್ಡಿ, ಕೆ.ಪಿ.ನಾಗೇಶ್, ರಾಮಚಂದ್ರೇಗೌಡ, ಸಂತೋಷ್, ಮನು, ನಾರಾಯಣಗೌಡ, ನಂಜೇಗೌಡ, ವೆಂಕಟಲಕ್ಷ್ಮಮ್ಮ ದ್ಯಾವಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಎಂ.ವಿ.ಶ್ರೀನಿವಾಸ್, ಗಣೇಶ್, ನಂಜುಂಡಪ್ಪ ಮತ್ತಿತರರು ಇದ್ದರು.
ರಾತ್ರಿ ಲಕ್ಷ್ಮೀಪುರ, ರಾಯಲ್ಪಾಡ್, ಗೌನಿಪಲ್ಲಿಯಲ್ಲಿ ರೋಡ್ ಷೋ ಮೂಲಕ ಜೆಡಿಎಸ್‍ಗೆ ಬೆಂಬಲ ಕೋರಿದರು. ತಡರಾತ್ರಿ ನಕ್ಕಲಗಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಯಿತು.

ರೋಜೇನಹಳ್ಳಿ ಸಮೀಪ ಜೆಡಿಎಸ್ ಪಂಚರತ್ನ ರಥಯಾತ್ರೆ-ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು

ಶ್ರೀನಿವಾಸಪುರ ತಾಲ್ಲೂಕಿನ ರೋಜೇನಹಳ್ಳಿ ಸಮೀಪ ಜೆಡಿಎಸ್ ಪಂಚರತ್ನ ರಥಯಾತ್ರೆ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು.

ಗಡಿ ಪ್ರದೇಶದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು :ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಗಡಿ ಪ್ರದೇಶದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾಷೆಯೊಂದಿಗೆ ಬದುಕುವ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಚೈತನ್ಯ ಜನ ಜಾಗೃತಿ ವೇದಿಕೆ ಸುಮಾರು 26 ಈ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದೆ. ಗಡಿ ಭಾಗದ ಜನರಲ್ಲಿ ಕನ್ನಡ ಪ್ರೇಮ ಉಂಟುಮಾಡಲು ಶ್ರಮಿಸುತ್ತಿದೆ. ಇಂಥ ಪ್ರಯತ್ನಗಳು ಎಲ್ಲ ಕನ್ನಡ ಪರ ಸಂಘಟನೆಗಳಿಂದಲೂ ನಡೆಯಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥರೆಡ್ಡಿ, ಪುರಸಭಾ ಸದಸ್ಯ ಬಿ.ವಿ.ರೆಡ್ಡಿ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಜಿ.ಚಂದ್ರು. ಜಿಲ್ಲಾ ಘಟಕದ ಉಪಾಧ್ಯಕ್ಷ ಹೈದರ್ ಷರೀಫ್, ಮುಖಂಡರಾದ ಪೂಲ ಶಿವಾರೆಡ್ಡಿ, ವಿ.ಮುನಿಯಪ್ಪ, ಶ್ರೀನಿವಾಸರೆಡ್ಡಿ, ಗಾಯಿತ್ರಿ ಮುತ್ತಪ್ಪ, ರಸೂಲ್ ಖಾನ್, ಕಾರ್ ಬಾಬು, ಜಗನ್, ಸಾದಿಕ್ ಪಾಷ, ಸಂತೋಷ್, ಮಂಜು, ಜಗದೀಶ್, ಅಪ್ಪೂರು ರಾಜು, ರವಿ ಇದ್ದರು.

ಸೇಂಟ್ ಆಗ್ನೆಸ್ ಪಿ ಯು ಕಾಲೇಜು ಮೈದಾನದಲ್ಲಿ ಸಂಭ್ರಮದ ಕಾಲೇಜು ದಿನ

ಮಂಗಳೂರು: ಸೇಂಟ್ ಆಗ್ನೆಸ್ ಪಿ ಯು ಕಾಲೇಜು ತಮ್ಮ ಮೈದಾನದಲ್ಲಿ ಸಂಭ್ರಮದ ಕಾಲೇಜು ದಿನವನ್ನು ಆಚರಿಸಿತು.

    ಕಾರ್ಯಕ್ರಮಕ್ಕೆ ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಎನ್ ವಿನಯಹೆಗ್ಡೆ ಮುಖ್ಯ ಅತಿಥಿಗಳಾಗಿದ್ದು, ಸಭೆಯನ್ನುದ್ದೇಶಿಸಿ ಅವರು  ಮಾತನಾಡಿ “ಸೇಂಟ್ ಆಗ್ನೆಸ್ ಸಂಸ್ಥೆಗಳು ಮಂಗಳೂರಿನ ಸಂಪೂರ್ಣ ಜನಸಂಖ್ಯೆಗೆ ಸೇರಿವೆ. ಸೇಂಟ್ ಆಗ್ನೆಸ್ ಒಂದು ಖ್ಯಾತಿ ಪಡೆದ ಸಂಸ್ಥೆಯಾಗಿದ್ದು, ಅಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮಾತ್ರ ಉತ್ತಮ ಸಾಧನೆ ಮಾಡದೆ ಉತ್ತಮ ಗುಣವನ್ನು ಬೆಳೆಸಿಕೊಳ್ಳಬೇಕು ಮತ್ತು ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು” ಎಂದು ಅವರು ಹೇಳಿದರು. “ಶಿಕ್ಷಣವು ನಿಂತ ಪ್ರಕ್ರಿಯೆಯಲ್ಲ. ಕಾಲ ಬದಲಾದಂತೆ ಬದಲಾಗಬೇಕು.ಅದು ಸೇಂಟ್ ಆಗ್ನೆಸ್ ಸಂಸ್ಥೆಯಲ್ಲಿ ಆಗುತ್ತದೆ. ಅದು ವಿದ್ಯಾರ್ಥಿಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತದೆ” ಎಂದರು

     ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಆಟಗಾರರನ್ನು, ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವರ್ಷದ ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಗಣ್ಯರು ಸನ್ಮಾನಿಸಿದರು.

   ಸೇಂಟ್ ಆಗ್ನೆಸ್ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಡಾ.ಸಿಸ್ಟರ್ ಲಿಡಿಯಾ ಫೆರ್ನಾಂಡಿಸ್ ಎ.ಸಿ. ಗೌರವ ಅತಿಥಿಗಳಾಗಿದ್ದರು. ಪ್ರಾಂಶುಪಾಲರಾದ ಸಿಸ್ಟರ್.ನೋರಿನ್ ಡಿಸೋಜಾ ಎ.ಸಿ, ಉಪ ಪ್ರಾಂಶುಪಾಲರಾದ ಸಿಸ್ಟರ್ ಜಾನೆಟ್ ಸಿಕ್ವೇರಾ ಎ.ಸಿ,  ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಆಶಾ ಸಂಜೀವನ,  ಕಾರ್ಯದರ್ಶಿ ಅವಿನಾಶ್ ಕೃಷ್ಣ ಕುಮಾರ್ ಉಪಸ್ಥಿತರಿದ್ದರು.

ಸಿಸ್ಟರ್ ನೊರಿನ್ ಡಿಸೋಜಾ ಸ್ವಾಗತವನ್ನು ಕೋರಿದರು.ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ಜೇಷ್ಮಾ ಡಿಸೋಜಾ ಸಂಚಾಲಕರು ಕೃತಜ್ಞತೆ ಸಲ್ಲಿಸಿದರು. ಮತ್ತು ಶ್ರೀ ಜೋಯಲ್ ಫೆರ್ನಾಂಡಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಔಪಚಾರಿಕ ಕಾರ್ಯಕ್ರಮದ ನಂತರ ವೈವಿಧ್ಯಮಯ ಕಲಾ ಪ್ರಕಾರಗಳು, ಸಂಗೀತ ಹಾಡುಗಳು, ನ್ರತ್ಯಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನೆಡದವು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ನೈಟಿಂಗೇಲ್ ಲತಾಮಂಗೇಶ್ಕರ್ ಅವರಿಗೆ ಗೌರವ ಸಲ್ಲಿಸಾಲಾಯಿತು.    ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಮತ್ತು  ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಓತ್ತಿ ಹೇಳುವ ಇಂಗ್ಲಿಷ್ ಕೋಷ್ಟಕ ‘ಒನ್ ಅರ್ಥ್’  ಕಾರ್ಯಕ್ರಮಗಳು ಗಮನ ಸೆಳೆದವು. ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಕಾಲೇಜು ವಿದ್ಯಾಥಿ ಸಂಘದ ಅಧ್ಯಕ್ಷೆ ಕತೀಜ ಝಮಿಯಾ ಪಿ.ಯು. ಹಾಗೂ ಉಪಾಧ್ಯಕ್ಷೆ ಅನ್ವಿಕಾ ಮಿರಾಂದ  ನಿರೂ

ಕುಂದಾಪುರ : ಅಂಜನಿ ಶ್ಯಾನುಭಾಗ್ ನಿಧನ

ಕುಂದಾಪುರದ ಹಿರಿಯ ವ್ಯವಹಾರಸ್ಥರಾದ ರತ್ನಾಕರ ಶ್ಯಾನುಭಾಗ್-ವಸಂತಿ ದಂಪತಿಯ ಪುತ್ರಿ ಅಂಜನಿ ಶ್ಯಾನುಭಾಗ್ (51) ಹೃದಯಾಘಾತದಿಂದ ನ.24ರಂದು ಮಂಗಳೂರಿನ ಸಹೋದರಿಯ ಮನೆಯಲ್ಲಿ ನಿಧನರಾದರು. ಕುಂದಾಪುರದಲ್ಲಿ ತನ್ನ ಕುಟುಂಬದ ವ್ಯವಹಾರದಲ್ಲಿ ಕ್ರಿಯಾಶೀಲತೆಯಿಂದ ದುಡಿಯುತ್ತಿದ್ದ ಇವರು ಉತ್ತಮ ಜನಸಂಪರ್ಕ ಹೊಂದಿದ್ದರು. ತಂದೆ, ತಾಯಿ ಸಹೋದರ, ಸಹೋದರಿಯನ್ನು ಇವರು ಅಗಲಿದ್ದಾರೆ.

ಮಾವು ಬೆಳೆಗಾರರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ಆಗ್ರಹಿಸಿ ಡಿ.8 ರಂದು ತಾಲ್ಲೂಕು ಬಂದ್ ಆಚರಿಸಲಾಗುವುದು-ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ಚಿನ್ನಪ್ಪರೆಡ್ಡಿ

ಶ್ರೀನಿವಾಸಪುರ: ಮಾವು ಬೆಳೆಗಾರರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ಆಗ್ರಹಿಸಿ ಡಿ.8 ರಂದು ತಾಲ್ಲೂಕು ಬಂದ್ ಆಚರಿಸಲಾಗುವುದು ಎಂದು, ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ಚಿನ್ನಪ್ಪರೆಡ್ಡಿ ಹೇಳಿದರು.
ಪಟ್ಟಣದ ರಾಮ ಮಂದಿರದ ಆವರಣದಲ್ಲಿ ಕೋಲಾರ ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಾವು ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಅಂದು ಎಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಮಾವು ಬೆಳೆಗಾರರು ಹಾಗೂ ವಿವಿಧ ರೈತ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಬೇಡಿಕೆ ಒಳಗೊಂಡ ಮನವಿ ಪತ್ರ ನೀಡುವರು ಎಂದು ಹೇಳಿದರು.
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಾಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ಹೋರಾಟಕ್ಕೆ ಶಕ್ತಿ ತುಂಬಲು ಜಿಲ್ಲಾ ಮಟ್ಟಲ್ಲಿ ಸಂಘಟನೆ ಬಲಪಡಿಸಬೇಕು. ಹೋರಾಟದಲ್ಲಿ ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಜಿಲ್ಲೆಯ ಮಾವು ಬೆಳೆಗಾರರನ್ನು ತೊಡಗಿಸಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಮಾವಿನ ಬೆಳೆ ನಷ್ಟ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಜಿಲ್ಲಾ ಮಟ್ಟದಲ್ಲಿ ಮಟ್ಟದಲ್ಲಿ ನಡೆದ ಜಂಟಿ ಸಭೆಯಿಂದ ರೈತರಿಗೆ ಅನುಕೂಲವಾಗಿಲ್ಲ. ಜಿಲ್ಲಾ ಮಟ್ಟದ ವಿಸ್ತøತ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಿದ ಬಳಿಕ ಹೋರಾಟದ ಹಾದಿ ಹಿಡಿಯಲಾಗಿದೆ ಎಂದು ಹೇಳಿದರು.
ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀರಾಮರೆಡ್ಡಿ ಮಾತನಾಡಿ, ವಿಮಾ ಕಂಪನಿಯಿಂದ ಹಗಲು ದರೋಡೆ ನಡೆಯುತ್ತಿದೆ. ಸರ್ಕಾರ ತಾಲ್ಲೂಕು ಆಡಲಿತ ನೀಡಿರುವ ಬೆಳೆ ನಷ್ಟದ ವರದಿ ಆಧರಿಸಿ ಪರಿಹಾರ ನೀಡಬೇಕು. ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯಲು ಬಂದ್ ಅಗತ್ಯ ಎಂದು ಹೇಳಿದರು.
ಮುಖಂಡರಾದ ಬೈಚೇಗೌಡ, ವೀರಭದ್ರೇಗೌಡ, ಆನಂದಕುಮಾರ್, ಬಿ.ಎಸ್.ಸೈಯದ್ ಫಾರೂಕ್ ಮಾತನಾಡಿದರು. ಮುಖಂಡರಾದ ಎನ್.ವೀರಪ್ಪರೆಡ್ಡಿ, ಕೃಷ್ಣಮೂರ್ತಿ ಇದ್ದರು.