HOLY ROSARY CHURCH, KUNDAPUR – 450 th JUBILEE SOUVENIR 2021

ರಾಯಲ್ಪಾಡಿನ ಸರ್ಕಾರಿ ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಹಳೇ ವಿದ್ಯಾರ್ಥಿಗಳ ಸಂಘದವತಿಯಿಂದ ಕನ್ನಡರಾಜ್ಯೋತ್ಸವ

ಶ್ರೀನಿವಾಸಪುರ 1 ; ಆತ್ಮವಿಶ್ವಾಸ, ಶ್ರದ್ದೆ , ಪರಿಶ್ರಮ ಸ್ವಾಲಂಭನೆ ಗುಣಾತ್ಮಕಗಳನ್ನು ರೂಡಿಸಿಕೊಂಡರೆ ಎಂಥಹ ಸಾಮಾನ್ಯ ಮನುಷ್ಯ ಕೂಡ ಸಾಧನೆಯ ಉತ್ತಂಗಕ್ಕೆ ಏರಬಹುದು ಎಂದು ಖ್ಯಾತ ಕಥೆಗಾರ ಕೇಶವರೆಡ್ಡಿ ಹಂದ್ರಾಳರು ಹೇಳಿದರು.
ತಾಲೂಕಿನ ರಾಯಲ್ಪಾಡಿನ ಸರ್ಕಾರಿ ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶನಿವಾರ ಶಾಲೆಯ 1983-84 ಸಾಲಿನ ಹಳೇ ವಿದ್ಯಾರ್ಥಿಗಳ ಸಂಘದವತಿಯಿಂದ ಕನ್ನಡರಾಜ್ಯೋತ್ಸವ ಪುರಸ್ಕøತ ಸಿ.ಜಿ.ಶ್ರೀನಿವಾಸ್‍ರವರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.
ಅರವತ್ತು, ಎಪ್ಪತ್ತು , ಎಂಬತ್ತರ ದಶಕಳಿಗೆ ಹೋಲಿಸಿದರೆ ಪ್ರಸ್ತುತ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭೆಗಳಲ್ಲಿ ಪ್ರತಿಭೆಗಳು ಆರಳುವುದಕ್ಕೆ ಉತ್ತಮವಾದ ವಾತಾವರಣ ಇದೆಯೆಂದು . ಅಂಥ ವಾತಾವರಣವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಮತ್ತು ಯುವ ಜನತೆ ಯಶಸ್ವಿಯಾಗಿ ತಮ್ಮ ಬದುಕಗಳನ್ನು ರೂಪಿಸಿಕೊಳ್ಳಬೇಕೆಂದು ಕರೆನೀಡಿದರು.
ಇಂಥ ಗುಣಗಳಿಂದಾಗಿಯೇ ಕೋಲಾರ ಜಿಲ್ಲೆಯ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ಮಾಸ್ತಿ ವೆಂಕಟೇಶ್ ಅಯ್ಯಾಂಗಾರ್, ಸರ್.ಎಂ.ವಿಶ್ವೇಶ್ವರಯ್ಯ , ಡಿ.ವಿ.ಗುಂಡಪ್ಪ ಮುಂತಾದವರು ಯಶಸ್ಸಿನ ಉತ್ತುಂಗಕ್ಕೆ ಏರಿದರೆಂದರು. ಈ ಸಂದರ್ಭದಲ್ಲಿ ಮಹನೀಯರನ್ನು ಸ್ಮರಿಸಿದರು. ಬಡತನ ಮತ್ತು ಸಂಕಷ್ಟಗಳು ಬದುಕಿನ ಉತ್ಕøಷ್ಟ ಮಾರ್ಗಗಳನ್ನು ಅನ್ವೇಷಣೆ ಮಾಡುತ್ತೇವೆ. ಸಾಮಾನ್ಯ ದಲಿತ ಕುಟುಂಬದಲ್ಲಿ ಹುಟ್ಟಿದ ಮುದಿಮಡುಗು ಗ್ರಾಮದ ಸಿ.ಜಿ.ಶ್ರೀನಿವಾಸ್ ಕನ್ನಡರಾಜ್ಯೋತ್ಸವಕ್ಕೆ ಭಾಜನಾರಾಗಿರುವುದು ಹಿಂದೆ ಪರಿಶ್ರಮ , ಆತ್ಮವಿಶ್ವಾಸ ಅಡಗಿದೆ ಎಂದರು.

ಕನ್ನಡರಾಜ್ಯೋತ್ಸವ ಪುರಸ್ಕøತ ಸಿ.ಜಿ.ಶ್ರೀನಿವಾಸ್ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ ನಾವು ಎಷ್ಟು ಓದಿದ್ದೇವೆ ಎಂಬುದು ಮುಖ್ಯವಲ್ಲ , ಆ ಓದು ಎಷ್ಟು ಸಂಸ್ಕಾರವನ್ನು ಕಲಿಸಿದೆ ಎಂಬುದು ಮುಖ್ಯ .
ಒಬ್ಬ ವಿದ್ಯಾರ್ಥಿಯು ಎಷ್ಟೇ ವಿದ್ಯಾವಂತರಾದರೂ ಆ ವಿದ್ಯಾರ್ಥಿಯಲ್ಲಿ ತಂದೆತಾಯಿ, ಗುರು , ಹಿರಿಯರಲ್ಲಿ ಗೌರವವನ್ನು ನೀಡುತ್ತಾ, ಮಾನವೀಯ ಮೌಲ್ಯಗಳನ್ನು ಇದ್ದರೆ ಆಗ ಸಮಾಜವು ಗೌರವಿಸುತ್ತದೆ.
ವಿದ್ಯಾರ್ಥಿಗಳು ದೃಡ ನಿರ್ಧಾರ ಇರಬೇಕು. ಸಮಯಪ್ರಜ್ಞೆ ಇರಬೇಕು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯೆಯೊಂದಿಗೆ ಕೌಶಲ್ಯ ಇದ್ದರೆ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ ಹಾಗೂ ಆದರ್ಶ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದರು.

ಪರಿಸರವಾದಿ ಡಾ|| ಹೆಚ್.ಆರ್. ಸ್ವಾಮಿ ಮಾತನಾಡಿ ಸಮಾಜವನ್ನು ಗೆಲ್ಲಲು ವಿದ್ಯೆಯೊಂದೆ, ವಿದ್ಯಾರ್ಥಿಗಳು ಬದ್ದತೆ, ಜ್ಞಾನ, ಶಿಸ್ತು ,ಸಮಯಪ್ರಜ್ಞೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು.
ವಿದ್ಯಾರ್ಥಿಗಳು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಒಂದು ಗಿಡವನ್ನು ದತ್ತು ಪಡೆದು ಪರಿಸರವನ್ನು ಉಳಿಸುವಂತೆ ಕರೆನೀಡಿದರು.
ರಂಗಕರ್ಮಿಗಳಾದ ಎನ್.ಶಿವಲಿಂಗಯ್ಯ, ಅಶೋಕ್, ಕಲಾವಿದ ಮುರಳಿಧರ ವಿ.ರಾಠೋಡ್, ಪ್ರಾಂಶುಪಾಲ ಎನ್.ಶಶಿಕುಮಾರ್, ಪ್ರೌಡಶಾಲೆ ಮುಖ್ಯ ಶಿಕ್ಷಕ ಪಿ.ಮಾರಣ್ಣ, ಎಸ್‍ಡಿಎಂಸಿ ಅಧ್ಯಕ್ಷ ರೆಡ್ಡಿಶ್ರೀನಿವಾಸ್ , ನಿವೃತ್ತ ಉಪನ್ಯಾಸಕ ವಿ.ವೆಂಕಟರಮಣ, ಶಾಲೆಯ ಹಳೇ ವಿದ್ಯಾರ್ಥಿಗಳಾದ ಸಿ.ಜಿ.ಶಿವಪ್ಪ, ಸಿಮೆಂಟ್‍ನಾರಾಯಣಸ್ವಾಮಿ, ಮೋಹನ್ ಹಾಗೂ ಉಪನ್ಯಾಸಕರು, ಶಿಕ್ಷಕರು ಇದ್ದರು.

ಸರ್ಕಾರಕ್ಕೆ ಮನವಿ ಮಾಡಿ ರಾಜ್ಯದಲ್ಲಿ ಮೀಸಲಾತಿ ಬೇಕು ಎಂದು ಎಲ್ಲಾ ಸಮುದಾಯಗಳು ಕೇಳುತ್ತಿವೆ. ಆದರೆ ಸರ್ಕಾರವು ಆಯಾ ಸಮುದಾಯಕ್ಕೆ ತಕ್ಕಂತೆ 100ರಷ್ಟು ಮೀಸಲಾತಿ ನೀಡಿದರೆ ಅನುಕೂಲವಾಗಿದೆ ಎಂದು ಪತ್ರಿಕೆಗಳ ಮೂಲಕ ಕನ್ನಡರಾಜ್ಯೋತ್ಸವ ಪುರಸ್ಕøತ ಸಿ.ಜಿ.ಶ್ರೀನಿವಾಸನ್ಸರ್ಕಾರಕ್ಕೆ ಮನವಿ ಮಾಡಿದರು.

ಕುಂದಾಪುರ್ : ಸಹಾಯಕ್ ವಿಗಾರ್ ಮಾ|ಬಾ|ಅಶ್ವಿನ್ ಆರಾನ್ಹಾಚೊ ಜಲ್ಮಾ ದೀಸ್ ಆಚರಣ್


ಕುಂದಾಪುರ್, ನ.27: ಕುಂದಾಪುರ್ ರೊಜಾರ್ ಮಾಯೆಚ್ಯಾ ಇಗರ್ಜೆಚೊ ಸಹಾಯಕ್ ವಿಗಾರ್ ಮಾ|ಬಾ|ಅಶ್ವಿನ್ ಆರಾನ್ಹಾ ನವೆಂವರಾಚ್ಯಾ 26 ವೆರ್ ಬಲಿದಾನ್ ಪಾಟವ್ನ್ ಆಪ್ಲೊ 33 ವೊ ಜಲ್ಮಾ ದೀಸ್ ಆಚರಣ್‍ಕೆಲೊ. ಭೊ|ಮಾ|ಬಾ| ಸ್ಟ್ಯಾನಿ ತಾವ್ರೊ ಹಾಣಿ ಸಹ ಭೆಟವ್ಣಿ ಕೆಲಿ. ಉಪ್ರಾಂತ್ ಇಗರ್ಜೆಚ್ಯಾ ಪೊರ್ಟಿಕೊಂತ್ ಕೇಕ್ ಕಾತರ್ನ್ ಫಿರ್ಗಜ್ ಪ್ರಜಾ ಸಾಂಗಾತಾ ಜಲ್ಮಾ ದೀಸ್ ಆಚರಣ್ ಕೆಲೊ.


ಫಿರ್ಗಜೆಚೊ ವ್ಹಡಿಲ್ ಭೊ|ಮಾ|ಬಾ| ಸ್ಟ್ಯಾನಿ ತಾವ್ರೊ ಹಾಣಿ ಬಾಪ್ ಅಶ್ವಿನಾಕ್ ಶುಭಾಶಯ್ ಪಾಟಯ್ಲೆ. ಫಿರ್ಗಜೆಚ್ಯಾ ತರ್ಫೆನ್ ಮಂಡಳಿಚೊ ಉಪಾಧ್ಯಕ್ಷ್ ಎಲ್.ಜೆಫೆರ್ನಾಂಡಿಸಾನ್ ಬೊರೆ ಮಾಗ್ಲೆ. ಹ್ಯಾ ಸಂದರ್ಭಾರ್ ಗೊವ್ಳಿಕ್ ಮಂಡಳಿಚಿ ಕಾರ್ಯದರ್ಶಿ ಆಶಾ ಕರ್ವಾಲ್ಲೊ, ಆಯೋಗಾಚಿ ಸಂಯೋಜಕಿ, ಗೊವ್ಳಿಕ್ ಮಂಡಳಿಚೆ ಸಾಂದೆ, ಸಾಂ.ಜುಜೆ ಕೊವೆಂತಾಚಿ ವ್ಹಡಿಲ್ನ್ ಸಿಸ್ಟರ್ ಸಂಗೀತಾ ಆನಿ ಹೇರ್ ಧರ್ಮ್ ಭಯ್ಣ್ಯೊ ತಸೆಂಚ್ ಫಿರ್ಗಜ್ ಲೋಕ್ ಹಾಜರ್ ಆಸೊನ್ ಸರ್ವಾನಿಂ ಉಲ್ಲಾಸ್ ಪಾಟಯ್ಲೆ.


ಬಾಪ್ ಅಶ್ವಿನಾನ್ ಸರ್ವಾಂಚೊ ಉಪ್ಕಾರ್ ಆಟಯ್ಲೊ.

ಚುನಾವಣಾ ವರ್ಷ-ಘೋಷಣೆಗಳಿಂದ ಸಾಲ ವಸೂಲಾತಿ ಮೇಲೆ ಪರಿಣಾಮ ಸಾಧ್ಯತೆ
ಡಿಸಿಸಿ ಬ್ಯಾಂಕ್ ಸಿಬ್ಬಂದಿಗಿದು ಅಗ್ನಿಪರೀಕ್ಷೆಯ ಕಾಲ-ಬ್ಯಾಲಹಳ್ಳಿ ಗೋವಿಂದಗೌಡ

ಕೋಲಾರ:- ಚುನಾವಣಾ ವರ್ಷವಾಗಿದ್ದು, ಬ್ಯಾಂಕ್ ಸಿಬ್ಬಂದಿಗೆ ಅಗ್ನಿಪರೀಕ್ಷೆಯ ಕಾಲ, ರಾಜಕೀಯ ಪಕ್ಷಗಳ ಘೋಷಣೆಗಳಿಂದಾಗಿ ಸಾಲ ವಸೂಲಾತಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಬ್ಯಾಂಕ್ ಉಳಿಸುವ ಕೆಲಸ ಮಾಡಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಬ್ಯಾಂಕ್ ನೌಕರರು, ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ಎಲ್ಲಾ ಶಾಖೆಗಳ ಅಧಿಕಾರಿ,ಸಿಬ್ಬಂದಿಗಳ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು.
ಚುನಾವಣಾ ವರ್ಷವಾಗಿದ್ದು, ಸಾಲ ಮನ್ನಾ, ಬಡ್ಡಿಮನ್ನಾದಂತಹ ಘೋಷಣೆಗಳು ಈಗಾಗಲೇ ಮೊಳಗುತ್ತಿವೆ, ಇದು ಬ್ಯಾಂಕಿನ ಸಾಲ ವಸೂಲಾತಿಯ ಮೇಲೆ ಪರಿಣಾಮ ಬೀರಲಿದೆ, ಬ್ಯಾಂಕ್ ಸಿಬ್ಬಂದಿ ಸಾಲ ಪಡೆದವರ ಮನೆಗಳಿಗೆ ತೆರಳಿ ಮನವೊಲಿಸಿ ಸಾಲ ವಸೂಲಿ ಮಾಡಿ ಎಂದು ಸೂಚಿಸಿದರು.
ಮುಂದೆ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದು ಸರ್ಕಾರ ಜಾರಿಗೆ ತರುವ ಸಾಲ ಮನ್ನಾ,ಬಡ್ಡಿಮನ್ನಾದಂತಹ ಯೋಜನೆಗಳ ಜಾರಿಗೆ ಬ್ಯಾಂಕ್ ಸದಾ ಸಿದ್ದವಿದೆ ಆದರೆ ಚುನಾವಣಾ ಪೂರ್ವ ಭರವಸೆಗಳನ್ನು ನಂಬಿ ಸಾಲ ಪಡೆದ ಸ್ತ್ರೀಶಕ್ತಿಸಂಘಗಳು, ರೈತರು ಸಾಲ ಮರುಪಾವತಿಸದಿದ್ದರೆ ಬಡ್ಡಿಯ ಸುಳಿಗೆ ಸಿಲುಕುತ್ತಾರೆ ಎಂಬ ಅಂಶವನ್ನು ಗಮನಕ್ಕೆ ತನ್ನಿ ಎಂದು ಕಿವಿಮಾತು ಹೇಳಿದರು.
ಸರ್ಕಾರದ ಸೌಲಭ್ಯಗಳನ್ನು ಜಾರಿಯಾದರೆ ಒದಗಿಸಲು, ಅದರ ಪ್ರಯೋಜನ ರೈತರು,ಮಹಿಳೆಯರಿಗೆ ತಲುಪಿಸಲು ಬ್ಯಾಂಕ್ ಬದ್ದತೆ ಹೊಂದಿದೆ ಎಂದ ಅವರು, ಗ್ರಾಹಕರು ಈಗ ಭರವಸೆಗಳನ್ನು ನಂಬಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯೂ ಇದೆ, ಇದರಿಂದ ಬ್ಯಾಂಕಿನ ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮವೂ ಬೀರುತ್ತದೆ ಎಂದು ಎಚ್ಚರಿಸಿದರು.
ಬ್ಯಾಂಕಿನ ಎನ್‍ಪಿಎ ಕಡಿಮೆಯಾಗಬೇಕು, ಸಾಲದ ಬಾಕಿ ಕಂತುಗಳು ಸಕಾಲಕ್ಕೆ ಪಾವತಿಸದವರ ಮನವೊಲಿಸಿ, ಅಗತ್ಯವಾದರೆ ನೋಟೀಸ್ ನೀಡಿ, ಸಾಲ ವಸೂಲಾತಿ ಮೂಲಕ ಬ್ಯಾಂಕಿನ ಆರ್ಥಿಕ ಶಕ್ತಿ ಕುಂದದಂತೆ ನೋಡಿಕೊಳ್ಳಿ, ಇಲ್ಲವೇ ನೀವೇ ಕಷ್ಟಕ್ಕೆ ಸಿಲುಕುತ್ತೀರಿ ಎಂದು ಎಚ್ಚರಿಸಿದರು.
ಡಿ.31ಕ್ಕೆ ರೈತರಿಗೆ ನೀಡಿರುವ ಬೆಳೆಸಾಲ, ಮಹಿಳಾ ಸಂಘಗಳಿಗೆ ನೀಡಿರುವ ಬಡ್ಡಿರಹಿತ ಸಾಲ, ಮಧ್ಯಮಾವಧಿ, ಚಿನ್ನದ ಮೇಲಿನ ಸಾಲ ಯಾವುದೇ ಇರಲಿ ಕಂತು ಬಾಕಿ ಇದ್ದರೆ ಕ್ಷಮಿಸುವುದಿಲ್ಲ, ಬ್ಯಾಂಕಿನಲ್ಲಿ ಕುಳಿತು ಏನು ಮಾಡುತ್ತೀರಿ, ವಸೂಲಾತಿಗೆ ಕ್ರಮವಹಿಸಿ ಎಂದರು.


500 ಕೋಟಿರೂ ಠೇವಣಿ ಗುರಿ


ಡಿಸಿಸಿ ಬ್ಯಾಂಕ್ ಎಲ್ಲಾ ರೀತಿಯ ಆರ್ಥಿಕವ್ಯವಹಾರಗಳು, ಸಾಲ ವಿತರಣೆ, ವಸೂಲಾತಿ, ಕಂಪ್ಯೂಟರೀಕರಣ ಎಲ್ಲಾ ವಿಷಯಗಳಲ್ಲೂ ದೇಶಕ್ಕೆ ನಂ.1 ಆಗಿದೆ ಆದರೆ ಠೇವಣಿ ಸಂಗ್ರಹದಲ್ಲಿ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗಿಲ್ಲ ಎಂದು ವಿಷಾದಿಸಿದ ಅವರು,ಬ್ಯಾಂಕ್ ಸಿಬ್ಬಂದಿ ಶ್ರದ್ಧೆ ವಹಿಸಿ, ಈ ಸಾಲಿನಲ್ಲಿ 500 ಕೋಟಿ ಠೇವಣಿ ಸಂಗ್ರಹದ ಗುರಿ ಸಾಧನೆಗೆ ಕೆಲಸ ಮಾಡಿ ಎಂದು ಕಿವಿ ಮಾತು ಹೇಳಿದರು.
ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು ಈಗಾಗಲೇ ಗಣಕೀಕರಣಕ್ಕೆ ಒಳಪಟ್ಟಿವೆ, ಆದರೆ ಆಯಾ ದಿನದ ಲೆಕ್ಕ,ವಹಿವಾಟು ಆಯಾ ದಿನವೇ ಅಪ್‍ಡೇಟ್ ಆಗಬೇಕು, ಆನ್‍ಲೈನ್‍ನಲ್ಲಿ ಮಾಹಿತಿ ಸಿಗಬೇಕು. ಗಣಕೀಕೃತ ಲೆಕ್ಕಪರಿಶೋಧನೆಗೆ ಸುಲಭವಾಗಬೇಕು ಎಂದು ತಾಕೀತು ಮಾಡಿದರು. ಗಣಕೀಕರಣದಲ್ಲಿ ಯಾವುದಾದರೋ ದೋಷವಿದ್ದರೆ ವಿ-ಸಾಫ್ಟ್ ಸಿಬ್ಬಂದಿ ಗಮನಕ್ಕೆ ತನ್ನಿ ಎಂದು ತಿಳಿಸಿದರು.
ಸಾಲಕ್ಕೆ ಮಾತ್ರ ಬ್ಯಾಂಕಿಗೆ ಬರುವವರಿಗೆ ಸೌಲಭ್ಯ ನೀಡದಿರಿ, ಡಿಸಿಸಿ ಬ್ಯಾಂಕಿನಲ್ಲೇ ವಹಿವಾಟು ನಡೆಸಲು ಸೂಚಿಸಿ ಎಂದ ಅವರು, ಬ್ಯಾಂಕ್‍ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ಮಾಡಿ, ಠೇವಣಿ ಹೆಚ್ಚಿಸಿ ಎಂದು ತಿಳಿಸಿ, ಜಿಲ್ಲೆಯ ಪ್ಯಾಕ್ಸ್‍ಗಳ ಕಾರ್ಯದರ್ಶಿಗಳು ತಲಾ 50 ಲಕ್ಷ ಠೇವಣಿ ಸಂಗ್ರಹಿಸಿಕೊಡಲು ಮನವೊಲಿಸಿ ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಾಲ ವಸೂಲಾತಿಯಲ್ಲಿ ನಿರೀಕ್ಷಿತ ರೀತಿ ಕೆಲಸ ಮಾಡದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಬ್ಯಾಂಕ್ ನಿಮಗೆ ಅನ್ನನೀಡುತ್ತಿದೆ, ನಿಮ್ಮ ಕುಟಂಬದ ಆರೋಗ್ಯ ರಕ್ಷಣೆಗೆ ವಿಮಾ ಯೋಜನೆ ನೀಡಿದ್ದೇವೆ, ಜವಾಬ್ದಾರಿ ಅರಿತು ಕೆಲಸ ಮಾಡಿ ಎಂದರು. ಈ ಸಂದರ್ಭದಲ್ಲಿ ಎಲ್ಲಾ ಶಾಖೆಗಳ ಅಧಿಕಾರಿಗಳು, ತಮಗೆ ನೀಡಿರುವ ಠೇವಣಿ ಸಂಗ್ರಹ, ಸಾಲ ವಸೂಲಾತಿಯ ಗುರಿ ಸಾಧನೆಯ ಭರವಸೆ ನೀಡಿದರು.
ಸಭೆಯಲ್ಲಿ ಬ್ಯಾಂಕಿನ ಎಜಿಎಂ ಶಿವಕುಮಾರ್, ಹುಸೇನ್ ದೊಡ್ಡಮುನಿ, ಬೈರೇಗೌಡ,ಬಾಲಾಜಿ, ಅರುಣ್‍ಕುಮಾರ್, ಹ್ಯಾರೀಸ್,ಪದ್ಮಮ್ಮ, ತಿಮ್ಮಯ್ಯ, ವಿ-ಸಾಫ್ಟ್ ಸಿಬ್ಬಂದಿ ವಿಶ್ವಪ್ರಸಾದ್, ಸಿರೀಶ್, ಫರ್ನಾಂಡೀಸ್ ಮತ್ತಿತರರಿದ್ದರು.

ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಎನ್.ಸಿ.ಸಿ ಹಾಗೂ 73ನೇ ಸಂವಿಧಾನ ದಿನಾಚರಣೆ

ಶಿರ್ವ: ಇಂದು ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಹಾಗೂ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಕಾಲೇಜಿನಲ್ಲಿ ವಿವಿಧ ಘಟಕಗಳು ಲಭ್ಯವಿರುವುದು ಎಲ್ಲರಿಗೂ ತಿಳಿದಿದೆ. ಆದರೆ ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್.ಸಿ.ಸಿ) ಪ್ರಥಮ ವಾಗಿರುತ್ತದೆ. ಇದಕ್ಕೆ ಕಾರಣವೆಂದರೆ ಇಲ್ಲಿಯ ವಿದ್ಯಾರ್ಥಿಗಳಿಗೆ ಎಲ್ಲಾ ಚಟುವಟಿಕೆಗಳಲ್ಲಿಯೂ ದೇಶ ಕಾಯುವ ಯೋಧರಿಂದ ತರಬೇತಿಗಳನ್ನು ನೀಡಿ ಅವರಲ್ಲಿ ಈ ಭಾವನೆಗಳನ್ನು ಕಾರ್ಯರೂಪಗೊಳಿಸುವರಲ್ಲಿ ನಮ್ಮ ರಾಷ್ಟ್ರದ ಸೇನೆಯ ಅಪಾರ ಕೊಡುಗೆ ಎನ್ ಸಿ ಸಿ ಕ್ಯಾಡೆಟ್ ಗಳಿಗಿವೆ. ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ 73ನೇ ಸಂವಿಧಾನ ಹಾಗೂ 74ನೇ ಎನ್‌ಸಿಸಿ ದಿನಾಚರಣೆಯನ್ನು ಪ್ರಯುಕ್ತ ಪ್ರಕೃತಿಯ ರಕ್ಷಣೆ ಮತ್ತು ಪೋಷಣೆಯ ಅನ್ವಯ ಕ್ಯಾಡೆಟ್ ಗಳಿಂದ ವನಮೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಸಂವಿಧಾನ ಪ್ರತಿಜ್ಞಾವಿಧಾನವನ್ನು ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ರವರು ನೆರವೇರಿಸಿ,ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.

ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಇಂದು, ತಮ್ಮ ಪ್ರಾಣದ ಪರಮ ತ್ಯಾಗ ಮಾಡಿದ ವೀರಯೋಧರೀಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ದಿನವನ್ನು ಪ್ರತಿವರ್ಷ ನವೆಂಬರ್ ನಾಲ್ಕನೇ ಭಾನುವಾರರಂದು ಗುರುತಿಸಲಾಯಿತು.ಇಂದು ಬಹಳಷ್ಟು ಪ್ರಮುಖರು ಎನ್.ಸಿ.ಸಿಯ ಹಳೆ ವಿದ್ಯಾರ್ಥಿಗಳು ಆಗಿರುವುದು ಗಮನಾರ್ಹ. ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನವನ್ನು ಮಾಡಿ, ಅವರನ್ನು ಸ್ಮರಿಸುತ, ನಮ್ಮ ಸಂವಿಧಾನ ಪ್ರಪಂಚದಲ್ಲಿ ಉತ್ತಮವಾದ ಸಂವಿಧಾನ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ, ಎಲ್ಲರಿಗೂ ಶುಭಹಾರೈಸಿದರು.

ಕ್ಯಾಡೆಟ್ ಸೋನಾಲಿ ಕುಲಾಲ್ ಎನ್‌ಸಿಸಿ ದಿನದ ಮುಖ್ಯ ಉದ್ದೇಶವನ್ನು ಮತ್ತು ಮಹತ್ವವನ್ನು ವಿವರಿಸಿ, ಕ್ಯಾಡೆಟ್ ಉಳಿದ್ರಾ ಖುಷಿ ಸಂವಿಧಾನ ದಿನದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದರು

ಇದೇ ಸಂದರ್ಭದಲ್ಲಿ ವಿವಿಧ ತರಬೇತಿಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಕ್ಯಾಡೆಟ್ ಗಳಾದ ಲಾಯ್ ವಿನ್ಸ್ಟನ್ ಫರ್ನಾಂಡಿಸ್, ಸ್ಮಿತಾ, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ, ವಿಜೇತ ಇವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.
ಎನ್.ಸಿ.ಸಿ ಜೂನಿಯರ್ ಅಂಡರ್ ಆಫೀಸರ್ ಧೀರಜ್ ಆಚಾರ್ಯ, ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಸರ್ಜೆಂಟ್ ದೀಪಕ್, ರಿಯಾನ್ ಡಿಸೋಜಾ, ಕಾರ್ಪೋರಲ್ ಮಂಜುನಾಥ ಅಮರಾವತಿ,ಲ್ಯಾನ್ಸ್ ಕಾರ್ಪೋರಲ್ ಅನೀಶ್ ಭಟ್, ಶೆಟ್ಟಿಗಾರ ಹೇಮಶ್ರೀ ಸುದರ್ಶನ್ , ಕ್ಯಾಡೆಟ್ ಅನುಪ್ ನಾಯಕ್ ಮತ್ತು ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದ್ದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಎನ್.ಸಿ.ಸಿ ಅಧಿಕಾರಿ ಜಾನ್ ವಿಲಿಯಂ ವೇಗಾಸ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ, ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು. ಸೀನಿಯರ್ ಅಂಡರ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್ ಸ್ವಾಗತಿಸಿ, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ ವಂದಿಸಿದರು. ಸುಶ್ಮಿತಾ ಎಸ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ : ರಾಜೇಂದ್ರ ಪ್ರಸಾದ್

ಶ್ರೀನಿವಾಸಪುರ : ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮತದಾರರು ಅಭಿವೃದ್ಧಿ ಪರವಾದ ಅಭ್ಯರ್ಥಿ ಆಯ್ಕೆಗಾಗಿ ಕಾಯುತ್ತಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಹೇಳಿದರು.

ಪಟ್ಟಣದ ಮುಳಬಾಗಲು ವೃತ್ತದ ಸಮೀಪ ಸಭಾಂಗಣದಲ್ಲಿ ಏರ್ಪಡಿಸ ಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು , ನಾಲ್ಕು ದಶಕಗಳಿಂದ ಇಬ್ಬರು ವ್ಯಕ್ತಿಗಳು ಮಾತ್ರ ತಾಲ್ಲೂಕಿನ ಶಾಸಕರಾಗಿ ಆಯ್ಕೆಯಾಗುತ್ತ ಬಂದಿದ್ದಾರೆ . ಆದರೆ ಅಭಿವೃದ್ಧಿ ವಿಷಯದಲ್ಲಿ ಕ್ಷೇತ್ರ ಹಿಂದುಳಿದೆ ಎಂದು ಹಾಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ಹೆಸರು ಹೇಳದೆ ಟೀಕಿಸಿದರು.

ಕ್ಷೇತ್ರದಲ್ಲಿ ಮುಖಂಡ ಗುಂಜೂರು ಶ್ರೀನಿವಾಸರೆಡ್ಡಿ ಪರ್ಯಾಯ ರಾಜಕೀಯ ಶಕ್ತಿಯಾಗಿ ರೂಪಗೊಳ್ಳುತ್ತಿದ್ದಾರೆ. ಎರಡು ವರ್ಷಗಳಿಂದ ತಮ್ಮನ್ನು ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದನ್ನು ಸಹಿಸದ ಕೆಲವು ರಾಜಕೀಯ ಮುಖಂಡರು ಅವರ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಅವರು ಗೆದ್ದರೂ ತಾಲ್ಲೂಕಿನಲ್ಲಿ ವಾಸಿಸುವುದಿಲ್ಲ ಎಂದೆಲ್ಲಾ ಹೇಳಿ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಹೇಳಿದರು .

ಮುಖಂಡ ಗುಂಜೂರು ಶ್ರೀನಿವಾಸರೆಡ್ಡಿ ಮಾತನಾಡಿ , ತಾಲ್ಲೂಕಿನಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ . ಜೆಡಿಎಸ್ ನಲ್ಲಿ ನಾಯಕತ್ವದ ಕೊರತೆ ಇದೆ . ಇತರ ಪಕ್ಷಗಳಿಗೆ ನೆಲೆಯಿಲ್ಲ . ಹಾಗಾಗಿ ಮತದಾರರ ಮನೋಭಾವದಲ್ಲಿ ಬದಲಾವಣೆ ಕಂಡು ಬರುತ್ತಿದೆ .

ಕ್ಷೇತ್ರದಲ್ಲಿನ ಸಾಂಪ್ರದಾಯಿಕ ಎದು ರಾಳಿಗಳ ಬಗ್ಗೆ ಒಲವು ಕಡಿಮೆಯಾಗುತ್ತಿದೆ . ಇದು ಬದಲಾವಣೆಗೆ ದಾರಿಮಾಡಿಕೊಡುತ್ತದೆ . ಚುನಾವಣೆಗೆ ಸ್ಪರ್ಧಿಸುವ ವಿಷಯದಲ್ಲಿ ಬೆಂಬಲಿಗರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗುವುದು ಎಂದು ಹೇಳಿದರು .

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜ ಶೇಖರರೆಡ್ಡಿ ಮಾತನಾಡಿ , ತಾಲ್ಲೂಕಿ ನಲ್ಲಿ ವಿವಿಧ ರಾಜಕೀಯ ಪಕಗಳ ಕಾರ್ಯಕರ್ತರು ಬದಲಾವಣೆ ಬಯಸಿ , ಗುಂಜೂರು ಶ್ರೀನಿವಾಸರೆಡ್ಡಿ ಅವರ ಬೆನ್ನಿಗೆ ನಿಂತಿದ್ದಾರೆ .

ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿ ಬಯಸಿದ ಅನ್ಯ ಪಕ್ಷಗಳ ಕೆಲವು ಮುಖಂಡರು ಹಾಗೂ ಕಾರ್ಯಕರ್ತರು ನಿಷ್ಠೆ ಬದಲಿಸಿದ್ದಾರೆ ಎಂದು ಹೇಳಿದರು .

ಬೇರೆ ಬೇರೆ ಪಕ್ಷಗಳ ಮುಖಂಡರಾದ ಸಮಿವುಲ್ಲಾ , ನಾಗೇಶ್ , ಸಾಗರ್ , ಕೀರ್ತಿ , ನಾಗಭೂಷಣ್ , ನವೀನ್ , ಸುರೇಶ್ , ರವಿ ಮಾತನಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡರು .

ಮುಖಂಡರಾದ ಪಠಾಣ್ ಸಮೀಉಲ್ಲಾ ಖಾನ್, ದೊರೆಸ್ವಾಮಿ , ಶ್ರೀರಾಮರೆಡ್ಡಿ , ಗವಿರೆಡ್ಡಿ , ಈರಪ್ಪ , ರಮೇಶ್ , ಶ್ರೀನಾಥ್ , ಚಂದ್ರಪ್ಪ ಕೆಂಪರೆಡ್ಡಿ ಇದ್ದರು .

ಭಂಡಾರ್ಕಾರ್ಸ್ ಕಾಲೇಜ್ :ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ

ನವೆಂಬರ್ 26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ,ಉಡುಪಿ ಮತ್ತು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ (ರಿ), ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಹೆಗ್ಡೆ ಮಾತನಾಡಿ ದೇಶದಲ್ಲಿ ಅನಕ್ಷರತೆ ಮತ್ತು ವೈ ವೈವಿಧ್ಯತೆಯನ್ನು ಹೊಂದಿದ ನಮ್ಮ ದೇಶದಲ್ಲಿ ಎಲ್ಲರನ್ನೂ ಒಂದಾಗಿಸುವ ಸಂವಿಧಾನದ ಅಗತ್ಯ ಇತ್ತು. ಈ ಸಂದರ್ಭದಲ್ಲಿ ಸಂವಿಧಾನ ಸಮಿತಿಯನ್ನು ರಚಿಸಲಾಯಿತು. ನಂತರ ಕರಡು ಸಮಿತಿ ರಚಿಸಲಾಯಿತು. ಭಾರತದ ಸಂವಿಧಾನ ರಚನಾ ಸಮಿತಿಯು ವಿವಿಧ ದೇಶಗಳಿಗೆ ಸಂಚರಿಸಿ ಭಾರತದ ಸಂವಿಧಾನ ರಚಿಸಲಾಯಿತು ಎಂದು ಹೇಳಿದರು. ಜನತೆಗೆ ಪೂರಕ ಶ್ರೇಷ್ಠ ಸಂವಿಧಾನ ನಮ್ಮ ಭಾರತ ದೇಶದ್ದಾಗಿದೆ. ನಾವು ಮೊದಲು ಮನುಷ್ಯರಾಗಬೇಕು. ಸಂವಿಧಾನವನ್ನು ಗೌರವಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಹಿರಿಯ ವಕೀಲರಾದ ಸಂತೋಷ್ ಕುಮಾರ್ ಶೆಟ್ಟಿ ಗಿಳಿಯಾರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ನ್ಯಾಯ ದೊರೆಯಬೇಕು ಎಂಬ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ಸೇವೆಯನ್ನು ನೀಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಕಾನೂನು ಸೇವೆಯನ್ನು ನೀಡುವುದು ಇದರ ಉದ್ದೇಶವಾಗಿದೆ. ನಮಗೆ ಸ್ವಾತಂತ್ರ್ಯದ ಹಕ್ಕನ್ನು ನೀಡಲಾಗಿದೆ. ನಿಮಗೆ ಅನಿಸಿದ್ದನ್ನು ಅಭಿವ್ಯಕ್ತಿಸುವ ಹಕ್ಕು ಇದೆ. ಆದರೆ ದೇಶದ ಸಮಗ್ರತೆ ಒಗ್ಗಟ್ಟು ಮತ್ತು ಐಕ್ಯತೆಗೆ ತೊಂದರೆ ಮಾಡಬಾರದು. ಹೀಗೆ ಹಲವು ಹಕ್ಕುಗಳನ್ನು ಸಂವಿಧಾನದ ನೆಲೆಯಲ್ಲಿ ನೀಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳಿಗೆ ಉಪನ್ಯಾಸಕಿ ಅಕ್ಷತಾ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಉಡುಪಿಯ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿಸೋಜಾ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಸ್ವಾಗತಿಸಿದರು. ಭಂಡಾರ್ಕಾರ್ಸ್ ಕಾಲೇಜಿನ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ಮಂಗಳೂರಿನ ಬಿಷಪ್ ಹೌಸ್ ಗೆ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆನಡಿ ಶಾಂತ್ ಕುಮಾರ್ ರವರ ಭೇಟಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುವ ಮಾಹಿತಿ ಕಾರ್ಯಗಾರವು ಇಂದು ಮಂಗಳೂರಿನ ಬಿಷಪ್ ನಿವಾಸದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತೀ ವಂದನೀಯ ಬಿಷಪ್ ಡಾ//ಪೀಟರ್ ಪಾವ್ಲ್ ಸಲ್ಡಾನ್ಹಾ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಜೆ. ಕೆನಡಿ ಶಾಂತಕುಮಾರ್ ,(ಅಧ್ಯಕ್ಷರು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಕರ್ನಾಟಕ ಸರ್ಕಾರ)ಶ್ರೇಷ್ಠ ಗುರುಗಳಾದ ವಂದನೀಯ ರೆ//ಫಾ//ಮ್ಯಾಕ್ಸಿಂ ನೊರೋನ್ಹಾ,ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರೋಯ್ ಕ್ಯಾಸ್ಟೇಲಿನೋ,ಕೇಂದ್ರಿಯ ಪಾಲನ ಸಮಿತಿಯ ಕಾರ್ಯದರ್ಶಿ ಶ್ರೀ ಜಾನ್ ಡಿಸಿಲ್ವ, ಕಥೋಲಿಕ್ ಸಭೆಯ ಅಧ್ಯಕ್ಷರಾದ ಶ್ರೀ ಸ್ಟ್ಯಾನಿ ಲೋಬೊ ಸಮುದಾಯ ನಾಯಕರಾದ ಶ್ರೀ ಜೋಯಲ್ ಮೆಂಡೋನ್ಸಾ , ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀ ಜಿನೇಂದ್ರ ಎಂ ಕೋಟ್ಯಾನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
 ಇದೇ ಸಂಧರ್ಭದಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಕಾರ್ಯಗಾರದಲ್ಲಿ ಆನೇಕ ವಿಚಾರ ವಿನಿಮಯಗಳ ಜೊತೆಗೆ ತಾಂತ್ರಿಕ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಲಾಯಿತು.
ಕಾರ್ಯಕ್ರಮವನ್ನು ಮಿಥುನ್ ಸಿಕ್ವೇರಾರವರು ನಿರೂಪಿಸಿದರು

ಪಡುಕೋಣೆ: ಸಂತ ಅಂತೋನಿ ಹಿ.ಪ್ರಾ.ಶಾಲೆಯಲ್ಲಿ ನಿವ್ರತ್ತ ಶಿಕ್ಷಕಿ ಡೇರಿ ಸುವಾರಿಸ್‌ ರವರಿಗೆ ಸನ್ಮಾನ – ಪ್ರತಿಭಾ ಸಿಂಚನ ಕಾರ್ಯಕ್ರಮ

ಪಡುಕೋಣೆ: ಸ್ಥಳೀಯ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ  ನ.14 ರಂದು ಮಕ್ಕಳ ದಿನಾಚರಣೆ ಮತ್ತು ಪ್ರತಿಭಾ ಸಿಂಚನ ಕಾರ್ಯಕ್ರಮ ಆಚರಿಸಲಾಯಿತು. ಅದ್ದೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ನಿವ್ರತ್ತ ಶಿಕ್ಷಕಿ ಶ್ರೀಮತಿ ಡೇರಿ ಸುವಾರಿಸ್‌ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

   ಶಾಲಾ ಸಂಚಾಲಕರಾದ ವಂದನೀಯ ಫ್ರಾನ್ಸಿಸ್‌ ಕರ್ನೇಲಿಯೊ ಅಧ್ಯಕ್ಷತೆ ವಹಿಸಿದ್ದರು. ಶಾಲಾ ನಾಯಕಿ ಜಿಸ್ಸಿಕಾ ಡಿ’ಆಲ್ಮೇಡಾ ದೀಪ ಬೆಳಗಿಸಿ. ಕಾರ್ಯಕ್ರಮ ಉದ್ರಾಟಿಸಿದರು. ವೇದಿಕೆಯಲ್ಲಿದ್ದ ಗಣ್ಯರು ಸಹಕರಿಸಿದರು .

   ಶ್ರೀ ಕೆನಡಿ ಪಿರೇರಾ, ಶ್ರೀ ಫಿಲಿಪ್‌ ಡಿಸಿಲ್ವ ಶ್ರೀ ಜೋಸೆಫ್‌ ಡಿಸಿಲ್ವ ಶ್ರೀ ಜೀನಾ ಕ್ರಾಸ್ತಾ, ಶ್ರೀ ವಿನ್ಸೆಂಟ್‌ ಡಿಸೋಜ, ಶ್ರೀ ಸ್ಟ್ಯಾನಿ ಡಿಆಲ್ಮೇಡ , ಶ್ರೀ ಸ್ಟ್ಯಾನಿ ಲುವಿಸ್‌, ಶ್ರೀ ಸ್ಟೀವನ್‌ ಡಿಸೋಜ, ಸಿ.ಆರ್.ಪಿ ರಾಮನಾಥ ಮೇಸ್ತ ಹಾಗೂ ಸಿಸ್ಟರ್‌ ಮರ್ಸಿ ವೇದಿಕೆಯಲ್ಲಿ ಹಾಜರಿದ್ದರು.  

     ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು, ವಿದ್ಯಾರ್ಥಿಗಳಿಂದ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದೆವು. ವಿದ್ಯಾರ್ಥಿಳು, ವಿದ್ಯಾರ್ಥಿಗಳ ಪೋಷಕರು, ಊರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಶಾಂತಿ ಪಾಯ್ಸ್‌ ಸ್ವಾಗತಿಸಿದರು. ಶಿಕ್ಷಕಿ ನಿರ್ಮಲ ಫೆರ್ನಾಂಡಿಸ್‌ ಧನ್ಯವಾದ ಅರ್ಪಿಸಿದರು. ಕುಮಾರಿ ವಿನುತ ಕಾರ್ಯಕ್ರಮ ನಿರೂಪಿಸಿದರು.

ಕೆ ಆರ್ ಎಸ್ ಪಕ್ಷದ ವತಿಯಿಂದ ರಾಜ್ಯ ಘಟಕದ ಮಹಾ ಭಿಕ್ಷೆ ಪಾದಯಾತ್ರೆ

ಶ್ರೀನಿವಾಸಪುರದಲ್ಲಿ ಬುಧವಾರ ಕೆ ಆರ್ ಎಸ್ ಪಕ್ಷದ ವತಿಯಿಂದ ರಾಜ್ಯ ಘಟಕದ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಅವರ ನೇತೃತ್ವದಲ್ಲಿ ಮಹಾ ಭಿಕ್ಷೆ ಪಾದಯಾತ್ರೆ ಏರ್ಪಡಿಸಲಾಗಿತ್ತು. ಜಿಲ್ಲಾ ಘಟಕದ ಅಧ್ಯಕ್ಷ ಇಂದ್ರ ರಾಘವರೆಡ್ಡಿ, ತಾಲ್ಲೂಕು ಅಧ್ಯಕ್ಷ ಇಮ್ರಾನ್ ಮತ್ತಿತರ ಪದಾಧಿಕಾರಿಗಳು ಇದ್ದರು